Connect with us

LATEST NEWS

ನನ್ನ ನಕಲಿ ಖಾತೆ ಸೃಷ್ಟಿಸಿ ಬಂಧಿಯಾಗುವಂತೆ ಮಾಡಿದವರಿಗೆ ಶಿಕ್ಷೆಯಾಗಲಿ: ಹರೀಶ್‌ ಬಂಗೇರಾ

Published

on

ಉಡುಪಿ: ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ 1 ವರ್ಷ 9 ತಿಂಗಳು ಸೌದಿಯ ಜೈಲಿನಲ್ಲಿ ಬಂಧಿಯಾಗುವಂತೆ ಮಾಡಿದರು.

ನಕಲಿ ಖಾತೆ ಸೃಷ್ಟಿಸಿದ ಅಪರಾಧಿಗಳು ಈಗ ಜಾಮೀನು ಮೇಲೆ ಹೊರಗೆ ತಿರುಗುತ್ತಿದ್ದಾರೆ.

ಆದರೆ ಅವರಿಗೆ ಶಿಕ್ಷೆ ಆಗುವವರೆಗೂ ಕಾನೂನು ಹೋರಾಟ ಮಾಡುತ್ತೇನೆ ಎಂದು ಸೌದಿಯಿಂದ ಬಿಡುಗಡೆಗೊಂಡು ಊರಿಗೆ ಮರಳಿದ ಹರೀಶ್‌ ಬಂಗೇರಾ ಹೇಳಿದರು.


ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಮಂಗಳೂರಿನಲ್ಲಿ ನಡೆದ ಸಿಎಎ ಪ್ರತಿಭಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಷೇರ್‌ ಮಾಡಿದ್ದೆ, ಇದಾದ ನಂತರ ನಾನು ಅದನ್ನು ಡಿಲೀಟ್‌ ಮಾಡಿದ್ದೆ.

ಈ ವೇಳೆ ನನಗೆ ಹಲವು ಬೆದರಿಕೆ ಕರೆ, ಸಂದೇಶಗಳು ಬಂದಿತ್ತು.

ಅದಾದ ನಂತರ ಸುಮ್ಮನಿದ್ದೆ ಈ ಮಧ್ಯೆ ಊರಿನ ಕೆಲ ಕಿಡಿಗೇಡಿಗಳು ನನ್ನ ಹೆಸರಿನ ಫೇಸ್‌ಬುಕ್‌ ಖಾತೆ ತೆರೆದು, ಅದರಲ್ಲಿ ನನ್ನ ಡಿಪಿ, ಸೌದಿಯಲ್ಲಿ ಕೆಲಸ ಮಾಡುತ್ತಿರುವ ಕಂಪನಿಯ ಮಾಹಿತಿ ಹಾಕಿ ನಕಲಿ ಖಾತೆ ತೆರೆದಿದ್ದರು.

ಅದರಲ್ಲಿ ಅಲ್ಲಿನ ದೊರೆ ಹಾಗೂ ಪವಿತ್ರ ಸ್ಥಳದ ಬಗ್ಗೆ ಅವಹೇಳನ ಮಾಡಿದ್ದರುಉ ಈ ಬಗ್ಗೆ ನನಗೆ ತಡವಾಗಿ ತಿಳಿಯಿತು.

ಅದಾಗ ನಾನಾಗಿಯೇ ಪೊಲೀಸರ ಮುಂದೆ ಶರಣಾಗಿದ್ದೆ, ಮೊದಲಿಗೆ ನಾನೇ ಆ ಕೃತ್ಯ ಮಾಡಿದ್ದೇನೆಂದು ಅಲ್ಲಿನ ಸ್ಥಳೀಯ ಪೊಲೀಸರು ಹಾಗೂ ಕೋರ್ಟ್‌ ನಂಬಿತ್ತು.

