DAKSHINA KANNADA
udupi: ಲಕ್ಷಾಂತರ ಮೌಲ್ಯದ ಸರ ಕಳವು-ಆರೋಪಿ ಅರೆಸ್ಟ್..!
ಉಡುಪಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಪಾವಂಜೆ ರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಮತ್ತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು ಲಕ್ಷಾಂತರ ಮೌಲ್ಯದ ಚಿನ್ನದ ಹವಳದ ಸರ ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮಂಗಳೂರು ಮಾಲೇಮಾರ್ ಬಳಿ ವಾಸ್ತವ್ಯವಿರುವ ಮೂಲತಃ ಕೈಕಂಬ ಮಳಲಿ ನಿವಾಸಿ ವಿನಯ ಪ್ರಸಾದ್(30) ಎಂದು ಗುರುತಿಸಲಾಗಿದೆ.
ಕಳೆದ ಅ. 14ರಂದು ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾವಂಜೆ ಗ್ರಾಮದ ಪಾವಂಜೆಯಿಂದ ಹಳೆಯಂಗಡಿ ಕಡೆಗೆ ಹೋಗುವ ಒಳ ರಸ್ತೆಯಲ್ಲಿ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ ಸರವನ್ನು ಯಾರೋ ಅಪರಿಚಿತ ವ್ಯಕ್ತಿ ಸುಲಿಗೆ ಮಾಡಲು ಪ್ರಯತ್ನಿಸಿದ ಬಗ್ಗೆ ಲೀಲಾ ರವರು ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾದ ವಿನಯ್ ಪ್ರಸಾದ್ ಎಂಬಾತನನ್ನು ಮುಲ್ಕಿ ಪೊಲೀಸರು ನ.2ರಂದು ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದು, ಪೊಲೀಸರು ತೀವ್ರ ತನಿಖೆ ನಡೆಸಿದಾಗ ಆರೋಪಿ ತಾನು ಉಡುಪಿಯ ಕಟಪಾಡಿ ಒಳ ರಸ್ತೆಯಲ್ಲಿ ಕೂಡ ಮಹಿಳೆಯೋರ್ವಳ ಕುತ್ತಿಗೆಯಿಂದ ಸರವನ್ನು ಸುಲಿಗೆ ಮಾಡಿದ ತಿಳಿಸಿದ್ದಾನೆ.
ಅದರಂತೆ ಆರೋಪಿ ಸುಲಿಗೆ ಮಾಡಿದ 43,4 ಗ್ರಾಂ. ತೂಕದ ಚಿನ್ನದ ಹವಳದ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್ ಸೈಕಲನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾರ್ಗದರ್ಶನದಂತೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಉತ್ತರ ವಿಭಾಗದ ಎ.ಸಿ.ಪಿ. ಮನೋಜ್ ಕುಮಾರ್ ರವರ ನೇತೃತ್ವದಲ್ಲಿ ಆರೋಪಿಯಮತ್ತು ಸೊತ್ತು ಪತ್ತೆ ಹಚ್ಚುವಲ್ಲಿ ಮುಲ್ಕಿ ಪೊಲಿಸ್ ಠಾಣೆಯ ಪಿ.ಎ, ವಿದ್ಯಾಧರ ಡಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು..
DAKSHINA KANNADA
ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!
ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ 2000 ರೂ. ನೇರವಾಗಿ ಕೃಷಿಗರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಇದೀಗ ರೈತರು 17ನೇ ಕಂತಿನ ನಿರೀಕ್ಷೆಯಲ್ಲಿದ್ದು, ಮೇ.2024ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ.
16ನೇ ಕಂತನ್ನು ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್ ನಿಧಿ ಯೋಜನೆಯ ಕಂತನ್ನು ರೈತರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು 17ನೇ ಕಂತಿಗಾಗಿ ಕಾದು ನೋಡಬೇಕಿದೆ. ಈ ಯೋಜನೆಯ ಕಂತುಗಳನ್ನು ವರ್ಷದಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಮೊದಲನೆಯ ಕಂತು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್ನಲ್ಲಿ ನೀಡಲಾಗುತ್ತದೆ.
ಮುಂದೆ ಓದಿ..; “ಮದುವೆ ಗೌನ್”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್ನಲ್ಲಿಅಭಿಮಾನಿಗಳು!
ಈಗಾಗಲೇ 16ನೇ ಕಂತನ್ನು ಫೆಬ್ರವರಿಯಲ್ಲಿ ನೀಡಿದ್ದು, 17 ನೇ ಕಂತು ಮೇ ತಿಂಗಳಿನಲ್ಲಿ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ನಿರ್ದಿಷ್ಟ ದಿನಾಂಕ ಮಾತ್ರ ನಿಗದಿಯಾಗಿಲ್ಲ.
BANTWAL
ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.
ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.
ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:
ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
BANTWAL
ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ. ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ.
ಪವಾಡ ತೋರಿದ್ದ ಕಲ್ಲುರ್ಟಿ :
ಈಗಾಗಲೇ ತಿಳಿಸಿದಂತೆ ಈ ದೈವಸ್ಥಾನ ಹಿಂದು -ಮುಸಲ್ಮಾನ ಭಾಂದವರ ಭಾವೈಕ್ಯತೆಯ ಸಾನಿಧ್ಯ. ಕುದ್ರೆಬೆಟ್ಟುವಿನ ಒಂದು ಮುಸನ್ಮಾನ ಕುಟುಂಬ ಕಲ್ಲುರ್ಟಿ ದೈವವನ್ನು ನಂಬುತ್ತಿದ್ದರು. ಐಸಮ್ಮ ಎಂಬ ಮಹಿಳೆಯ ಕುಟುಂಬ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸುತ್ತಿದ್ದರು. ಇದರಿಂದ ಬೇಸತ್ತ ಕುಟುಂಬಕ್ಕೆ ಆ ಜಾಗದಲ್ಲಿ ಅಗೋಚರ ಶಕ್ತಿಯೊಂದು ಇರುವುದು ತಿಳಿಯುತ್ತದೆ. ನಂತರ ಅವರು ‘ಕಲ್ಲುರ್ಟಿ’ಯನ್ನು ಕಲ್ಲಿನ ರೂಪದಲ್ಲಿ ನಂಬಲು ಆರಂಭಿಸುತ್ತಾರೆ. ಕಷ್ಟ ಎಂದು ತನ್ನಲ್ಲಿಗೆ ಬಂದವರಿಗೆ ಐಸಮ್ಮ ಕಲ್ಲುರ್ಟಿಯ ಸ್ಮರಿಸಿ ಕಪ್ಪು ದಾರ ನೀಡುತ್ತಿದ್ದರು. ಇದರಿಂದ ಅವರ ತೊಂದರೆಗಳೆಲ್ಲ ನಿವಾರಣೆಯಾಗುತ್ತಿತ್ತು ಎಂಬ ನಂಬಿಕೆಯಿದೆ.
ಮನೆಯಲ್ಲಿ ವಿಶೇಷ ಅಡುಗೆ ಮಾಡಿದರೆ, ಆಕೆ ದೈವಕ್ಕೆ ಬಡಿಸದೇ ಸೇವಿಸುತ್ತಿರಲಿಲ್ಲ. ಒಂದುವೇಳೆ ತಪ್ಪಿದ್ದಲ್ಲಿ ಅಡುಗೆ ಮಾಡಿಟ್ಟಿದ್ದ ಪಾತ್ರೆಯೇ ದೈವದ ಕಲ್ಲಿನತ್ತ ಚಲಿಸುತ್ತಿತ್ತಂತೆ. ಆದರೆ, ಕಾಲಕ್ರಮೇಣ ಆ ಕುಟುಂಬ ಮನೆಯನ್ನು ಮಾರಿ ಬೇರೆ ಕಡೆ ಹೊರಟು ಹೋಗಿದ್ದರು.
ಮತ್ತೆ ಬೆಳಕಿಗೆ ಬಂದ ಕ್ಷೇತ್ರ :
ಆ ಮುಸಲ್ಮಾನ ಕುಟುಂಬವೇನೋ ಹೊರಟು ಹೋಯಿತು. ಶಕ್ತಿ ಅಲ್ಲೇ ಉಳಿಯಿತು. ಈ ಘಟನೆ ನಡೆದು ಹಲವು ದಶಕಗಳೇ ಕಳೆದಿವೆ. 15 ವರ್ಷಗಳಿಂದ ಇಲ್ಲಿ ಹಲವು ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮಣಿಕಂಠ ಯುವಶಕ್ತಿ ಕೇಂದ್ರ ಭಜನಾ ಮಂದಿರವೊಂದನ್ನು ಸ್ಥಾಪಿಸುವ ಕೆಲಸ ಆರಂಭಿಸಿತ್ತು. ಆದರೆ, ಇದಕ್ಕೆ ತಡೆ ಬರಲಾರಂಭಿಸಿದಾಗ, ಮಂದಿರದಲ್ಲಿ ಪ್ರಶ್ನೆ ಇಟ್ಟಾಗ ‘ಯುವಶಕ್ತಿ’ ಯ ಯುವಕರು ತಾಯಿ ಕಲ್ಲುರ್ಟಿಯನ್ನು ನಂಬಬೇಕು ಎಂಬ ಅಪ್ಪಣೆಯಾಯಿತು.
ನಾವು ಬಿಟ್ಟೆವೆಂದು ದೈವ ಬಿಡುವುದೇ..? ಪೂ – ನೀರ್(ಹೂ-ನೀರು) ಸಲ್ಲದೇ ಹೋದಲ್ಲಿ ಹೇಗೆ? ಅಂತೆಯೇ, ಹಳೆಯ ದೈವಸ್ಥಾನ ಜೀರ್ಣೋದ್ಧಾರಗೊಂಡು ಹೊಸ ರೂಪ ಪಡೆದು ನಿಂತಿದೆ.
20 ದಿನಗಳಲ್ಲಿ ನಡೆಯಿತು ಜೀರ್ಣೋದ್ಧಾರ :
ದೈವದ ಅಭಯ ಯುವಕರ ಮೇಲಿತ್ತು. ಇಡೀ ಊರೇ ಅಚ್ಚರಿ ಪಡುವಂತೆ ತಾಯಿಯ ದೈವಸ್ಥಾನದ ಕಾರ್ಯ ನಡೆಯಿತು. ಕೇವಲ 20 ದಿನಗಳಲ್ಲಿ ಅಪ್ಪೆ ಕಲ್ಲುರ್ಟಿಯ ಕ್ಷೇತ್ರ ತಲೆ ಎತ್ತಿ ನಿಂತಿತು ಅಂದರೆ ನೀವು ನಂಬಲೇ ಬೇಕು. ಕ್ಷೇತ್ರದ ಜೀರ್ಣೋದ್ಧಾರಕ್ಕಾಗಿ ಹಗಲಿರುಳು ಯುವಕರು ಶ್ರಮಿಸಿದ್ದಾರೆ. ಹುಬ್ಬೇರಿಸುವಂತಹ ಕೆಲಸ ಮಾಡಿದ ಶ್ರೀ ಮಣಿಕಂಠ ಯುವಶಕ್ತಿ ತಂಡದ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ಕಾರ್ಯಕ್ರಮಗಳ ವಿವರ :
ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ. ಮೇ.02 ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತ್ರ, ಕಲ್ಪೋಕ್ತ ಪೂಜೆ, ವಾಸ್ತು ಹೋಮಾದಿ ಅಧಿವಾಸ ನಡೆಯಲಿದೆ. ಸಂಜೆ 6.30 ರಿಂದ ‘ನಮ್ಮ ಕುಡ್ಲ’ ವಾಹಿನಿ ಖ್ಯಾತಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ನಡೆಯಲಿದೆ.
ಮೇ.03 ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.
ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿಪರ್ಜನ್ಯ ಜಪ; ಶಾಸಕರು ಭಾಗಿ
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.
- DAKSHINA KANNADA7 days ago
ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
- BANTWAL7 days ago
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
- bangalore7 days ago
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
- LATEST NEWS7 days ago
ಹನುಮಂತ ತನ್ನ ಹೆಂಡತಿಯೊಂದಿಗೆ ಕುಳಿತಿರುವ ವಿಶಿಷ್ಟ ದೇವಾಲಯ ಎಲ್ಲಿದೆ ಗೊತ್ತಾ!?