Connect with us

    BANTWAL

    ಬಂಟ್ವಾಳ ಅಪ್ರಾಪ್ತೆ ಮೇಲೆ ಐವರು ಕಾಮುಕರಿಂದ ಅತ್ಯಾಚಾರ..!

    Published

    on

    ಬಂಟ್ವಾಳ: ಅಪ್ರಾಪ್ತೆಯ ಮೇಲೆ ಐವರು ಕಾಮುಕರ ತಂಡ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಕ್ಟೋಬರ್ 8 ರಂದುಈ ಘಟನೆ ನಡೆದಿದ್ದು, ಬಂಟ್ವಾಳ ನಿವಾಸಿಯಾಗಿರುವ ಬಾಲಕಿ ಬಂಟ್ವಾಳದ ಎಸ್.ವಿ.ಎಸ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದು, ಎಂದಿನಂತೆ ಶಾಲೆ ಮುಗಿಸಿ ಶಾಲೆ ಮುಂಭಾಗದ ಅಟೋ ಸ್ಟಾಂಡ್ ಬಳಿ ನಿಂತಿದ್ದ ಸಂದರ್ಭದಲ್ಲಿ ಆರೋಪಿಗಳ ಕಾರು ಬಾಲಕಿ ನಿಂತಿದ್ದ ಬಳಿ ನಿಂತಿದೆ.

    ಕಾರಿನಲ್ಲಿದ್ದ ಮಂದಿ ಆಕೆಗೆ ಮತ್ತು ಬರಿಸುವ ಚಾಕಲೇಟನ್ನು ನೀಡಿ ಆಕೆಯನ್ನು ಅಮ್ಟಾಡಿ ಎನ್ನುವ ಪ್ರದೇಶದಲ್ಲಿರುವ ರೂಂ ಒಂದಕ್ಕೆ ಕರೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ.

    ಬಾಲಕಿಯನ್ನು ಶಾಲೆಯಿಂದ ಕರೆದೊಯ್ದ ಕಾಮುಕರು ಬಾಲಕಿಗೆ ಚಿರಪರಿಚಿತರೇ ಎನ್ನುವ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದ್ದು, ಬಂಟ್ವಾಳ ನಗರ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಶೋಧ ಕಾರ್ಯ ಆರಂಭಿಸಿದ್ದಾರೆ.

    ಪೋಲೀಸ್ ಮೂಲದ ಪ್ರಕಾರ ಕೃತ್ಯ ಎಸಗಿದ ಕಾಮುಕರಲ್ಲಿ ಕೆಲವರನ್ನು ಬಾಲಕಿ ಗುರುತಿಸಿದ್ದು, ಆರೋಪಿಗಳ ಹೆಸರನ್ನು ಪೋಲೀಸರಿಗೆ ನೀಡಿದ್ದಾರೆ ಎನ್ನಲಾಗಿದೆ.

    ಬಾಲಕಿಯ ತಂದೆ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು,ಬಾಲಕಿಯು ಆಕೆಗ ತಾಯಿ ಹಾಗು ಸಹೋದರನಾದ ಜೊತೆಗೆ ವಾಸಿಸುತ್ತಿದ್ದಳು.

    ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಆರೋಪಿಗಳ ಬಂಧನಕ್ಕಾಗಿ ತೀವೃ ಹುಡುಕಾಟದಲ್ಲಿ ತೊಡಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಬಂಟ್ವಾಳ ನಗರ ಪೋಲೀಸರಿಗೆ ಈ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.

    news update : ಇನ್ನು ಪ್ರಕರಣವನ್ನು ಗಂಭೀರವಾಗಿ ತಗೊಂಡ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಟಾಧಿಕಾರಿ ಅವರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಆರಂಭಿಸಿದ್ದಾರೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending