Connect with us

    DAKSHINA KANNADA

    Kadaba: ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ವೃದ್ಧನನ್ನು ದಾರಿಮಧ್ಯೆ ಇಳಿಸಿದ ಸರಕಾರಿ ಬಸ್- ನಿರ್ವಹಕನ ನಡೆಗೆ ಆಕ್ರೋಶ..!

    Published

    on

    ಕಡಬ: ವೃದ್ಧರೊಬ್ಬರು ಚಿಲ್ಲರೆ ನೀಡಿಲ್ಲವೆಂದು ಬಸ್ ನಿರ್ವಾಹಕ ದಾರಿಮಧ್ಯೆ ಇಳಿಸಿಹೋದ ಘಟನೆ ಜ.6 ರಂದು ಕಡಬದಲ್ಲಿ ನಡೆದಿದೆ.

    ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಬಾಬು ಗೌಡರ (75) ಎಂಬ ಹಿರಿಯ ನಾಗರಿಕರು ಶನಿವಾರ ಖಾಸಗಿ ಕಾರ್ಯಕ್ರಮಕ್ಕೆ ಎಂದು ಕಲ್ಲುಗುಡ್ಡೆಯಿಂದ ಕಾಂಚನ ಎಂಬಲ್ಲಿಗೆ ತೆರಳಲು ಕಲ್ಲುಗುಡ್ಡೆಯಲ್ಲಿ ಸರ್ಕಾರಿ ಬಸ್ ಹತ್ತಿದ್ದಾರೆ. ಬೆಳಿಗ್ಗೆ ಒಂಬತ್ತು ಗಂಟೆಗೆ ಕಲ್ಲುಗುಡ್ಡೆಯಿಂದ ಹೊರಡುವ ಬಸ್ ಸಂಖ್ಯೆ KA19F3044 ಇದರ ನಿರ್ವಾಹಕರು ಟಿಕೆಟ್ ಗೆ ದುಡ್ಡು ಕೇಳುವಾಗ ವೃದ್ಧ 200ರೂ ನೀಡಿದ್ದಾರೆ. ಈ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ನಿರ್ವಾಹಕ  ಹಿರಿಯ ನಾಗರಿಕರಾದ ಬಾಬು ಗೌಡ ಅವರನ್ನು ಕಲ್ಲುಗುಡ್ಡೆ ಯಿಂದ ಎರಡು ಕಿ. ಮೀ ದೂರದಲ್ಲಿ ಗೋಳಿಯಡ್ಕ ಎಂಬಲ್ಲಿ ಬಲವಂತವಾಗಿ ಇಳಿಸಿ ಹಿರಿಯರಿಗೆ ಅಗೌರವ ತೋರಿದ್ದಾರೆ.
    ನಾವು ಇಲ್ಲಿ ಹೇಳಬೇಕದಾ ಇನ್ನೊಂದು ಬಹು ಮುಖ್ಯ ವಿಚಾರ ನಮ್ಮ ದೇಶಕಾಯುವ ಯೋಧರೊಬ್ಬರ ತಂದೆಯವರು, ಅದೂ ಅಲ್ಲದೆ ಸುಮಾರು 75 ವರ್ಷ ಅವರಿಗೆ ಪ್ರಾಯ ಆಗಿದೆ ಎಂದು ತಿಳಿದು ಬಂದಿದೆ. ನಿರ್ವಹಕನ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಾಬು ಗೌಡ ಅವರು ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿದೆ. ಇಲಾಖೆ ಈ ಬಗ್ಗೆ ಗಮನಹರಿಸಿ ನಿರ್ವಾಹಕನ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಈ ರೀತಿ ನಡೆಯದಂತೆ ಜಾಗ್ರತೆ ವಹಿಸಬೇಕು ಎಂದು ಸ್ಥಳೀಯ ಚಂದ್ರಶೇಖರ ಕುರಿಯಾಳ ಕೊಪ್ಪ, ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಕಡಬ ಅವರು ಆಗ್ರಹಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending