Connect with us

LATEST NEWS

ಸರ್ಕಾರದ ಕೋವಿಡ್‌ ರೂಲ್ಸ್‌- ಸೊಂಟದಲ್ಲಿ ಗಂಟು ಕಟ್ಟಿದ ಲುಂಗಿ, ಕೆಳಗೆ ಪೂರ್ತಿ ಬಿಟ್ಟಂತಿದೆ..!

Published

on

ಮಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಮತ್ತು ನೈಟ್‌ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಇದರಿಂದ ಸಾಮಾನ್ಯ ಜನ, ಉದ್ಯಮಿಗಳು ಅದರಲ್ಲೂ ದುಡಿದು ತಿನ್ನುವ ಜನ ಕಂಗಾಲಾಗಿದ್ದಾರೆ.

ರಾಜ್ಯದ ಕೆಲವು ಜಿಲ್ಲೆ ಹಾಗೂ ನಗರಗಳಲ್ಲಿ ಹೊರತುಪಡಿಸಿ ಹಲವೆಡೆ ಕೋವಿಡ್‌ ಪ್ರಮಾಣ ಜಾಸ್ತಿ ಇಲ್ಲ. ಆದರೆ ರಾಜ್ಯ ಸರ್ಕಾರ ತನ್ನ ಮೂಗಿನ ನೇರಕ್ಕೆ ನಿಯಮಾವಳಿ ಮಾಡುತ್ತಿದೆಯೇ ಎಂಬ ಬಗ್ಗೆ ಆರೋಪ ಕೇಳಿಬಂದಿದೆ.

ಕರಾವಳಿಯ ಸಚಿವ ಶಾಸಕರ ಬಾಯಿ ಮುಚ್ಚಿ ಕೈಕಟ್ಟಿದ ಪರಿಸ್ಥಿತಿಯೇ?
ಕಳೆದ ಎರಡು ವರ್ಷಗಳಿಂದ ಕರೋನಾ ಕರಿನೆರಳಿನಲ್ಲಿ ಬೆಂದು ಬರಡಾಗಿದ್ದ ರಾಜ್ಯದ ವಾಣಿಜ್ಯ ಹೆಬ್ಬಾಗಿಲು ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಈಗ ತಾನೆ ತೆರೆದುಕೊಳ್ಳುತ್ತಿದೆ. ಇದರ ಜೊತೆ ತುಳುನಾಡಿನ ಧಾರ್ಮಿಕ ಆಚರಣೆಗಳಾದ ದೈವದ ಕೋಲ, ದೇವಸ್ಥಾನದ ಹಬ್ಬ, ಬ್ರಹ್ಮಕಲಶ ಹಾಗೂ ಕಂಬಳ, ಉರೂಸ್‌, ಕ್ರೈಸ್ತ ಧರ್ಮದ ಧಾರ್ಮಿಕ ಹಬ್ಬಗಳು ಈಗಷ್ಟೆ ಆರಂಭವಾಗಿವೆ.

ಹೂಮಾರುವವನಿಂದ ಹಿಡಿದು ಕ್ಯಾಟರಿಂಗ್‌ ಸೇರಿ ಪ್ರತಿಯೊಬ್ಬರಿಗೂ ಕೈಗೊಂದು ಉದ್ಯೋಗ ನೀಡುವ ಕೆಲಸ ನಡೆಯುತ್ತಿತ್ತು. ಇದೀಗ ಅದಕ್ಕೆಲ್ಲಾ ಬ್ರೇಕ್‌ ಬಿದ್ದಿದೆ. ದೇಶದಲ್ಲಿ ಬೆಂಗಳೂರು ನಗರ ಕೊರೋನಾದಿಂದ ರೆಡ್‌ಝೋನ್‌ನಲ್ಲಿದೆ. ಆದರೆ ರಾಜ್ಯ ಸರ್ಕಾರ ಬೆಂಗಳೂರು ಎಂದರೆ ಇಡೀ ಕರ್ನಾಟಕ ಎಂದುಕೊಂಡಂತಿದೆ.

ಸರ್ಕಾರದ ನಿಯಮಕ್ಕೆ ಗ್ರಾಮೀಣಭಿವೃದ್ದಿ ಸಚಿವ ಈಶ್ವರಪ್ಪ ಹೊರತುಪಡಿಸಿದರೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಕರಾವಳಿಯ ಶಾಸಕರದ್ದು ಕೈ ಕಟ್ಟಿ ಬಾಯಿ ಮುಚ್ಚಿ ಕುಳಿಕೊಂಡ ಪರಿಸ್ಥಿತಿ. ಕ್ಯಾಬಿನೆಟ್‌ ಸಭೆಯಲ್ಲಿ ಜಿಲ್ಲೆಯ ಪ್ರಭಾವಿ ಸಚಿವರಿದ್ದರೂ ಜಿಲ್ಲೆಯ ಜನರ ಭಾವನೆಗೆ ಧ್ವನಿಯಾಗದಿರುವುದು ಬೇಸರದ ಸಂಗತಿ.


ಲಾಕ್‌ಡೌನ್‌ ಒಂದೇ ಪರಿಹಾರವೇ?
ಲಾಕ್‌ಡೌನ್‌ ಹೊರತುಪಡಿಸಿದರೆ ಕೊರೋನಾಕ್ಕೆ ಬೇರೆ ಪರಿಹಾರ ಇಲ್ಲವೇ? ಖಂಡಿತಾ ಇದೆ ಎನ್ನುತ್ತಾರೆ ಕರಾವಳಿ ಆರ್ಥಿಕ ತಜ್ಞರು. ಮೊದಲಿಗೆ ಎಲ್ಲರಿಗೂ ವಾಕ್ಸಿನೇಷನ್‌ ಮಾಡಿಸಿ. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ.

ಸರ್ಕಾರಿ ಕಚೇರಿ, ಬ್ಯಾಂಕ್‌, ಮಾಲ್‌ ಸೇರಿದಂತೆ ಹಲವೆಡೆ ಮಾಸ್ಕ್‌ ಇಲ್ಲದೇ ಪ್ರವೇಶ ನೀಡಲೇಬೇಡಿ. ರೇಷನ್‌ ಕಿಟ್‌ ಕೊಡುವ ಸಂದರ್ಭ ಪ್ರತಿಯೊಬ್ಬರಿಗೂ ಗುಣಮಟ್ಟದ ಮಾಸ್ಕ್‌ ನೀಡಿ, ಮಾಸ್ಕ್‌ ಧರಿಸದೆ ನಗರಕ್ಕೆ ಕಾಲಿಡುವವರಿಗೆ ಹಿಡಿದು ದಂಡ ವಿಧಿಸಿ.

ಮದುವೆ ಸಮಾರಂಭಕ್ಕೆ ಕಟ್ಟುನಿಟ್ಟಿನ ರೂಲ್ಸ್‌ ಜಾರಿಗೊಳಿಸಿ, ರೂಲ್ಸ್‌ ತಪ್ಪಿದ್ದಲ್ಲಿ ಸಮಾರಂಭ ಆಯೋಜಕರಿಗೆ ದಂಡದೊಂದಿಗೆ, ಕಾನೂನು ಕ್ರಮ ಜರುಗಿಸಿ. ಅದು ಬಿಟ್ಟು ಒಂದಿಷ್ಟು ತಿಂಗಳು ಜನರನ್ನು ಬೇಕಾಬಿಟ್ಟಿಯಾಗಿ ಬಿಟ್ಟು ಮತ್ತೆ ಕೆಲವು ತಿಂಗಳು ಲಾಕ್‌ ಡೌನ್‌ನಿಂದ ಬಂಧಿಸಿಟ್ಟರೆ ಏನು ಪ್ರಯೋಜನ? ಸರ್ಕಾರದ ಈ ಮಾರ್ಗಸೂಚಿ ಗಮನಿಸುವಾಗ ಸೊಂಟದಲ್ಲಿ ಲುಂಗಿ ಗಂಟು ಹಾಕಿ ಕಟ್ಟಿ ಕೆಳಗೆ ಪೂರ್ತಿ ಬಿಟ್ಟಂತಿದೆ.

ಈಗಲಾದರೂ ಸರಕಾರದ ಜನಪ್ರತಿನಿಧಿ, ಅಧಿಕಾರಿ ವರ್ಗ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಜನರ ಮೇಲಿರುವ ಕೊರೋನಾ ಹೊರೆಯನ್ನು ಕಡಿಮೆಗೊಳಿಸುವಲ್ಲಿ ಚಿಂತನೆ ನಡೆಸಬೇಕು. ಇಲ್ಲವಾದಲ್ಲಿ ಕೋರೋನಾಕ್ಕಿಂತಲೂ ಭೀಕರವಾದ ಸಾಮೂಹಿಕ ಆತ್ಮಹತ್ಯೆಯಂತಹ ಪ್ರಕರಣ ಹೆಚ್ಚಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಕುತ್ತಿಗೆಯವರೆಗೆ ಬಂದ ಸಾಲ
ಎರಡು ವರ್ಷದಿಂದ ಕೊರೋನಾ ಹೊಡೆತದಿಂದ ಆರ್ಥಿಕವಾಗಿ ಜರ್ಜರಿತವಾಗಿದ್ದ ಜನರು ಕಳೆದ 6 ತಿಂಗಳಿಂದ ಹಂತಹಂತವಾಗಿ ಲಾಕ್‌ಡೌನ್‌ ತೆರವಾಗಿತ್ತು.

ಆಗ ಹೊಸತೊಂದು ಭರವಸೆ ಮೂಡಿತ್ತು. ಆಗ ಹೊಸ ಹೊಸ ಉದ್ಯಮಕ್ಕೆ ಕೈ ಹಾಕಿದ್ದರು. ಆಗ ಬ್ಯಾಂಕ್‌ ಸಾಲ, ಕೈ ಸಾಲ ಪಡೆದಿದ್ದರು. ಮತ್ತೆ ಕೆಲವರು ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದರು.

ಅದರ ಜೊತೆ ಇದೀಗ ಮತ್ತೆ ಲಾಕ್‌ಡೌನ್‌ ಬಂದಿದೆ. ಆರ್ಥಿಕ ಹೊಡೆತ ಅಂತೂ ಗ್ಯಾರಂಟಿ. ಇದೀಗ ಹೊಸ ಉದ್ಯಮ, ಸಾಲದತ್ತ ಕೈಚಾಚಿದವರು ಸರ್ಕಾರದ ಸೂಚನೆಯಿಂದ ಕಂಗಾಲಾಗಿದ್ದಾರೆ. ಇದರಿಂದ ಈವರೆಗೆ ಸಾಲದ ಸುಳಿದವರು ದೇವರೇ ಗತಿ ತಲೆ ಮೇಲೆ ಕೈಹೊತ್ತಿದ್ದಾರೆ.

ಸರಕಾರಕ್ಕೆ ಕೊರೋನಾ ಮಾರ್ಗಸೂಚಿ ನೀಡುವ ತಜ್ಞರಲ್ಲಿ ವೈದ್ಯರು, ಸರಕಾರದ ಹಿರಿಯ ಅಧಿಕಾರಿಗಳು ಸೇರಿ ಹಲವರಿದ್ದಾರೆ. ಆದರೆ ಸಾಮಾನ್ಯರನ್ನು ಪ್ರತಿನಿಧಿಸುವವರಿಲ್ಲ. ಈ ಬಗ್ಗೆ ಸರಕಾರ ದೀರ್ಘ ಆಲೋಚನೆ ನಡೆಸಬೇಕಾಗಿದೆ.

DAKSHINA KANNADA

ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!

Published

on

ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್‌, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.

ಏನಿದು ತ್ರಿಶೂರ್ ಪೂರಂ ಹಬ್ಬ

ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್‌ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ  ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.

ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ

ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್‌ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.

ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ

ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ  ಬಹುಶಃ  ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.

ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ

ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.

 

Continue Reading

FILM

ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಟಾಲಿವುಡ್ ನ ಜನಮನಗೆದ್ದ ನಟಿ..!! ಡಾಲಿಯ ‘ಉತ್ತರಾಕಾಂಡ’ಕ್ಕೆ ನಟಿ ಯಾರು ಗೊತ್ತಾ?

Published

on

ಮೋಹಕತಾರೆ ರಮ್ಯ..  ಇವರ ಚಿತ್ತ ಯಾವತ್ತ ಅನ್ನೋದೆ ಇನ್ನೂ ಖಚಿತ ಆಗಿಲ್ಲ. ಈ ಮಧ್ಯೆ ಕೆಲವೊಂದು ಸಿನೆಮಾಕ್ಕೆ ನಟಿಯಾಗಿ ಕಾಣಿಸಿಕೊಳ್ಳಬೇಕಿದ್ದ ಇವರು ಹಲವು ಸಿನೆಮಾದಿಂದ ಕೈ ಬಿಟ್ಟಿದ್ದಾರೆ. ಇದರಲ್ಲಿ ಉತ್ತರಾಕಾಂಡ ಸಿನೆಮಾ ನಟನೆಯಿಂದ ಹೊರ ಬಂದಿರುವುದು ಈಗಾಗಲೇ ಸುದ್ದಿಯಾಗಿದೆ. ಆದರೆ ಇವರ ಬದಲಿಗೆ ಕಾಲಿವುಡ್ ನಟಿ ಬರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹಬ್ಬಿದೆ.

aishwarya rajesh

ರೊಹೀತ್ ಪದಕಿ ನಿರ್ದೇಶನದಲ್ಲಿ ಅನಾವರಣವಾಗಲಿರುವ ಬಯಲು ಸೀಮೆಯ ಉತ್ತರಾಕಾಂಡ ಕಥೆಗೆ ಕಾಲಿವುಡ್ ನ ಐಶ್ವರ್ಯ ರಾಜೇಶ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗಿದೆ.  ಕಾಕ ಮುತ್ತೈ , ವಡಾ ಚೆನ್ನೈ, ಕನಾ, ನಮ್ಮ ಮನೆ ಪಿಳ್ಳೈ ಹೀಗೆ ಹತ್ತಾರು ಚಿತ್ರ, ವೈವಿಧ್ಯಮಯ ಪಾತ್ರದ ಮೂಲಕ ಚಂದನವನದ ಚೆಂದದ ನಾಯಕಿಯರಿಗೆಲ್ಲರಿಗೂ ತನ್ನ ನಟನೆಯ ಮೂಲಕ ಜನ ಮನ ಗೆದ್ದ ಐಶ್ವರ್ಯ ರಾಜೇಶ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್ ನಲ್ಲಿ ಸಂಚಲನ ಮೂಡಿಸ್ತಾರ ಅನ್ನೋ ಗಾಸಿಪ್ ಹರಿದಾಡ್ತಾ ಇದೆ.

