ಕೊರೊನಾ ವೈರಸ್ ಬಗ್ಗೆ ವದಂತಿ ಹಬ್ಬಿಸಿ ಆತಂಕ ಸೃಷ್ಟಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲು
ಬೆಂಗಳೂರು: ಕೋವಿಡ್–19 ಸೋಂಕಿನ ಬಗ್ಗೆ ವದಂತಿ ಹಬ್ಬಿಸಿ ಆತಂಕ ಸೃಷ್ಟಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತಗುಲಿರುವವರ ಸಂಖ್ಯೆ 30ಕ್ಕೇರಿದೆ.
ಈ ಹಿನ್ನಲೆಯಲ್ಲಿ ಸಮರೋಪಾದಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಯಪ್ರವೃತ್ತವಾಗಿವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್–19 ಸೋಂಕಿನ ಬಗ್ಗೆ ವದಂತಿ ಹಬ್ಬಿಸಿ ಆತಂಕ ಸೃಷ್ಟಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಆರೋಗ್ಯ ಇಲಾಖೆ ಎಚ್ಚರಿಸಿದೆ.
ವದಂತಿ ಹಬ್ಬಿಸುವವರ ವಿರುದ್ಧ ಕೇರಳ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುತ್ತಿದೆ.
ಕರ್ನಾಟಕದಲ್ಲೂ ಅದನ್ನು ಜಾರಿ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಎಚ್ಚರಿಕೆ ನೀಡಿದ್ದಾರೆ.
‘ಜನರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಮಕ್ಕಳಲ್ಲಿ ಜ್ವರ ಸೇರಿದಂತೆ ಅನಾರೋಗ್ಯ ಲಕ್ಷಣಗಳು ಕಾಣಿಸಿಕೊಂಡಲ್ಲಿ ಶಾಲೆಗೆ ಕಳುಹಿಸಬಾರದು ಎಂದಿರುವ ಅವರು, ಶಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಪ್ರಾರಂಭಿಸಲಾಗಿದೆ.
ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಸ್ವಯಂವರದಿ ಮಾಡಿಕೊಂಡು, ತಪಾಸಣೆಗೆ ಒಳಪಡಬೇಕು’ ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ ಕೋವಿಡ್ ಸೋಂಕು ಕುರಿತು ಹರಡುತ್ತಿರುವ ವದಂತಿಗಳಿಂದ ಆತಂಕಕ್ಕೆ ಒಳಗಾಗಿರುವ ಜನರು ಮಾಸ್ಕ್ ಮೊರೆ ಹೋಗಿದ್ದಾರೆ.
ಇದರಿಂದಾಗಿ ಮಾಸ್ಕ್ ಕೊರತೆ ಕಾಣಿಸಿಕೊಂಡಿದೆ. ಕೆಲವು ಕಡೆ ವ್ಯಾಪಾರಿಗಳು ದುಬಾರಿ ಬೆಲೆಗೆ ಮಾರುತ್ತಿದ್ದಾರೆ.
ಮಾಸ್ಕ್ ತಯಾರಿಕೆಗೆ ಬೇಕಾದ ಕಚ್ಚಾ ಪದಾರ್ಥಗಳನ್ನು ಚೀನಾ ಸೇರಿದಂತೆ ವಿವಿಧ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು.
ಆದರೆ, ಈಗ ಆಮದು ಮತ್ತು ರಫ್ತು ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಇದರಿಂದಾಗಿ ಮಾಸ್ಕ್ಗಳ ಬೆಲೆ ಒಂದೇ ಸಮನೆ ಏರಲಾರಂಭಿಸಿದೆ.
ಇನ್ನೊಂದೆಡೆ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಉಂಟಾಗಿದೆ.
‘ರಾಜ್ಯದ ವಿವಿಧೆಡೆ 5ರ ಬೆಲೆಯ ಸರ್ಜಿಕಲ್ ಮಾಸ್ಕ್ಗಳನ್ನು 50 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.
‘14 ದಿನಗಳಲ್ಲಿ ಕೋವಿಡ್- 19 ಸೋಂಕು ಪ್ರಕರಣ ವರದಿಯಾದ ದೇಶಕ್ಕೆ ಭೇಟಿ ನೀಡಿ, ವಾಪಸ್ ಆದಲ್ಲಿ ಈ ಬಗ್ಗೆ ಮಾಹಿತಿ ನೀಡಬೇಕು.
ನಗರದಿಂದ ಆ ದೇಶಗಳಿಗೆ ಮತ್ತೆ ಪ್ರಯಾಣಿಸಬೇಕಾಗಿದ್ದರೂ ಇಲಾಖೆಯ ಅನುಮತಿ ಪಡೆಯಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.
LATEST NEWS
ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ
ಮಂಗಳೂರು (ಕೇರಳ) : ಸುಡು ಬಿಸಿಲಿನ ಬೇಗೆಯ ನಡುವೆ ಜನರು ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣೆಯ ವೇಳೆ ಕರ್ತವ್ಯದಲ್ಲಿದ್ದ ಸಹಾಯಕ ರಿಟರ್ನಿಂಗ್ ಆಫೀಸರ್ ಒಬ್ಬರು ಹೃದಯಾಘಾ*ತದಿಂದ ಅಸುನೀಗಿದ್ದಾರೆ. ಆದರೆ, ಕೇರಳದಲ್ಲಿ ಚುನಾವಣೆಯಲ್ಲಿ ಮತದಾನ ಮಾಡಿದ ಆರು ಜನ ಮೃ*ತ ಪಟ್ಟಿದ್ದಾರೆ. ಬಿಸಿಲಿನ ತಾಪಕ್ಕೆ ಆರು ಜನ ಸಾ*ವನಪ್ಪಿದ್ದಾರೆ ಎನ್ನಲಾಗಿದೆ.
ಘಟನೆಯ ವಿವರ :
ಪಾಲಕ್ಕಾಡಿನ ಒಟ್ಟಪಾಲಂ ಚುನಂಗಾಡ್ ಎಂಬಲ್ಲಿ ಮತದಾನ ಮಾಡಿ ಮನೆಗೆ ವಾಪಾಸಾಗಿದ್ದ ವಾಣಿವಿಲಾಸಿನಿ ಮಾಡೆಲ್ ಕಟ್ಟಿಲ್ ಚಂದ್ರು ಎಂಬವರು ಅಸು ನೀಗಿದ್ದಾರೆ. ಇನ್ನು ತೆಂಕುರಿಸ್ಸಿ ವಡಕ್ಕೆತ್ತಾರ ಜೆಎಲ್ಪಿ ಶಾಲೆಯಲ್ಲಿ ಮತ ಚಲಾಯಿಸಿದ ವಾಪಾಸಾದ ಮಡಕ್ಕೆತ್ತರ ಮೂಲದ 35 ವರ್ಷದ ಶಬರಿ ಎಂಬವರು ಕೂಡಾ ಇದೇ ರೀತಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆ ವೇಳೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಇನ್ನು ಪಾಲಕ್ಕಾಡ್ ವಲಯೋಡಿಯಲ್ಲಿ ಮತದಾನ ಮಾಡಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಪುದುಶೇರಿಯ ಕಂದನ್ ಎಂಬವರಿಗೂ ಹೃದಯಾಘಾ*ತವಾಗಿದೆ.
ಇನ್ನು ನಿರಾಮರತ್ತೂರು ಮೂಲದ ಅಲುಕನಕತ್ ಸಿದ್ದಿಕ್ ಮೌಲ್ವಿ ಎಂಬವರು ಮಲಪ್ಪುರಂನ ತಿರೂರಿನಲ್ಲಿ ಮತದಾನ ಮಾಡಿ ಮನೆಗೆ ಬಂದಿದ್ದಾರೆ. ಆದರೆ ಮನೆಗೆ ಬಂದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಅವರಿಗೂ ಹೃದಯಾಘಾ*ತವಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ಕೋಝಿಕ್ಕೋಡ್ನ ಕಚ್ಚರಾ ಶಾಲೆಯಲ್ಲಿ ಸಿಪಿಎಂ ಬೂತ್ ಏಜೆಂಟ್ ಆಗಿದ್ದ ನಿವೃತ್ತ ಕೆಸ್ಇಬಿ ಇಂಜಿನಿಯರ್ ಅನೀಸ್ ಅಹಮ್ಮದ್ ಎಂಬವರು ಅಲಪ್ಪುಳ ಕಾಕಜಾಮನ್ನಲ್ಲಿ ಮತ ಚಲಾಯಿಸಿದ್ದರು. ಅವರಿಗೂ ಹೃದಯಾಘಾ*ತ ಉಂಟಾಗಿ ಸಾ*ವನ್ನಪ್ಪಿದ್ದಾರೆ. ಇನ್ನು, ಸೋಮರಾಜನ್ ಎಂಬ 82 ವರ್ಷದ ಪ್ರಾಯದ ವಯೋ ವೃದ್ಧರೊಬ್ಬರು ಕುಡಾ ಮತ ಚಲಾಯಿಸಿದ ಬಳಿಕ ಸಾ*ವನ್ನಪ್ಪಿದ್ದಾರೆ.
ಇದನ್ನೂ ಓದಿ : ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಆರು ಜನರ ಈ ಹೃದಯಾಘಾ*ತಕ್ಕೆ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಆದ್ರೆ ಬಿಸಿಲಿನ ತಾಪಕ್ಕೆ ಇವರು ಮೃ*ತ ಪಟ್ಟಿದ್ದಾರೆ ಎಂದು ಅನುಮಾನಿಸಲಾಗಿದೆ. ಒಟ್ಟಾರೆ ಬಿಸಿಲಿನ ನಡುವೆಯೂ ಬಂದು ತಮ್ಮ ಹಕ್ಕು ಚಲಾಯಿಸಿದ ಇವರು ಇಹಲೋಕ ತಜ್ಯಸಿರುವುದು ನಿಜಕ್ಕೂ ವಿಷಾದನೀಯ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
LATEST NEWS
ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಚಿತ್ರದುರ್ಗ : ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾ*ವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ ( 55) ಅವರು ಮೃ*ತ ಶಿಕ್ಷಕಿ.
ಯಶೋದಮ್ಮ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತರಾಗಿದ್ದರು. ಈ ಸಂದರ್ಭ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ದಾರಿಮಧ್ಯದಲ್ಲಿ ಸಾ*ವನಪ್ಪಿದ್ದಾರೆ. ಮೃ*ತ ಶಿಕ್ಷಕಿ ಯಶೋಧ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಚುನಾವಣಾ ಕರ್ತವ್ಯ ನಿಮಿತ್ತ ಯಶೋದಮ್ಮ ಹೊಟ್ಲೆಪನಹಳ್ಳಿ ಮತಗಟ್ಟೆಗೆ ಬಂದಿದ್ದರು. ಸಹಾಯಕ ಪೋಲಿಂಗ್ ರಿಟರ್ನಿಂಗ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮತದಾನ ಆರಂಭವಾದಾಗ ಆರೋಗ್ಯವಾಗಿದ್ದ ಯಶೋದಮ್ಮ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ರಿಟರ್ನಿಂಗ್ ಆಫೀಸರ್ ಗಮನಕ್ಕೆ ತಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆ ತಲುಪುವ ಮೊದಲೇ ಯಶೋದಮ್ಮ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!
ಘಟನೆಯ ಮಾಹಿತಿ ಪಡೆದ ಶಾಸಕ ಟಿ.ರಘುಮೂರ್ತಿ ಹಾಗೂ ಚುನಾವಣಾ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!