BANTWAL
ಕ್ರೈಸ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ: ಬಂಟ್ವಾಳದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಸಮುದಾಯ
ಮಂಗಳೂರು: ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು.
ಬಂಟ್ವಾಳ ಹಾಗೂ ಮೊಗರ್ನಾಡ್ ವಲಯದ ವತಿಯಿಂದ ಬಂಟ್ವಾಳದ ಬಿ.ಸಿರೋಡ್ನ ಬೈಪಾಸ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಂಗಳೂರು ಕಥೋಲಿಕ್ ಸಭಾದ ಕೇಂದ್ರೀಯ ಸಮಿತಿ ಅಧ್ಯಕ್ಷ ಸ್ಟ್ಯಾನ್ಲಿ ಲೋಬೋ ಮಾತನಾಡಿ, ಪಂಜಿಮೊಗರು ಪ್ರಾರ್ಥನಾ ಮಂದಿರಕ್ಕೆ ಡಿಸಿ ಹಾಗೂ ಕೋರ್ಟ್ನಿಂದ ಸ್ಟೇ ಆರ್ಡರ್ ಇದ್ದರೂ ಹಗಲಿನಲ್ಲೇ ಕೆಡವಿದ್ದಾರೆ. ಈ ಬಗ್ಗೆ ದೂರು ನೀಡಿದಾಗ ಪೊಲೀಸರು ದೂರು ಸ್ವೀಕರಿಸಿಲ್ಲ.
ನಂತರ ಪೊಲೀಸ್ ಕಮೀಷನರ್ಗೆ ಪೋನ್ ಮುಖಾಂತರ ಹೇಳಿದಾಗ ಪೊಲೀಸರು ಸ್ಥಳಕ್ಕೆ ಬಂದರು.
ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾದರರೂ ಬೇರೆಯದ್ದೇ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದರು. ಅದನ್ನು ಅಂಗನವಾಡಿ ಕಟ್ಟಡ ಎಂದು ಹೇಳುತ್ತಿದ್ದಾರೆ.
ಅಲ್ಲಿ 42 ವರ್ಷದಿಂದ ಅಲ್ಲಿ ಪ್ರಾರ್ಥನಾ ಮಂದಿರದ ಕಟ್ಟಡ ಇದೆ. ಅಲ್ಲಿ ಬೆರಳು ಕೊಟ್ಟಿದ್ದಕ್ಕೆ ಕೈಯನ್ನೇ ನುಂಗಿದ್ದಾರೆ ಎಂದ ಅವರು 2021ರ ಸರ್ಕಾರದ ಕಾನೂನಿನಲ್ಲಿ ಪ್ರಾರ್ಥನಾ ಮಂದಿರದಲ್ಲಿ ಕೆಡವಲು ಅವಕಾಶವಿಲ್ಲ.
ಹಾಗಾದರೆ ಅದನ್ನು ಕೆಡವಿದರೆ ಯಾರು? ನಾವು ಈ ಬಗ್ಗೆ ಪ್ರತಿಭಟನೆ ನಡೆಸಿದೆವು. ಪ್ರತಿಭಟನೆಯ ನಂತರ ಇಬ್ಬರನ್ನು ಬಂಧಿಸಿದರು.
ಅವರು ಮಾವನ ಮನೆಗೆ ಬಂದು ಹೋದ ಹಾಗೆ ಎರಡೇ ದಿನದಲ್ಲಿ ಬಂದು ಹೋಗಿದ್ದಾರೆ. ನಾವು ಕೊಟ್ಟ ದೂರಿಗೆ ಎಫ್ಐಆರ್ ದಾಖಲಿಸಿಲ್ಲ.
ತದನಂತರ ಎಫ್ಐಆರ್ ಮಾಡಿದ್ದಾರೆ. ಮುಂದಿನ ದಿವಸಗಳಲ್ಲಿ ಈ ಬಗ್ಗೆ ಉಗ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದರು. ಪ್ರತಿಭಟನೆಯಲ್ಲಿ ರಾಯ್ ಕ್ಯಾಸ್ತಲಿನೋ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರತಿಭಟನೆಯ ನಂತರ ಕ್ರೈಸ್ತ ಮುಖಂಡರು ಬಂಟ್ವಾಳ ತಹಶೀಲ್ದಾರ್ ರಶ್ಮಿ ಅವರ ಕಚೇರಿಗೆ ಭೇಟಿ ನೀಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅದೇ ರೀತಿ ಮಂಗಳೂರು ಧರ್ಮಪ್ರಾಂತ್ಯದ ದಕ್ಷಿಣ ವಲಯದ ವತಿಯಿಂದ ಮಾನವ ಸರಪಳಿ ಹಾಗೂ ಕ್ಯಾಂಡಲ್ ಪ್ರತಿಭಟನೆ ನಡೆಯಿತು.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.