Connect with us

    KADABA

    ಉಪ್ಪಿನಂಗಡಿಯಲ್ಲಿ ರಾಶಿ ರಾಶಿ ತ್ಯಾಜ್ಯ: ವೃತ್ತನಿರೀಕ್ಷಕರಿಗೆ ಪತ್ರ

    Published

    on

    ಉಪ್ಪಿನಂಗಡಿ: ಇಲ್ಲಿನ ನೆಲ್ಯಾಡಿ ಸಮೀಪದ ಮಂಗಳೂರು -ಬೆಂಗಳೂರು ರಾಷ್ಟೀಯ ಹೆದ್ದಾರಿಯ ಗೊಳಿತೊಟ್ಟು ಎಂಬ ಪ್ರದೇಶದಲ್ಲಿ ಕಸದ ರಾಶಿಗಳೇ ಕಂಡುಬರುತ್ತಿದ್ದು, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು  ಕಾಡುವ ಭೀತಿ ಎದುರಾಗಿದೆ.

    ಈ ಬಗ್ಗೆ ಉಪ್ಪಿನಂಗಡಿ ವಲಯ ವೃತ್ತನಿರೀಕ್ಷಕರಿಗೆ ಪತ್ರ ಬರೆದ ಸ್ಥಳೀಯ ಪಂಚಾಯತ್‌ ರಾಷ್ಟ್ರೀಯ ಅಕ್ಕಪಕ್ಕ ಗ್ರಾಮಪಂಚಾಯತ್‌ನ ಒಳರಸ್ತೆಗಳಲ್ಲಿ ತ್ಯಾಜ್ಯ ವಸ್ತು ಹಾಗೂ ಪಾರ್ಸೆಲ್‌ ಬಾಕ್ಸ್‌ ಅನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ.  ಕೆಎ 52 ಎ 3802 ವಾಹನವು ತ್ಯಾಜ್ಯ ಬಿಸಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದೆ.

    ಮೀನಿನ ವ್ಯಾಪಾರಕ್ಕೆ  ಬಳಸುವ ಪ್ಲಾಸ್ಟಿಕ್ ಹಾಗೂ ಥರ್ಮಾಕೋಲ್ ಬಾಕ್ಸಗಳನ್ನೂ ರಸ್ತೆಯಲ್ಲಿ ಎಸೆದು ಪರಿಸರಕ್ಕೆ ಹಾನಿಯುಂಟು ಮಾಡಲಾಗುತ್ತಿದೆ. ಗೋಳಿತೊಟ್ಟು, ಪೆರಿಯಶಾಂತಿ ಸೇರಿದಂತೆ ಐದಾರು ಕಡೆಗಳಲ್ಲಿ ರಾಶಿ ರಾಶಿ ಕಸ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಂದು ಸುರಿಯಲಾಗುತ್ತಿದೆ. ಸಮಸ್ಯೆಯ ಬಗ್ಗೆ  ಗೋಳಿತೊಟ್ಟು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದ್ದು,  ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

    DAKSHINA KANNADA

    ಕೋಡಿಂಬಾಳ ಪರಿಸರದಲ್ಲಿ ಸಾಕು ನಾಯಿಗಳು ನಾಪತ್ತೆ..! ಚಿರತೆ ಹೊತ್ತೊಯ್ದಿರಬಹುದೆಂಬ ಆಂತಕ

    Published

    on

    ಕಡಬ: ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಮನೆಯಲ್ಲಿ ಸಾಕು ನಾಯಿಗಳು ನಾಪತ್ತೆಯಾಗುತ್ತಿರುವ ಘಟನೆ ಕೋಡಿಂಬಾಳ ಬಳಿಯ ಪುಳಿಕುಕ್ಕು, ಪಂಜ, ನೇರಳ ಪರಿಸರದಲ್ಲಿ ನಡೆಯುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇನ್ನು ಈ ಪ್ರದೇಶದಲ್ಲಿ ಚಿರತೆಗಳು ಓಡಾಟ ನಡೆಸಿದ್ದು ಸಾಕು ನಾಯಿಗಳನ್ನು ಚಿರತೆಗಳೇ ಎಳೆದೊಯ್ದಿರಬೇಕು ಎಂದು ಸಂಶಯಿಸಲಾಗಿದೆ.

    ಪಂಜ ಬಳಿಯ ಕರುಂಬು ನೆಕ್ಕಿಲ ನಿವಾಸಿ ರಾಮಚಂದ್ರ ಭಟ್ ಅವರ ಎರಡು ಸಾಕುನಾಯಿಗಳು ಆ.28ರಂದು ರಾತ್ರಿ ವೇಳೆ ಗೂಡಿನಿಂದ ಹೊರಬಿಟ್ಟ ಬಳಿಕ ತೋಟದತ್ತ ಹೋಗಿದ್ದು ಅನಂತರ ನಾಪತ್ತೆಯಾಗಿವೆ. ಇನ್ನು ಪಕ್ಕದ ಮನೆಯಲ್ಲಿ ಮಲಗಿದ್ದ ಸಾಕು ನಾಯಿಗಳು ಕೂಡಾ ನಾಪತ್ತೆಯಾಗಿವೆ.

