HomeBANTWALಕ್ರೈಸ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ: ಬಂಟ್ವಾಳದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಸಮುದಾಯ

ಕ್ರೈಸ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ: ಬಂಟ್ವಾಳದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಸಮುದಾಯ

ಮಂಗಳೂರು: ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್‌ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು.


ಬಂಟ್ವಾಳ ಹಾಗೂ ಮೊಗರ್ನಾಡ್‌ ವಲಯದ ವತಿಯಿಂದ ಬಂಟ್ವಾಳದ ಬಿ.ಸಿರೋಡ್‌ನ ಬೈಪಾಸ್‌ ಸರ್ಕಲ್‌ ಬಳಿ ನಡೆದ ಪ್ರತಿಭಟನೆಯಲ್ಲಿ ಮಂಗಳೂರು ಕಥೋಲಿಕ್‌ ಸಭಾದ ಕೇಂದ್ರೀಯ ಸಮಿತಿ ಅಧ್ಯಕ್ಷ ಸ್ಟ್ಯಾನ್ಲಿ ಲೋಬೋ ಮಾತನಾಡಿ, ಪಂಜಿಮೊಗರು ಪ್ರಾರ್ಥನಾ ಮಂದಿರಕ್ಕೆ ಡಿಸಿ ಹಾಗೂ ಕೋರ್ಟ್‌ನಿಂದ ಸ್ಟೇ ಆರ್ಡರ್‌ ಇದ್ದರೂ ಹಗಲಿನಲ್ಲೇ ಕೆಡವಿದ್ದಾರೆ. ಈ ಬಗ್ಗೆ ದೂರು ನೀಡಿದಾಗ ಪೊಲೀಸರು ದೂರು ಸ್ವೀಕರಿಸಿಲ್ಲ.

ನಂತರ ಪೊಲೀಸ್‌ ಕಮೀಷನರ್‌ಗೆ ಪೋನ್‌ ಮುಖಾಂತರ ಹೇಳಿದಾಗ ಪೊಲೀಸರು ಸ್ಥಳಕ್ಕೆ ಬಂದರು.

ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾದರರೂ ಬೇರೆಯದ್ದೇ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದರು. ಅದನ್ನು ಅಂಗನವಾಡಿ ಕಟ್ಟಡ ಎಂದು ಹೇಳುತ್ತಿದ್ದಾರೆ.

ಅಲ್ಲಿ 42 ವರ್ಷದಿಂದ ಅಲ್ಲಿ ಪ್ರಾರ್ಥನಾ ಮಂದಿರದ ಕಟ್ಟಡ ಇದೆ. ಅಲ್ಲಿ ಬೆರಳು ಕೊಟ್ಟಿದ್ದಕ್ಕೆ ಕೈಯನ್ನೇ ನುಂಗಿದ್ದಾರೆ ಎಂದ ಅವರು 2021ರ ಸರ್ಕಾರದ ಕಾನೂನಿನಲ್ಲಿ ಪ್ರಾರ್ಥನಾ ಮಂದಿರದಲ್ಲಿ ಕೆಡವಲು ಅವಕಾಶವಿಲ್ಲ.

ಹಾಗಾದರೆ ಅದನ್ನು ಕೆಡವಿದರೆ ಯಾರು? ನಾವು ಈ ಬಗ್ಗೆ ಪ್ರತಿಭಟನೆ ನಡೆಸಿದೆವು. ಪ್ರತಿಭಟನೆಯ ನಂತರ ಇಬ್ಬರನ್ನು ಬಂಧಿಸಿದರು.

ಅವರು ಮಾವನ ಮನೆಗೆ ಬಂದು ಹೋದ ಹಾಗೆ ಎರಡೇ ದಿನದಲ್ಲಿ ಬಂದು ಹೋಗಿದ್ದಾರೆ. ನಾವು ಕೊಟ್ಟ ದೂರಿಗೆ ಎಫ್‌ಐಆರ್‌ ದಾಖಲಿಸಿಲ್ಲ.

ತದನಂತರ ಎಫ್‌ಐಆರ್‌ ಮಾಡಿದ್ದಾರೆ. ಮುಂದಿನ ದಿವಸಗಳಲ್ಲಿ ಈ ಬಗ್ಗೆ ಉಗ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದರು. ಪ್ರತಿಭಟನೆಯಲ್ಲಿ ರಾಯ್‌ ಕ್ಯಾಸ್ತಲಿನೋ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರತಿಭಟನೆಯ ನಂತರ ಕ್ರೈಸ್ತ ಮುಖಂಡರು ಬಂಟ್ವಾಳ ತಹಶೀಲ್ದಾರ್‌ ರಶ್ಮಿ ಅವರ ಕಚೇರಿಗೆ ಭೇಟಿ ನೀಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅದೇ ರೀತಿ ಮಂಗಳೂರು ಧರ್ಮಪ್ರಾಂತ್ಯದ ದಕ್ಷಿಣ ವಲಯದ ವತಿಯಿಂದ ಮಾನವ ಸರಪಳಿ ಹಾಗೂ ಕ್ಯಾಂಡಲ್‌ ಪ್ರತಿಭಟನೆ ನಡೆಯಿತು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...