uttharakanda

ಈ ಚಿತ್ರದಲ್ಲಿ ಚೈತ್ರಾ ಆಚಾರ್ ಲಚ್ಚಿ ಪಾತ್ರಕ್ಕೆ ಬಣ್ಣ ಹಚ್ತಿದ್ದಾರೆ. ದೂದ್ ಪೇಡಾ ದಿಗಂತ್  ಮಿರ್ಚಿ ಮಲ್ಲಿಗೆ ಎಂಬ ಹೆಸರಿನಿಂದ ಬಣ್ಣ ಹಚ್ಚಲಿದ್ದಾರೆ. ಸದಾ ಬಬ್ಲಿ ಕ್ಯಾರೆಕ್ಟರ್‌ ನಲ್ಲಿ ಕಾಣಿಸಿಕೊಳ್ಳುತ್ತಿದ್ದ ದಿಗಂತ್ ಈ  ಸಿನೆಮಾದಲ್ಲಿ ಡಿಫೆರೆಂಟ್ ಲುಕ್‌ನಲ್ಲಿ ಕಾಣಿಸಲಿದ್ದಾರೆ.

uttharakanda

ಮಲಯಾಳಂನ ನಿರ್ಮಾಪಕ ಮತ್ತು ಆಕ್ಟರ್ ವಿಜಯ್ ಬಾಬು ಕೂಡ ಇದೇ ಚಿತ್ರದ ಮೂಲಕ ಕನ್ನಡಕ್ಕೆ ಪಾಪಾರ್ಪಣೆ ಮಾಡಲಿದ್ದಾರಂತೆ. ಡಾಲಿ ಧನಂಜಯ್ ಜೊತೆ ಕರುನಾಡ ಚಕ್ರವರ್ತಿ ಕೂಡ ಚಿತ್ರದಲ್ಲಿದ್ದಾರೆ ಅನ್ನುವ ವಿಚಾರ ಈಗಾಗಲೇ ಸಿನಿ ಪ್ರಿಯರ ಕನಸಿಗೆ ಬಣ್ಣ ಹಚ್ಚಿದಂತಾಗಿದೆ.

Continue Reading

LATEST NEWS

UDUPI : ಕಾಂಗ್ರೆಸ್ ಪರ ದರ್ಶನ್ ಪ್ರಚಾರ; ಸುಮಲತಾ ಏನಂದ್ರು?

Published

on

ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ನಟಿಯಾಗಿದ್ದಾಗ ಉಡುಪಿಗೆ ಶೂಟಿಂಗ್ ಅಂತ ಬರ್ತಾ ಇದ್ದದ್ದೇ, ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿಗೆ ಗೆಲುವಾಗಲಿದ್ದು, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.


ದರ್ಶನ್ ಬಗ್ಗೆ ಏನಂದ್ರು?

ಈ ವೇಳೆ ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುಮಲತಾ, ಅದು ದರ್ಶನ್ ಅವರ ವೈಯಕ್ತಿಕ ವಿಚಾರ. ನಾವು ಪ್ರತಿದಿನ ರಾಜಕೀಯ ವಿಚಾರ ಚರ್ಚೆ ಮಾಡುವುದಿಲ್ಲ. ಮಾತ್ರವಲ್ಲ, ಇಂತಹ ವಿಚಾರಗಳನ್ನು ದರ್ಶನ್ ಜೊತೆ ಚರ್ಚೆ ಮಾಡುವುದಿಲ್ಲ. ನಾನು ಹೋಗು ಅಥವಾ ಹೊಗಬೇಡ ಅನ್ನಲು ನಾನು ಯಾರು ಎಂದು ಕೇಳಿದ್ದಾರೆ.

ಕೆಲವರು ನಾನೇ ದರ್ಶನ್ ನನ್ನು ಕಾಂಗ್ರೆಸ್ ಪರ ಪ್ರಚಾರಕ್ಕೆ ಕಳುಹಿಸಿದ್ದಾಗಿ ಹೇಳ್ತಾರೆ, ಆದ್ರೆ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಇಚ್ಚೆಯಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಇನ್ನು ಕುಮಾರಸ್ವಾಮಿ ಪರ ಪ್ರಚಾರ ಮಾಡಬೇಕಾ ಬೇಡ್ವಾ ಅಂತ ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending