Connect with us

    LATEST NEWS

    ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ..! ನಾಲ್ವರು ಯೋಧರು ಹುತಾತ್ಮ

    Published

    on

    ಜಮ್ಮು-ಕಾಶ್ಮೀರ: ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸೇರಿದಂತೆ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ದುರಂತ ಸಂಭವಿಸಿದೆ.

    ದೋಡಾದಿಂದ 30 ಕಿಮೀ ದೂರದಲ್ಲಿರುವ ಕೋಟಿ ಗ್ರಾಮದ ಶಿಯಾ ಧಾರ್ ಚೌಂಡ್ ಮಾತಾ ಪ್ರದೇಶದಲ್ಲಿ ಭಯೋತ್ಪಾದಕರ ಬಗ್ಗೆ ಮಾಹಿತಿ ಪಡೆದ ನಂತರ, ಸೇನೆಯು ಪ್ರದೇಶವನ್ನು ಸುತ್ತುವರೆದಿದೆ.

    ಕಳ್ಳರನ್ನು ಹಿಡಿದ 60 ರ ವೃದ್ಧೆ..!

    ದೋಡಾ ಪಟ್ಟಣದಿಂದ 55 ಕಿ.ಮೀ ದೂರದಲ್ಲಿರುವ ದೇಸಾ ಅರಣ್ಯ ವಲಯದ ಧಾರಿ ಗೋಟೆ ಉರರಭಾಗಿಯಲ್ಲಿ ಸುಮಾರು 7.45ರ ಹೊತ್ತಿಗೆ ಎನ್‌ಕೌಂಟರ್‌ ಸಂಭವಿಸಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ರೈಫಲ್ಸ್ ಹಾಗೂ ಕಾಶ್ಮೀರ ಪೊಲೀಸರ ವಿಶೇಷ ತಂಡ ಜಂಟಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದು ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಸುಮಾರು 20 ನಿಮಿಷಗಳ ಕಾಲ ನಡೆದ ಕಾಳಗದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು  ಯೋಧರು ಹುತಾತ್ಮರಾಗಿದ್ದಾರೆ. ಇನ್ನೂ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

     

    LATEST NEWS

    ಸ್ಯಾಂಡಲ್‌ವುಡ್ ನಟಿಯರನ್ನು ಸೌತೆಕಾಯಿಗೆ ಕಾವಲಿಸಿದ ರೈತ; ಆ ಡಿಫರೆಂಟ್ ಐಡಿಯಾ ಯಾವುದು ಗೊತ್ತಾ ??

    Published

    on

    ಮಂಗಳೂರು/ರಾಮನಗರ: ಸೌತೆಕಾಯಿ ಮೇಲೆ ದೃಷ್ಠಿ ಬೀಳದಂತೆ ಚಿನ್ನಪಟ್ಟಣ ತಾಲೂಕಿನ ಗರಕಹಳ್ಳಿನ ರೈತ ಇಡೀ ಸ್ಯಾಂಡಲ್‌ವುಡ್ ನಟಿಯರ ಸುಂದರವಾದ ಭಾವಚಿತ್ರಗಳನ್ನು ಹೊಲದಲ್ಲಿ ಅಳವಡಿಸಿದ್ದಾನೆ. ತನ್ನ ಬೆಳೆ ಕಾಪಾಡಿಕೊಳ್ಳಲು ಈ ದಾರಿಯನ್ನು ಆರಿಸಿದ್ದಾನೆ ಎನ್ನಲಾಗಿದೆ.


    ಸ್ಯಾಂಡಲ್‌ವುಡ್ ನಟಿಯರಾದ ರಮ್ಯ, ರಾಗಿಣಿ ದ್ವಿವೇದಿ, ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಸೋನಾಲ್ ಸೇರಿ ಇನ್ನು ಇಡೀ ಸ್ಯಾಂಡಲ್‌ವುಡ್ ನಟಿಯರ ಭಾವಚಿತ್ರವನ್ನು ಪ್ಲೇಕ್ಸ್ ಮಾದರಿಯಲ್ಲಿ ಹಾಕಿದ್ದ ಈ ಐಡಿಯಾ ಎಲ್ಲರಿಗೂ ಹೊಸತೆನಿಸಿದೆ.
    ಎಲ್ಲಾ ರೈತರು ತಮ್ಮ ತಮ್ಮ ಬೆಳೆಗೆ ದೃಷ್ಠಿ ತಾಕದಂತೆ ಮಾಡಲು ಇಂಥಹದ್ದೇ ಐಡಿಯಾ ಮಾಡಿದರ ಹೇಗಿರುತ್ತೆ ಅಂತ ಚರ್ಚೆ ಶುರು ಮಾಡಿದೆ.
    ಹೊಲದಲ್ಲಿ ನಟಿಮಣಿಯರ ಮುಗುಳುನಗುವ ಸುಂದರ ಫೋಟೋಗಳನ್ನು ಅಳವಡಿಸುವ ಮೂಲಕ ದಾರಿ ಮಧ್ಯೆ ಹೋಗುವವರ ದೃಷ್ಠಿಯನ್ನು ಹಿರೋಯಿನ್‌ಗಳ ಮೇಲೆ ಬೀಳುವಂತೆ ಮಾಡಿ ದೃಷ್ಠಿ ತಾಕದೆ ಇರಲಿ ಎನ್ನುವುದು ಈ ರೈತನ ಐಡಿಯಾ ಎಂದು ಹೇಳಿಕೊಂಡಿದ್ದಾನೆ.

    Continue Reading

    FILM

    ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ಲವ್ಲಿ ವಿಶ್

    Published

    on

    ಕಾಟೇರ, ರಾಬರ್ಟ್ ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ್ದಾರೆ.

    ತರುಣ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ, ಜಗತ್ತಿನ ಅತೀ ಹೆಚ್ಚು ಪ್ರೀತಿಸುವ, ಕಾಳಜಿ ತೋರಿಸುವ, ಕರುಣೆಯ ಮನಸಿರುವ ಗಂಡನಿಗೆ ಹುಟ್ಟುಹಬ್ಬದ ಶುಭಾಶಯಗಳು. ನನ್ನನ್ನು ಪ್ರತಿದಿನ ಪ್ರೇರೆಪಿಸುವ ಹಾಗೂ ನಾನು ಜೊತೆಯಾಗಿ ನಡೆಯಲು ಬಯಸುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು. ಐ ಲವ್‌ ಯೂ ಎಂದು ಸೋನಲ್ ಅವರು ಪತಿಗೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಅದಕ್ಕೆ ತರುಣ್‌ ಕೂಡ ಪ್ರತಿಕ್ರಿಯಿಸಿ, ಥ್ಯಾಂಕ್ಯೂ ಲವ್‌ ಎಂದಿದ್ದಾರೆ.

    ಸದ್ಯ ತರುಣ್ ದಂಪತಿ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ನಟಿ ಭೇಟಿ ನೀಡಿದ್ದಾರೆ. ಅಂದಹಾಗೆ, ಆಗಸ್ಟ್‌ 11ರಂದು ತರುಣ್‌ ಮತ್ತು ಸೋನಲ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

    Continue Reading

    LATEST NEWS

    ದೇವಸ್ಥಾನಗಳಲ್ಲಿ ಚಲನಚಿತ್ರ ಶೂಟಿಂಗ್…ಕೇರಳ ಹೈಕೋರ್ಟ್ ಗರಂ..!

    Published

    on

    ಮಂಗಳೂರು/ಕೇರಳ: ದೇವಸ್ಥಾನಗಳಲ್ಲಿ ಚಲನಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವ ವಿಚಾರವಾಗಿ ಕೇರಳ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇವಾಲಯಗಳು ಪೂಜಾ ಸ್ಥಳವಾಗಿದ್ದು, ಚಲನಚಿತ್ರ ಚಿತ್ರೀಕರಣದ ಸ್ಥಳವಾಗಬಾರದು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತ್ರಿಪ್ಪುಣಿತೂರ ಶ್ರೀ ಪೂರ್ಣತ್ರಯಿಶ ದೇವಸ್ಥಾನದಲ್ಲಿ ಸಿನೆಮಾ ಚಿತ್ರೀಕರಣಕ್ಕೆ ಅನುಮತಿ ನೀಡಿದ ವಿಚಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

    ಹಿಂದೂಯೇತರ ಧರ್ಮಗಳ ಚಿತ್ರೀಕರಣಕ್ಕೆ ದೇವಸ್ಥಾನದ ಆವರಣದ ಒಳಗೆ ಅನುಮತಿ ನೀಡಿದ ವಿಚಾರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಧಾರ್ಮಿಕ ಸ್ಥಳಗಳ ಪಾವಿತ್ರ್ಯತೆ ಕಾಪಾಡುವುದು ಮುಖ್ಯವಾಗಿದ್ದು, ವಾಣಿಜ್ಯ ಕಾರಣದಿಂದ ನಡೆಯುವ ಸಿನೆಮಾ ಚಿತ್ರೀಕರಣದಿಂದ ಕ್ಷೇತ್ರಕ್ಕೆ ಅಗೌರವ ತಂದಂತಾಗುತ್ತದೆ ಎಂದು ವಾದಿಸಲಾಗಿತ್ತು. ಈ ರೀತಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡುವುದರಿಂದ ಭಕ್ತರ ಭಾವನೆಗೂ ಘಾಸಿ ಆಗುತ್ತದೆ. ಉತ್ಸವದ ಸಂದರ್ಭದಲ್ಲಿ ಮಾವುತರು ಮದ್ಯ ಸೇವಿಸುವುದು ಮತ್ತು ಸಂದರ್ಶಕರು ಚಪ್ಪಲಿ ಧರಿಸಿ ದೇವಾಲಯ ಪ್ರವೇಶಿಸುವುದು ಮೊದಲಾದ ಬಗ್ಗೆ ನ್ಯಾಯಾಲಯದ ಗಮನ ಸೆಳೆಯಲಾಗಿತ್ತು.

    ಇದನ್ನೂ ಓದಿ :ಬಿಗ್‌ಬಾಸ್ ಮನೆಯಲ್ಲಿ ನಾವಿನ್ನು ಯಾವ ಆಟ ಆಡಲ್ಲ ಎಂದ ಗೋಲ್ಡ್​​ ಸುರೇಶ್​!
    ಈ ವಿಚಾರವಾಗಿ ಹೈಕೋರ್ಟ್‌, ಕೇರಳ ರಾಜ್ಯ ಸರ್ಕಾರ ಮತ್ತು ಕೊಚ್ಚಿನ್ ದೇವಸ್ವಂ ಬೋರ್ಡ್‌ ನಿಂದ ವಿವರಣೆ ಕೇಳಿದೆ. ದೇವಸ್ಥಾನಗಳಲ್ಲಿ ಧಾರ್ಮೀಕೇತರ ಚಿತ್ರೀಕರಣಕ್ಕೆ ಅವಕಾಶ ನೀಡುವುದರಿಂದ ಹಿಂದೂ ದೇಗುಲಗಳ ನಿಯಮ ಉಲ್ಲಂಘಿಸಿದಂತಾಗುತ್ತದೆ. ಪೂಜೆ ಮತ್ತು ಭಕ್ತಿಯ ಮೌಲ್ಯಗಳನ್ನು ತುಂಬುವ ಜಾಗದಲ್ಲಿ ವ್ಯಾಪಾರೀಕರಣದ ಪ್ರವೃತಿ ಬೆಳೆಯಲು ಅವಕಾಶ ಹೇಗೆ ನೀಡಿದ್ದೀರಿ ಎಂದು ಹೈಕೋರ್ಟ್‌ ಪ್ರಶ್ನೆ ಮಾಡಿದೆ.

    Continue Reading

    LATEST NEWS

    Trending