FILM
‘ಮನಸಾರೆ ನಿನ್ನ’ ಎನ್ನುತ್ತಾ ರೊಮ್ಯಾಂಟಿಕ್ ಮೂಡ್ಗೆ ಜಾರಿದ ನಿವೇದಿತಾ ಗೌಡ
‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತೆಲುಗಿನತ್ತ ಮುಖ ಮಾಡಿರುವ ನಿವೇದಿತಾ ಸಿನಿಮಾ ಬದಲು ಆಲ್ಬಂ ಸಾಂಗ್ ಮೂಲಕ ಸದ್ದು ಮಾಡುತ್ತಿದ್ದಾರೆ.
ತೆಲುಗಿನ ‘ವಾಲು ಕಳ್ಳತಾ’ ಎಂಬ ಆಲ್ಬಂ ಸಾಂಗ್ನಲ್ಲಿ ಗೌರಿ ನಾಯ್ಡು ಜೊತೆ ನಿವೇದಿತಾ ನಟಿಸಿದ್ದು, ಇದು ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ‘ಮನಸಾರೆ ನಿನ್ನ’ ಎಂದು ಕನ್ನಡದಲ್ಲೂ ಸಾಂಗ್ ಮಾಡಲಾಗಿದೆ. ಆದರೆ ಸಾಂಗ್ ರಿಲೀಸ್ ಆಗೋದು ಯಾವಾಗ? ಎಂದು ಕಾದುನೋಡಬೇಕಿದೆ.
ತೆಲುಗಿನಲ್ಲಿ ನಟ, ಬರಹಗಾರ, ಸಂಕಲನಕಾರ, ಛಾಯಾಗ್ರಾಹಕನಾಗಿ ಗುರುತಿಸಿಕೊಂಡಿರುವ ಗೌರಿ ನಾಯ್ಡು ಜೊತೆ ಹಾಡಿನಲ್ಲಿ ನಿವೇದಿತಾ ರೊಮ್ಯಾನ್ಸ್ ಮಾಡಿದ್ದಾರೆ. ಸದ್ಯ ರಿಲೀಸ್ ಮಾಡಿರುವ ಪೋಸ್ಟರ್ಗೆ ಬಗೆ ಬಗೆಯ ಕಾಮೆಂಟ್ಗಳು ಬರುತ್ತಿವೆ.
ಇನ್ನೂ ಮಾಜಿ ಪತಿ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ (Muddu Rakshasi) ಸಿನಿಮಾದಲ್ಲಿ ನಿವೇದಿತಾ ನಾಯಕಿಯಾಗಿ ನಟಿಸಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.
BIG BOSS
‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ
ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.
ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.
ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.
‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.
FILM
‘ಪುಷ್ಪ-2’ ಐಟಂ ಸಾಂಗ್ನಲ್ಲಿ ಸೊಂಟ ಬಳುಕಿಸಲಿದ್ದಾರೆ ಬಾಲಿವುಡ್ ನಟಿ !! ಯಾರು ಗೊತ್ತಾ ?
ಮಂಗಳೂರು/ಹೈದರಾಬಾದ್: ‘ಅನಿಮಲ್’ ನಟಿ ತೃಪ್ತಿ ದಿಮ್ರಿ ‘ಪುಷ್ಪ-2’ ನಲ್ಲಿ ಸ್ಪೆಷೆಲ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಮಾತು ಕೇಳಿ ಬರುತಿದ್ದು. ಇದೀಗ ಬಾಲಿವುಡ್ನ ಖ್ಯಾತ ನಟಿ ಶ್ರದ್ಧಾ ಕಪೂರ್ ‘ಪುಷ್ಪ-2’ ನಲ್ಲಿ ಸೊಂಟ ಬಳುಕಿಸಲಿದ್ದಾರೆ ಎಂದು ವರದಿಯಾಗಿದೆ.
ಖ್ಯಾತ ನಟ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ʼಪುಷ್ಪ-2ʼರಿಲೀಸ್ಗೆ ದಿನಗಣನೆ ಪ್ರಾರಂಭವಾಗಿದೆ. ವರ್ಷದ ಕೊನೆಯಲ್ಲಿ ಸಿನಿಮಂದಿಗೆ ಭರ್ಜರಿ ಮನರಂಜನೆ ನೀಡುವ ನಿಟ್ಟಿನಲ್ಲಿ ‘ಪುಷ್ಪ-2’ ತೆರೆಕಾಣಲಿದೆ.
2022ರಲ್ಲಿ ತೆರೆಕಂಡ ‘ಪುಷ್ಪ’ ಮೊದಲ ಭಾಗ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿತ್ತು. ನಟನೆ, ಹಾಡು, ಡ್ಯಾನ್ಸ್, ಮಾಸ್ ಹೀಗೆ ಎಲ್ಲ ವಿಭಾಗದಲ್ಲೂ ಸಿನಿಮಾ ಸಖತ್ ಸದ್ದು ಮಾಡಿ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.
‘ಸ್ತ್ರೀ-2’ ಮೂಲಕ ತೆಲುಗು ಭಾಷಾ ವಲಯದಲ್ಲಿ ಮಿಂಚಿರುವ ಶ್ರದ್ಧಾ ಕಪೂರ್ ‘ಪುಷ್ಪ-2’ ಸಿಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಬೇಕಿದೆ. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜತೆ ರಶ್ಮಿಕಾ ಮಂದಣ್ಣ, ಫಾಹದ್ ಫಾಸಿಲ್, ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ಸುನಿಲ್ ಮುಂತಾದವರು ನಟಿಸಿದ್ದಾರೆ. ಬರುವ ಡಿಸೆಂಬರ್ 6 ರಂದು ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ.
BIG BOSS
Watch Video: ಬಿಗ್ ಬಾಸ್ನಲ್ಲಿ ಪಾತ್ರೆ ತೊಳೆದ ಪರಿಣಾಮ; ಲಾಯರ್ ಜಗದೀಶ್ಗೆ ಮನೆಯಲ್ಲಿ ಎಂಥಾ ಸ್ಥಿತಿ ನೋಡಿ..!
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸ್ದದು ಮಾಡಿದ್ದು ಲಾಯರ್ ಜಗದೀಶ್. ಮೂರು ವಾರ ಕಳೆಯುವುದರ ಒಳಗೆ ಅವರು ದೊಡ್ಮನೆಯಿಂದ ಔಟ್ ಆದರು. ಹೊರ ಹೋದ ಬಳಿಕ ಅವರಿಗೆ ಸೃಷ್ಟಿ ಆಗಿರೋ ಅಭಿಮಾನಿ ಬಳಗ ಎಂಥದ್ದು ಎಂಬುದು ಗೊತ್ತಾಗಿದೆ. ಈಗ ಅವರು ಮನೆಯಲ್ಲೂ ಪಾತ್ರೆ ತೊಳೆಯೋ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.
‘ಬಿಗ್ ಬಾಸ್’ ಮನೆಯಲ್ಲಿ ಜಗದೀಶ್ ಅವರು ಜಗಳಕ್ಕೆ ಮಾತ್ರ ನಿಲ್ಲುತ್ತಿರಲಿಲ್ಲ. ಅವರು ಅಗತ್ಯ ಬಂದಾಗ ಪಾತ್ರೆ ತೊಳೆಯುತ್ತಿದ್ದರು. ಇದು ಅವರ ನೆಚ್ಚಿನ ಕಾಯಕಗಳಲ್ಲಿ ಒಂದಾಗಿತ್ತು. ಈ ಕಾರಣದಿಂದಲೇ ಹಗಲು ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗಲೆಲ್ಲ ಅಡುಗೆ ಮನೆಯ ವಾಶ್ ಬೇಸ್ನಲ್ಲಿ ನಿಲ್ಲುತ್ತಿದ್ದರು. ಇದು ಅವರ ಪತ್ನಿಯ ಗಮನಕ್ಕೆ ಬಂದಿದೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರು ಫನ್ ಆಗಿ ಒಂದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕೀರ್ತಿ ಅವರು ಜಗದೀಶ್ ಮನೆ ಒಳಗೆ ಬರುತ್ತಾರೆ. ಅಲ್ಲಿ ಜಗದೀಶ್ ಅವರು ಪಾತ್ರೆ ತೊಳೆಯುತ್ತಾ ನಿಂತಿರುತ್ತಾರೆ. ‘ಏನ್ ಸರ್ ಸಂದರ್ಶನ ಕೊಡ್ತೀನಿ ಅಂಥ ಹೇಳಿ ಪಾತ್ರೆ ತೊಳೆಯುತ್ತಿದ್ದೀರಲ್ಲ’ ಎಂದು ಪ್ರಶ್ನೆ ಮಾಡಿದರು ಕೀರ್ತಿ. ಇದಕ್ಕೆ ಜಗದೀಶ್ ಉತ್ತರ ಕೊಟ್ಟರು.
‘ಏನ್ ಮಾಡೋದು. ನಮ್ಮ ಮನೆ, ನಮ್ ಪಾತ್ರೆ ತೊಳೆಯೋದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನೆ ಮಾಡಿದರು ಜಗದೀಶ್. ಇದಕ್ಕೆ ಜಗದೀಶ್ ಪತ್ನಿ ಉತ್ತರ ನೀಡುತ್ತಾರೆ. ‘ಬಿಗ್ ಬಾಸ್ ಮನೆಯಲ್ಲಿ ರಾತ್ರಿ-ಹಗಲು ಎನ್ನದೇ ತೊಳೆಯುತ್ತಿದ್ದರು. ಹೀಗಾಗಿ ತೊಳೆಸುತ್ತಾ ಇದ್ದೇನೆ’ ಎನ್ನುತ್ತಾರೆ ಜಗದೀಶ್ ಪತ್ನಿ.
ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಹಲವರು ಹಲವು ರೀತಿಯ ಕಮೆಂಟ್ ಮಾಡಿದ್ದಾರೆ. ಅನೇಕರ ಗಮನ ಮನೆಯ ಮೇಲೆ ಹೋಗಿದೆ. ಮನೆ ಅಷ್ಟು ಕಲರ್ಫುಲ್ ಆಗಿಲ್ಲ. ಹೀಗಾಗಿ, ಕೆಲವರು ಜಗದೀಶ್ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ‘ನೀವೇನಾ ನಿಮ್ಮ ಮನೆಯ ನಾಯಿಗೆ ಒಂದು ಲಕ್ಷ ರೂಪಾಯಿ ಖರ್ಚು ಮಾಡುವವರು’ ಎಂದು ಪ್ರಶ್ನೆ ಮಾಡಿದ್ದಾರೆ.
Watch Video:
- BIG BOSS6 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- BIG BOSS4 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS5 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- LATEST NEWS5 days ago
ಕೀಬೋರ್ಡ್ನಲ್ಲಿ ಎಫ್ ಮತ್ತು ಜೆ ಅಕ್ಷರಗಳ ಕೆಳಗೆ ಗೆರೆ ಏಕೆ ಇರುತ್ತದೆ ಗೊತ್ತಾ?