Connect with us

    FILM

    ಟಾಲಿವುಡ್‌ ಮೆಗಾಸ್ಟಾರ್‌ಗೆ ಗಿನ್ನಿಸ್ ವಿಶ್ವದಾಖಲೆಯ ಗೌರವ

    Published

    on

    ಹೈದರಾಬಾದ್/ಮಂಗಳೂರು: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸರ್ಜಾ ಅವರ ನೃತ್ಯಗಳಿಗಾಗಿ ಕ್ರಿಯಾತ್ಮಕ ತಾರೆ ಎಂಬ ಬಿರುದಿನೊಂದಿಗೆ ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದ್ದಾರೆ. ಚಿರಂಜೀವಿ ತಮ್ಮ ಚಿತ್ರಗಳಲ್ಲಿ ಪ್ರದರ್ಶಿಸಿರುವ ನೃತ್ಯಗಳಿಗಾಗಿ ಭಾರತೀಯ ಚಲನಚಿತ್ರೋದ್ಯಮ ಅತ್ಯಂತ ಕ್ರಿಯಾತ್ಮಕ ತಾರೆ ಎಂದು ಗಿನ್ನಿಸ್ ವಿಶ್ವದಾಖಲೆಯನ್ನು ಮುಡಿಗೇರಿಸಿಕೊಂಡಿದ್ದಾರೆ.

    ಗಿನ್ನಿಸ್ ವಿಶ್ವ ದಾಖಲೆಯ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಅವರು ಈ ಕ್ಷಣ ಅವಿಸ್ಮರಣೀಯವಾಗಿದೆ. ನನ್ನ ನೃತ್ಯಕ್ಕೆ ವಿಶ್ವ ದಾಖಲೆಯನ್ನು ಪಡೆದುಕೊಳ್ಳುತ್ತೇನೆ ಎಂದು ನಾನು ಭಾವಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವೂ ನನ್ನ ವೃತ್ತಿ ಜೀವನದುದ್ದಕ್ಕೂ ನನಗೆ ಪ್ರಶಂಸೆಯನ್ನು ತಂದುಕೊಟ್ಟಿದೆ. ಸಾವಿತ್ರಿಯಂತಹ ದಂತಕಥೆಯುಳ್ಳ ನಾಯಕಿಯರೊಂದಿಗೆ ಪರದೆ ಮೇಲೆ ಕಾಣಿಸಿಕೊಂಡಿದ್ದು ಸಿನೆಮಾದಲ್ಲಿ ಅವರ ಜತೆ ಹೆಜ್ಜೆ ಹಾಕಿದ್ದು ಎಲ್ಲವನ್ನೂ ಸದಾ ನೆನಪಿಸಿಕೊಳ್ಳುತ್ತೇನೆ. ನನ್ನನ್ನು ನಟನಾಗಿ ಮಾಡಲು ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಪ್ರಯತ್ನ ಅಪಾರವಾಗಿದೆ. ಇವರೆಲ್ಲರಿಗೂ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.

    ‘ಬಿಗ್ ಬಾಸ್’ ಟೀಮ್ ಜೊತೆ ಅಪ್‌ಡೇಟ್ ಹೊತ್ತು ತರುತ್ತಿದ್ದಾರೆ ಸುದೀಪ್- ಏನದು?

    ನಟ ಚಿರಂಜೀವಿ 45 ವರ್ಷಗಳ ಸಿನಿ ಪ್ರಯಾಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್‌ ಸ್ಟಪ್ ಹಾಕಿದ್ದಾರೆ.

    FILM

    ‘ಬಿಗ್ ಬಾಸ್’ ಟೀಮ್ ಜೊತೆ ಅಪ್‌ಡೇಟ್ ಹೊತ್ತು ತರುತ್ತಿದ್ದಾರೆ ಸುದೀಪ್- ಏನದು?

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆ.29ಕ್ಕೆ ಶೋ ಅದ್ಧೂರಿಯಾಗಿ ಆಗಿ ಲಾಂಚ್ ಆಗಲಿದೆ. ಶೋ ಚಾಲನೆಗೂ ಮುನ್ನ ಬಿಗ್ ಬಾಸ್ ತಂಡದ ಜೊತೆ ಬಿಗ್ ಅಪ್‌ಡೇಟ್‌ವೊಂದನ್ನು ಸುದೀಪ್ ಹೊತ್ತು ತರುತ್ತಿದ್ದಾರೆ.

    ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್ ಬಾಸ್ ತಂಡ ತೆರೆಮರೆಯಲ್ಲಿ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳುತ್ತಿದೆ. ಈಗ ಬಿಗ್ ಬಾಸ್ ತಂಡದಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಇಂದು 3 ಗಂಟೆ ಸುಮಾರಿಗೆ ಬಿಗ್ ಬಾಸ್ ಸೀಸನ್ 11ರ ಬಗ್ಗೆ ಅಧಿಕೃತ ಚಾಲನೆ ಸಿಗಲಿದೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗಿಯಾಗಲಿದ್ದಾರೆ. ಹಲವು ವಿಚಾರಗಳ ಕುರಿತು ನಟ ಮಾತನಾಡಲಿದ್ದಾರೆ.

    ಮೊದಲ ಸೀಸನ್‌ನಿಂದ ಹಿಡಿದು ಹತ್ತು ಸೀಸನ್‌ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಇದೀಗ ಬಿಗ್ ಬಾಸ್ ಶೋ 11ನೇ ಸೀಸನ್‌ಗೆ ಕಾಲಿಟ್ಟಿದೆ. ಈಗಾಗಲೇ ಪ್ರೋಮೋಗಳ ಮೂಲಕ ಬಿಗ್ ಬಾಸ್ ಸೀಸನ್ 11ರ ಮೇಲೆ ಫ್ಯಾನ್ಸ್‌ಗೆ ಸಾಕಷ್ಟು ನಿರೀಕ್ಷೆಯಿದೆ. ಜೊತೆಗೆ ಈ ಬಾರಿ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡ್ತಿಲ್ಲ ಅನ್ನೋ ಸುದ್ದಿಯೂ ಹರಿದಾಡಿತ್ತು. ಆ ನಂತರ ಪ್ರೋಮೋದಲ್ಲಿ ನಟನ ಆಗಮನದ ಮೂಲಕ ವದಂತಿಗಳಿಗೆ ಬ್ರೇಕ್‌ ಬಿದ್ದಿತ್ತು.

    ಅಂದಹಾಗೆ, ಬಿಗ್ ಬಾಸ್‌ಗೆ ಬರಲಿರುವ ಕೆಲ ಸ್ಪರ್ಧಿಗಳ ಹೆಸರು ಸದ್ದು ಮಾಡುತ್ತಿದೆ. ಮೋಕ್ಷಿತಾ ಪೈ, ಹುಲಿ ಕಾರ್ತಿಕ್, ಸುಕೃತಾ ನಾಗ್, ಕಿರುತೆರೆ ನಟಿ ಅಮೂಲ್ಯ, ಭವ್ಯಾ ಗೌಡ, ವರ್ಷಾ ಕಾವೇರಿ ಸೇರಿದಂತೆ ಅನೇಕರು ಹೆಸರು ಚಾಲ್ತಿಯಲ್ಲಿದೆ. ಯಾರೆಲ್ಲಾ ದೊಡ್ಮನೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಶೋ ಶುರುವಾದ್ಮೇಲೆ ಎಲ್ಲದ್ದಕ್ಕೂ ಉತ್ತರ ಸಿಗಲಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    Trending