Connect with us

FILM

ಸಿಂಪಲ್ಲಾಗಿ ಆಯ್ತು ‘ಗಿಣಿರಾಮ’ ನಟಿ ನಯನಾ ನಾಗರಾಜ್ ನಿಶ್ಚಿತಾರ್ಥ: ಹುಡುಗ ಯಾರು ಗೊತ್ತಾ?

Published

on

Film: ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಹೊಂದಿರುವ ಕನ್ನಡ ಕಿರುತೆರೆಯ ಧಾರವಾಹಿ ‘ಗಿಣಿರಾಮ” ದ ನಟಿ ನಯನಾ ನಾಗರಾಜ್​ ಅವರು ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.


ನಟಿ ನಯನಾ ನಾಗರಾಜ್​ ಅವರು ಸುಹಾಸ್ ಶಿವಣ್ಣ ಎಂಬವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಟಿ ನಯನಾ ನಾಗರಾಜ್​ ಗಿಣಿರಾಮ ಧಾರಾವಾಹಿಯಲ್ಲಿ ಮಹತಿಯ ಪಾತ್ರ ನಿಭಾಯಿಸುತ್ತಿದ್ದರು. ಮೊದಲು ಶಾಂತಂ ಪಾಪಂ ಮೂಲಕ ವೀಕ್ಷಕರ ಮನಸ್ಸನ್ನು ಗೆದ್ದಿದ್ದರು. ಇದಾದ ಬಳಿಕ ಪಾಪ ಪಾಂಡು, ಗಿಣಿರಾಮ ಸೀರಿಯಲ್​ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

FILM

ಅರೆಬೆತ್ತಲೆ ಫೊಟೊ ಪೋಸ್ಟ್ ಮಾಡಿದ ಸಮಂತಾ..! ಅಸಲಿಯತ್ತೇನು?

Published

on

ಜನಪ್ರಿಯ ನಟಿ ಸಮಂತಾರುತು ಪ್ರಭು  ತಮ್ಮ ಸಿನೆಮಾ ನಟನೆ ಮೂಲಕ ಎಲ್ಲರ ಫೇವರೆಟ್ ಆಗಿದ್ದವರು. ಮುದ್ದು ಮುಖದ ಚೆಲುವೆಯ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ಈಕೆ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇತ್ತೀಚೆಗೆ ತನ್ನ ಮಾಜಿ ಪತಿಯ ವಿಚಾರಕ್ಕೆ ಸಂಬಂಧಿಸಿ ಹಲವಾರು ವಿಚಾರಗಳಲ್ಲಿ ಸುದ್ದಿಯಲ್ಲಿರುತ್ತಾರೆ.

ಇದೀಗ ಸಮಂತಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತನ್ನ ಖಾತೆಯಿಂದ ಸೋಶಿಯಲ್ ಮೀಡಿಯಾದಲ್ಲಿ ಅರೆನಗ್ನ ಫೊಟೋವನ್ನು ಪೋಸ್ಟ್‌ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅದು ಸುಳ್ಳಾಗಿತ್ತು. ಯಾರೋ ಕಿಡಿಗೇಡಿಗಳು ಸಮಂತಾ ಫೊಟೋವನ್ನು ತಿರುಚಿ ಪೋಸ್ಟ್ ಮಾಡಿದ್ದಾರೆ.

ಮುಂದೆ ಓದಿ..; “ಮದುವೆ ಗೌನ್‌”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್‌ನಲ್ಲಿಅಭಿಮಾನಿಗಳು!

ಇನ್ನು ಮಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವ ಸಮಂತಾ ದಿನಕ್ಕೊಂದು ಆರೋಗ್ಯ ಮಾಹಿತಿಯನ್ನು ಪೋಸ್ಟ್ ಮಾಡುತ್ತಾರೆ. ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ’ ಉಪಯೋಗಗಳು ಎಂದು ಬರೆದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.  ಪೋಸ್ಟ್‌ನಲ್ಲಿ ದೀರ್ಘಕಾಲದ ಕಾಯಿಲೆಗಳು, ಚರ್ಮದ ಸೌಂದರ್ಯ, ದೇಹದ ಕೊಬ್ಬನ್ನು ಕಡಿಮೆ ಮಾಡುವುದು ಮುಂತಾದ ವಿವಿಧ ಉದ್ದೇಶಗಳಿಗಾಗಿ ಜನರು ಬಾತ್‌ ಟಬ್‌ನಲ್ಲಿ ಸ್ವಲ್ಪ ಸಮಯ ಇರುತ್ತಾರೆ ಎಂದು ಬರೆದುಕೊಂಡಿದ್ದರು.

ಅರೆಬೆತ್ತಲೆ ಫೊಟೊ ವೈರಲ್:

ಇನ್ನು ಬಾತ್ ಟಬ್‌ನಲ್ಲಿ ಟವಲ್ ಸುತ್ತಿಕೊಂಡು ಇರುವ ಸಮಂತಾ ಅವರ ಫೊಟೋದ ಜೊತೆಗೆ ಕೆಲವೊಂದು ಹೆಲ್ತ್‌ ಟಿಪ್ಸ್‌ಗಳನ್ನು ಬರೆದು ಪೋಸ್ಟ್ ಮಾಡಿದ್ದರು. ಇದರ ಬೆನ್ನಲೇ ಇನ್ನೊಂದು ಸಮಂತಾ ಅರೆಬೆತ್ತಲೆ ಫೊಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಆದರೆ ಅದರಲ್ಲಿ ಆಕೆಯ ಮುಖ ಕಾಣುತ್ತಿಲ್ಲ. ಅಸಲಿಗೆ ಅದು ನಕಲಿ ಎಂದು ಗೊತ್ತಾಗಿದೆ.  ಸೋಶಿಯಲ್ ಮೀಡಿಯಾದಲ್ಲಿ ಫೇಕ್‌ ಸುದ್ದಿ ಹಬ್ಬಿಸುವವರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಸುಳ್ಳು. ಆಕೆಯ ಅಂತಹ ಯಾವುದೇ ಫೋಟೊ ಪೋಸ್ಟ್ ಮಾಡಿಲ್ಲ. ಕಿಡಿಗೇಡಿಗಳು ಈ ರೀತಿ ಫೋಟೊ ವೈರಲ್ ಮಾಡುತ್ತಿದ್ದಾರೆ ಎನ್ನುವ ಚರ್ಚೆಯೂ ನಡೀತಿದೆ. ಒಟ್ಟಾರೆ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಾಮೆಂಟ್ಸ್ ಬರುತ್ತಿವೆ.

Continue Reading

FILM

ಹೆಣ್ಣು ಮಕ್ಕಳು ಕನಿಷ್ಠ 25 ದಾಟಿದ ಮೇಲೆ ಮದುವೆಯಾಗಿ; ಮಿಲನಾ ನಾಗರಾಜ್

Published

on

ಮಂಗಳೂರು : ಮದುವೆ ಎಂಬುದು ಎಲ್ಲರ ಬಾಳಿನ ಪ್ರಮುಖ ಘಟ್ಟ. ಕೆಲವೊಂದು ವಿಷಯ, ಜವಾಬ್ದಾರಿಗಳು ಮದುವೆ ಆದ ಮೇಲೆಯೇ ಬರುತ್ತದೆ. ಇನ್ನು ಮನೆಯ ಹಿರಿಯರು ಹೇಳುತ್ತಾ ಇರುತ್ತಾರೆ ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತದೆ. ಆ ಸಂಬಂಧವನ್ನು ದೂರ ಮಾಡಲು ಯಾರಿಂದ ಸಾಧ್ಯವಿಲ್ಲ ಎಂದು. ಹೀಗೆ ಕೆಲವೊಂದು ಬುದ್ಧಿವಾದದ ಮಾತುಗಳನ್ನು ಎಲ್ಲರೂ ಹೇಳುತ್ತಾ ಇರುತ್ತಾರೆ. ಇದೇ ರೀತಿ ಫಿಲ್ಮ ಸ್ಟಾರ್ ತಾಯಿಯಾಗ್ತಿರೋ ಮಿಲನಾ ನಾಗರಾಜ್ ಈಗ ತಮ್ಮ ಬದುಕಿನ ಸಂತಸದ ಘಟ್ಟದಲ್ಲಿ ಇದ್ದಾರೆ. ಮಿಲನಾ ಮತ್ತು ಪತಿ ಡಾರ್ಲಿಂಗ್ ಕೃಷ್ಣ ಇಬ್ಬರೂ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಮಿಲನಾ ನಾಗರಾಜ್ ಯಾವಾಗಲೂ ಪ್ರಬುದ್ಧತೆಯಿಂದಲೇ ಮಾತನಾಡುತ್ತಾರೆ.

