Connect with us

BELTHANGADY

ಬೆಳ್ತಂಗಡಿ: ಹಾಡಹಗಲೇ ಮನೆಯಿಂದ ಚಿನ್ನಾಭರಣ ಕಳವು ಪ್ರಕರಣ- 3 ಆರೋಪಿಗಳ ಬಂಧನ

Published

on

ಬೆಳ್ತಂಗಡಿ: ಹಾಡಹಗಲೇ ಮನೆಯೊಂದರಿಂದ ನಗದು ಸಹಿತ ಚಿನ್ನಾಭರಣವನ್ನು ಕಳವುಗೈದ 3 ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ.


ಆರೋಪಿಗಳಾದ ಮಹಮ್ಮದ್ ಸ್ವಾಲಿ (26) ಯಾಹ್ಯಾ (32) ಬಿ.ಹೆಚ್ ನೌಫಲ್ (27 ) ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿ ಸಮೀಪದ ದೇರಾಜೆ ಎಂಬಲ್ಲಿಯ ನಿವಾಸಿ ಮಹಮ್ಮದ್ ಎಂಬವರ ಮನೆಯಿಂದ ಭಾರಿ ಮೊತ್ತದ ಚಿನ್ನಾಭರಣಗಳನ್ನು ಆರೋಪಿಗಳು ಕಳವುಗೈದಿದ್ದರು.


ಮಹಮ್ಮದ್ ಅವರು ಕೃಷಿ ಜೊತೆಗೆ ಅಡಿಕೆ ವ್ಯಾಪಾರ ಮಾಡುತಿದ್ದು,

ಅ. 31 ರಂದು ಬೆಳಗ್ಗೆ ಅವರ ಪತ್ನಿ ಇಬ್ಬರು ಮಕ್ಕಳೊಂದಿಗೆ, ತಮ್ಮನ ಮದುವೆ ನಿಶ್ಚಿತಾರ್ಥಕ್ಕಾಗಿ ಬಂಟ್ವಾಳ ತಾಲೂಕಿನ ಉಳಿ ಗ್ರಾಮಕ್ಕೆ ತೆರಳಿದ್ದರು.

ಮನೆಯಲ್ಲಿ ಮಹಮ್ಮದ್ ಒಬ್ಬರೇ ಇದ್ದು, ಅಲ್ಲೆ ಹತ್ತಿರದ ಅಡಿಕೆ ತೋಟದಲ್ಲಿ ಹುಲ್ಲು ತೆಗೆಯುವ ಕೆಲಸಕ್ಕೆ ಹೋಗಿದ್ದರು.

ಸಂಜೆ ಬಂಟ್ವಾಳ ನಿಶ್ಚಿತಾರ್ಥಕ್ಕೆ ಹೋಗಿದ್ದ ಪತ್ನಿ ವಾಪಾಸ್ಸು ಮನೆಗೆ ಬಂದಾಗ, ಕಪಾಟಿನಲ್ಲಿ ಇಟ್ಟಿದ್ದ ಮೊಬೈಲ್ ಅಲ್ಲೇ

ಪಕ್ಕದಲ್ಲಿ ಚೇರ್ ಮೇಲೆ ಇರುವುದನ್ನು ಕಂಡು ಗಾಬರಿಯಿಂದ ಕಳವು ಆಗಿರಬಹುದೆಂದು ಗಂಡನನ್ನು ಕರೆದು ನೋಡಿದಾಗ ಕಪಾಟಿನ ಬಾಗಿಲು ಸ್ವಲ್ಪ ತೆರೆದಿದ್ದು,

ಅನುಮಾನಗೊಂಡು ನೋಡಿದಾಗ ಅದರ ಲಾಕರ್‌ನಲ್ಲಿ ಇರಿಸಿದ್ದ ನಗದು ಸಹಿತ ಚಿನ್ನಾಭರಣ ಕಳವು ಆಗಿರುವುದು ಬೆಳಕಿಗೆ ಬಂದಿತ್ತು.

ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ 13 ಪವನಿನ ಚಿನ್ನದ ನೆಕ್ಲೇಸ್ 01, ಒಂದು ಪವನಿನ ಚಿನ್ನದ ಚೈನ್ 01,

ಒಂದು ಪವನಿನ ಚಿನ್ನದ ಸಣ್ಣ ಚೈನ್ 01, ಒಂದೂವರೆ ವವನಿನ ಚಿನ್ನದ ಮಕ್ಕಳ ಚೈನ್ 02, ತಲಾ ಒಂದು ಒಂದು ಪವನಿನ ಚಿನ್ನದ ಕಾಯಿನ್ಸ್ 04,

ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕೆಟ್ 04 ಎರಡು ಪವನಿನ ಚಿನ್ನದ ಗಟ್ಟಿ 01 ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ -01,

ಅರ್ಧ ಪವನಿನ ಚಿನ್ನದ ತುಂಡಾದ ಬಳೆ ಹಾಗೂ ಪೆಂಡೆಂಟ್ 01, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ 01 ಜೊತೆ ಮುಂತಾದ ಸುಮಾರು 12,05,200

ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವಾಗಿರುವುದಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ ಕಾರು, ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,69,500 ರೂ.ಗಳು

ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು,

ನಗದು 1230 ರೂ ಗಳನ್ನು ಸ್ವಾಧೀನಪಡಿಸಿಕೊಂಡು ಸ್ವತ್ತುಗಳ ಒಟ್ಟು ಮೌಲ್ಯ 13,75,930 ರೂಪಾಯಿ ಆಗಿದ್ದು, ಆರೋಪಿಗಳನ್ನು ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವಣೆ ಋಷಿಕೇಶ್ ಭಗವಾನ್ ಐ.ಪಿ.ಎಸ್, ಶಿವಕುಮಾರ್ ಗುಣಾರೆ,

ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರು ರವರ ಸೂಚನೆಯಂತೆ

ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್,

ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ ಎಂಕೆ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ,

ಇಬ್ರಾಹಿಂ ಗರ್ಡಾಡಿ, ಲತೀಫ್ ಲ, ವಿಜಯ ಕುಮಾರ್ ರೈ,

ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್,

ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿ ದಿವಾಕರ,

ಸಂಪತ್ ಕುಮಾರ್ ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Click to comment

Leave a Reply

Your email address will not be published. Required fields are marked *

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending