Connect with us

    LATEST NEWS

    ಮೆಡಿಕಲ್ ಸೀಟಿನ ದುರಾಸೆ; ಮಿತ್ರನಿಂದಲೇ 1.57 ಕೋಟಿ ವಂಚನೆ

    Published

    on

    ಮಂಗಳೂರು/ಬೆಂಗಳೂರು: ಮೆಡಿಕಲ್ ಕಾಲೇಜಿನಲ್ಲಿ ಸೀಟು ಕೊಡಿಸುತ್ತೇನೆ ಎಂದು ನಂಬಿಸಿ ಕೋಟ್ಯಾಂತರ ರೂ. ಪಡೆದು ವಂಚಿಸಿರುವ ಘಡನೆ ಬೆಂಗಳೂರಿನಲ್ಲಿ ನಡೆದಿದೆ.


    ರಾಜಾಜಿನಗರದ ಟಿ. ಮಂಜಪ್ಪ (47) ಹಾಗೂ ವಿರೂಪಾಕ್ಷ (52) ಆರೋಪಿಗಳು.
    ಆರೋಪಿಗಳ ಕುತಂತ್ರ ಹೇಗಿತ್ತು ಗೊತ್ತಾ?
    ಪ್ರತಿಷ್ಟಿತ ಮೆಡಿಕಲ್ ಕಾಲೇಜ್‌ನ ಮ್ಯಾನೇಜ್ ಮೆಂಟ್ ಸಂಪರ್ಕ ಇದೆ ಎಂದು ಕಥೆ ಕಟ್ಟಿದ್ದರು. ನಿಮ್ಮ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸುತ್ತೇವೆ ಎಂದು 1.30 ಕೋಟಿ ಹಣ ತೆಗೆದುಕೊಂಡಿದ್ದರು. ಪುನಃ ಇತ್ತೀಚಿಗೆ ಮೆಡಿಕಲ್ ಸೀಟ್‌ಗೆ ಡಿಮ್ಯಾಂಡ್ ಜಾಸ್ತಿ ಆಗಿದೆ ಎಂದು 26 ಲಕ್ಷ ತೆಗೆದುಕೊಂಡಿದ್ದರು. ನಂತರ ಇತ್ತ ಹಣವೂ ಇಲ್ಲ, ಅತ್ತ ಮೆಡಿಕಲ್ ಸೀಟು ಕೊಡಿಸದೆ ಆಟ ಆಡಿಸಿದ್ದರು.
    ಬಂಧಿತ ವ್ಯಕ್ತಿಯ ಭರವಸೆಯ ನುಡಿಗಳು ಹೇಗಿದ್ದವು ಗೊತ್ತಾ?
    ಸೀಟ್ ಸಿಗದಿದ್ದರೆ ನಮ್ಮ ಹಣಕ್ಕೆ ಗ್ಯಾರೆಂಟಿ ಏನು ಎಂದು ಕೇಳಿದರೆ ಆರೋಪಿಗಳು ಚಾಲಾಕಿ ಉತ್ತರ ನೀಡುತ್ತಿದ್ದರು. ಸೀಟ್ ಹಂಚಿಕೆ ಆಗದಿದ್ದರೆ ಷೇರು ಮಾರ್ಕೆಟ್‌ನಲ್ಲಿ ಹಣ ಹಾಕಿ ಡಬಲ್ ಮಾಡಿ ಕೊಡುವುದಾಗಿ ಮತ್ತೆ ಸುಳ್ಳು ಹೇಳಿ ನಂಬಿಸಿದ್ದರು. ಷೇರ್ ಮಾರ್ಕೆಟ್ ಏಜೆಂಟ್ ನಾವು ಎಂದು ಹಣ ಡಬಲ್ ಮಾಡುವ ಕಥೆ ಕಟ್ಟಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿ ಡಬಲ್‌ ಮಾಡಿ ಕೊಡುವುದಾಗಿ ನಂಬಿಸಿದ್ದರು. ನಂತರ ಹಣವೂ ಕೊಡದೆ ಮೆಡಿಕಲ್‌ ಸೀಟು ಕೊಡಿಸದೆ ಕೈ ಎತ್ತಿದ್ದರು.
    ಬರೋಬ್ಬರಿ 1.57 ಕೋಟಿ ಹಣ ವಂಚನೆ‌ ಮಾಡಿದ ಹಿನ್ನೆಲೆಯಲ್ಲಿ ಪ್ರದೀಪ್ತ ಭಾಸ್ಕರ್ ಪೌಲ್ ಅವರು ಮಂಜಪ್ಪ ಮತ್ತು ವಿರೂಪಾಕ್ಷಪ್ಪ ವಿರುದ್ಧ ದೂರು ದಾಖಲಿಸಿದರು. ಸದ್ಯ ದೂರಿನ ಮೇರೆಗೆ ಇಬ್ಬರನ್ನು ಬಂಧನ ಮಾಡಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    LATEST NEWS

    VIRAL VIDEO: ತಾಯಿಯೊಂದಿಗೆ ಎಂಟು ತಿಂಗಳ ಕಂದಮ್ಮನ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ

    Published

    on

    ಮಂಗಳೂರು: ಪುಟ್ಟ ಕಂದಮ್ಮಗಳ ಜೊತೆ ತುಸು ಘಳಿಗೆ ಇದ್ದರೂ ಸಿಗುವ ಖುಷಿಯೇ ಬೇರೆ. ಮುಗ್ಧ ಮನಸ್ಸುಗಳು ನಿಸ್ವಾರ್ಥದಿಂದ ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.

