Connect with us

    DAKSHINA KANNADA

    ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

    Published

    on

    ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.

    ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ ಹಾಗೂ ಸಾರ್ವಜನಿಕರ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ರಾಷ್ಟ್ರಧ್ವಜ ಹಾರಿಸಲು ಕೆಲವು ನಿಬಂಧನೆಗಳನ್ನು ಅನುಸರಿಸಬೇಕಾದದ್ದು ಅಗತ್ಯ. ಹೇಗೆಂದರೆ ಜಿಲ್ಲೆಯ ಎಲ್ಲ ಸರ್ಕಾರಿ ಕಟ್ಟಡಗಳು, ಶಾಲೆ, ಕಾಲೇಜು ಹಾಗೂ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಕಟ್ಟಡಗಳಲ್ಲಿ ರಾಷ್ಟ್ರೀಯ ಧ್ವಜದ ತ್ರಿವರ್ಣ ಧ್ವಜವನ್ನು ಹಗಲಿನಲ್ಲಿ ಮಾತ್ರ ಹಾರಿಸಲು ಅನುಮತಿ ನೀಡಲಾಗಿದೆ. ಆ.13ರಿಂದ 15ರ ವರೆಗೆ ಪ್ರತಿದಿನ ಸೂರ್ಯೋದಯದ ನಂತರ ಬೆಳಿಗ್ಗೆ 8ರೊಳಗೆ ಧ್ವಜಾರೋಹಣ ಮಾಡಬೇಕು.

    ಹಾಗೆಯೇ ಸೂರ್ಯಾಸ್ತದ ವೇಳೆಗೆ ಇಳಿಸಬೇಕು. ಧ್ವಜ ಸಂಹಿತೆಯ ಯಾವುದೇ ಉಲ್ಲಂಘನೆಯಾಗದಂತೆ ಮತ್ತು ರಾಷ್ಟ್ರಧ್ವಜಕ್ಕೆ ಯಾವುದೇ ಅಗೌರವ ಉಂಟಾಗದಂತೆ ಜಾಗ್ರತೆ ವಹಿಸಬೇಕು.

    ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ಆ.13 ರಂದು ಸೂರ್ಯೋದಯದ ನಂತರ ಬೆಳಿಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಿ ಹಾಗೂ ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆ.15ರ ಸೂರ್ಯಾಸ್ತದ ವೇಳೆಗೆ ಇಳಿಸುವಂತೆ ಸೂಚಿಸಿದೆ.

    ತ್ರಿವರ್ಣ ಧ್ವಜವನ್ನು ಏರಿಸುವಾಗ ಧ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸುತ್ತಾ, ಧ್ವಜವನ್ನು ಯಾವಾಗಲೂ ಪೂರ್ಣ ಗೌರವ ಮತ್ತು ಉತ್ಸಾಹದಿಂದ ಶೀಘ್ರಗತಿಯಲ್ಲಿ ಏರಿಸಿ, ನಿಧಾನವಾಗಿ ಕೆಳಕ್ಕೆ ಇಳಿಸಬೇಕು.

    ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ಜನಗಣ ಮನವನ್ನು ಹಾಡಲೇಬೇಕು ಹಾಗೂ ರಾಷ್ಟ್ರ ಧ್ವಜವು ನೆಲ ಮುಟ್ಟದಂತೆ ಜಾಗ್ರತೆ ವಹಿಸಬೇಕು. ರಾಷ್ಟ್ರ ತ್ರಿವರ್ಣ ಧ್ವಜವನ್ನು ಹಾರಿಸುವ ಮುನ್ನ ಪರಿಶೀಲಿಸಿಕೊಳ್ಳಬೇಕು.

    ಹರಿದ ಅಥವಾ ಕೊಳಕಾದ ತ್ರಿವರ್ಣ ಧ್ವಜವನ್ನು ಹಾರಿಸುವಂತಿಲ್ಲ.
    ಹಾರಿಸಿದ ನಂತರ ಹರಿದಿದ್ದರೆ ಅಂತಹ ಧ್ವಜವನ್ನು ಕೂಡಲೇ ತೆಗೆಯಬೇಕು ಹಾಗೂ ರಾಷ್ಟ್ರಧ್ವಜಕ್ಕೆ ಸಮನಾದ ಅಥವಾ ಎತ್ತರದಲ್ಲಿ ಮತ್ತೊಂದು ಧ್ವಜವನ್ನು ಹಾರಿಸಬಾರದು.

    ಆ.13 ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಜೋಪಾನವಾಗಿ ಮನೆಯಲ್ಲಿ ಇಟ್ಟುಕೊಳ್ಳಬೇಕು. ಸಾರ್ವಜನಿಕ ಸ್ಥಳದಲ್ಲಿ ಅಥವಾ ಇತರೇ ಸ್ಥಳಗಳಲ್ಲಿ ರಾಷ್ಟ್ರಧ್ವಜವನ್ನು ಸುಡುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ ಮಾಡಬಾರದು.

    ಧ್ವಜವನ್ನು ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದುಕೊಂಡರೆ ಹಾಗೂ ಮಾತು, ಬರಹ ಅಥವಾ ಇತರ ಕೃತ್ಯದ ಮೂಲಕ ಅಗೌರವ ತೋರಿದರೆ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಹಾಗೂ ಧ್ವಜ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಬಳಸುವುದು ಕಂಡುಬಂದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending