HomeFILMನಟ ಪುನೀತ್‌ ಸಮಾಧಿಗೆ ಇಂದು ಬೆಳಿಗ್ಗೆ ಹಾಲು ತುಪ್ಪ ಕಾರ್ಯ

ನಟ ಪುನೀತ್‌ ಸಮಾಧಿಗೆ ಇಂದು ಬೆಳಿಗ್ಗೆ ಹಾಲು ತುಪ್ಪ ಕಾರ್ಯ

ಬೆಂಗಳೂರು: ಇತ್ತೀಚೆಗೆ ನಿಧನರಾಗಿರುವ ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಿಗ್ಗೆ ಹಾಲು ತುಪ್ಪ ಅರ್ಪಿಸುವ ಕಾರ್ಯಕ್ರಮ ನೆರವೇರಿತು.


ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿದ್ದು, ಕುಟುಂಬದ‌ ಸಂಪ್ರದಾಯದ ಪ್ರಕಾರ ಇಂದು ಬೆಳಿಗ್ಗೆ ಶಾಸ್ತ್ರೋಕ್ತವಾಗಿ ಸಮಾಧಿಗೆ ಹಾಲು ತುಪ್ಪ ಸಮರ್ಪಿಸಲಾಯಿತು.
ಸಹೋದರರಾದ ಶಿವರಾಜ್‌ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ, ಇಬ್ಬರು ಪುತ್ರಿಯರು, ಕುಟುಂಬ ವರ್ಗ ಸೇರಿದಂತೆ ಆಪ್ತ ಬಳಗ ಭಾಗಿಯಾಗಿತ್ತು.

ಇಂದು ಹಾಲು-ತುಪ್ಪ ಕಾರ್ಯದ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸ್ಟುಡಿಯೋ ಮುಂದೆ ಜಮಾಯಿಸುತ್ತಿದ್ದು, ಆದರೆ ಪೊಲೀಸರು ವಾಪಸ್ಸು ಕಳುಹಿಸುತ್ತಿದ್ದಾರೆ.

ಸ್ಟುಡಿಯೋದ ಸುತ್ತಮುತ್ತ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಭದ್ರತೆಗಾಗಿ ಸ್ಥಳೀಯ ಪೊಲೀಸರು, ಕೆಎಸ್​ಆರ್​ಪಿ ತುಕಡಿ, ಆರ್​ಎಎಫ್ ಪೊಲೀಸರನ್ನು ನಿಯೋಜಿಸಲಾಗಿದೆ.

ಅಪ್ಪು ಸಮಾಧಿ ಮೇಲೆ ಮಣ್ಣಿನ ಹಣತೆ ಹಚ್ಚಿ ಬಾಳೆ ಎಲೆಯಲ್ಲಿ ಅಪ್ಪುಗೆ ಇಷ್ಟವಾದ ಆಹಾರಗಳನ್ನು ಇಡಲಾಗಿತ್ತು. ಮುದ್ದೆ, ನಾಟಿ, ಕೋಳಿ, ಸಾರು, ಬಿರಿಯಾನಿ, ಕಬಾಬು, ಇಡ್ಲಿ, ಕಡ್ಲೆಕಾಳು, ಗೊಜ್ಜು, ಮೊಟ್ಟೆ, ಬಿರಿಯಾನಿ, ಬಜ್ಜಿ ಇನ್ನಿತರೆ ತಿನಿಸುಗಳು ಹಾಗೂ ಕೆಲವು ಮಾದರಿಯ ಸಿಹಿ ತಿನಿಸುಗಳನ್ನು ಕುಟುಂಬಸ್ಥರು ಮಾಡಿಕೊಂಡು ಬಂದಿದ್ದರು, ಬಾಳೆ ಎಲೆಯಲ್ಲಿ ನೈವೇದ್ಯ ಇಟ್ಟರು.

ಪುನೀತ್ ಅವರು ನಿಧನವಾದ ದಿನದಿಂದ ಅಂತ್ಯಕ್ರಿಯೆ ಮುಗಿಯುವವರೆಗೂ ಮೂರು ದಿನಗಳ ಕಾಲ ಸ್ಥಳದಲ್ಲಿಯೇ ಇದ್ದು ನಿರ್ವಹಣೆ ಮಾಡಿದ್ದ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...