LATEST NEWS
ಪ್ಲೇ ಸ್ಕೂಲ್ಗೆ ಸೆಡ್ಡುಹೊಡೆದ ಉಡುಪಿಯ ಬಂಟಕಲ್ಲು ಅಂಗನವಾಡಿ ಶಾಲೆ
ಉಡುಪಿ: ಸುತ್ತಲೂ ಆವರಣ ಗೋಡೆ , ಗಮನ ಸೆಳೆಯುವ ಗೋಡೆ ಬರಹ, ಕಾರ್ಟೂನ್ ಚಿತ್ರಗಳು. ಕೊಠಡಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಶಿಸ್ತಿನಿಂದ ಕುಳಿತು ನಿಷ್ಕಲ್ಮಶ ಮನಸ್ಸಿನಿಂದ ಗುರುಗಳ ಮಾತುಗಳನ್ನು ಆಲಿಸುತ್ತಿರುವಂತಹ ಪುಟ್ಟ ಪುಟ್ಟ ಮಕ್ಕಳು. ಇದೆಲ್ಲವೂ ನಾವೂ ನೀವೂ ಊಹಿಸುವಂತಹ ಪ್ಲೇ ಸ್ಕೂಲ್ನ ಚಿತ್ರಣವಲ್ಲ.
ಬದಲಾಗಿ ಪ್ರೀತಿಯಿಂದ ಅಕ್ಷರಭ್ಯಾಸ, ಪದ್ಯ, ಡ್ಯಾನ್ಸ್, ಹೇಳಿ ಕೊಡುತ್ತಿರುವ ಗುರುಗಳು ಕಂಡುಬಂದದ್ದು ಉಡುಪಿ ಕಾಪುವಿನ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲುವಿನಲ್ಲಿರುವಂತಹ ಮನೆಯ ವಾತಾವರಣ ಅನುಭವವನ್ನು ಕಟ್ಟಿಕೊಡುವಂತಹ ಹೈಟೆಕ್ ಸ್ಪರ್ಶ ನೀಡಲಾದ ಒಂದು ಅಂಗನವಾಡಿ ಶಾಲೆ.
ದಿ| ಅಚ್ಯುತ ಕಾಮತ್ ಅವರು ಗ್ರಾ.ಪಂ.ಗೆ ದಾನವಾಗಿ ನೀಡಿದ 6 ಸೆಂಟ್ಸ್ ಜಾಗದಲ್ಲಿ ತೀರಾ ದುಸ್ಥಿತಿಯ 35 ವರ್ಷದ ಹಳೆಯ ಕಟ್ಟಡದಲ್ಲಿ ಈ ಕೇಂದ್ರವು ಕಾರ್ಯ ನಿರ್ವಹಿಸುತ್ತಿತ್ತು. ಅಪಾಯಕಾರಿ ಸ್ಥಿತಿಯಲ್ಲಿದ್ದ ಅಂಗನವಾಡಿಗೆ ಹೊಸ ಸ್ಪರ್ಶವನ್ನು ನೀಡಲಾಗಿದೆ.
ಇಲ್ಲಿನ ಗ್ರಾಮಪಂಚಾಯತ್ಗೆ ದಾನಿಯೊಬ್ಬರು ಜಾಗವನ್ನು ದಾನವಾಗಿ ಕೊಟ್ಟಿದ್ದರು. ಅದೇ ಜಾಗದಲ್ಲಿ ಅಂಗನವಾಡಿಯ ಕಟ್ಟಡವೊಂದು ನಿರ್ಮಾಣ ಮಾಡಲಾಗಿತ್ತು.
ಬರೋಬ್ಬರಿ 35 ವರ್ಷ ಕಾಲ ಅದೇ ಜಾಗದಲ್ಲಿ ಕಾರ್ಯಾಚರಿಸುತ್ತಿದ್ದ ಅಂಗನವಾಡಿ ಶಾಲೆ ಬಳಿಕ ಶಿಥಿಲಾವ್ಯಸ್ಥೆಗೆ ತಲುಪಿ ಮಕ್ಕಳ ಜೀವಕ್ಕೆ ಅಪಾಯವಾಗುವಂತಹ ಸಾಧ್ಯತೆ ಇತ್ತು.
ಇದನ್ನು ಗಮನಿಸಿದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಆರ್.ಪಾಟ್ಕರ್ ಅವರು ಮಹಿಳಾ , ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ದಾನಿಗಳ ಸಹಕಾರದಿಂದ ಸುಮಾರು 20.5 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಗನವಾಡಿಯನ್ನು ನಿರ್ಮಾಣ ಮಾಡಿಸಿ ಆಧುನಿಕ ಸ್ಪರ್ಶ ಕೊಡಲು ಕಾರಣರಾಗಿದ್ದಾರೆ.