ಈ ವೇಳೆ ಭಾರತೀಯ ವಿದೇಶಾಂಗ ಇಲಾಖೆಯ ಸತತ ಪ್ರಯತ್ನದಿಂದಾಗಿ ಅಲ್ಲಿನ ಕೋರ್ಟ್‌ಗೆ ನಿರಪರಾಧಿ ಎಂದು ದಾಖಲೆ ಸಹಿತ ನಿರೂಪಿಸಿದರು.

ಹೀಗಾಗಿ ನಾನು ಜೈಲಿನಿಂದ ಬಿಡುಗಡೆಯಾದೆ ಎಂದು ಅವರು ಹೇಳಿದರು.
ಮೂರು ತಿಂಗಳ ಹಿಂದೆ ನನ್ನ ಬಿಡುಗಡೆಗೆ ಆಗಿದ್ದರೂ ಕರೋನಾ ಕಾರಣದಿಂದ ಕೆಲವು ತಿಂಗಳು ತಡವಾಯಿತು ಎಂದು ಹೇಳಿದರು.

ಪತ್ನಿ ಸುಮನಾ ಮಾತನಾಡಿ, “ತುಂಬಾ ನೋವು ಅನುಭವಿಸಿದ್ದೇವೆ. ಇದು ಸೈಬರ್ ಕ್ರೈಂ ಆಗಿದ್ದು ತಾಂತ್ರಿಕ ಕಾರಣದಿಂದ ಸ್ವಲ್ಪ ಕಷ್ಟವಾಗಿತ್ತು.

ಹರೀಶ ಬಂಧನವಾದ ದಿನದಿಂದ ಇಲ್ಲಿಯವರೆಗೆ ಕಾನೂನಿನ ಹೋರಾಟದ ಬೆನ್ನತ್ತಿದ್ದೇನೆ.

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾಗಿರು ರವೀಂದ್ರನಾಥ್ ಶಾನುಭಾಗ್ ಕಾನೂನು ಹೋರಾಟ ಮಾಡಿ, ಭಾರತಿಯ ರಾಯಭಾರಿಗೆ ಒತ್ತಡ ತಂದು ಕೆಲಸ ಕೆಲಸ ಮಾಡಿದರು.

ಗೂಗಲ್ ಮೇಲ್ ನಿಂದ ಸಿಕ್ಕಿದ ಒಂದು ನಂಬರಿನ ಜಾಡು ಹಿಡಿದು ಹೋದಾಗ ಅಪರಾದಿಗಳು ಬಲೆಗೆ ಬಿದ್ದರು.

ಮೇ 9ರಂದು ಪತಿ ನಿರಪರಾಧಿ ಎಂದು ಸಾಬೀತಾಗಿ ಬಿಡುಗಡೆ ಆಗುವ ಕರೆ ಬಂತು. ಅದರೂ ಪ್ರತ್ಯಕ್ಷವಾಗಿ ನೋಡುವವರೆಗೆ ಮನಸ್ಸಿನಲ್ಲಿ ದುಗುಡ ಹಾಗೇಯೆ ಇತ್ತು.

ನನ್ನ ಗಂಡನ ಹೆಸರಲ್ಲಿ ನಕಲಿ ಖಾತೆ ಮಾಡಿ, ಅವರ ಧರ್ಮದ ವಿರುದ್ದ ಅವರೇ ಬರೆದು ಅವಮಾನ ಮಾಡಿದ್ದಾರೆ.

ಇಂತಹವರಿಗೆ ನಮ್ಮ ಕಾನೂನಿನಲ್ಲಿ ಏನು ಶಿಕ್ಷೆಯಿಂದೆ, ಈ ಪ್ರಕರಣದ ಅರೋಪಿಗಳಿಗೆ ಸಿಕ್ಷೆ ಆಗುವವರೆಗೆ ಬಿಡುವುದಿಲ್ಲ ಎಂದು ಅವರು ತಿಳಿಸಿದರು.

ಬಿಡುಗಡೆ ಶ್ರಮ ಪಟ್ಟವರಲ್ಲಿ ಕೋಟೇಶ್ವರ ಗ್ರಾಮ ಪಂಚಯತ್ ನ ಸದಸ್ಯರಾದ ಲೋಕೇಶ್ ಅಂಕದಕಟ್ಟೆ ಅವರು ಮಾತನಾಡಿ, ನಮ್ಮ ಹೋರಾಟಕ್ಕೆ ಹಲವರು ಮಂದಿ ಕೈ ಜೋಡಿಸಿದ್ದಾರೆ. ಮಂಗಳೂರಿನ ಮಾಸ ಸಂಘಟನೆ ಏರ್ ಟಿಕೆಟ್ ಮಾಡಿಕೊಟ್ಟಿತು.

ಇನ್ನು ಜೈ ಭಾರ್ಗವ ತಂಡ, ಅಭಿಮತ ತಂಡ, ಉಡುಪಿ ಮೂಲದ ಜೋಯ್‌ಸನ್ ಲೂವಿಸ್, ಮುಂಬೈನ ಜಲಾಲ್ ಮತ್ತು ಮುದಾಸರ್, ಇಂಡೋನೋಶ್ಯಾ ರಾಯಭಾರಿಯಲ್ಲಿನ ಸುಕೇಶ್ ಶೆಟ್ಟಿ ವಲ್ತೂರು ಸಹಾಯ ಮಾಡಿದ್ದಾರೆ. ಇದು ಕಾನೂನು ಹೊರಾಟಕ್ಕೆ ಜಯ. ಈ ಹೋರಾಟ ಮುಂದೆಯೂ ಇರುತ್ತೆ ಎಂದರು.

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

LATEST NEWS

ಒಂದೇ ಒಂದು ಸೊಳ್ಳೆಗಳಿಲ್ಲದ ವಿಚಿತ್ರ ದೇಶವಿದು..!

Published

on

ಐಸ್‌ಲ್ಯಾಂಡ್: ಬಿಸಿಲು, ಮಳೆ ಎರಡೂ ಕಾಣಿಸಿಕೊಂಡಾಗ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗ್ಯೂನಂತಹ ಮಾರಣಾಂತಿಕ ಕಾಯಿಲೆಗಳು ಬರಬಹುದು. ಸೊಳ್ಳೆಗಳಿಂದ ಹರಡುವ ರೋಗದಿಂದ ಪ್ರತಿವರ್ಷ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಪ್ರಪಂಚದಾದ್ಯಂತ ಒಟ್ಟು 3 ಸಾವಿರ ಜಾತಿಯ ಸೊಳ್ಳೆಗಳಿವೆ. ಆದರೆ ಒಂದೇ ಒಂದು ಸೊಳ್ಳೆಗಳೂ ಇಲ್ಲದ ವಿಶಿಷ್ಟ ದೇಶವೊಂದಿದೆ. ಹೌದು ಅದುವೇ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿರುವ ಐಸ್‌ಲ್ಯಾಂಡ್ ದೇಶ. ಇದು ಹಾವು ಮುಕ್ತ ಮಾತ್ರವಲ್ಲ, ಸೊಳ್ಳೆ ಮುಕ್ತ ದೇಶವೂ ಆಗಿದೆ.

ಐಸ್‌ಲ್ಯಾಂಡ್ ವಿಪರೀತ ಚಳಿ ಇರುವ ಪ್ರದೇಶವಾಗಿದೆ. ಅಲ್ಲಿನ ಶೀತ ವಾತಾವರಣದಲ್ಲಿ ಸೊಳ್ಳೆಗಳು ಬದುಕಲು ಸಾಧ್ಯವಿಲ್ಲ. ಐಸ್‌ಲ್ಯಾಂಡ್ ಹವಾಮಾನವು ಬಹಳ ವೇಗವಾಗಿ ಬದಲಾಗುತ್ತದೆ. ಹವಾಮಾನದಲ್ಲಿನ ತ್ವರಿತ ಬದಲಾವಣೆಯ ಕಾರಣ ಸೊಳ್ಳೆಗಳು ತಮ್ಮ ಜೀವನಚಕ್ರ ಸಾಗಿಸಲು ಸಾಧ್ಯವಿಲ್ಲ.

ಐಸ್‌ಲ್ಯಾಂಡ್ ತಾಪಮಾನ ಇಳಿಕೆ ಆರಂಭವಾದಾಗ ನೀರು ಮಂಜುಗಡ್ಡೆ ರೂಪ ತಾಳುತ್ತದೆ. ನೀರು ಸಂಪೂರ್ಣವಾಗಿ ಹೆಪ್ಪುಗಟ್ಟುವ ಕಾರಣ ಪ್ಯೂಪಾ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಐಸ್‌ಲ್ಯಾಂಡ್‌ನಲ್ಲಿ ತಾಪಮಾನವು ಮೈನಸ್ 38 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುತ್ತದೆ. ಅಂತಹ ಕಡಿಮೆ ತಾಪಮಾನದಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುವುದು ಅಸಾಧ್ಯ.

ಐಸ್‌ಲ್ಯಾಂಡ್‌ನಲ್ಲಿ ಸೊಳ್ಳೆಗಳಿಗೆ ಸಂಬಂಧಿಸಿದ ಒಂದು ಸಿದ್ಧಾಂತವೆಂದರೆ ಈ ದೇಶದ ನೀರು, ಮಣ್ಣು ಮತ್ತು ಸಾಮಾನ್ಯ ಪರಿಸರ ವ್ಯವಸ್ಥೆಯು ರಾಸಾಯನಿಕ ಸಂಯೋಜನೆಯ ಸೊಳ್ಳೆ ಜೀವನವನ್ನು ಬೆಂಬಲಿಸುವುದಿಲ್ಲ. ಆದರೆ ಐಸ್‌ಲ್ಯಾಂಡ್‌ನ ನೆರೆಯ ದೇಶಗಳಾದ ನಾರ್ವೆ, ಡೆನ್ಮಾರ್ಕ್‌, ಸ್ಕಾಟ್ಲೆಂಡ್ ದೇಶಗಳಲ್ಲಿ ಸೊಳ್ಳೆಗಳಿವೆ.

Continue Reading

LATEST NEWS

ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

Published

on

ಮಂಗಳೂರು : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ಆದ ನಂದಿನಿ ಜಾಗತಿಕ ಬ್ರಾಂಡ್ ಆಗಿ ಲಗ್ಗೆ ಇಟ್ಟಿದೆ. ವಿಶ್ವಕಪ್ ಟಿ-ಟ್ವೆಂಟಿ ಪಂದ್ಯಕೂಟದಲ್ಲಿ ನಂದಿನಿ ಹೆಸರು ರಾರಾಜಿಸಲಿದೆ. ಹೌದು, ನಂದಿನಿ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಕೃಷಿಕರ ಶ್ರಮವನ್ನು ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ವಿಶ್ವಕ್ಕೆ ಸಾರುವ ಯತ್ನದಲ್ಲಿದೆ.


ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ :

ಜೂನ್ ೧ ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿ ಅಮೆರಿಕದಲ್ಲಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದು ಪ್ರದರ್ಶಿಸಲಾಗುತ್ತಿದೆ. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.


ಸಿಎಂ ಟ್ವೀಟ್ :

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ೨೦ ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಇದನ್ನೂ ಓದಿ : ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?!

ರಾಜ್ಯದ ಜನರ ಮನೆ-ಮನ ಗೆದ್ದಿರುವ ನಂದಿನಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಂದಿನಿ ಉತ್ಪನ್ನಗಳು ಕ್ರಿಕೆಟ್ ಆಟಗಾರರ ಹಾಗೂ ಕ್ರಿಕೆಟ್ ಪ್ರೇಮಿಗಳ ಮನ ಗೆಲ್ಲುವುದಂತು ನಿಜ ಸಂಗತಿ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

Trending