Connect with us

LATEST NEWS

ಹಕ್ಕಿಯೊಂದರ ರಕ್ಷಣೆ ಮಾಡಲು ಹೋಗಿ 1ಲಕ್ಷ ರೂ. ಕಳೆದುಕೊಂಡ ಮಹಿಳೆ..!

Published

on

ರಸ್ತೆ ಬದಿಯಲ್ಲಿ ಅರೆ ಜೀವದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಪಕ್ಷಿಗೆ ಸಹಾಯ ಮಾಡಲು ಹೋಗಿ ಮಹಿಳೆಯೊಬ್ಬರು 1ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಮಂಬೈನಲ್ಲಿ ನಡೆದಿದೆ.

ಮುಂಬೈ: ರಸ್ತೆ ಬದಿಯಲ್ಲಿ ಅರೆ ಜೀವದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಪಕ್ಷಿಗೆ ಸಹಾಯ ಮಾಡಲು ಹೋಗಿ ಮಹಿಳೆಯೊಬ್ಬರು 1ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಮಂಬೈನಲ್ಲಿ ನಡೆದಿದೆ.

ಧ್ವನಿ ಮೆಹ್ತಾ ಎಂಬ ಮಹಿಳೆ ಪ್ರಸಿದ್ಧ ಸ್ಟುಡಿಯೋವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗಾಯಗೊಂಡು ಅರೆ ಜೀವದ ಸ್ಥಿತಿಯಲ್ಲಿ ಪರದಾಡುತ್ತಿರುವ ಹಕ್ಕಿಯೊಂದನ್ನು ಕಂಡಿದ್ದರು.

ಕೂಡಲೇ ಅದನ್ನು ರಕ್ಷಿಸಲು ಕೈಯಲ್ಲಿ ಹಿಡಿದು ಚಿಕಿತ್ಸೆಗೆಂದು ಹೊರಟರು. ಆದರೆ ಅವರಿಗೆ ಪಕ್ಷಿಗಳಿಗೆ ಚಿಕಿತ್ಸೆ ನೀಡುವ ವ್ಯೆದ್ಯರು ಗೊತ್ತಿರಲಿಲ್ಲ. ಹಾಗಗಿ ಗೂಗಲ್ ನಲ್ಲಿ ಹುಡುಕಿದ್ದಾರೆ.

ಬಳಿಕ ಗೂಗಲ್ ನಲ್ಲಿ ಸಿಕ್ಕಿದ ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿದ್ದರು. ಆ ನಂಬರ್ ನಿಂದ ದೂರು ನೀಡಲು ಅಪ್ಲೀಕೇಶನ್ ವೊಂದನ್ನು ಭರ್ತಿ ಮಾಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಎನ್‌ ಜಿಒ ಹೇಳಿದ್ದೆಂದು ಈ ಕೆಲಸವನ್ನು ಮೆಹ್ತಾ ಮಾಡಿದ್ದು, ಅದರಲ್ಲಿದ್ದ ಮಾಹಿತಿಯನ್ನು ಹಾಕಿದ್ದಾರೆ.

ಅಪ್ಲೀಕೇಶನ್‌ ಫಿಲ್‌ ಮಾಡಲು ನಿಗದಿತ ಶುಲ್ಕವನ್ನು ಕಟ್ಟಿದ್ದಾರೆ.

ಈ ಪ್ರಕ್ರಿಯೆ ನಡೆದ ಬಳಿಕ, ಎಷ್ಟು ಕಾದರೂ ಅತ್ತ ಕಡೆಯಿಂದ ಯಾವ ಸಹಾಯವೂ ಬಂದಿರಲಿಲ್ಲ ಎಂದು ಮೆಹ್ತಾ ಅವರು ಹೇಳಿದ್ದಾರೆ.

ಇದಾದ 4 ದಿನಗಳ ಬಳಿಕ ರೈಲಿನಲ್ಲಿ ಸಂಚರಿಸುತ್ತಿದ್ದ ಮೆಹ್ತಾ ಅವರ ಮೊಬೈಲ್‌ ಗೆ 99,988 ರೂ. ಕಡಿತವಾಗಿರುವ ಸಂದೇಶವೊಂದು ಬಂದಿದೆ ಎನ್ನಲಾಗಿದೆ.

ಈ ವೇಳೆಯೇ ಅವರಿಗೆ ತಾನು ವಂಚಕರ ಬಲೆಗೆ ಬಿದ್ದಿದ್ದೇನೆ ಎನ್ನುವುದು ಸ್ಪಷ್ಟ ಅರಿವು ಆಗಿದೆ.

ಇದಾದ ಬಳಿಕ ಮೆಹ್ತಾ ಘಟನೆಯ ಬಗ್ಗೆ ಸೈಬರ್ ಕ್ರೈಂ ಇಲಾಖೆಗೆ ಆನ್‌ಲೈನ್‌ನಲ್ಲಿ ವರದಿ ಮಾಡಿದ್ದಾರೆ ಮತ್ತು ಲಿಖಿತ ದೂರು ಸಲ್ಲಿಸಿದ್ದಾರೆ.

