ಬೆಂಗಳೂರು: ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ಸಂಜಯ್ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ವಿಜಯ್ ಹಾಗೂ ಶಿವಕುಮಾರ್ ಬಂಧಿತ ಆರೋಪಿಗಳು. ಒರಿಸ್ಸಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತದ್ದ ಆರೋಪಿಗಳು, ನಗರಕ್ಕೆ ಬರುವ ಗೂಡ್ಸ್ ಗಾಡಿ ಚಾಲಕರಿಗೆ ಹೆಚ್ಚಿನ ಹಣ ಆಮಿಷ ಒಡ್ಡಿ ನಗರದಾದ್ಯಂತ ಗಾಂಜಾ ಸಾಗಾಟ ಮಾಡುತ್ತಿದ್ದರು.
ಹೆಬ್ಬಾಳದ ಮೇಲ್ಸೇತುವೆ ಬಳಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿ ಆರೋಪಿಗಳಿಂದ ನಾಲ್ಕು ಮೂಟೆ ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.