Connect with us

LATEST NEWS

ಕೈಮುಗಿದು ಗೋಗರೆದರೂ ಪತ್ನಿಗೆ ಸುಡುತ್ತಿರುವ ಸಿಗೇರೇಟಿನಿಂದ ಸುಟ್ಟು ಹಿಂಸೆ: ಕುಂದಾಪುರದಲ್ಲಿ ಅಮಾನವೀಯ ಘಟನೆ

Published

on

ಕುಂದಾಪುರ: ಕೈಮುಗಿಯುತ್ತೇನೆ ಬೇಡ ಬೇಡ ಎಂದು ಗೋಗರೆಯುತ್ತಿದ್ದರೂ ಪತ್ನಿಗೆ ಸುಡುತ್ತಿರುವ ಸಿಗರೇಟಿನಿಂದ ಮುಖಕ್ಕೆ ತಾಗಿಸಿ ಸುಟ್ಟು ಹಿಂಸಿಸಿದ ಹೀನಾಯ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಿಗರೇಟಿನಿಂದ ಸುಡಲು ಯತ್ನಿಸುತ್ತಿರುವ ವೀಡಿಯೋವನ್ನು ಆತನೇ ರೇಕಾರ್ಡ್‌ ಮಾಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.


ಕುಂದಾಪುರದ ಕೋಟೇಶ್ವರ ನಿವಾಸಿ ಪ್ರದೀಪ ಎಂಬಾತನಿಂದ ಹೀನಾಯ ಕೃತ್ಯ ನಡೆದಿದೆ. ಈತ ಪ್ರೀತಿಸಿ ಕೈ ಹಿಡಿದ ಪತ್ನಿಯನ್ನು ವರದಕ್ಷಿಣೆಗಾಗಿ ಕಿರುಕುಳ ನೀಡಿ ಹಿಂಸಿಸಿ ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದಿದ್ದಾನೆ.

ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಪ್ರಿಯಾಂಕಾ ಅವರನ್ನು ಮದುವೆಯಾಗಿದ್ದ ಪ್ರದೀಪನ ಅಸಲಿ ಮುಖ ಕೇವಲ ನಾಲ್ಕೇ ತಿಂಗಳಿನಲ್ಲಿ ಹೊರ ಬಿದ್ದಿದೆ.

ಗರ್ಭಿಣಿ ಪ್ರಿಯಾಂಕಾ ಅವರಿಗೆ ಕಾಲಿನಿಂದ ತುಳಿದು ಹಲ್ಲೆಯನ್ನ ಮಾಡಿದ್ದು, ಎರಡು ಲಕ್ಷ ರೂಪಾಯಿ ಹಣ ಮತ್ತು ನಾಲ್ಕು ಪವನ್ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದಾನೆ. ಗಂಡನ ನಿರಂತರ ಕಿರುಕುಳ ತಾಳಲಾರದೆ ಪ್ರಿಯಾಂಕ ದೂರು ದಾಖಲಿಸಿದ್ದಾರೆ. ಸದ್ಯ ಕುಂದಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

FILM

ಅಂದು ಸುಮಲತಾ, ಇಂದು ಸ್ಟಾರ್ ಚಂದ್ರುಗೆ ಜೈ ಎಂದ ದರ್ಶನ್; ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತ ಡಿ ಬಾಸ್ ಏನಂದ್ರು?

Published

on

ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಂದಿನಂತೆ ಮಂಡ್ಯ ಹೈ ವೋಲ್ಟೇಜ್ ಕ್ಷೇತ್ರ. ಹೇಗಾದರೂ ಈ ಕ್ಷೇತ್ರ ತಮ್ಮದಾಗಿಸಿಕೊಳ್ಳಬೇಕು ಎಂದು ಅತ್ತ ಬಿಜೆಪಿ+ ಜೆಡಿಎಸ್ , ಇತ್ತ ಕಾಂಗ್ರೆಸ್ ಶ್ರಮಿಸುತ್ತಿದೆ.

ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದ ಸುಮಲತಾಗೆ ಮಂಡ್ಯ ಜನತೆ ಜೈ ಎಂದಿದ್ದರು. ಸುಮಲತಾ ಗೆಲುವಿಗಾಗಿ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ – ರಾಕಿಂಗ್ ಸ್ಟಾರ್ ಯಶ್ ಜೋಡೆತ್ತುಗಳಾಗಿ ಅಬ್ಬರಿಸಿದ್ದರು. ಆದರೆ, ಈ ಬಾರಿ ಎಲ್ಲವೂ ಉಲ್ಟಾ ಆಗಿದೆ. ಸುಮಲತಾ ‘ಕಮಲ’ ಹಿಡಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಚ್ಚರಿಯ ಬೆಳವಣಿಗೆ ಎಂಬಂತೆ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ಟಾರ್ ಚಂದ್ರು ಪರ ದರ್ಶನ್ :

ಸುಮಲತಾ ಜೊತೆ ಇರುತ್ತೇನೆ ಎಂದಿದ್ದ ಡಿ ಬಾಸ್ ಈ ಬಾರಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಕಣದಲ್ಲಿದ್ದು, ಅವರ ಪರ ದರ್ಶನ್ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.

ವ್ಯಕ್ತಿ ಪರ ಅಂದ ದರ್ಶನ್ : 

ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಇಳಿದಿರುವುದರಿಂದ ಹಲವು ಅನುಮಾನ ಹುಟ್ಟಿಸಿದ್ದವು. ಸುಮಲತಾ ಅವರೊಂದಿಗೆ ಸದಾ ಕಾಣಿಸಿಕೊಳ್ಳುವ ಡಿ ಬಾಸ್ ಬಿಜೆಪಿ ಪರವಾಗಿ ನಿಲ್ಲಲಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಪರ ಬ್ಯಾಟ್ ಬೀಸಿ ಪ್ರಶ್ನೆ ಹುಟ್ಟು ಹಾಕಿದ್ದರು. ಇದಕ್ಕೆ ಇದೀಗ ಅವರೇ ಉತ್ತರ ನೀಡಿದ್ದಾರೆ.

ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಎಲ್ಲೆಲ್ಲಿ ಪ್ರಚಾರ :
ಹಲಗೂರಿನಿಂದ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರ ಜೊತೆಗೂಡಿ ದರ್ಶನ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ. ಕಾಗೇಪುರ (ತಳಗವಾದಿ) ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

Continue Reading

LATEST NEWS

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವು

Published

on

ಮಂಡ್ಯ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾ*ವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃ*ತಪಟ್ಟಿದ್ದಾರೆ.

ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾ*ವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ.

ಮಿಮ್ಸ್ ಆಸ್ಪತ್ರೆಗೆ ಶ*ವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

LATEST NEWS

WATCH : ಪತಿ ಬಿಟ್ಟು ಪರಪುರುಷನೊಂದಿಗೆ ಜಾಲಿ ರೈಡ್; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಕೆಗೆ ಪತಿ ಏನು ಮಾಡ್ದ ಗೊತ್ತಾ!?

Published

on

ಮಂಗಳೂರು/ ಹರಿಯಾಣ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಸಾಮಾನ್ಯವಾಗಿದೆ. ಅನೈತಿಕ ಸಂಬಂಧಗಳೂ ಹೆಚ್ಚಾಗಿವೆ. ಇದೀಗ ಅಂತಹುದೇ ಒಂದು ಘಟನೆ ನಡೆದಿದೆ. ಆದರೆ, ಇಲ್ಲಿ ಪತ್ನಿ ಪರಪುರುಷನೊಂದಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾಳೆ. ಅಷ್ಟೇ ಅಲ್ಲ, ಧರ್ಮದೇಟೂ ತಿಂದಿದ್ದಾಳೆ.

ಹರಿಯಾಣದ ಪಂಚಕುಲದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವೀಡಿಯೋದಲ್ಲಿ ಏನಿದೆ?

ಪಂಚಕುಲದ ಸೆಕ್ಟರ್ 26ರ ಉದ್ಯಾನವನದಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಕಾರಿನಲ್ಲಿದ್ದಳು. ಇದನ್ನು ಗಮನಿಸಿದ ಪತಿ ಬ್ಯಾಟಿನಿಂದ ಕಾರಿನ ಕಿಟಕಿ ಗಾಜು ಒಡೆದಿದ್ದಾನೆ. ಅಷ್ಟು ಮಾತ್ರವಲ್ಲ, ಅವಳನ್ನು ಹೊರಗೆಳೆದು ನಡುರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ.

ಇದನ್ನೂ ಓದಿ : ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

ಈ ದೃಶ್ಯಾವಳಿಗಳನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು, ವೀಡಿಯೋ ವೈರಲ್ ಆಗುತ್ತಿದೆ.

ಪತಿ ಬಂಧನ :

ಇನ್ನು ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಘಟನೆಯ ಬೆಂಬತ್ತಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Continue Reading

LATEST NEWS

Trending