ಸದ್ಯ ಪೊಲೀಸರು ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ. ವಂಚಕರ ತನಿಖೆ ಕಾರ್ಯ ನಡೆದಿದ್ದು, ಇದೀಗ ವಂಚಕರ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ಎನ್ನಲಾಗಿದೆ.

LATEST NEWS

ಭೀಕರ ಬ್ಲಾಸ್ಟ್: ಮೊಬೈಲ್ ಬಳಿಯಲ್ಲಿ ಡಿಯೋಡರೆಂಟ್ ಬಾಟಲಿಗಳನ್ನು ಇಡ್ಡುತ್ತೀರಾ ಹಾಗಾದ್ರೆ ಹುಷಾರ್..!!

Published

on

ಮಹಾರಾಷ್ಟ್ರ: ಮೂವರು ಮೊಬೈಲ್ ಫೋನ್ ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್‌ನ ಸಿಡ್ಕೋ ಉತ್ತಮ್ ನಗರ ಪ್ರದೇಶದಲ್ಲಿ ಮಂಗಳವಾರದಂದು ನಡೆದಿದೆ.

ಮನೆಯೊಳಗೆ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡ ಕಾರಣ ಈ ಘಟನೆ ನಡೆದಿದೆ.

ಫೋನ್ ಪಕ್ಕದಲ್ಲಿ ಡಿಯೋಡರೆಂಟ್ ಕ್ಯಾನ್ ಸ್ಫೋಟದ ತೀವ್ರತೆ ಮತ್ತಷ್ಟು ಹೆಚ್ಚಿಸಿದೆ.

ಸ್ಫೋಟದ ತೀವ್ರತೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದು ಸುತ್ತಮುತ್ತಲಿನ ಪ್ರತಿಯೊಂದು ಕಿಟಕಿಗಳನ್ನು ಒಡೆದು ಹಾಕಿತು.

ಸ್ಫೋಟದ ತೀವ್ರತೆಯಿಂದಾಗಿ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜುಗಳು ಕೂಡ ಒಡೆದಿವೆ.

ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳೂ ಒಡೆದಿರುವ ಬಗ್ಗೆ ವರದಿಯಾಗಿದೆ.

ಸ್ಫೋಟದ ವೇಳೆ ಮನೆಯಲ್ಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಪೊಲೀಸರ ತನಿಖೆ ಮುಂದುವರೆದಿದೆ.

 

Continue Reading

DAKSHINA KANNADA

ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ‘ಸ್ಕಿಲ್ ಅಪ್’ ಕಾರ್ಯಕ್ರಮ

Published

on

ಮಂಗಳೂರು: ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ವತಿಯಿಂದ ‘ಸ್ಕಿಲ್ ಅಪ್’ ಎಂಬ ಕಾರ್ಯಕ್ರಮ ಸೆ. 23 ರಂದು ನಡೆಯಿತು.

ಆರೋಗ್ಯ ಕ್ಷೇತ್ರದ ಕಾರ್ಯನಿರ್ವಾಹಕರಿಗೆ ಅಗತ್ಯವಾದ, ಆಡಳಿತ ಮತ್ತು ನಿರ್ವಹಣಾ ಕೌಶಲ್ಯಗಳನ್ನು ಒದಗಿಸುವುದು ಇದರ ಉದ್ದೇಶವಾಗಿತ್ತು.

ಮಂಗಳೂರಿನ ಸುಶಾಂತ್ ಕನ್ಸಲ್ಟೆನ್ಸಿಯ ಎಚ್. ಪ್ರಶಾಂತ್ ಮಿರಾಂಡ, ಎಂಡಿಪಿ ನಿರ್ದೇಶಕ ಪ್ರೊ.ವೆಂಕಟೇಶ್ ಅಮೀನ್ ಮತ್ತು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಡೀನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಕಾರ್ಯಕ್ರಮವನ್ನು ಎಚ್‌. ಪ್ರಶಾಂತ್ ಮಿರಾಂಡ, ಪ್ರೊ. ವೆಂಕಟೇಶ್ ಶೇಖರ್ ಅಮಿನ್, ಪ್ರೊ. ಡಾ. ಅಮುತಾ ಪಿ. ಮಾರ್ಲಾ, ಡಾ. ಶಾಶ್ವತ್ ಎಸ್., ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ವಹಣೆಗಾರ ಪ್ರೊ. ವಿಜಯ ಪಿ., ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮುಖ್ಯಾಧಿಕಾರಿ ಅವರು ಉದ್ಘಾಟಿಸಿದರು.

ಚೆನ್ನೈ ಅಪೋಲೊ ಪ್ರೋಟಾನ್ ಕ್ಯಾನ್ಸರ್ ಸೆಂಟರ್, ಆಥರ್ವ ಆರ್ಥೋ ಕೇರ್ ಮಂಗಳೂರು, ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು(ಸಿಎಂಸಿ) ವೆಲ್ಲೂರು, ಡಾಕ್ಟರ್ ಟಿಎಂಎ ಪೈ ಆಸ್ಪತ್ರೆ, ಉಡುಪಿ, ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆ ದೇರೆಳಕಟ್ಟೆ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು, ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ, ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಅತ್ತಾವರ, ಮಣಿಪಾಲ್ ಹೆಲ್ತ್ ಎಂಟರ್ಪ್ರೈಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ರಾಜಗಿರಿ ಆಸ್ಪತ್ರೆ ಬೆಂಗಳೂರು, ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಬೆಂಗಳೂರು, ರಾಮಯ್ಯ ಯೂನಿವರ್ಸಿಟಿ ಆಫ್ ಆಪ್ಲೈಡ್ ಸೈನ್ಸೆಸ್ ಬೆಂಗಳೂರು, ಶ್ರೀ ರೇಂಗ ಆಸ್ಪತ್ರೆ ತಮಿಳುನಾಡು, ಶ್ರೀನಿವಾಸ್ ಆಸ್ಪತ್ರೆ ಮುಕ್ಕ, ಸೈಂಟ್‌ ಜಾನ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು, ಯೂನಿಟಿ ಆಸ್ಪತ್ರೆ ಮಂಗಳೂರು, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರು ಮತ್ತಿತರ ಸಂಸ್ಥೆಗಳಿಂದ ಆಧಿಕಅರಿ ಮತ್ತು ಸಿಬಂದಿ ಭಾಗವಹಿಸಿದ್ದರು. ಎ. ಜೆ. ಹ್ಯೂಮನ್ ರಿಸೋರ್ಸಸ್ ನ ಮ್ಯಾನೇಜರ್ ಶಶಧರ ಆಚಾರ್ಯ ಪ್ರಸ್ತಾವನೆಗೈದರು.

ಎ..ಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ನ ಸಹಾಯಕ ಪ್ರಾಧ್ಯಾಪಕಿ ಪ್ರೀಮ್ ರೋಸ್ ವಿಷ್ಣು ಸ್ವಾಗತಿಸಿದರು.

Continue Reading

LATEST NEWS

ಕಟ್ಟಡ ನಿರ್ಮಾಣ ಸಾಮಾಗ್ರಿ ಸಾಗಾಟ ಸ್ಥಗಿತ-ಸಮಸ್ಯೆ ಬಗೆಹರಿಸಲು ಕೊರಗಜ್ಜನ ಮೊರೆ

Published

on

ಉಡುಪಿ: ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ.

ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಲಾರಿಗಳನ್ನು ಪಾರ್ಕಿಂಗ್ ಮಾಡಲಾಗಿದೆ.

ಉದ್ಯಾವರ, ಕಟಪಾಡಿ, ಬ್ರಹ್ಮಾವರ, ಕೋಟ ಸಾಸ್ತಾನ, ಕುಂದಾಪುರ, ಬೈಂದೂರು ಭಾಗದಲ್ಲಿ ರಸ್ತೆ ಬದಿ ಲಾರಿ, ಟೆಂಪೋ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ.

ಒನ್ ಸ್ಟೇಟ್ ಒನ್ ಜಿಪಿಎಸ್, ಲಾರಿಗಳ ಮೇಲೆ ಅಕ್ರಮ ಸಾಗಾಟ ನೆಪದಲ್ಲಿ ಕೇಸ್, ಪರವಾನಿಗೆ ಅವ್ಯವಸ್ಥೆ ಮತ್ತು ಜಿಲ್ಲಾಡಳಿತದ ಏಕಾಏಕಿ ಹೊಸ ನಿಯಮಗಳ ಜಾರಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಲಾರಿ ಮಾಲಕರು ಸಮಸ್ಯೆ ಬಗೆಹರಿಯುವವರೆಗೆ ಮುಷ್ಕರ ಮುಂದುವರೆಯಲಿದೆ.

ಈ ನಡುವೆ ಸಮಸ್ಯೆ ಬಗೆಹರಿಸಬೇಕೆಂದು ಕೋರಿ ಲಾರಿ ಮಾಲಿಕರು ಕೊರಗಜ್ಜನ ಮೊರೆ ಹೋಗಿದ್ದಾರೆ.

ಶ್ರೀ ಕ್ಷೇತ್ರ ಪೇಟೆಬೆಟ್ಟು ಶ್ರೀ ಭಗವಾನ್ ಬಬ್ಬು ಸ್ವಾಮಿ ದೇವಸ್ಥಾನ ಮತ್ತು ಕೊರಗಜ್ಜ ಕ್ಷೇತ್ರ ಕಟಪಾಡಿಯಲ್ಲಿ ಲಾರಿ ಚಾಲಕರು ಮತ್ತು ಮಾಲಕರು ತಮಗೆ ಬಂದಿರುವ ಸಂಕಷ್ಟ ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಿಪಡಿಸುವ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡಿದರು.

Continue Reading

LATEST NEWS

Trending