DAKSHINA KANNADA
ಹಳೆಯಂಗಡಿ ಗ್ರಾಮ ಪಂಚಾಯತ್ ಚುನಾವಣೆ: ಕಾಂಗ್ರೆಸ್- ಬಿಜೆಪಿ ಹೊಯ್ಕೈ- ಸ್ಥಳದಲ್ಲಿ ಉದ್ವಿಗ್ನ ವಾತಾವರಣ..!
ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು.
ಮಂಗಳೂರು : ಮೂಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡುವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಗೊಂದಲದ ಗೂಡಾಗಿ ಪರಿಣಮಿಸಿದೆ.
ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು.
ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್ ಗಳಿದ್ದು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು 11 ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು 11 ಮಂದಿ ಆಯ್ಕೆಯಾಗಿದ್ದರು.
ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲ ದಿಂದ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರ ಪಟ್ಟ ಒಲಿದು ಬಂದಿತ್ತು.
ಬಿಜೆಪಿ ಬೆಂಬಲಿತರ ಎರಡೂವರೆ ವರ್ಷಗಳ ಅಧಿಕಾರದ ಬಳಿಕ ಈ ಬಾರಿ ಬದಲಾದ ವಿದ್ಯಮಾನಗಳಲ್ಲಿ ಬಿಜೆಪಿ ಬೆಂಬಲಿತ ಓರ್ವ ಸದಸ್ಯೆ ಕಾಂಗ್ರೆಸ್ ಬೆಂಬಲಿತ ಸದಸ್ಯರ ಜೊತೆ ಗುರುತಿಸಿಕೊಂಡಿದ್ದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನೊಬ್ಬರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು.
ಬದಲಾದ ವಿದ್ಯಾಮಾನದಲ್ಲಿಯೂ ಸಮಬಲವಾಗಿದ್ದು ಮಾತ್ರವಲ್ಲದೆ, ಕಾಂಗ್ರೇಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಭ್ರಷ್ಟಾಚಾರ ಆರೋಪದ ಕಾರಣ ಅವರ ಸದಸ್ಯ ರದ್ದಾಗಿತ್ತು,
ಕೋರ್ಟ್ ತೀರ್ಪಿನ ಪ್ರಕಾರ ಆ ಮಹಿಳೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ಕಾರ್ಯಕರ್ತರ ವಾದವಾದವಾದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೇಸ್ ಕಾರ್ಯಕರ್ತರ ವಾದವಾಗಿತ್ತು.
ಈ ಕಾರಣದಿಂದ ಚುನಾವಣೆ ನಡೆಯದೆ ಸ್ಥಳದಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿ ಸದಸ್ಯರು ಜಮಾಯಿಸಿ ಮಾತಿಗೆ ಮಾತು ಬೆಳೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು,
ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.
ಮದ್ಯಾಹ್ನ 12 ಗಂಟೆಗೆ ಚುನಾವಣಾ ಪ್ರಕ್ರಿಯೆ ನಡೆದು 1.00 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆಯಲ್ಲಿಲ್ಲ.
ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಮಾಹಿತಿ ಪಡೆದು ಕಾಂಗ್ರೇಸ್ ಬೆಂಬಲಿತ ಮಹಿಳಾ ಸದಸ್ಯರನ್ನು ಹೊರಗಿಟ್ಟು, ಚುನಾವಣಾ ಪ್ರಕ್ರಿಯೆ ನಡೆಸಿದರು.
ಈ ಸಂದರ್ಭ ಬಿಜೆಪಿ ಬೆಂಬಲಿತ ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿ ಬೆಂಬಲಿತರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ ಕಾಂಗ್ರೇಸ್ ಬೆಂಬಲಿತರು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು.
ಮದ್ಯಾಹ್ನದಿಂದಲ್ಲೇ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಿಥುನ್ ರೈ ಸ್ಥಳದಲ್ಲಿ ಇದ್ದರು.
ಈ ಮಧ್ಯೆ ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿ ಪರಿಸ್ಥಿಯನ್ನು ಹತೋಟಿಗೆ ತಂದರು.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್ಸೆಪ್ಟರ್ ಬೋಟ್ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್ಗಾರ್ಡ್ ತಿಳಿಸಿದೆ.
BELTHANGADY
ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.
ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.
ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
DAKSHINA KANNADA
ಜಾನುವಾರು ಸಾಗಾಟಗಾರರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ..!
ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ ಅಮೆಮಾರ್ನ ನಿವಾಸಿಗಳು ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಗುರುವಾರದಂದು ತಸ್ಲೀಮ್ ಮತ್ತು ಆತನ ಗುಂಪಿನ ಸದಸ್ಯರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ತಲವಾರಿನೊಂದಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.
ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.