Friday, March 24, 2023

ಸರ್ಪ್ರೈಸ್​ ಗಿಫ್ಟ್​ ಕೊಡುತ್ತೇನೆಂದು ವರನ ಕತ್ತು ಕೊಯ್ದ ವಧು

ವಿಜಯವಾಡ: ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ ವರನನ್ನು ವಧು ತನ್ನ ಊರಿಗೆ ಕರೆದು ಕುತ್ತಿಗೆ ಕೊಯ್ದು ಗಂಭೀರ ಗಾಯಗೊಳಿಸಿದ ಘಟನೆ ಆಂಧ್ರ ಪ್ರದೇಶದ ಅನಕಪಲ್ಲೆ ಜಿಲ್ಲೆಯ ರವಿಕಾಮತಮ್​ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ನಡೆದಿದೆ.


ಗಂಭೀರ ಗಾಯಗೊಂಡ ವರನನ್ನು ರಾಮು ನಾಯ್ಡು ಎಂದು ಗುರುತಿಸಲಾಗಿದೆ.
ರಾಮು ನಾಯ್ಡು ಜೊತೆ ಕೋಮಲಪುಡಿ ಗ್ರಾಮದ ಯುವತಿ ಜತೆ ಮೇ 26ರಂದು ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬಸ್ಥರು ಮದುವೆಗೆ ಬೇಕಾದ ತಯಾರಿಯನ್ನು ನಡೆಸುತ್ತಿದ್ದರು. ಎಂದಿನಂತೆ ವಧು ಹಾಗೂ ವರ ಗಂಟೆಗಟ್ಟಲೆ ಫೋನ್‌ನಲ್ಲಿ ಮಾತನಾಡುತ್ತಿದ್ದರು.

ಅದರಂತೆ ಕೆಲದಿನಗಳ ಹಿಂದೆ ಕರೆ ಮಾಡಿದ ಯುವತಿ ನಿನಗೊಂದು ಸರ್ಪ್ರೈಸ್​ ಗಿಫ್ಟ್​ ಇದೆ ತನ್ನೂರಿಗೆ ಬರುವಂತೆ ಕೇಳಿದ್ದಳು. ವಧುವಿನ ಮಾತಿಗೆ ಮರುಮಾತಾಡದೇ ಯುವಕ ಈಕೆಯ ಊರಿಗೆ ಬಂದಿದ್ದ. ಊರಿನಲ್ಲಿ ಇಬ್ಬರೂ ಬೆಟ್ಟದ ಮೇಲಿರುವ ಒಂದು ಸಣ್ಣ ದೇವಸ್ಥಾನ ಬಳಿ ಹೋದರು. ಈ ವೇಳೆ ಯುವತಿ ಸರ್ಪ್ರೈಸ್​ ಗಿಫ್ಟ್​ ಕೊಡುತ್ತೇನೆ ಕಣ್ಣು ಮುಚ್ಚು ಎಂದು ರಾಮ ನಾಯ್ಡುಗೆ ಹೇಳಿದ್ದಾರೆ.

ಆತ ಕಣ್ಣು ಮುಚ್ಚಿದ ಬೆನ್ನಲ್ಲೇ ಯುವತಿ ಹರಿತವಾದ ಚೂರಿಯಿಂದ ಆತನ ಗಂಟಲನ್ನು ಯುವತಿ ಸೀಳಿದ್ದಾಳೆ.
ಒಂದೆಡೆ ಗಂಟಲಿನಿಂದ ರಕ್ತ ಸುರಿಯುತ್ತಿದ್ದರೆ, ಯುವತಿ ಪಕ್ಕದಲ್ಲೇ ನಿಂತು ನೋಡುತ್ತಿದ್ದಳು. ಬೆಟ್ಟದ ಪ್ರದೇಶವಾಗಿದ್ದರಿಂದ ಸಹಾಯಕ್ಕಾಗಿ ಅಂಗಚಾಚಿದರೂ ಯಾರೊಬ್ಬರು ರಕ್ಷಣೆಗೆ ಬರಲಿಲ್ಲ. ಕೊನೆಗೆ ತನ್ನ ಫೋನ್​ ತೆಗೆದು 108ಕ್ಕೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಂಬ್ಯುಲೆನ್ಸ್​ ಬಂದಿದೆ. ಇದರಿಂದ ರಾಮ ನಾಯ್ಡು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.
ಮೊದಲು ರಾಮ ನಾಯ್ಡು ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆಂದು ಯುವತಿ ಕತೆ ಕಟ್ಟಿದ್ದಾಳೆ. ಆದರೆ, ರಾಮ ನಾಯ್ಡು ಹೇಳಿಕೆಯಿಂದ ಯುವತಿಯ ಬಂಡವಾಳ ಬಯಲಾಗಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ. ಇಷ್ಟಕ್ಕೆಲ್ಲಾ ಕಾರಣ ಆಕೆಗೆ ಮದುವೆ ಇಷ್ಟವಿರಲಿಲ್ಲವಂತೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತಗಟ್ಟೆಗಳ ಬದಲಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 202-ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆಯಾಗಿದ್ದು ಕೇಂದ್ರ ಚುನಾವಣಾ ಆಯೋಗ ಇದನ್ನು...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...