ಈ ಅಂಗನವಾಡಿಯಲ್ಲಿ ಪುಟಾಣಿಗಳಿಗಾಗಿ ಪ್ರತ್ಯೇಕ ಜಾರುಬಂಡಿ, ವಾಟರ್ ಪ್ಯೂರಿಫೈಯರ್, ಸೋಫಾ, ಚಪ್ಪಲ್ ಸ್ಟಾಂಡ್, ಬ್ಯಾಗ್ ಸ್ಟಾಂಡ್, ಮಕ್ಕಳಿಗಾಗಿ ಸಣ್ಣ ಕುರ್ಚಿಗಳು , ಸಮವಸ್ತ್ರ, ಟೇಬಲ್ ಮತ್ತು ಕುರ್ಚಿ ಸೇರಿದಂತೆ ಅನೇಕ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದ್ದು, ಮಾದರಿ ಅಂಗನವಾಡಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಮಾತ್ರವಲ್ಲ ಖಾಸಗಿ ಪ್ಲೇ ಸ್ಕೂಲ್ ಗಳ ಭರಾಟೆ ಮಧ್ಯೆ, ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಹೈಟೇಕ್ ಆಗಿ ಕಂಗೊಳಿಸುತ್ತಿದೆ.
ಸಂಘ ಸಂಸ್ಥೆಗಳಾದ ಬಂಟಕಲ್ಲು ನಾಗರಿಕ ಸೇವಾ ಸಮಿತಿ, ಬಂಟಕಲ್ಲು ಶ್ರೀ ದುರ್ಗಾ ಮಹಿಳಾ ಚೆಂಡೆ ಬಳಗ, ಲಯನ್ಸ್ ಕ್ಲಬ್ ಬಂಟಕಲ್ಲು -ಬಿಸಿ ರೋಡ್, ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್, ಲಯನ್ಸ್ ಕ್ಲಬ್ ಉಡುಪಿ-ಕರಾವಳಿ, ರೋಟರಿ ಕ್ಲಬ್ ಶಿರ್ವ, ಸ್ತ್ರೀಶಕ್ತಿ ಸಂಘ ಮತ್ತು ಇತರ ದಾನಿಗಳು ಸಹಕರಿಸಿದ್ದರಿಂದಲೇ ಈ ಸುಸಜ್ಜಿತ ಅಂಗನವಾಡಿ ಕಟ್ಟಡ ನಿರ್ಮಾಣವಾಗಿದೆ ಎನ್ನಬಹುದು.
ಕೇಬಲ್ ಟಿವಿ ಸಂಪರ್ಕದೊಂದಿಗೆ ಪುಟಾಣಿಗಳಿಗೆ ಕಾಟೂನ್ ನೆಟ್ವರ್ಕ್ ನೋಡುವ ಅವಕಾಶ ಕಲ್ಪಿಸಲಾಗಿದೆ. ಪುಟಾಣಿಗಳಿಗಾಗಿ ನೆರಳಿರುವ ಪ್ರತ್ಯೇಕ ಜಾರುಬಂಡಿ, ಸುಮಾರು 800 ಚ.ಅಡಿ ಚಪ್ಪರ, 1000 ಚ.ಅಡಿಯ ಇಂಟರ್ಲಾಕ್, ಮಕ್ಕಳ ಹೆತ್ತವರಿಗಾಗಿ ವಿರಮಿಸಲು ಕಾಂಕ್ರೀಟ್ ಬೆಂಚುಗಳು,
ಎರಡು ಶೌಚಾಲಯ, 24 ಗಂಟೆಗಳ ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ವಾಟರ್ ಪ್ಯೂರಿಫೈಯರ್, ಸೋಫಾ, ಚಪ್ಪಲ್ ಸ್ಟಾಂಡ್, ಬ್ಯಾಗ್ ಸ್ಟಾಂಡ್, ಮಕ್ಕಳಿಗಾಗಿ ಸಣ್ಣ ಕುರ್ಚಿಗಳು , ಸಮವಸ್ತ್ರ, ಟೇಬಲ್ ಮತ್ತು ಕುರ್ಚಿ ಹಾಗೂ ಆವರಣದಲ್ಲಿ ಸೋಲಾರ್ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾನೈಟ್ ಹೊದಿಕೆಯ ಅಡುಗೆ ಕೋಣೆಯೊಂದಿಗೆ ಗ್ರೈಂಡರ್ ಮತ್ತು ಗ್ಯಾಸ್ ಸ್ಟೌ ಸೌಲಭ್ಯ ಕಲ್ಪಿಸಲಾಗಿದೆ. ಪೌಷ್ಟಿಕ ಆಹಾರ ತೋಟ ರಚನೆಯೊಂದಿಗೆ ಅಲಂಕಾರಿಕ ಗಿಡಗಳನ್ನು ಕೂಡಾ ಈ ಬಾಲಭವನದ ಸುತ್ತಮುತ್ತ ನೆಡಲಾಗಿದೆ.
ಪ್ರಸ್ತುತ ಕೇಂದ್ರದಲ್ಲಿ 30 ಮಕ್ಕಳಿದ್ದು, ಅಂಗನವಾಡಿ ಕಾರ್ಯಕರ್ತೆಯಾಗಿ ವಿನಯಾ ಹರೀಶ್ ಕುಂದರ್, ಸಹಾಯಕಿ ಸಂಧ್ಯಾ ಆಚಾರ್ಯ ಮತ್ತು ಮೇಲ್ವಿಚಾರಕಿಯಾಗಿ ಶೈಲಾ ಕಾರ್ಯನಿರ್ವಹಿಸುತ್ತಿದ್ದಾರೆ.
ಅಂಗನವಾಡಿಯ ತೋಟದಲ್ಲಿ ಬೆಳೆದ ತರಕಾರಿಗಳನ್ನು ಮಕ್ಕಳಿಗೆ ಉಣಬಡಿಸಲಾಗುತ್ತಿರುವುದು ವಿಶೇಷ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!