ಇದೇ ರೀತಿಯಾಗಿ ನಮ್ಮ ಬದುಕಿನ ಸಾರ್ಥಕ ಕ್ಷಣಗಳನ್ನು ಮಿಲನಾ ತನ್ನ ವಿಡಿಯೋದಲ್ಲಿ ಮೆಲುಕು ಹಾಡಿದ್ದಾರೆ. ಹಾಗೆಯೇ ನಿಮಗೆ 25 ವರ್ಷಗಳಿಗಿಂತ ಹೆಚ್ಚು ವಯಸ್ಸಾಗುವವರಗೆ ಖಂಡಿತಾ ಮದುವೆಯಾಗ್ಬೇಡಿ. ಮೊದಲು ನೀವು ದುಡಿಯಿರಿ, ಗಳಿಸಿ, ಸ್ವತಂತ್ರರಾಗಿ, ಮಾನಸಿಕವಾಗಿ ಗಟ್ಟಿಯಾಗಿ, ಪ್ರಬುದ್ಧರಾಗಿ. ನಿಮ್ಮ ಬದುಕಿನ ನಿರ್ಧಾರಗಳನ್ನು ನೀವು ತೆಗೆದುಕೊಳ್ಳುವಷ್ಟು ಗಟ್ಟಿಯಾಗಿ ಆಗ ಮದುವೆಯಾಗಿ. ಅನೇಕ ಹುಡುಗಿಯರು, ಹುಡುಗರು ಕೂಡಾ ಗೊಂದಲದಲ್ಲೇ ಮದುವೆಯಾಗ್ತಾರೆ. ಹಾಗೆ ಆಗಬಾರದು. ಎಂದು ನಟಿ ಮಿಲನಾ ಹೇಳಿದ್ದರು.

ಅದೇ ರೀತಿ ಗಂಡು ಹೆಣ್ಣಿನ ಹೊಂದಾಣಿಕೆ ಹೇಳುವಷ್ಟು ಸುಲಭದ ಮಾತಲ್ಲ. ಮನೆಯಲ್ಲಿ ನಾವು ನಮ್ಮ ತಂದೆ- ತಾಯಿ ಜೊತೆಗೇ ಚಿಕ್ಕ ಚಿಕ್ಕ ವಿಚಾರಗಳಿಗೆ ಜಗಳ ಆಡುತ್ತಿರುತ್ತೇವೆ. ಆದರೆ ಮಕ್ಕಳು ಎನ್ನುವ ಕಾರಣಕ್ಕೆ ತಂದೆ ತಾಯಿ ಹೊಂದಿಕೊಳ್ಳುತ್ತಾರೆ. ಸುಲಭವಾಗಿ ಕ್ಷಮಿಸಿಬಿಡುತ್ತಾರೆ. ಆದರೆ ನಮ್ಮ ಬದುಕಿನಲ್ಲಿ ಒಬ್ಬ ಹೊಸ ವ್ಯಕ್ತಿ ಬಂದಾಗ ಹಾಗಿರುವುದಿಲ್ಲ. ಅವರು ಈ ಎಲ್ಲಾ ವಿಚಾರಗಳಿಗೆ ರೆಡಿ ಇರುವುದಿಲ್ಲ. ಅವರು ನಮ್ಮಿಂದ ಒಳ್ಳೆಯ ವಿಚಾರಗಳನ್ನ, ಸಿಹಿಯಾದ ವಿಚಾರಗಳನ್ನಷ್ಟೇ ಬಯಸುತ್ತಾರೆ. ಹಾಗಾಗಿ ಈ ಪ್ರಬುದ್ಧತೆ ಸಂಸಾರ ಸಾಮರಸ್ಯದಲ್ಲಿ ಬಹಳ ಮುಖ್ಯ ಎಂದಿದ್ದಾರೆ ಮಿಲನಾ ನಾಗರಾಜ್.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹೆಚ್ಚು ಹರಿದಾಡುತ್ತಿದೆ. ಮದುವೆ, ಸಂಬಂಧಗಳು, ಬದುಕು-ಭವಿಷ್ಯ ಈ ಎಲ್ಲದರ ಬಗ್ಗೆ ಅದೆಷ್ಟು ಸರಳವಾಗಿ ಮಿಲನಾ ವಿವರಿಸಿದ್ದಾರೆ ಎಂದು ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ.