    17 ವರ್ಷದ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ಕಾರು ಡಿ*ಕ್ಕಿ; ಬೈಕ್ ಸವಾರ ಸಾ*ವು

    ಸಿಟೌಟ್‌ ನಲ್ಲಿ ನಾಯಿ ಮಲವಿಸರ್ಜನೆ ಮಾಡಿದ್ದು ಯಾವುದೋ ಪ್ರಾಣಿ ಜೊತೆ ಕಾದಾಡಿರುವ ಕುರುಹುಗಳು ಕೂಡಾ ಕಂಡು ಬಂದಿದೆ. ಈ ಹಿಂದೆಯೂ ಬೊಳ್ಳಾಜೆ, ಪೂಳೆಂಜ, ನೆಕ್ಕಿಲ, ನೇರಳ ಎಂಬ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಂಡಿತ್ತು ಎಂಬ ಸುದ್ದಿ ಹರಡಿತ್ತು. ಹೀಗಾಗಿ ನಾಯಿಗಳನ್ನು ಚಿರತೆ ಹೊತ್ತೊಯ್ದಿರಬಹುದು ಎಂದು ಹೇಳಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಅರಣ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ..! ಕ್ಯಾಶ್ ರಿಜಿಸ್ಟರ್ ಮಾಡದ ಬಗ್ಗೆ ಅಸಮಾಧಾನ

    Published

    on

    ಕಡಬ: ಕಡಬದ ತಾಲೂಕು ಆಡಳಿತ ಸೌಧಕ್ಕೆ ಲೊಕೋಯುಕ್ತ ಎಸ್‌ಪಿ ನಟರಾಜ್ ದಿಢೀರ್ ಬೇಟಿ ನೀಡಿ ಕಚೇರಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಸಿಬ್ಬಂದಿಗಳು ಲಾಗಿನ್ ಸಮಯದಲ್ಲಿ ತಮ್ಮಲ್ಲಿರುವ ಕ್ಯಾಶ್ ಲೆಕ್ಕ ಬರೆದಿಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕುಂದಾಪುರ:ಆಕಸ್ಮಿಕವಾಗಿ ಬೆಂಕಿ ತಗುಲಿ ಫ್ಯಾನ್ಸಿ ಸ್ಟೋರ್ ಭಸ್ಮ

    ಪ್ರತಿ ನಿತ್ಯ ಕಚೇರಿಗೆ ಬರುವಾಗ ಮತ್ತು ಕಚೇರಿಯಿಂದ ಹೋಗುವಾಗ ಕ್ಯಾಶ್ ರಿಜಿಸ್ಟರ್ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಕ್ಯಾಶ್ ರಿಜಿಸ್ಟರ್ ಮಾಡಲು ಪುಸ್ತಕ ಇದ್ರೂ ಖಾಲಿ ಇರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಇದೆ ವೇಳೆ ಅರ್ಹ ಬಿಪಿಎಲ್ ಕಾರ್ಡ್‌ ಬಳಕೆದಾರರನ್ನು ಗುರುತಿಸಿ ಉಳಿದವರ ಕಾರ್ಡ್‌ ಅನರ್ಹಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಐಶಾರಾಮಿ ಕಾರಿನಲ್ಲಿ ಓಡಾಡುವವರು ಕೂಡಾ ಬಿಪಿಎಲ್ ಕಾರ್ಡ್ ಹೊಂದಿರುವ ಕಾರಣ ಅರ್ಹರಿಗೆ ವಂಚನೆ ಆಗುತ್ತಿದೆ ಎಂದು ಅಧಿಕಾರಿಗಳ ಗಮನ ಸೆಳೆದಿದ್ದಾರೆ. ತಾಲೂಕು ಕಚೇರಿಯಲ್ಲಿ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜನರು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಎಸ್‌ಪಿ ನಟರಾಜ್‌ ಜನರನ್ನು ವಿನಾ ಕಾರಣ ಕಚೇರಿಗಳಿಗೆ ಅಲೆದಾಡಿಸಿದ್ರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ವೇಳೆ ಎಚ್ಚರಿಕೆ ಕೂಡಾ ನೀಡಿದ್ದಾರೆ.

    Continue Reading

    DAKSHINA KANNADA

    ಕಳ್ಳರನ್ನು ಹಿಡಿದ 60 ರ ವೃದ್ಧೆ..!

    Published

    on

    ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

    ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ‌ ಸಿಕ್ಕಿಬಿದ್ದಿದ್ದಾರೆ.

    ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Trending