BANTWAL
ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ
ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ
ಮಂಗಳೂರು : ದೇಶದಾದ್ಯಂತ ಅಗೋಸ್ತ್ 22 ರಂದು ಗಣೇಶ ಚತುರ್ಥಿ ಆಚರಣೆ ನಡೆಯಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಶ್ರೀ ಗಣೇಶೋತ್ಸವದ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿದ್ದು ಶ್ರೀ ಗಣೇಶೋತ್ಸವವನ್ನು ಆಚರಿಸುವ ಸಂಬಂಧವಾಗಿ ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳು:
1. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು,
2. ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಮಳ.(ಉದಾ: ರಸ್ತೆ. ಗಲಿ, ಓಣಿಮೈದಾನ ಇತ್ಯಾದಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.
3, ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ ಕೆರೆ ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡತಕ್ಕದ್ದಲ್ಲ
4. ಶ್ರೀ ಗಣೇಶೋತ್ಸವದಲ್ಲಿ ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸಿ ತಕ್ಕದ್ದಲ್ಲ ಮಾಡತಕ್ಕದ್ದಲ್ಲ.ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ
5, ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಆವರಣದಲ್ಲಿಯೇ ವಿಸರ್ಜನೆ ಮಾಡುವುದು.
6, ಶ್ರೀ ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಮಿನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.
7, ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು,
8, ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂಧರ್ಭಕ್ಕನುಗುಣವಾಗಿ ಸರ್ಕಾರ, /ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ ಆದೇಶ | ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
9. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬರದಂತೆ ಕಾಪಾಡುವುದು,
10.ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ | ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ’ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂ ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.
ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರೆ ಇಲಾಖಾ ಮುಖ್ಯಸ್ಥರುಗಳು ಹಾಗೂ ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಆದೇಶ ನೀಡಿದ್ದಾರೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!
ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
BANTWAL
ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.
ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.