DAKSHINA KANNADA
ಕೈಕಂಬ : ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾ*ವು
ಕೈಕಂಬ : ಕುಪ್ಪೆಪದವು ಫಾಸ್ಟ್ಫುಡ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಅಶೊಕ್ (33) ಹೃ*ದಯಘಾತದಿಂದ ಕುಸಿದು ಬಿದ್ದು ಮೃ*ತಪಟ್ಟ ಘಟನೆ ಶನಿವಾರ(ಅ. 12) ಸಂಭವಿಸಿದೆ.
ಪುತ್ತೂರು ತಾಲೂಕಿನ ಕರಾಯ ಮರಿಪಾಡಿ ನಿವಾಸಿ ಅಶೋಕ್, ಸಹೋದರ ಸಂಬಂಧಿ ಗಿರೀಶ್ ನಡೆಸುತ್ತಿರುವ ಫಾಸ್ಟ್ಫುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಬೆಳಿಗ್ಗೆ ಎಂದಿನಂತೆ ಕೆಲಸ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದರೂ, ಗಂಭೀರವಾಗಿ ಪರಿಗಣಿಸಿರಲಿಲ್ಲ.
ಮಧ್ಯಾಹ್ನ ವೇಳೆ ಹೋಟೇಲ್ನಲ್ಲಿ ಕುಸಿದು ಬಿದ್ದರು. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾದರೂ , ವೈಧ್ಯರ ಸಲಹೆಯಂತೆ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ದುರಾದೃಷ್ಟವಶಾತ್ ದಾರಿ ಮಧ್ಯೆ ಅಶೋಕ್ ಕೊನೆ*ಯುಸಿರೆಳೆದರು. ಮೃ*ತರು ಪತ್ನಿ ಹಾಗೂ ಒಂದು ವರ್ಷದ ಮಗುವನ್ನು ಅಗಲಿದ್ದಾರೆ.
ಬಜಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭವಿಕ ಸಾ*ವಿನ ಪ್ರಕರಣ ದಾಖಲಾಗಿದೆ.
DAKSHINA KANNADA
ಕರಾವಳಿ ಭಾಗಗಳಿಗೆ ಇಂದಿನಿಂದ 3 ದಿನ ಹೈ ಅಲರ್ಟ್ : ಮೀನುಗಾರರಿಗೆ ಎಚ್ಚರಿಕೆ…!
ಮಂಗಳೂರು: ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.16 ರಿಂದ 19 ರ ವರೆಗೆ ವಾಯುಭಾರ ಕುಸಿತವಾಗಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಳವಾಗುವ ಸಾಧ್ಯತೆಯಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ತುಸು ಕಾಲ ಸುಮ್ಮನಿದ್ದ ವರುಣ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಸತತ 18 ತಾಸು ಸುರಿದ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿದೆ. ರಸ್ತೆಗಳು ನದಿಯಂತಾಗಿದೆ. ಉಷ್ಣಾಂಶ 6 ಡಿಗ್ರಿ ಕುಸಿತ ಕಂಡಿದೆ. ಮನೆಗಳಿಗೆ ನೀರು ನುಗ್ಗಿದೆ.
ಇನ್ನೊಂದು ಕಡೆಯಲ್ಲಿ ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ವಾಯುಭಾರ ಕುಸಿತದಿಂದ ಮಳೆ ಹೆಚ್ಚಳವಿದೆ ಎನ್ನುವ ಮಾಹಿತಿ ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ನೀರು ಮತ್ತು ತಗ್ಗು ಪ್ರದೇಶದಲ್ಲಿ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಮಂಗಳವಾರ (ಅ.16) ನಗರದ ಕೆಲವು ಭಾಗದಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದ್ದು, ನಿರಂತರವಾಗಿ ಜಿಲ್ಲೆಯ ನಾನಾ ಭಾಗದಲ್ಲಿ ತುಂತುರು ಮಳೆ ದಿನವಿಡೀ ಕಾಣಿಸಿಕೊಂಡಿದೆ.
ಗುರುವಾರ (ಅ.17) ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೊಅಲರ್ಟ್ ನೀಡಲಾಗಿದೆ.
DAKSHINA KANNADA
ಮಾಡೂರು : ಮರಕ್ಕೆ ಸ್ಕೂಟರ್ ಡಿ*ಕ್ಕಿ; ಸವಾರ ಸಾ*ವು
ಮಾಡೂರು : ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿ*ಕ್ಕಿ ಹೊಡೆದು ಮೃ*ತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ(ಅ.16) ಸಂಭವಿಸಿದೆ. ಮಾಡೂರು ನಿವಾಸಿ ನಾಗೇಶ್(51) ಮೃತರು.
ಮೃ*ತರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ : WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್
ಬೆಳ್ತಂಗಡಿ : ಗುರುವಾಯನ ಕೆರೆಯ ಬಳಿ ಇರುವ ಶೆಣೈ ಹೊಟೇಲ್ ಮುಂಭಾಗದಲ್ಲಿ ಎರಡು ಬೈಕ್ ನಡುವೆ ಅಪಘಾ*ತ ಸಂಭವಿಸಿದೆ. ಓವರ್ ಟೇಕ್ ಮಾಡಲು ಹೋಗಿ ಈ ದುರಂ*ತ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಾ*ಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾ*ತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
- FILM4 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- FILM5 days ago
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ
- DAKSHINA KANNADA5 days ago
ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
- BIG BOSS3 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು