Connect with us

BELTHANGADY

ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ ಸಜೀವವಾಗಿ ಮನೆಗೆ : ನಿಜವಾಯಿತು ಜ್ಯೋತಿಷಿ ಮಾತು..!

Published

on

ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ ಸಜೀವವಾಗಿ ಮನೆಗೆ : ನಿಜವಾಯಿತು ಜ್ಯೋತಿಷಿ ಮಾತು..!

ಬೆಳ್ತಂಗಡಿ :ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ ಸಜೀವವಾಗಿ ಮನೆಗೆ  ಮರಳಿದ್ದು ಈ ಮೂಲಕ ಜ್ಯೋತಿಷಿ ಹೇಳಿದ್ದ ಮಾತು ನಿಜವಾಗಿದೆ.

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿಯೋರ್ವರು ಜೀವಂತವಾಗಿ ಮನೆಗೆ ಬಂದ ಕುತೂಹಲಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವರದಿಯಾಗಿದೆ.

 

ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಕುಲ್ಲುಂಜ ಸಮೀಪದ ಕೆರೆಯೊಂದರಲ್ಲಿ ಗುರುತು ಪರಿಚಯ ಸಿಗದಷ್ಟು ಕೊಳೆತು ಹೋಗಿದ್ದ ಮೃತದೇಹವೊಂದು ದೊರೆತಿದ್ದು, ಇದು ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗರ್ಡಾಡಿ ನಿವಾಸಿ ಶ್ರೀನಿವಾಸ ದೇವಾಡಿಗ ಅವರನ್ನು ಹೋಲುತ್ತಿತ್ತು.

ಅದರಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ವಿಧಿಗಳನ್ನು ಮನೆಯವರು ನೆರವೇರಿಸಿದ್ದರು. 10 ದಿನಗಳ ಬಳಿಕ ಆ ವ್ಯಕ್ತಿ ಜೀವಂತವಾಗಿ ಊರಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯಚಕಿತರನ್ನಾಗಿಸಿದೆ.

ಕುಡಿತದ ಚಟ ಅಂಟಿಸಿಕೊಂಡಿದ್ದ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು.

ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ವಾಪಾಸಾಗದೆ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ‌ ಮಲಗಿ ನಿದ್ರಿಸುತ್ತಿದ್ದರು.

ಅವರಿಗೆ ಮನಸಾದಾಗ ಮನೆಗೆ ಮರಳುತ್ತಿದ್ದ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದ ಮನೆಯವರು ಅಂತ್ಯ ಸಂಸ್ಕಾರ ನಡೆಸಿದ್ದರು.

ಇದೀಗ ಶ್ರೀನಿವಾಸ ದೇವಾಡಿಗರು ಮನೆಗೆ ಹಿಂತಿರುಗಿದ್ದರಿಂದ ಆದರೆ ಇತ್ತ ಕೆರೆಯಲ್ಲಿ ಪತ್ತೆಯಾದ ಮೃತದೇಹ ಯಾರದ್ದು ಎಂಬ ಬಗ್ಗೆ ಪೊಲೀಸರಿಗೆ ತಲೆನೋವು ಉಂಟಾಗಿದೆ.

ಇತ್ತ ಶ್ರೀನಿವಾಸ ದೇವಾಡಿಗ ಏಕಾಏಕಿ ನಾಪತ್ತೆಯಾದ ಕಾರಣ ಆತನ ಕುಟುಂಬದವರು ಸ್ಥಳೀಯ ಜ್ಯೋತಿಷಿಯೊಬ್ಬರನ್ನುಭೇಟಿ ಮಾಡಿದ್ದರು.

ಈ ಸಂದರ್ಭ ಶ್ರೀನಿವಾಸರಿಗೆ ಏನು ಆಗಿಲ್ಲ. ಅವರು ಜೀವಂತ ಇದ್ದಾರೆ ಮತ್ತು ವಾಪಸ್ ಮನೆಗೆ ಮರಳುತ್ತಾರೆ ಧೈರ್ಯವಾಗಿರಿ ಎಂದು ಹೇಳಿದ್ದರು.

ಇದೀಗ ಜ್ಯೋತಿಷಿ ಹೇಳಿದ ಮಾತ ನಿಜವಾಗಿದ್ದು, 10 ದಿನಗಳ ಬಳಿಕ  ಶ್ರೀನಿವಾಸರು ಜೀವಂತವಾಗಿ ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ಈ ಮೂಲಕ ಜ್ಯೋತಿಷಿ ಅವರು ಹೇಳಿದ ಮಾತು ನಿಜವಾಗಿದೆ.

Click to comment

Leave a Reply

Your email address will not be published. Required fields are marked *

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending