BANTWAL
ಮನೆಯಿಂದ ಲಕ್ಷಾಂತರ ರೂ ಚಿನ್ನಾಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು..!
ಮನೆಯಿಂದ ಲಕ್ಷಾಂತರ ರೂ ಚಿನ್ನಾಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು..!
ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ನೇರಳಕಟ್ಟೆ ಪರ್ಲೊಟ್ಟು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ನೇರಳಕಟ್ಟೆ ಸಮೀಪದ ಪರ್ಲೊಟ್ಟು ನಿವಾಸಿ ಉಮ್ಮಾರ್ ಫಾರುಕ್ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.
ಮನೆ ಮಾಲಕ ಉಮ್ಮಾರ್ ಫಾರುಕ್ ರವರು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಮನೆಯ ಒಂದು ಬೆಡ್ ರೂಮಿನಲ್ಲಿ ಮಲಗಿದ್ದರು.
ಇನ್ನೋರ್ವ ಪುತ್ರ ಬೇರೊಂದು ಬೆಡ್ ರೂಮಿನಲ್ಲಿ ಮಲಗಿದರೆ ಮನೆಯ ಕೆಲಸದ ಮಹಿಳೆ ಮೇಲ್ಭಾಗದ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು.
ಪತ್ನಿ, ಮಕ್ಕಳೊಂದಿಗೆ ಉಮ್ಮರ್ ಫಾರುಕ್ ರವರು ಮಲಗಿದ್ದ ಕೋಣೆಗೆ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣವನ್ನು ದೋಚಿ ಹಿಂದಿನ ಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಎಸೈ ಎಸ್.ಐ ವಿನೋದ್ ರೆಡ್ಡಿ ಮತ್ತು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞ ರನ್ನೂ ಕರೆಸಿ ಪರಿಶೀಲನೆ ನಡೆಸಲಾಗಿದೆ.
BANTWAL
ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!
ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
BANTWAL
ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.
ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BANTWAL
ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್
ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.
ಕಾರಿನ ಬ್ಯಾಟರಿ ಶಾರ್ಟ್ ಸಕ್ಯೂರ್ಟ್ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.
- LATEST NEWS6 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA6 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS7 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!