ಇದೇ ಸೆಪ್ಟೆಂಬರ್ ತಿಂಗಳಲ್ಲಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ತಮ್ಮ ಮೊದಲ ಮಗುವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಇನ್ನು ಈ ವರ್ಷ ಪೂರ್ತಿ ಡಾರ್ಲಿಂಗ್ ಕೃಷ್ಣ ಬಹಳ ಬ್ಯುಸಿಯಂತೆ. ಸಾಲು ಸಾಲು ಪ್ರಾಜೆಕ್ಟ್ ಗಳ ನಡುವೆ ಪತ್ನಿ ಜೊತೆ ಸಮಯ ಕಳೆಯಲು ಸಾಕಷ್ಟು ಪ್ಲಾನಿಂಗ್ ಮಾಡಿಕೊಳ್ತಿದ್ದಾರಂತೆ. ಮೊದಲ ಎರಡು ತಿಂಗಳು ನನಗೂ ಆರೋಗ್ಯದಲ್ಲಿ ಸಾಕಷ್ಟು ಏರುಪೇರುಗಳಿದ್ದವು, ಆದರೆ ನಂತರ ನಿಧಾನಕ್ಕೆ ದೇಹ ಮತ್ತು ಮನಸ್ಸು ಈ ಸನ್ನಿವೇಶಕ್ಕೆ ಹೊಂದಿಕೊಂಡಿದೆ. ಸೆಪ್ಟೆಂಬರ್ ಗಾಗಿ ಎದುರು ನೋಡುತ್ತಿದ್ದೇವೆ ಎಂದು ಮಿಲನಾ ನಾಗರಾಜ್ ಖುಷಿಯಿಂದ ತಿಳಿಸಿದ್ದಾರೆ.

Continue Reading

FILM

ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಚಂದನ್ ಗೌಡ-ಕವಿತಾ ದಂಪತಿ

Published

on

ಚಂದನ್ ಗೌಡ – ಕವಿತಾ ದಂಪತಿ ಯಾರಿಗೆ ತಾನೇ ಗೊತ್ತಿಲ್ಲ. ಈ ಜೋಡಿ ‘ಲಕ್ಷ್ಮೀ ಬಾರಮ್ಮಾ’ ಮೂಲಕಾನೇ ಫೇಮಸ್. ಈ ಧಾರಾವಾಹಿಯಲ್ಲಿ ಕೆಲವು ಸಮಯ ನಟಿಸಿದ್ದ ಚಂದನ್ ಹೊರಬಂದಿದ್ದರು. ಕವಿತಾ ಕೂಡಾ ಅಷ್ಟೇ ಈ ಧಾರಾವಾಹಿ ಖ್ಯಾತಿ ನೀಡಿದ್ದರೂ, ನಂತರ ದಿನಗಳಲ್ಲಿ ಹೊರನಡೆದಿದ್ದರು. ಆದ್ರೆ, ಈ ಜೋಡಿ ರಿಯಲ್ ನಲ್ಲಿ ಒಂದಾಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇದೀಗ ಚಂದು – ಲಚ್ಚಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹಂಚಿಕೊಂಡ ದಂಪತಿ :

ನಟ ಚಂದನ್ ಕುಮಾರ್, ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ಸಂಭ್ರಮ ಹಂಚಿಕೊಂಡಿದ್ದಾರೆ. ನಟಿ ಕವಿತಾ ಗೌಡ ಚಂದನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆಅಭಿಮಾನಿಗಳಿಂದ, ನಟ, ನಟಿಯರಿಂದ ಶುಭ ಹಾರೈಕೆ ಹರಿದು ಬರುತ್ತಿದೆ. ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ವಿನಯ್ ಗೌಡ, ಪ್ರಿಯಾಂಕಾ ಚಿಂಚೋಳಿ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. 2021 ಮೇ 14ರಂದು ಲಾಕ್ ಡೌನ್ ಸಂದರ್ಭದಲ್ಲಿ ಈ ಜೋಡಿ ಮದುವೆಯಾಗಿತ್ತು.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಬ್ಯುಸಿ ಲೈಫ್ :

ಕೆಲ ತಿಂಗಳುಗಳಿಂದ ಕವಿತಾ ಗೌಡ ಅವರು ಉದ್ಯಮದ ಕಡೆಗೆ ಮುಖ ಮಾಡಿದ್ದರು. ಚಂದನ್ ಜೊತೆ ಸೇರಿ ಒಂದಾದ ಮೇಲೆ ಒಂದರಂತೆ ಹೋಟೆಲ್ ಬ್ರ್ಯಾಂಚ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಮೇಕಪ್ ಸ್ಟುಡಿಯೋವನ್ನು ಕೂಡ ಆರಂಭಿಸಿದ್ದಾರೆ.

Continue Reading

LATEST NEWS

Trending