    ಅರ್ಜುನನ ಪುತ್ರ ಅಭಿಮನ್ಯು ತಾಯಿಯ ಗರ್ಭದಲ್ಲಿರುವಾಗಲೇ ಚಕ್ರವ್ಯೂಹವನ್ನು ಭೇದಿಸುವ ಕಲೆಯನ್ನು ತಂದೆಯಿಂದ ಕಲಿತಿರುತ್ತಾನೆ. ಅಂತೆಯೇ ಈ ಮಗು ತಾಯಿಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಅನ್ನು ಕಲಿತಿದೆ ಎನ್ನುವ ಸಾಲುಗಳೊಂದಿಗೆ ಈ ವಿಡಿಯೋವನ್ನು Vaidik Gyaan ಹೆಸರಿನ ಖಾತೆಯಲ್ಲಿ  ಹಂಚಿಕೊಳ್ಳಲಾಗಿದೆ. ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುತ್ತಿರುವಾಗ ಅದರ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.
    ಸಮಾಜಿಕ ಜಾಲತಾಣದಲ್ಲಿ ಅಧಿಕ ವೀಕ್ಷಣೆ ಕಂಡಿದ್ದು. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಒಬ್ಬರು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪು’ ಎಂದಿದ್ದಾರೆ.

     

    watch this video : 

    Continue Reading

    LATEST NEWS

    ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

    Published

    on

    ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್.ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

    ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

    ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ.  ನಾನು ಮಂಗಳಮುಖಿಯನ್ನು ಮದುವೆಯಾಗುವುದು ನನ್ನ ಕುಟುಂಬದವರಿಗೆ ಇಷ್ಟವಿಲ್ಲ. ಆದರೆ ನಾವಿಬ್ಬರು ಸುದೀರ್ಘ ಚರ್ಚೆ ನಡೆಸಿ ಮದುವೆಯಾಗಲು ನಿರ್ಧರಿಸಿದೆವು.

    Continue Reading

    LATEST NEWS

    ನೇ*ಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶ*ವ ಪತ್ತೆ; ಇದು ಆ*ತ್ಮಹತ್ಯೆನಾ ? ಕೊ*ಲೆನಾ ?

    Published

    on

    ಮಂಗಳೂರು/ಬೆಂಗಳೂರು: ನೇ*ಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮಹಿಳೆ ಶ*ವ ಬೆಂಗಳೂರಿನ ವಿವೇಕನಗರದಲ್ಲಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಮೇಘನಾ ಶೆಟ್ಟಿ(27) ಮೃ*ತ ಮಹಿಳೆ.


    ಮೇಘನಾ ಅವರು ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಮೂಲದ ಇಂಜಿನಿಯರ್ ಸುದೀಪ್ ಶೆಟ್ಟಿ ಜೊತೆ ವಿವಾಹವಾಗಿತ್ತು. ಜೊತೆಗೆ ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಸಹ ಇದೆ.
    ಮೃ*ತ ದೇಹ ಹೇಗೆ ಪತ್ತೆಯಾಗಿದೆ ಗೊತ್ತಾ ?
    ಎಲ್ಲವೂ ಚೆನ್ನಾಗಿದ್ದ ಕುಟುಂಬದಲ್ಲಿ ಇತ್ತೀಚೆಗೆ ಪದೇಪದೆ ಹಣಕ್ಕಾಗಿ ಪತಿ ಕುಟುಂಬದಿಂದ ಕಿರು*ಕುಳ ನೀಡುತ್ತಿದ್ದು, ನಿನ್ನೆ(ಅ.04) ರಾತ್ರಿ ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ ಎನ್ನಲಾಗಿದೆ. ಇಂದು(ಅ.5) ಬೆಳಗ್ಗೆ ಕಿಟಕಿಗೆ ನೇ*ಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ*ವ ಪತ್ತೆಯಾಗಿದೆ.
    ಪತ್ನಿಯನ್ನು ಪತಿಯೇ ಕೊ*ಲೆ ಮಾಡಿದ್ದಾ ?
    ಘಟನಾ ಸ್ಥಳಕ್ಕೆ ವಿವೇಕನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃ*ತ ಮೇಘನಾ ಪೋಷಕರು, ಅಳಿಯ ಸುದೀಪ್ ಮೇಲೆ ಕೊ*ಲೆ ಆರೋಪ ಹೇರಿದ್ದು, ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಮೇಘನಾ ಪತಿ ಸುದೀಪ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending