Connect with us

MANGALORE

ಕರ್ಣಾಟಕ ಬ್ಯಾಂಕಿನ ಹೆಚ್ಚುವರಿ ನಿರ್ದೇಶಕರಾಗಿ ಜೀವನ್‍ದಾಸ್ ಹಾಗೂ ಗುರುರಾಜ ಆಚಾರ್ಯ ನೇಮಕ

Published

on

ಮಂಗಳೂರು: ಕರ್ಣಾಟಕ ಬ್ಯಾಂಕಿನ ಹೆಚ್ಚುವರಿ ನಿರ್ದೇಶಕರಾಗಿ ಜೀವನ್‍ದಾಸ್ ನಾರಾಯಣ್ ಹಾಗೂ ಕಲ್ಮಂಜೆ ಗುರುರಾಜ ಆಚಾರ್ಯ ಅವರನ್ನು ನೇಮಕ ಮಾಡಲಾಗಿದೆ.

ಜೀವನ್‍ದಾಸ್ ನಾರಾಯಣ್

ಕಂಪನಿ ಕಾಯ್ದೆ 2013ರ ಸೆಕ್ಷನ್ 161ರ ಅಡಿಯಲ್ಲಿ ಮಾಡಿರುವ ಈ ನೇಮಕವನ್ನು, ಮಂಗಳವಾರ ನಡೆದ ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ಅನುಮೋದಿಸಲಾಯಿತು.

ಜೀವನ್‍ದಾಸ್ ನಾರಾಯಣ್ ಅವರು ಮೈಸೂರು ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದವರು. 40 ವರ್ಷಗಳ ಸುದೀರ್ಘ ಅನುಭವವನ್ನು ಬ್ಯಾಂಕಿಂಗ್ ರಂಗ ಹಾಗೂ ಹಣಕಾಸು ವಲಯದಲ್ಲಿ ಹೊಂದಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ.

ನಿವೃತ್ತಿಯ ನಂತರ ಅವರು 2017ರಲ್ಲಿ ಅಲ್ಪಾವಧಿಗೆ ‘ಸೋಮಾ ಎಂಟರ್‌ ಪ್ರೈಸಸ್ ಲಿಮಿಟೆಡ್’ನ ಮಂಡಳಿಯಲ್ಲಿ ಎಸ್‍ಬಿಐನ ನಾಮನಿರ್ದೇಶಿತ ನಿರ್ದೇಶಕರಾಗಿದ್ದರು.

2016ರ ಬಿಎಫ್‌ಎಸ್‌ಐ ಸೆಕ್ಟರ್‌ನ ಬಿಟಿ–ಪಿಡ್ಲ್ಯುಸಿಯಿಂದ ಮಾನ್ಯತೆಗೊಂಡ ಭಾರತದ 40 ಶ್ರೇಷ್ಠ ಸಿಇಒಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಮಂಗಳೂರಿನ ಪ್ರಮುಖ ಮ್ಯಾನೇಜ್‍ಮೆಂಟ್ ಇನ್‌ಸ್ಟಿಟ್ಯೂಟ್ ಎಂಎಸ್‌ಎನ್‌ಐಎಂನ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಅದರ ಕರೆಸ್ಪಾಂಡೆಂಟ್ ಆಗಿ ನಾಮನಿರ್ದೇಶನಗೊಂಡಿದ್ದಾರೆ.

ಆಡಳಿತ ಮಂಡಳಿಯ ಸದಸ್ಯ ಹಾಗೂ ಕರೆಸ್ಪಾಂಡೆಂಟ್ ಈ ಎರಡೂ ಸ್ಥಾನಗಳಿಗೆ ವೇತನರಹಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಲ್ಮಂಜೆ ಗುರುರಾಜ ಆಚಾರ್ಯ ಅವರು ಬೆಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, 30 ವರ್ಷಗಳ ಅನುಭವ ಹೊಂದಿದ್ದಾರೆ. ಬಿಕಾಂ, ಸಿಎಂಎ, ಸಿಎ ಪರೀಕ್ಷೆಯಲ್ಲಿ ಉನ್ನತ ರ್‍ಯಾಂಕ್ ಪಡೆದಿದ್ದಾರೆ.

ಪ್ರಸ್ತುತ ‘ಕೆ.ಜಿ ಆಚಾರ್ಯ ಆಂಡ್ ಕೋ’ ಸಂಸ್ಥೆಯ ಮುಖ್ಯ ಪಾಲುದಾರರಾಗಿದ್ದಾರೆ ಹಾಗೂ ‘ಬೆಂಗಳೂರು- ಫೈನಾನ್ಶಿಯಲ್ ರಿಪೋರ್ಟಿಂಗ್ ರಿವ್ಯೂ ಗ್ರೂಪ್’ ಸದಸ್ಯರಾಗಿದ್ದಾರೆ.

ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್‌ನ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದರು ಮತ್ತು ಲೆಕ್ಕ ಪರಿಶೋಧನಾ ಸಮಿತಿಯ ಅಧ್ಯಕ್ಷರೂ ಆಗಿದ್ದರು.

ರಿಸ್ಕ್ ಮ್ಯಾನೇಜ್ಮೆಂಟ್ ಕಮಿಟಿ, ನಾಮಿನೇಷನ್ ಕಮಿಟಿ, ರೆಮ್ಯುನರೇಷನ್ ಕಮಿಟಿ ಹಾಗೂ ಹೈವ್ಯಾಲ್ಯು ಫ್ರಾಡ್ ಕಮಿಟಿ ಗಳಲ್ಲಿ ಆಡಳಿತ ಮಂಡಳಿಯ ಸದಸ್ಯರಾಗಿದ್ದರು.

ಐಸಿಎಐ ನವದೆಹಲಿಯ ತಜ್ಞರ ಸಲಹಾ ಸಮಿತಿಯ ಸದಸ್ಯರೂ ಆಗಿದ್ದರು ಎಂದು ಕರ್ಣಾಟಕ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ದೇವದಾಸ್ ಉಡುಪ ತಿಳಿಸಿದ್ದಾರೆ.

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending