Connect with us

LATEST NEWS

ಬೇಡಿಕೆ ಈಡೇರಲು ದರ್ಗಾ, ಕೊರಗಜ್ಜ, ಚರ್ಚ್‌ ಮೊರೆ ಹೋದ ಅತಿಥಿ ಉಪನ್ಯಾಸಕರು

Published

on

ಮಂಗಳೂರು: ದ.ಕ. ಜಿಲ್ಲೆಯ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಭದ್ರತೆ(ಸೇವಾ ವಿಲೀನತೆ) ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ `ದೇವರ ಮೊರೆ’ ಹೋದರು.


ಕಳೆದ 30 ದಿನಗಳಿಂದ ಮುಷ್ಕರ, ಜಾಥಾ, ಪ್ರತಿಭಟನೆ, ತರಗತಿ ಬಹಿಷ್ಕಾರ ನಡೆಸಿ, ಸರ್ಕಾರವನ್ನು ಹಲವಾರು ಬಾರಿ ಒತ್ತಾಯಿಸಿದರೂ ಸ್ಪಂದಿಸದೆ ಇರುವ ಕಾರಣ ದ.ಕ. ಜಿಲ್ಲೆಯ ಸಮಸ್ತ ಅತಿಥಿ ಉಪನ್ಯಾಸಕರ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆಗಳ ಮೂಲಕ ಸರ್ಕಾರಕ್ಕೆ ಮನದಟ್ಟು ಮಾಡುವಂತೆ ಪ್ರೇರೇಪಿಸಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಲಾಯಿತು.

ನಂತರ ಕುತ್ತಾರು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಸೇವಾ ಭದ್ರತೆ ಈಡೇರಿದ್ದಲ್ಲಿ ಹರಕೆಯ ಕೋಲ ನೀಡುವ ಸಂಕಲ್ಪ ಮಾಡಲಾಯಿತು.

ಉಳ್ಳಾಲದ ಪವಿತ್ರ ದರ್ಗಾದಲ್ಲಿ ನಮ್ಮ ಸೇವಭದ್ರತೆಗಾಗಿ ಪ್ರಾರ್ಥನೆ ಮಾಡಿ, ದರ್ಗಾದ ಅಧ್ಯಕ್ಷರ ಮೂಲಕ ಒತ್ತಾಯಿಸಿ ಮನವಿ ನೀಡಲಾಯಿತು.

ನಂತರ ಉಳ್ಳಾಲ ರಾಣಿ ಅಬ್ಬಕ್ಕನ ಆರಾಧನೆಯ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಕೈ ಮುಗಿಯಲಾಯಿತು.

ಅಲ್ಲಿಂದ ಮಂಗಳೂರಿನ ಧರ್ಮ ಪ್ರಾಂತ್ಯದ ಬಿಷಪ್ ನಿವಾಸದ ಚಾಪೆಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಿ, ಅಲ್ಲಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು.


ಈ ಸಂದರ್ಭ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಬೇಡಿಕೆಯನ್ನು ಈಡೆರಿಸುವಂತೆ ಒತ್ತಾಯಿಸಲಾಯಿತು.
ಜಿಲ್ಲಾಧ್ಯಕ್ಷ ಧೀರಜ್ ಕುಮಾರ್,

ಉಪಾಧ್ಯಕ್ಷರುಗಳಾದ ಗೋಪಾಲಕೃಷ್ಣ, ಹೇಮಚಂದ್ರ, ವಿನೋದ, ವಸಂತ್ ಕುಮಾರ್, ಕಾರ್ಯದರ್ಶಿಗಳಾದ ಮಹಾಂತೇಶ್, ರಾಜೇಶ್, ಶಾಂತಿ ಮತ್ತಿತರರು ಇದ್ದರು.

LATEST NEWS

ಕಟ್ಟಡದ ಬೆಂಕಿ ನಂದಿಸುವಾಗ ನೀರು ಖಾಲಿ; ಅಗ್ನಿಗೆ ಆಹುತಿಯಾದ ಅಗ್ನಿಶಾಮಕ ಸಿಬ್ಬಂದಿ

Published

on

ಬಿಹಾರ : ಸಾಮಾನ್ಯವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯಿಂದ ಜನರನ್ನು ರಕ್ಷಿಸುತ್ತಾರೆ. ಬೆಂಕಿ ಅನಾಹುತಗಳು ಇನ್ನಷ್ಟು ಬಿಗಡಾಯಿಸದಂತೆ ಎಚ್ಚರ ವಹಿಸುತ್ತಾರೆ. ಆದ್ರೆ, ಇಲ್ಲಿ ಆಗಿದ್ದು ಬೇರೆ. ಹೌದು,  ಮನೆಯೊಂದರಲ್ಲಿ ಅಗ್ನಿ ಅವಘ*ಡ ಸಂಭವಿಸಿತ್ತು. ಇಡೀ ಮನೆಯನ್ನು ಆವರಿಸುತ್ತಿದ್ದ ಬೆಂಕಿಯನ್ನು ನಂದಿಸುವ ಸಲುವಾಗಿ ಅಗ್ನಿಶಾಮಕ ದಳ ಕಾರ್ಯಪ್ರವೃತ್ತವಾಗಿತ್ತು. ಆಗ ಏಕಾಏಕಿ ಅಗ್ನಿಶಾಮಕ ವಾಹನದಲ್ಲಿದ್ದ ನೀರು ಖಾಲಿಯಾಗಿದೆ. ಪರಿಣಾಮ ಬೆಂ*ಕಿ ನಂದಿಸಲು ತೆರಳಿದ್ದ ಅಧಿಕಾರಿ ಅಗ್ನಿಯಲ್ಲಿ ಬೆಂದು ಹೋದ ಘಟನೆ ನಡೆದಿದೆ. ಈ ದುರಂ*ತ ಸಂಭವಿಸಿದ್ದು ಬಿಹಾರದ ಸಿವಾನ್​ನಲ್ಲಿ.


ಭಾಗಲ್ಪುರ ನಿವಾಸಿ ರವಿಕಾಂತ್ ಮಂಡಲ್ (40) ಮೃ*ತ ಅಗ್ನಿಶಾಮಕ ದಳದ ಸಿಬ್ಬಂದಿ. ಮನೆಯಲ್ಲಿದ್ದ ಯಂತ್ರಕ್ಕೆ ಬೆಂ*ಕಿ ತಗುಲಿ ಸ್ವಲ್ಪ ಸಮಯದಲ್ಲೇ ಮನೆಯೆಲ್ಲಾ ವ್ಯಾಪಿಸಿದೆ. ರವಿಕಾಂತ್ ಮನೆಯ ಮೇಲ್ಛಾವಣಿಯ ಮೇಲೆ ಹತ್ತಿ ಬೆಂ*ಕಿ ನಂದಿಸಲು ಆರಂಭಿಸಿದ್ದರು. ಭಾರೀ ಬೆಂ*ಕಿಯಿಂದಾಗಿ ಛಾವಣಿ ಕುಸಿದಿದೆ. ರವಿಕಾಂತನಿಗೆ ಪ್ರಜ್ಞೆ ಬರುವಷ್ಟರಲ್ಲಿ ಅವರೂ ಉರಿಯುವ ಬೆಂಕಿಗೆ ಬಿದ್ದಿದ್ದರು. ಪರಿಣಾಮ ಅವರು ಬೆಂಕಿಗೆ ಆಹುತಿಯಾದರು.

ನೀರು ಖಾಲಿ…ಸಿಬ್ಬಂದಿ ಪ್ರಾ*ಣ ಹೋಯ್ತು :

ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ನಡೆಸುತ್ತಿತ್ತು. ಇದ್ದಕ್ಕಿದ್ದಂತೆ ಅಗ್ನಿಶಾಮಕ ವಾಹನದಲ್ಲಿ ನೀರು ಖಾಲಿಯಾಯಿತು. ಈ ವೇಳೆ ಬೆಂಕಿಯ ಕೆನ್ನಾಲೆಗೆ ಸಿಲುಕಿದ ರವಿಕಾಂತ್ ರನ್ನು ರಕ್ಷಿಸಲಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊ*ಲೆ; ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಯುವತಿಯ ಹ*ತ್ಯೆಗೈದ ಪಾಪಿ!

ಇದರಿಂದ ಲಕ್ಷಾಂತರ ಮೌಲ್ಯದ ಆಸ್ತಿ ಸುಟ್ಟು ಭಸ್ಮವಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

Continue Reading

DAKSHINA KANNADA

ಒಂದು ರೇಷ್ಮೆ ಸೀರೆ ತಯಾರಿಸಲು ಎಷ್ಟು ರೇಷ್ಮೆ ಹುಳುಗಳು ಬೇಕು ಗೊತ್ತೇ..?

Published

on

ಮಂಗಳೂರು: ಹೆಣ್ಮಕ್ಕಳಿಗೆ ರೇಷ್ಮೆ ಸೀರೆ ಅಂದರೆ ಭಾರೀ ಇಷ್ಟ. ಯಾವೂದೇ ಒಂದು ಶುಭ ಕಾರ್ಯಕ್ರಮಕ್ಕೆ ಹೋಗಬೇಕಾದರೆ ಹೆಣ್ಮಕ್ಕಳಿಗೆ ರೇಷ್ಮೆ ಸಾರಿ ಬೇಕೇ ಬೇಕು. ಅಮ್ಮನ ರೇಷ್ಮೆ ಸೀರೆಯನ್ನು ಕಂಡರಂತೂ ಎಲ್ಲಿಲ್ಲದ ಪ್ರೀತಿ. ರೇಷ್ಮೆ ಸೀರೆಯ ಬೆಲೆ ಜಾಸ್ತಿ ಆದರೂ ಹಣ ಹೊಂದಿಸಿಕೊಂಡು ಹೋಗಿ ಅದನ್ನು ಖರೀದಿ ಮಾಡುತ್ತಾರೆ. ಹಬ್ಬ, ಹರಿದಿನ, ಪೂಜೆ, ದೇವಸ್ಥಾನ, ಮದುವೆ ಹೀಗೆ ಯಾವೂದೇ ಸಮಾರಂಭಕ್ಕೆ ರೇಷ್ಮೆ ಸೀರೆ ಬೇಕೇ ಬೇಕು.

ಸಾಮಾನ್ಯವಾಗಿ ಮಹಿಳೆಯರ ರೇಷ್ಮೆ ಸೀರೆ ತುಂಬಾನೇ ದುಬಾರಿ ಇರುತ್ತೆ. ಯಾಕೆಂದರೆ ಇದನ್ನು ತಯಾರಿಸುವುದು ಅಷ್ಟು ಸುಲಭದ ಕೆಲಸವಲ್ಲ. ನಯವಾದ, ಮೃದುವಾದ ಸೀರೆಯನ್ನು ತಯಾರಿಸಬೇಕೆಂದರೆ ಬಹಳಷ್ಟು ಕಷ್ಟ ಪಡಬೇಕಾಗುತ್ತದೆ. ಈ ರೇಷ್ಮೆ ಸೀರೆಯನ್ನು ಹೇಗೆ ತಯಾರಿಸುತ್ತಾರೆ ಎನ್ನುವುದನ್ನು ತಿಳಿಯೋಣ.

ರೇಷ್ಮೆ ಸೀರೆ ತಯಾರಿಸುವುದು ಹೇಗೆ ?

ರೇಷ್ಮೆ ಸೀರೆ ನಮ್ಮ ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬ ಹೆಂಗಳೆಯರ ಬಳಿ ಒಂದಾದರೂ ರೇಷ್ಮೆ ಸೀರೆ ಇದ್ದೇ ಇರುತ್ತದೆ. ಒಂದು ವೇಳೆ ಇಲ್ಲದಿದ್ದರೆ ಖರೀದಿಸಲೇ ಬೇಕು ಎನ್ನುವ ಆಸೆ ಇದ್ದೇ ಇರುತ್ತದೆ.

ರೇಷ್ಮೆ ಸೀರೆಯನ್ನು ತಯಾರಿಸುವುದು ರೇಷ್ಮೆ ನೂಲಿನಿಂದ. ಒಂದು ಹೆಣ್ಣು ಹುಳು ಒಮ್ಮೆಗೆ 300-500 ಮೊಟ್ಟೆಗಳನ್ನು ಇಡುತ್ತದೆ. ಈ ಎಲ್ಲಾ ಮೊಟ್ಟೆಗಳನ್ನು ಒಂದೇ ಸ್ಥಳದಲ್ಲಿ ಇರಿಸಬೇಕಾಗುತ್ತದೆ. ಇದರಿಂದ ಲಾರ್ವಾಗಳು ಹೊರಹೊಮ್ಮುತ್ತವೆ. ಅದರ ಸಹಾಯದಿಂದ ರೇಷ್ಮೆ ನೂಲು ತಯಾರಿಸಿ ಸೀರೆ ಮಾಡಲಾಗುತ್ತದೆ.

ಮೊದಲಿಗೆ ರೇಷ್ಮೆ ಹುಳುವಿನ ಕೃಷಿ ಮಾಡಬೇಕು. ಈ ಕೃಷಿಗೆ ತುಂಬಾ ಕಷ್ಟಪಡಬೇಕಾಗುತ್ತದೆ. ಪರಿಶ್ರಮ ಹಾಕಿದರೆ ಇದು ಬಂಗಾರದ ಕೃಷಿ. ಇನ್ನು ಪ್ರತಿಯೊಂದು ರೇಷ್ಮೆ ಹುಳುವನ್ನು ಕೈಯಿಂದಲೇ ತೆಗೆದು ಅವುಗಳನ್ನು ಸಣ್ಣ ವಿಭಾಗಗಳಲ್ಲಿ ಚಂದ್ರಿಕೆಯಲ್ಲಿ ಇರಿಸಲಾಗುತ್ತದೆ. ಬಳಿಕ ಅವುಗಳ ಮೇಲೆ ಮಲ್ಬೆರಿ ಎಲೆಗಳನ್ನು ಹೊಂದಿಸಲಾಗುತ್ತೆ. ರೇಷ್ಮೆ ಹುಳುಗಳು ಈ ಎಲೆಗಳನ್ನು ತಿನ್ನುತ್ತವೆ. ಆಹಾರ ಸೇವನೆ ನಿಂತಾಗ, ಅವು ನೂಲನ್ನು ಬಿಡಲು ಆರಂಭಿಸುತ್ತದೆ.

ಈ ಸಂಪೂರ್ಣ ಪ್ರಕ್ರಿಯೆಯು 3ರಿಂದ 8 ದಿನಗಳನ್ನು ತೆಗೆದುಕೊಳ್ಳುತ್ತದೆ. ರೇಷ್ಮೆ ಹುಳು 100 ಮೀಟರ್ ಉದ್ದದ ರೇಷ್ಮೆಯ ಒಂದೇ ದಾರವನ್ನು ಮಾಡುತ್ತದೆ. ಈ ದಾರವು ಅವುಗಳ ಪಕ್ಕದಲ್ಲಿರುವ ನೈಸರ್ಗಿಕ ಅಂಟಿಗೆ ಅಂಟಿಕೊಂಡಿರುತ್ತದೆ. ಅರ್ಧ ಕಿಲೋ ರೇಷ್ಮೆ ಮಾಡಲು 2600 ರಿಂದ 3000 ರೇಷ್ಮೆ ಹುಳುಗಳ ಪರಿಶ್ರಮ ಇರುತ್ತದೆ. ಒಂದು ಸುಂದರವಾದ ಸೀರೆ ತಯಾರಾಗಲು ಸುಮಾರು 1700-2500 ರೇಷ್ಮೆ ಹುಳುಗಳು ಸಾಯುತ್ತವೆ.

