Connect with us

    LATEST NEWS

    ಮಲ್ಪೆಯಿಂದ ತೀರ್ಥಹಳ್ಳಿ ಸಂಪರ್ಕಿಸುವ ಅರೆಬರೆ ರಸ್ತೆ ಕಾಮಗಾರಿ..! ಸಾರ್ವಜನಿಕರ ಆಗ್ರಹ

    Published

    on

    ಉಡುಪಿ: ಮಲ್ಪೆಯಿಂದ ತೀರ್ಥಹಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಚುನಾವಣೆ ಸಂದರ್ಭದಲ್ಲಿ ವೇಗ ಪಡೆದಿತ್ತು. ಚುನಾವಣೆ ಮುಗಿದ ನಂತರ ಮತ್ತೆ ಆಮೆ ಗತಿಯಲ್ಲಿ ಸಾಗುತ್ತಿದೆ. ಉಡುಪಿಯ ಆದಿ ಉಡುಪಿ ಪರಿಸರದಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಭಾಗದಿಂದ ಓಡಾಟ ಮಾಡುವ ಸಾವಿರಾರು ವಾಹನಗಳು, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ.

    Read More..; ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ‘ದಿ ಪುಷ್ಪ-2’..!

    ಧೂಳಿನಿಂದಾಗಿ ಬೈಕ್ ಸವಾರರು ಈ ಭಾಗದಲ್ಲಿ ಓಡಾಟ ಮಾಡಲು ಸಾಧ್ಯವಾಗುತ್ತಿಲ್ಲ. ಹೊರ ಜಿಲ್ಲೆಯಿಂದ ಮಲ್ಪೆ ಬಂದರಿಗೆ ಆಗಮಿಸುವ ಮೀನಿನ ವಾಹನಗಳು, ಈ ಭಾಗದಲ್ಲಿ ಓಡಾಟ ಮಾಡುವ ಬಸ್ಸುಗಳು ಮತ್ತು ದಿನನಿತ್ಯ ಈ ಭಾಗಕ್ಕೆ ಆಗಮಿಸುವ ಪ್ರವಾಸಿಗರ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ವಾಹನ ಸವಾರರು ಇಡೀ ದಿನ ಶಾಪ ಹಾಕುತ್ತಿದ್ದಾರೆ. ಕೂಡಲೇ ಈ ರಸ್ತೆಯ ಅಗಲೀಕರಣ ಕಾಮಗಾರಿ ಮುಗಿಸಬೇಕಿದ್ದು ಸಂಬಂಧಪಟ್ಟ ಸಂಸದರು, ಶಾಸಕರು ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಜಿಲ್ಲೆಯಲ್ಲಿ ರೆಡ್ ಅಲರ್ಟ್‌..! ಜೂನ್ 27 ಶಾಲೆಗೆ ರಜೆ ಘೋಷಣೆ..!

    Published

    on

    ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

    ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ  0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.

    Continue Reading

    LATEST NEWS

    500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್‌..!

    Published

    on

    ಮಂಗಳೂರು ( ಮುಂಬೈ ) : ದೇಶದಲ್ಲಿ ಹೆಸರು ಮಾಡಿರುವ ಖಾಸಗಿ ಬ್ಯಾಂಕ್ ಆಗಿರುವ Yes ಬ್ಯಾಂಕ್ ತನ್ನ 500 ನೌಕರರಿಗೆ ಮೂರು ತಿಂಗಳ ಸಮಾನ ವೇತನ ನೀಡಿ ಹೊರ ಹಾಕಿದೆ. ಬ್ಯುಸಿನೆಸ್ ಟುಡೆ ವರದಿ ಪ್ರಕಾರ ಯೆಸ್ ಬ್ಯಾಂಕ್‌ ಇನ್ನೂ ಅನೇಕ ನೌಕರರ ಲಿಸ್ಟ್‌ ತಯಾರಿಸಿದ್ದು, ಮುಂದಿನ ದಿನದಲ್ಲಿ ಅವರನ್ನೂ ವಜಾಗೊಳಿಸುವ ಸಾದ್ಯತೆ ಇದೆ ಎಂದು ಹೇಳಿದೆ. ಬಹುತೇಕ ಎಲ್ಲಾ ವಿಭಾಗದ ನೌಕರರು ಈ ಪಟ್ಟಿಯಲ್ಲಿ ಒಳಗೊಂಡಿದ್ದು, ನೌಕರರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.

    ಡಿಜಿಟಲೀಕರಣದಿಂದ ಕಾಸ್ಟ್‌ ಕಟ್ಟಿಂಗ್‌ ..!

    Yes ಬ್ಯಾಂಕ್‌ ಡಿಜಿಟಲೀಕರಣದೊಂದಿಗೆ ಗ್ರಾಹಕರ ಜೊತೆ ನೇರ ಸಂಪರ್ಕ ಮಾಡುತ್ತಿದ್ದು, ನಡುವಿನಲ್ಲಿ ಅನಗತ್ಯ ನೌಕರರ ಅಗತ್ಯ ಇಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿ ಹೇಳಿದೆ. ಬ್ಯಾಂಕ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಬ್ಯಾಂಕ್‌ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗಲಿದೆ. ಬ್ಯಾಂಕ್ ವೇಗವಾಗಿ ಡಿಜಿಟಲೀಕರಣವಾಗುತ್ತಿರುವುದರಿಂದ ನೌಕರರ ಅಗತ್ಯವೂ ಕಡಿಮೆಯಾಗುತ್ತಿರುವುದಾಗಿ ಬ್ಯಾಂಕ್ ಮೂಲಗಳು ತಿಳಿಸಿದೆ. 2023 -24 ರಲ್ಲಿ Yes ಬ್ಯಾಂಕ್ ನೌಕರರಿಗೆ ನೀಡಿದ ಸ್ಯಾಲರಿ ಹಾಗೂ ಭತ್ತೆಗಳು ರೂ.3363 ಕೋಟಿಯಿಂದ ರೂ.3774 ಕೋಟಿಗಳಿಗೆ ಏರಿಕೆಯಾಗಿದೆ. ಇದೀಗ ಅನಗತ್ಯ ನೌಕರರ ವಜಾದಿಂದ ಈ ಏರಿಕೆಯನ್ನು ತಡೆಯಲು ಬ್ಯಾಂಕ್ ಮುಂದಾಗಿದೆ.

    Yes ಬ್ಯಾಂಕ್‌ನ ಈ ನಿರ್ಧಾರ ಕೇವಲ ನೌಕರರ ಮೇಲೆ ಮಾತ್ರವಲ್ಲದೆ ಶೇರ್ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿದ್ದು Yes ಬ್ಯಾಂಕ್ ಶೇರು ಬೆಲೆ ಕುಸಿತವಾಗಿದೆ. ಮಂಗಳವಾರ 24.02 ರೂಗಳಲ್ಲಿ ಅಂತ್ಯವಾಗಿದ್ದ Yes ಬ್ಯಾಂಕ್ ಶೇರ್ ಬುಧವಾರ ನೌಕರರನ್ನು ವಜಾಗೊಳಿಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ 23.90 ರೂಪಾಯಿಗೆ ಕುಸಿತವಾಗಿದೆ.

    Continue Reading

    LATEST NEWS

    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

    Published

    on

    ಬೆಂಗಳೂರು : ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂ*ಗಿಕ ದೌ*ರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಬುಧವಾರ (ಜೂನ್ 26) ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದೆ.


    ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶ ಕಾಯ್ದಿರಿಸಿತ್ತು. ಆದರೆ, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನಿಗಾಗಿ ಪ್ರಜ್ವಲ್​ ಹೈಕೋರ್ಟ್​ ಮೆಟ್ಟಿಲೇರಬೇಕಿದೆ.

    ಇದನ್ನೂ ಓದಿ : ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?

    ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರ ವರೆಗೂ ಎಸ್​ಐಟಿ ಕಸ್ಟಡಿಗೆ ನೀಡಿದೆ.

    Continue Reading

    LATEST NEWS

    Trending