Connect with us

    LATEST NEWS

    ಗೂಗಲ್​ ಪೇ ಬಳಸ್ತಾ ಇದ್ದೀರಾ? ಜೂನ್​ 4ರಿಂದ ಈ ಆ್ಯಪ್​ ಕೆಲಸ ಮಾಡಲ್ಲ!

    Published

    on

    ಮಂಗಳೂರು: ಆನ್​ಲೈನ್​ ಪೇಮೆಂಟ್​ ಆ್ಯಪ್​ಗಳಾದ ಗೂಗಲ್​ ಪೇ, ಪೇಟಿಯಂ, ಫೋನ್​ ಪೇಯನ್ನು ಅನೇಕರು ಬಳಸುತ್ತಿದ್ದಾರೆ. ಅದರ ಮೂಲಕ ಹಣದ ವ್ಯವಹಾರ ನಡೆಸುತ್ತಾರೆ. ಬ್ಯಾಂಕ್​ಗೆ ತೆರಳದೆ ಮೊಬೈಲ್​ ಮೂಲಕ ಸೇವೆಯನ್ನು ನಡೆಸಲು ಈ ಆ್ಯಪ್​ಗಳು ಸಹಾಯಕವಾಗಿದೆ. ಆದರೀಗ ಇಂತಹ ಸೇವೆಯನ್ನು ಒದಗಿಸುತ್ತಿರುವ ಗೂಗಲ್​ ಪೇ ಜೂನ್​ 4ರಿಂದ ಕಾರ್ಯ ನಿರ್ವಹಿಸುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

    ಗೂಗಲ್​ ಪೇ ಕೇವಲ ಹಣದ ವ್ಯವಹಾರ ಮಾತ್ರವಲ್ಲ, ಗ್ಯಾಸ್​ ಬುಕ್ಕಿಂಗ್, ರೀಚಾರ್ಜ್​, ಇನ್ಶುರೆನ್ಸ್​ ಹೀಗೆ ನಾನಾ ಸೇವೆಯನ್ನು ನೀಡುತ್ತಾ ಬಂದಿದೆ. ಆದರೀಗ ಗೂಗಲ್​ ಪೇ ಮುಂದಿನ ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸುದ್ದಿ ಎಲ್ಲರಿಗೂ ಆಚ್ಚರಿಯಾಗಿದೆ.

    ಗೂಗಲ್​ ಪೇಗೆ ಏನಾಯ್ತು?

    ಪ್ರಪಂಚದಾದ್ಯಂತ ಗೂಗಲ್​ ಪೇ ಜನಪ್ರಿಯವಾಗಿದೆ. . ಆದರೆ ಕೆಲವು ದೇಶಗಳಲ್ಲಿ ಗೂಗಲ್​ ಪೇ ಕಾರ್ಯವನ್ನು ಮಾಡೋದಿಲ್ಲ. ಆದರೆ ಭಾರತೀಯರು ಟೆನ್ಶನ್​ ಮಾಡುವ ಅವಶ್ಯಕತೆ ಇಲ್ಲ. ಇದು ಇಂಡಿಯಾದಲ್ಲಿ ಕಾರ್ಯ ನಿರ್ವಹಿಸುತ್ತದೆ.

    ಗೂಗಲ್​ ಯೋಚನೆಯೇ ಬೇರೆ

    ಗೂಗಲ್​ ತನ್ನ ಎಲ್ಲಾ ಬಳಕೆದಾರರನ್ನು ಗೂಗಲ್​ ವಾಲೆಟ್​ಗೆ ತೆರಳುವಂತೆ ಕೇಳಿಕೊಂಡಿದೆ. ಹಾಗಾಗಿ ಅದರ ಪ್ರಚಾರ ಮಾಡುತ್ತಿದೆ. ಇದೇ ಕಾರಣಕ್ಕೆ ಗೂಗಲ್​ ಪೇ ಕೆಲವು ದೇಶಗಳಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಹಿಡಿದಿದೆ. ಆದರೆ ಭಾರತ ಮತ್ತು ಸಿಂಗಾಪುರದಲ್ಲಿ ಗೂಗಲ್​ ಪೇ ಕಾರ್ಯ ನಿರ್ವಹಿಸುತ್ತದೆ.

    ಬಂದಿದೆ ಗೂಗಲ್​ ವಾಲೆಟ್​

    ಇತ್ತೀಚೆಗೆ ಗೂಗಲ್​ ವಾಲೆಟ್​ ಅನ್ನು ಭಾರತದಲ್ಲಿ ಪರಿಚಯಿಸಲಾಗಿದೆ. ಸದ್ಯ ಇದರ ಪ್ರಚಾರ ಕಾರ್ಯ ನಡೆಸುತ್ತಿದೆ. ಜೊತೆಗೆ ಬಳಕೆದಾರರನ್ನು ಸೆಳೆಯಲು ಕೆಲವು ಆಫರ್​ ನೀಡುತ್ತಿದೆ. ಅದರಲ್ಲಿ ಡೆಬಿಟ್​ ಕಾರ್ಡ್​, ಕ್ರೆಡಿಟ್​ ಕಾರ್ಡ್​​, ಲಾಯಲ್ಟಿ ಕಾರ್ಡ್​, ಉಡುಗೊರೆಗಳನ್ನು ನೀಡುತ್ತಿದೆ.

    ಇನ್ನು ಗೂಗಲ್​ ವಾಲೆಟ್​ ಹಲವು ಫೀಚರ್ಸ್​ ಹೊಂದಿದೆ. ಈ ಅಪ್ಲಿಕೇಶನ್​ ಪಿನ್​ ರಕ್ಷಣೆ, ಕಳೆದು ಹೋದ ಸಾಧನದಲ್ಲಿರುವ ಅಕೌಂಟ್​ ಅನ್ನು ನಿಷ್ಟ್ರೀಯಗೊಳಿಸುವ ಸಾಮರ್ಥ್ಯ ಹೊಂದಿದೆ. ಮಾತ್ರವಲ್ಲದೆ ಸ್ನೇಹಿತರಿಗೆ ಸುಲಭವಾಗಿ ಹಣ ಕಳುಹಿಸಲು ಸಾಧ್ಯವಾಗುತ್ತದೆ.

    LATEST NEWS

    ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ; 8 ಮಂದಿ ಸಾವು

    Published

    on

    ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

    Read More..; ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ

    ನ್ಯೂ ಜಲ್ಪೈಗುರಿ ಬಳಿ ಗೂಡ್ಸ್ ರೈಲು ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಕಾರಣ ಮತ್ತು ಅಗರ್ತಲಾದಿಂದ ಸೀಲ್ದಾಹ್‌ಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದೆ ಎಂದು ರೈಲ್ವೇ ಮಂಡಳಿಯ ಅಧ್ಯಕ್ಷ ಜಯ ವರ್ಮ ಸಿನ್ಹಾ ಹೇಳಿದ್ದಾರೆ.

    Continue Reading

    DAKSHINA KANNADA

    ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ

    Published

    on

    ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.

    ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.

    ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್‌, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.

    Continue Reading

    DAKSHINA KANNADA

    ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ

    Published

    on

    ಉಪ್ಪಿನಂಗಡಿ : ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃ*ತಪಟ್ಟಿದ್ದು ಕೊ*ಲೆ ಶಂಕೆ ವ್ಯಕ್ತವಾಗಿದೆ. ಹೇಮಾವತಿ (37) ಮೃ*ತ ಮಹಿಳೆ.


    ಈಕೆ ತಾಯಿ, ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ ಭಾನುವಾರ(ಜೂ.16) ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾ*ತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

    ಇದನ್ನೂ ಓದಿ : ಕಡಬ : ವಿದ್ಯುತ್ ಶಾಕ್ ಹೊಡೆದು ಯುವಕ ಸಾ*ವು

    ವಿಚಾರಣೆಗಾಗಿ ಮೃ*ತಳ ಅಕ್ಕನ ಮಗ ಎಸ್ ಎಸ್ ಎಲ್ ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಉಪ್ಪಿನಂಗಡಿ ಪೊಲೀಸರ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃ*ತರು ಹೊಟೇಲ್ ಕಾರ್ಮಿಕೆಯಾಗಿದ್ದರು.

    Continue Reading

    LATEST NEWS

    Trending