BANTWAL
ಬಂಟ್ವಾಳ: ರಿಕ್ಷಾದಲ್ಲಿ ಗಾಂಜಾ ಮಾರಾಟ- ಓರ್ವನ ಬಂಧನ
ಬಂಟ್ವಾಳ: ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವನನ್ನು ಬಂಟ್ವಾಳ ಠಾಣಾ ಪೊಲಿಸರು ಬಂಧಿಸಿದ್ದಾರೆ.
ಸಜೀಪ ನಡು ಗ್ರಾಮದ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್ ( 36) ಬಂಧಿತ ಆರೋಪಿ.
ಆರೋಪಿತನಿಂದ ಸುಮಾರು 80 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2 ಸಾವಿರ ಮೌಲ್ಯದ ಗಾಂಜಾ, 60 ಸಾವಿರ ರೂ ಮೌಲ್ಯದ ರಿಕ್ಷಾ 1260 ನಗದು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಜೀಪ ಮೂಡ ಗ್ರಾಮದ ಬೇಂಕ್ಯೆ ಸಮೀಪದ ಬರ್ಕೆ ಎಂಬಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುವ ಬಗ್ಗೆ ಪೊಲೀಸರಿಗೆ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದಾರೆ.
ಆರೋಪಿ ಬರ್ಕೆ ಎಂಬಲ್ಲಿ ರಿಕ್ಷಾದಲ್ಲಿ ಗಾಂಜ ದಾಸ್ತಾನು ಇರಿಸಿ ಗಿರಾಕಿಗಳಿಗೆ ಮಾರಾಟ ಕ್ಕಾಗಿ ನಿಂತಿದ್ದ. ಪೊಲೀಸರು ಜೀಪ್ ನಲ್ಲಿ ಬರುವುದನ್ನು ಗಮನಿಸಿ ರಿಕ್ಷಾ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ.
ಆದರೆ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತನ ರಿಕ್ಷಾದಲ್ಲಿ ಇರಿಸಲಾಗಿದ್ದ ಗಾಂಜದ ಬಗ್ಗೆ ಮಾಹಿತಿ ನೀಡಿದ್ದಾನೆ. ಅಲ್ಲದೆ ಉಪ್ಪಳ ಕಡೆಯಿಂದ ಗಾಂಜಾನವನ್ನು ತಂದು ಪ್ಯಾಕೆಟ್ ಗಳನ್ನಾಗಿ ಮಾಡಿ ಗಿರಾಕಿಗಳಿಗೆ ಮಾರಾಟ ಮಾಡುವ ಬಗ್ಗೆ ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಎಸ್.ಪಿ.ಹೃಷಿಕೇಶ್ ಸೋನಾವಣೆ ಹಾಗೂ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ಲ್ಲಿ ನಗರ ಠಾಣಾ ಎಸ್ .ಐ.ಅವಿನಾಶ್ ಅವರ ತಂಡ ಆರೋಪಿಯನ್ನು ಬಂಧಿಸಿ ದ್ದಾರೆ.
BANTWAL
ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!
ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.
ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ
ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :
ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.
ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
BANTWAL
ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!
ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.
ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- FILM7 days ago
“ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
- DAKSHINA KANNADA7 days ago
ಮಂಗಳೂರಿನಲ್ಲಿ ಬೆಳಕಿಗೆ ಬಂತು ಬಹುದೊಡ್ಡ ಆನ್ಲೈನ್ ವಂಚನೆ ಪ್ರಕರಣ; ಕೋಟಿಗಟ್ಟಲೆ ಕಳೆದುಕೊಂಡ ನಿವೃತ್ತ ಇಂಜಿನಿಯರ್
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!