Connect with us

    LATEST NEWS

    ‘ಗುಜರಾತ್’ನಲ್ಲಿ ಘೋರ ದುರಂತ: ಮೆಹ್ಸಾನಾದಲ್ಲಿ ಗೋಡೆ ಕುಸಿದು 7 ಕಾರ್ಮಿಕರು ದು*ರ್ಮರ*ಣ

    Published

    on

    ನವದೆಹಲಿ: ಗುಜರಾತ್ನ ಮೆಹ್ಸಾನಾದಲ್ಲಿ ಅಪಘಾತದ ಬಂಡೆಯ ಅಡಿಯಲ್ಲಿ ಹೂತುಹೋದ 7 ಕಾರ್ಮಿಕರು ಸಾ*ವನ್ನಪ್ಪಿದ್ದಾರೆ. ಹೂತುಹೋದ ಕೆಲವು ಕಾರ್ಮಿಕರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.

    ಜಸಲ್ಪುರ ಬಳಿಯ ಹಳ್ಳಿಯಲ್ಲಿ ಈ ಅಪಘಾ*ತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಂಪನಿಯಲ್ಲಿ ಗೋಡೆಯನ್ನು ನಿರ್ಮಿಸುವಾಗ, ಬಂಡೆ ಬಿದ್ದು, ಅದರ ಅಡಿಯಲ್ಲಿ ಕಾರ್ಮಿಕರು ಸಮಾಧಿಯಾದರು. ಐದಕ್ಕೂ ಹೆಚ್ಚು ಆಂಬ್ಯುಲೆನ್ಸ್ ಗಳು ಮತ್ತು ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ.

    ಮೆಹ್ಸಾನಾ ಜಿಲ್ಲೆಯ ಕಡಿ ತಾಲ್ಲೂಕಿನ ಜಸಲ್ಪುರ್ ಗ್ರಾಮದ ಬಳಿ ಈ ಅಪಘಾ*ತ ಸಂಭವಿಸಿದ್ದು, ಖಾಸಗಿ ಕಂಪನಿಯ ಗೋಡೆ ಕುಸಿದ ನಂತರ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಆಡಳಿತವು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದೆ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

    Click to comment

    Leave a Reply

    Your email address will not be published. Required fields are marked *

    kerala

    ಬಾವಿಗೆ ಬಿದ್ದ ಕಾರು..! ಪವಾಡ ಸದೃಶ ರೀತಿಯಲ್ಲಿ ದಂಪತಿ ಪಾರು..!

    Published

    on

    ರಾತ್ರಿ ಹೊತ್ತಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬಾವಿಗೆ ಉರುಳಿ ಬಿದ್ದಿದೆ. ನೀರಿದ್ದ ಬಾವಿಗೆ ಬಿದ್ದ ಕಾರು ನೀರಿನಲ್ಲಿ ಮುಳುಗುವ ಮೊದಲೇ ದಂಪತಿ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.  ಕೇರಳ ರಾಜ್ಯದ ಎರ್ನಾಕುಲಂ ಕೊಳಂಚೇರಿಯಲ್ಲಿ ಈ ಘಟನೆ ನಡೆದಿದ್ದು, ಮಳೆಯ ಕಾರಣದಿಂದ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ. ಕೊಟ್ಟಾರಕ್ಕರದಿಂದ ಅಲುವಾ ಕಡೆಗೆ ಬರುತ್ತಿದ್ದ ಕಾರ್ತಿಕ್ ಹಾಗೂ ಅವರ ಪತ್ನಿ ವಿಸ್ಮಯ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಕಾರ್ತಿಕ್ ಕಾರು ಚಲಾಯಿಸುತ್ತಿದ್ದು ಕೊಳಂಚೇರಿ ಸಮೀಪ ರಸ್ತೆ ಸರಿಯಾಗಿ ಕಾಣದೆ ತಿರುವಿನಲ್ಲಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆಗೆ ಕಾರಿನ ಬ್ರೇಕ್‌ ಒತ್ತಿದ್ದರೂ ಆ ವೇಳೆಗಾಗಲೇ ಕಾರು ಬಾವಿಯ ಆವರಣ ಗೋಡೆಗೆ ಡಿಕ್ಕಿ ಹೊಡೆದು ನಿಧಾನವಾಗಿ ಬಾವಿಯೊಳಗೆ ಜಾರಿದೆ. ಕಾರು ನೀರಿನಲ್ಲಿ ಮುಳುತ್ತಿರುವುದನ್ನು ಗಮನಿಸಿದ ದಂಪತಿ ತಕ್ಷಣ ಹಿಂಬದಿ ಡೋರ್ ತೆಗೆದು ಕಾರಿನ ಮೇಲ್ಬಾಗಕ್ಕೆ ಬಂದಿದ್ದಾರೆ. ಈ ವೇಳೆ ಸ್ಥಳೀಯರು ಕೂಡಾ ಆಗಮಿಸಿದ್ದು, ಇಬ್ಬರ ರಕ್ಷಣೆ ಮಾಡಿದ್ದಾರೆ.

    ರಾತ್ರಿ ಸರಿ ಸುಮಾರು 8.45ಕ್ಕೆ ಈ ಅಪಘಾತ ನಡೆದಿದ್ದು, ಸ್ಥಳೀಯರು ಕಾರು ಬಾವಿಗೆ ಬೀಳುವುದನ್ನು ಕಂಡಿದ್ದಾರೆ. ತಕ್ಷಣ ಹಗ್ಗ ಹಾಗೂ ಏಣಿಯ ಸಹಾಯದಿಂದ ಬಾವಿಯಲ್ಲಿದ್ದ ದಂಪತಿಯನ್ನು ಮೇಲಕ್ಕೆ ಕರೆತಂದಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬಾವಿಯಲ್ಲಿದ್ದ ಕಾರನ್ನು ಮೇಲೆತ್ತಿದ್ದಾರೆ

    Continue Reading

    LATEST NEWS

    ಅನೈತಿಕ ಫೋಟೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

    Published

    on

    ಮಂಗಳೂರು/ಕೊಪ್ಪ: ಸಾಮಾಜಿಕ ಜಾಲತಾಣದಲ್ಲಿ ಅನೈತಿಕ ಫೋಟೋಗಳು ವೈರಲ್ ಆಗುತ್ತಿದ್ದ ಅವಮಾನ ತಾಳಲಾರದೆ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

     

    ಏನಿದು ಪ್ರಕರಣ?

    ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೊಪ್ಪ ಕಾಲೇಜೊಂದರ ವಿದ್ಯಾರ್ಥಿನಿ ಕೆಲ ಅನ್ಯಧರ್ಮೀಯ ಯುವಕರ ಜೊತೆ ಕಾಡೊಂದರಲ್ಲಿ ಸಿಕ್ಕಿಬಿದ್ದಳೆಂದು ಫೋಟೋಗಳು ರಾಜ್ಯಾದ್ಯಂತ ದಿಢೀರ್ ವೈರಲ್ ಆಗಿದ್ದವು. ಘಟನೆ ಕುರಿತಂತೆ ಮಾಹಿತಿ ನೀಡಿದ್ದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾಟೆ ವಿಕ್ರಂ ‘ಈ ಘಟನೆ ನಡೆದು ವಾರಗಳು ಕಳೆದಿವೆ. ಸಾಮಾಜಿಕ ಜಾಲತಾಣದಲ್ಲಿ ಹರಡತ್ತಿರುವಂತೆ ಯಾವುದೇ ಘಟನೆ ಸಂಭವಿಸಿರಲಿಲ್ಲ’ ಎಂದಿದ್ದರು.

    ಅಸಲಿ ಕಥೆ ಏನು?

    ಕೊಪ್ಪ ತಾಲ್ಲೂಕಿನ ಕಪಿನ ಎಂಬಲ್ಲಿ 15 ದಿನದ ಹಿಂದೆ ಈ ಘಟನೆ ನಡೆದಿತ್ತು. ಮೂವರು ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಹಾಗೂ ಯುವಕರ ಮೇಲೆ ಸ್ಥಳೀಯ ಸಂಘಟನೆಯವರು ಎನ್ನಲಾದ ಕೆಲವರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದಾದ ಬಳಿಕ ಕಳೆದ ಮೂರು ದಿನಗಳಿಂದ ಆಕೆ ಯುವಕರ ಜೊತೆಗಿರುವ ಫೋಟೋಗಳು ರಾಜ್ಯಾದ್ಯಂತ ವೈರಲ್ ಆಗಿತ್ತು. ಈ ಹಿನ್ನಲೆ ಅವಮಾನ ತಾಳಲಾರದೆ ವಿದ್ಯಾರ್ಥಿನಿ ಕಾಲೇಜು ಆವರಣದಲ್ಲೇ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

    ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಬಳಿಕ ಎಚ್ಚೆತ್ತ ಪೊಲೀಸರು ಇದೀಗ ನೈತಿಕ ಪೊಲೀಸ್ ಗಿರಿ ನಡೆಸಿದವರ ವಿರುದ್ಧ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    Continue Reading

    LATEST NEWS

    ಗೋಕರ್ಣ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕರಿಬ್ಬರ ರಕ್ಷಣೆ

    Published

    on

    ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.

    ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.

    ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ ಲೈಫ್‌ಗಾರ್ಡ್ ಸಿಬ್ಬಂದಿಗೆ ಮಾಹಿತಿ ನೀಡದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending