Connect with us

LATEST NEWS

ಆರ್.ಪಿ.ಎಫ್ ವಿಶೇಷ ತಂಡದಿಂದ ಅಕ್ರಮ ಚಿನ್ನ ಸಾಗಾಟ ಜಾಲ ಪತ್ತೆ 2.2 ಕೋಟಿ ಮೌಲ್ಯದ ಚಿನ್ನ ವಶ..!

Published

on

ಆರ್.ಪಿ.ಎಫ್ ವಿಶೇಷ ತಂಡದಿಂದ ಅಕ್ರಮ ಚಿನ್ನ ಸಾಗಾಟ ಜಾಲ ಪತ್ತೆ 2.2 ಕೋಟಿ ಮೌಲ್ಯದ ಚಿನ್ನ ವಶ..!

ಕೋಯಿಕ್ಕೋಡ್ :ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಇತ್ತೀಚಿಗೆ ಕಾನೂನುಬಾಹಿರವಾಗಿ ಯಾವುದೇ ರೀತಿಯ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುವ ಜಾಲ ಹೆಚ್ಚಾಗುತ್ತಿದೆ.

ಲಕ್ಷಗಟ್ಟಲೆ  ಲೆಕ್ಕದಲ್ಲಿ ಚಿನ್ನ ಪತ್ತೆಯಾಗುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ. ಇದೀಗ ನೆರೆಯ ಕೇರಳ ರಾಜ್ಯದಲ್ಲೂ  ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ರಾಜಸ್ಥಾನ ಮೂಲದವನನ್ನು ಬಂಧಿಸಲಾಗಿದೆ.

ನಿನ್ನೆ ನೇತ್ರಾವತಿ ಎಕ್ಸ್ ಪ್ರೆಸ್ ನಲ್ಲಿ ಅಪರಾಧ ಗುಪ್ತಚರ ಶಾಖೆಯ (ಆರ್.ಪಿ.ಫ್) ವಿಶೇಷ ತಂಡವು ಶೋಧ ನಡೆಸಿದಾಗ 4.23 ಕೆ.ಜಿ ಯ ಚಿನ್ನಾಭರಣಗಳನ್ನು ಕಳ್ಳ ಮಾರ್ಗದಲ್ಲಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಅಧಿಕಾರಿಗಳು ರಾಜಸ್ಥಾನ ಮೂಲದ ರಮೇಶ್ ಸಿಂಗ್ ರಾಜಾವತ್ (28) ಎಂಬಾತನನ್ನು ಬಂಧಿಸಿದ್ಧಾರೆ. ಬಂಧಿತನಿಂದ 2.2 ಕೋಟಿ ಮೌಲ್ಯದ ಚಿನ್ನವನ್ನು ಆರ್.ಪಿ.ಎಫ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಎಲ್ಲಾ ಚಿನ್ನಾಭರಣಗಳು ಉತ್ತಮ ಗುಣಮಟ್ಟದವುಗಳಾಗಿದ್ದು, ಅವುಗಳನ್ನು ಸರಕು ಮತ್ತು ಸೇವಾ ತೆರಿಗೆ ತನಿಖಾ ವಿಭಾಗಕ್ಕೆ ಚಿನ್ನವನ್ನು   ಹಸ್ತಾಂತರಿಸಲಾಗಿದೆ.ಬಂಧಿತ ಆರೋಪಿಯನ್ನು  ವಡಾಕಾರ ಮತ್ತು ಕೋಯಿಕೋಡ್ ಮಧ್ಯ ಸಂಚರಿಸುತ್ತಿದ್ದ ಸಮಯ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ರೈಲು ಮಾರ್ಗವಾಗಿ ಅಕ್ರಮ ಚಿನ್ನ ಸಾಗಾಟದ ಕುರಿತು ಮಾಹಿತಿ ಸಿಕ್ಕಿದ್ದೇ ಆದಲ್ಲಿ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿನ್ನ ಸಾಗಾಟಗಾರರಿಗೆ   ಆರ್.ಪಿ.ಫ್ ಎಚ್ಚರಿಕೆ  ನೀಡಿದೆ.

LATEST NEWS

ಅಂಬಾನಿ ಪುತ್ರನ ಮದುವೆ ಎಲ್ಲಿ ನಡೆಯುತ್ತೆ ಗೊತ್ತಾ…!! ಹೇಗಿದೆ ಅದ್ಧೂರಿ ತಯಾರಿ?

Published

on

ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ ವೆಡ್ಡಿಂಗ್ ಶೂಟ್ ಈಗಾಗಲೇ ಎಲ್ಲರ ನಿಬ್ಬೆರಗಾಗುವಂತೆ ಮಾಡಿತ್ತು. ಮಾರ್ಚ್​ 1 ರಿಂದ 3 ದಿನಗಳ ಕಾಲ ಗುಜರಾತ್​ನ ಜಾಮ್​ನಗರದಲ್ಲಿ ಅದ್ಧೂರಿಯಾಗಿ ಪ್ರಿ-ವೆಡ್ಡಿಂಗ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ambani marriage

ಎಲ್ಲರ ಬಾಯಲ್ಲೂ ಅಂಬಾನಿ ಮದುವೆ ಮುಂಚಿತವಾಗಿ  ನಡೆದ ಕಾರ್ಯಕ್ರಮದ ಗುಣಗಾನ. ಈ ಸಂಭ್ರಮದಲ್ಲಿ ದೇಶ-ವಿದೇಶಗಳಿಂದ ಹಲವಾರು ಬಾಲಿವುಡ್​ ಸೆಲೆಬ್ರಿಟಿಗಳು ಜಾಮ್‌ನಗರಕ್ಕೆ ಬಂದಿದ್ದರು. ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮಕ್ಕೆ ಅಂದಾಜು 1200 ಕೋಟಿಯಷ್ಟು ಖರ್ಚಾಗಿದೆ ಎಂದು ಮೂಲಗಳು ತಿಳಿಸಿದೆ. ಕಾರ್ಯಕ್ರಮದ ಫೊಟೋ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡಾ ಆಗಿತ್ತು.

ಲಂಡನ್​ನಲ್ಲಿ 592 ಕೋಟಿ ಸ್ಟೋಕ್‌ ಪಾರ್ಕ್‌ ಖರೀದಿಸಿದ ಅನಂತ್ ಅಂಬಾನಿ

ಇತ್ತೀಚೆಗಷ್ಟೇ ಮುಖೇಶ್‌ ಅಂಬಾನಿ ಮಗನ ಮದುವೆಗೂ ಮುನ್ನ ಲಂಡನ್​ನಲ್ಲಿ 592 ಕೋಟಿ ಮೌಲ್ಯದ ಸ್ಟೋಕ್‌ ಪಾರ್ಕ್‌ ಎಸ್ಟೇಟ್​ ಖರೀದಿಸಿದ್ದರು. ಜುಲೈ 12ರಂದು ಉದ್ಯಮಿ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಮದುವೆ ನಡೆಯಲಿದ್ದು, ಇದೀಗ ಅದೇ ಲಂಡನ್‌ ಸ್ಟೋಕ್‌ ಪಾರ್ಕ್‌ ಎಸ್ಟೇಟ್​ನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭ ಜರುಗಲಿದೆ ಎಂದು ತಿಳಿದು ಬಂದಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೂ ಕೂಡ ಅನೇಕರು ಭಾಗಿ ಆಗುವ ಸಾಧ್ಯತೆ ಇದೆ. ಈಗಾಗಲೇ ಮದುವೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

Continue Reading

bengaluru

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Published

on

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬ್ಯಾಂಕಾಕ್​ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending