DAKSHINA KANNADA
ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ..
ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ..!
ಮಂಗಳೂರು :ಮಂಗಳೂರಿನ ಟಿ.ವಿ.ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಸಂಜೆ ನಡೆದ ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ 16ನೇ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಎಂಆರ್ ಪಿ ಎಲ್ ನ ಯೋಜನಾ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಹೆಚ್.ವಿ. ಪ್ರಸಾದ್ ಆತ್ಮ ನಿರ್ಭರ ಭಾರತದಲ್ಲಿ ಪ್ರಚಲಿತ ಪರಿಸ್ಥಿತಿಯಲ್ಲಿ ವಿಪುಲ ಅವಕಾಶಗಳು ನಮ್ಮದಾಗುತ್ತಿವೆ. ಜಾಗತೀಕರಣದಿಂದಾಗಿ
ಕೈಗಾರಿಕಾ ವಲಯದಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುತ್ತಿವೆ. ಬದ್ಧತೆ ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಮೌಲ್ಯಗಳಿಗೆ ಗುರಿ ಸಾಧಿಸುವ ಚಿಂತನೆ ನಮ್ಮದಾಗಬೇಕು ಜೀವನದಲ್ಲಿ ಸಕಾರಾತ್ಮಕ ಮನೋಭಾವ ಸದಾ ನಮ್ಮದಾಗಬೇಕು ಎಂದು ಹೇಳಿದರು. 2020ರ ಬ್ಯಾಚಿನ 461 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಎಂ.ಅಣ್ಣಪ್ಪ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಲಿಕೆ ನಿರಂತರವಾಗಿರಲಿ ಎಂದರು. ಆಡಳಿತ ಮಂಡಳಿ ಉಪಾಧ್ಯಕ್ಷ, ಕಾಲೇಜಿನ ಸಂಚಾಲಕ ಎಂ. ಪದ್ಮನಾಭ ಪೈ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು.
ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ಮಾತನಾಡಿ ರಾಷ್ಟ್ರದ ಪ್ರಗತಿಯಲ್ಲಿ ಕೊಡುಗೆ ನೀಡುವ ಮನೋಭಾವ ನಮ್ಮದಾಗಬೇಕು. ಬದುಕಿನಲ್ಲಿ ಸಂತಸ ಹಂಚಿಕೊಂಡು ಅವಕಾಶಗಳನ್ನು ಬಳಸಿಕೊಂಡು ಸಕಾರಾತ್ಮಕ ಚಿಂತನೆಯಿಂದ ಯಶಸ್ಸನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಸಂದೀಪ್ ಪ್ರಭು ಸಂಪಾದಕತ್ವದಲ್ಲಿ ರೂಪುಗೊಂಡ ಕಾಲೇಜಿನ ಇ ವಾರ್ಷಿಕ ಸಂಚಿಕೆ ಸಿಇಸಿ ಬುಲೆಟಿನ್ ಅನ್ನು ಅತಿಥಿ ಬಿ.ಹೆಚ್.ವಿ. ಪ್ರಸಾದ್ ಸಹಿತ ಗಣ್ಯರು ಲೊಕಾರ್ಪಣೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಸತೀಶ್ ಎಸ್. ನಾಡಿಗ್ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಡಯಾನಾ ಗುಡಿನೊ, ಸಿಂಧು ಭಟ್, ತೇಜಸ್ವಿನಿ ಹೊಳ್ಳ.ಕೌಶಲ್ ಡಿ, ವಿದ್ಯಾ ಬಳಿಗೇರ್ ಅನಿಸಿಕೆಗಳನ್ನು ಹಂಚಿಕೊಂಡರು.
ಕಾಲೇಜಿನ ಆಡಳಿತ ಮಂಡಳಿಯ ಕೊಶಾಧಿಕಾರಿ ಎಂ.ವಾಮನ ಕಾಮತ್, ಸಹ ಕೋಶಾಧಿಕಾರಿ ,ಬಸ್ತಿ ಪುರುಷೋತ್ತಮ ಶೆಣೈ, ಸದಸ್ಯರಾದ ಪಂಚಮಾಲ್ ಗೋಪಾಲಕೃಷ್ಣ ಶೆಣೈ, ಟಿ. ಗೋಪಾಲ ಕೃಷ್ಣ ಶೆಣೈ, ಶ್ರೀಕಾಂತ ಪೈ ಕಸ್ತೂರಿ, ಡಾ.ಪಿ. ಉಮಾನಂದ ಮಲ್ಯ, ಆಡಳಿತ ಕೌನ್ಸಿಲ್ ಸದಸ್ಯರಾದ ಎಂ.ವಿನಾಯಕ ಕಾಮತ್,ಹಾಗೂ ಕಾಲೇಜಿನ ವಿಭಾಗ ಮುಖ್ಯಸ್ಥರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಪ್ರಿಯಾ ವಿ.ಫ್ರ್ಯಾಂಕ್ ವಂದಿಸಿದರು. ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಪ್ರಶಾಂತ್ ಕುಮಾರ್ ಎ.ಕಾರ್ಯಕ್ರಮ ನಿರ್ವಹಿಸಿದರು.
DAKSHINA KANNADA
ಕುಟುಂಬ ಸದಸ್ಯರ ಮಾರಣ ಹೋಮ..! ಆರು ಜೀವಗಳು ಬಲಿ..!
ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ ಆರೋಪಿ ಬಳಿಕ ತಾನೂ ಕೂಡಾ ಗುಂಡು ಹಾರಿಸಿ ಜೀವಾಂತ್ಯಗೊಳಿಸಿದ್ದಾನೆ.
ಈ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಆರೋಪಿ ಅನುರಾಗ್ ಸಿಂಗ್ ಎಂಬಾತ ತನ್ನ ಪತ್ನಿಯ ತಲೆಗೆ ಹ್ಯಾಮರ್ನಿಂದ ಹೊಡೆದಿದ್ದು, ತಾಯಿಗೆ ಗುಂಡು ಹೊಡೆದು ಸಾ*ಯಿಸಿದ್ದಾನೆ. ಬಳಿಕ ತನ್ನ ಮೂವರು ಮಕ್ಕಳನನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದಾನೆ. ಅನುರಾಗ್ ಸಿಂಗ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಆದ್ರೆ ವಿಪರೀತವಾಗಿ ಮದ್ಯ ಸೇವನೆಯ ಚಟ ಹೊಂದಿದ್ದ ಅಂತಾನೂ ಪೊಲೀಸರು ತಿಳಿಸಿದ್ದಾರೆ. ಇದೇ ಕಾರಣದಿಂದ ತಾಯಿ , ಪತ್ನಿ, ಹಾಗೂ ಮೂವರು ಮಕ್ಕಳು ಹ*ತ್ಯೆ ಮಾಡಿದ್ದಾನೆ ಎನ್ನಲಾಗಿದೆ.
62 ವರ್ಷ ಪ್ರಾಯದ ಸಾವಿತ್ರಿ ಸಿಂಗ್, 40 ವರ್ಷ ಪ್ರಾಯದ ಪ್ರಿಯಾಂಕ, ಮಕ್ಕಳಾದ 12 ವರ್ಷದ ಅಸ್ವಿ, 8 ವರ್ಷದ ಅರ್ನಾ, ಹಾಗೂ 4 ವರ್ಷದ ಅದ್ವಿಕ್ ಅನುರಾಗ್ ಸಿಂಗ್ ಕೈನಿಂದ ಹತರಾದವರಾಗಿದ್ದಾರೆ. ಬಳಿಕ ಆರೋಪಿ ಕೂಡಾ ಗುಂಡು ಹಾರಿಸಿ ಸ್ವಯಂ ಹ*ತ್ಯೆ ಮಾಡಿಕೊಂಡಿದ್ದಾನೆ.
DAKSHINA KANNADA
MANGALURU : ಜಸ್ಟ್ ಪಾಸ್ ಆದ ಬ್ರೂಸ್ಲಿ, ಬ್ಯಾನರ್ ಹಾಕಿ ಸಂಭ್ರಮಿಸಿದ ಗೆಳೆಯರು; ವೈರಲ್ ಆಯ್ತು ಬ್ಯಾನರ್ ಫೋಟೋ
ಮಂಗಳೂರು : ಎಸ್ ಎಸ್ ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಪಾಸಾದವರಿಗಂತೂ ಸಂಭ್ರಮವೋ ಸಂಭ್ರಮ…ಸಹಜವಾಗಿ ನಾವೆಲ್ಲ ರ್ಯಾಂಕ್, ಡಿಸ್ಟಿಂಕ್ಷನ್, ಟಾಪರ್ ಆಗಿ ಬಂದವರಿಗೆ ಹಾರಾರ್ಪಣೆ, ತುರಾಯಿ, ಸಿಹಿ ಹಂಚಿ ಸಂಭ್ರಮಿಸುವುದನ್ನು ನಾವು ನೋಡಿದ್ದೇವೆ. ಆದರೆ ನೀವೆಲ್ಲಾದರೂ ಕನಿಷ್ಟ ಪಾಸ್ ಆದವರಿಗೆ ಬ್ಯಾನರ್ ಹಾಕಿ ಸಂಭ್ರಮಿಸುವುದನ್ನು ನೋಡಿದ್ದೀರಾ..? ನೋಡಿಲ್ಲಾಂದರೆ ಇಲ್ಲೊಂದು ಸುದ್ದಿ ಇದೆ. ಕೇಳಿ. ಈತ ಬ್ರ್ರೂಸ್ಲಿ. ಈತನ ನಿಜ ನಾಮಧೇಯ ಹ್ಯಾಸ್ಲಿನ್. ಈತನಿಗೆ ಮಂಗಳೂರಿನ ಕುಡುಪು ಮಂಗಳನಗರದ ಯುವ ಫ್ರೆಂಡ್ಸ್ನ ಗೆಳೆಯರು ಹಿತೈಷಿಗಳು ಬ್ಯಾನರ್ ಹಾಕಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬ್ಯಾನರ್ ನಲ್ಲಿ ಏನಿದೆ?
ಬ್ಯಾನರ್ನಲ್ಲಿ ಆತನ ಫೋಟೋ ಹಾಕಿ ಅಭಿನಂದನೆಗಳನ್ನು ಹಾಕಿ ಪಕ್ಕದಲ್ಲೇ ಸಂಭ್ರಮಿಸುವ ಇಮೋಜಿ ಹಾಕಲಾಗಿದೆ. ಬ್ಯಾನರ್ನಲ್ಲಿ ಹೀಗೆ ಬರೆಯಲಾಗಿದೆ. “ಅಪ್ಪ ಅಮ್ಮನ ಆಶೀರ್ವಾದದಿಂದ, ಊರವರ ಬೈಗುಳದಿಂದ ಊರವರ ಪ್ರೋತ್ಸಾಹದಿಂದ, ಟ್ಯೂಶನ್ ಮಹಾತ್ಮೆಯಿಂದ, ಶಾಲೆಯ ಕಿರಿಕಿರಿಯಿಂದ, ಶಿಕ್ಷಕರ ಬೋಧನೆಯಿಂದ.. ಸೈಕಲ್ , ಕ್ರಾಕ್ಸ್, ಪಿಯುಸಿ, ಫೀಸ್ ಆಮಿಷದಿಂದ ಎಲ್ಲರ ಕುತೂಹಲ, ಬ್ರೂಸ್ಲಿ ಪಾಸೋ ಫೇಲೋ ಇಂದು ಆ ಚರ್ಚೆಗೆ ತೆರೆ ಬಿದ್ದಿದೆ. ತೋಚಿದ್ದು, ಗೀಚಿ ಫೈಲ್ ಆಗುವವನು ಹರಕೆ ಬಲದಿಂದ, ಪ್ರಯತ್ನದ ಫಲದಿಂದ ಹೇಗೂ ಒಟ್ಟಾರೆ ನಮ್ಮ ಬ್ರೂಸ್ಲಿ ಜಸ್ಟ್ ಪಾಸಾಗಿರೋದೇ ನಮಗೆಲ್ಲ ಸಂಭ್ರಮ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 300 ಅಂಕ ಪಡೆದ ಉತ್ತೀರ್ಣನಾದ ಹ್ಯಾಸ್ಲಿನ್ ನಿಮಗೆ ಅಭಿನಂದನೆಗಳು ಎಂದು ಹರ್ಷ ವ್ಯಕ್ತಪಡಿಸುವ ಇಮೋಜಿ ಕೂಡಾ ಹಾಕಲಾಗಿದೆ. ಇದೀಗ ಹೀಗೊಂದು ಬ್ಯಾನರ್ ಹಾಕುವ ಮೂಲಕ ಜಸ್ಟ್ ಪಾಸ್ ಆದವನ ಸಂಭ್ರಮವನ್ನು ಇಮ್ಮಡಿಗೊಳಿಸಲಾಗಿದೆ. ಈ ನಡುವೆ ಬ್ಯಾನರ್ ಕೂಡಾ ಭಾರೀ ವೈರಲ್ ಆಗುತ್ತಿದೆ.
DAKSHINA KANNADA
ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾ*ವು
ಕಡಬ: ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ(ಮೇ.11) ಸಂಜೆ ನಡೆದಿದೆ.
ಮುಂದೆ ಓದಿ..; ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!
ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- LATEST NEWS6 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- FILM7 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
- DAKSHINA KANNADA6 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS6 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!