ರೇಷ್ಮೆಗೆ ಬಣ್ಣ ಹಾಕೋದು ಹೇಗೆ?

ದಾರವನ್ನು ಬ್ಲೀಚಿಂಗ್ ಮಾಡಿದ ನಂತರ ಒಣಗಿಸಿ ನಂತರ ರೇಷ್ಮೆಗೆ ಬಣ್ಣ ಹಾಕಲಾಗುತ್ತೆ. ರೇಷ್ಮೆ ಗುಣಮಟ್ಟದ ಮೇಲೆ ಪರಿಣಾಮ ಬೀರದಂತೆ ಬಣ್ಣವನ್ನು ಸಹ ನೈಸರ್ಗಿಕ ವಸ್ತುಗಳಿಂದ ತಯಾರಿಸಲಾಗುತ್ತದೆ. ಹಲವಾರು ದಿನಗಳವರೆಗೆ ಪದೇ ಪದೇ ಬಣ್ಣ ಹಾಕಿ ಒಣಗಿಸಲಾಗುತ್ತೆ.

ಸೀರೆ ಹೇಗೆ ತಯಾರಿಸಲಾಗುತ್ತದೆ?

ಕೊನೆಗೆ ದಾರ ಸಿದ್ದವಾದ ಬಳಿಕ ಆ ಎಳೆಗಳು ಮಗ್ಗಕ್ಕೆ ಹೋಗುತ್ತವೆ. ಪವರ್ ಲೂಮ್ ಮತ್ತು ಹ್ಯಾಂಡ್ ಲೂಮ್‌ನಲ್ಲಿ ರೇಷ್ಮೆ ಸೀರೆಗಳನ್ನು ತಯಾರಿಸಬಹುದು. ಈ ಎಳೆಗಳನ್ನು ಸ್ಥಿರ ಮಾದರಿಯಲ್ಲಿ ನೇಯಲಾಗುತ್ತದೆ. ಈ ಪ್ರಕ್ರಿಯೆಯಿಂದ ಬಟ್ಟೆಯನ್ನು ತಯಾರಿಸಲಾಗುತ್ತದೆ. ಒಂದು ಸೀರೆಯನ್ನು ತಯಾರಿಸಲು 4-5 ದಿನಗಳಿಂದ 2-3 ತಿಂಗಳವರೆಗೆ ತೆಗೆದುಕೊಳ್ಳುತ್ತದೆ.

 

ಸಿಲ್ಕ್ ಮಾರ್ಕ್ ನೋಡಿ ರೇಷ್ಮೆ ಸೀರೆ ಖರೀದಿಸಿ

ನಾವು ಚಿನ್ನ ಖರೀದಿಸುವಾಗ ಹಾಲ್‌ಮಾರ್ಕ್ ನೋಡಿ ಖರೀದಿಸುತ್ತೇವೆ. ಅದೇ ರೀತಿ ರೇಷ್ಮೆ ಸೀರೆ ಖರೀದಿಸುವಾಗ ಸಿಲ್ಕ್ ಮಾರ್ಕ್ ನೋಡುವುದು ಕೂಡ ಮುಖ್ಯ. ಈ ಬಗ್ಗೆ ಹಲವಾರು ವರ್ಷಗಳಿಂದ ಸಿಲ್ಕ್ ಮಾರ್ಕ್ ಆರ್ಗನೈಜೇಷನ್ ಆಫ್ ಇಂಡಿಯಾ ಜಾಗೃತಿ ಮೂಡಿಸುತ್ತಾ ಬಂದಿದೆ.

Continue Reading

LATEST NEWS

WATCH VIDEO : ಫ್ರೀ ಬಸ್‌ನಲ್ಲಿ ಮಹಿಳೆಯರ ‘ಶಕ್ತಿ’ ಪ್ರದರ್ಶನ…ರಣರಂಗವಾದ ಬಸ್‌..!

Published

on

ಬೀದರ್ : ಫ್ರೀ…ಫ್ರೀ…ಫ್ರೀ…ರಾಜ್ಯ ಸರ್ಕಾರದ ಫ್ರೀ ಯೋಜನೆಗಳಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣವೂ ಒಂದು. ಹೀಗಾಗಿ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಾಣಬಹುದು. ಬಸ್ ನಲ್ಲಿ ಮಹಿಳೆಯರಿಂದ ಸೀಟ್ ಭರ್ತಿ ಆಗಿರುತ್ತದೆ. ಸೀಟ್ ಗಾಗಿ ಜಗಳ ಮಾಮೂಲಿ. ಆದ್ರೆ, ಇಲ್ಲಿ ಜಗಳ ಮಾತ್ರವಲ್ಲ, ಹೊಡೆದಾಟ ನಡೆದಿದೆ. ಹಾಗಂತ ಕೈನಲ್ಲಿ ಹೊಡೆದಾಡಿಕೊಂಡಿದ್ದು, ಮಾತ್ರವಲ್ಲ. ಚಪ್ಪಲಿಯಲ್ಲೇ ಹೊಡೆದಾಡಿಕೊಂಡಿದ್ದಾರೆ.


ಸೀಟು ನನ್ನನ್ನು…ನನ್ನದು :

ಬಸ್ ರಣರಂಗವಾಗಿ ಬದಲಾದ ಘಟನೆ ನಡೆದಿರುವುದು ಬೀದರ್ ಜಿಲ್ಲೆಯಲ್ಲಿ. ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಬಟ್ಟೆ ಎಳೆದು ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್ಸಿನಲ್ಲಿ ಈ ಅವಾಂತರ ನಡೆದಿದೆ.

ಇದನ್ನೂ ಓದಿ : ಅಯ್ಯೋ! ರಾಖಿ ಸಾವಂತ್ ಗೆ ಏನಾಯ್ತು? ಆಸ್ಪತ್ರೆಗೆ ದಾಖಲಾದ ಬಾಲಿವುಡ್ ಡ್ರಾಮಾ ಕ್ವೀನ್

ಸರ್ಕಾರದ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದಿದ್ದ ಇಬ್ಬರು ಮಹಿಳೆಯರು ಈ ರಣರಂಗದ ಪ್ರಮುಖ ಪಾತ್ರಧಾರಿಗಳು. ಮಕ್ಕಳು, ಮಹಿಳೆಯರು, ಗಂಡಸರು ಪ್ರೇಕ್ಷಕರಾಗಿದ್ದರು. ಯಾರಿದ್ದರೋ ಇಲ್ವೋ ಅದು ಖ್ಯವಲ್ಲ. ಸೀಟ್ ಮುಖ್ಯ ಎನ್ನುತ್ತಾ, ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದಾಡಿಕೊಂಡಿದ್ದಾರೆ. ಪಾಪ! ಮಕ್ಕಳು ಭಯದಿಂದ ಮೂಕ ಪ್ರೇಕ್ಷರಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸೀಟಿನ ಮೇಲೆ ಕುಳಿತಿದ್ದ ಯುವತಿ ಬಳಿ ‘ಸೀಟು ನನ್ನದು’ ಎಂದು ಮತ್ತೊಬ್ಬ ಮಹಿಳೆ ಜಗಳಕ್ಕೆ ನಿಂತಿದ್ದಾರೆ. ನಾನು ಸೀಟು ಬಿಡಲ್ಲ ಎಂದು ಹೇಳಿದ್ದಾಳೆ ಆಕೆ. ಅಲ್ಲಿಗೆ ಶುರು…ಮಾತಿಗೆ ಮಾತು ಬೆಳೆದು ಬಳಿಕ ಚಪ್ಪಲಿ ಹೊಡೆದಾಟದವರೆಗೆ ಸೀಟ್ ಗಾಗಿ ಯುದ್ಧ ನಡೆದಿದೆ.

Continue Reading

LATEST NEWS

Trending