KADABA
ಇಂದು ಸೌದಿಯಿಂದ ಹುಟ್ಟೂರು ಕಡಬಕ್ಕೆ ತಲುಪಿದ ಹರೀಶ್ ಪೈ ಪಾರ್ಥಿವ ಶರೀರ
ಸೌದಿ ಅರೇಬಿಯಾ: ಆ.27 ರಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ರಿಯಾದ್ ನಗರದ ಕಂಪೆನಿಯೊಂದರಲ್ಲಿ ಹಲವಾರು ವರ್ಷಗಳಿಂದ ಮ್ಯಾನೇಜರ್ ವೃತ್ತಿ ನಿರ್ವಹಿಸುತ್ತಿದ್ದ ಕಡಬದ ಹರೀಶ್ ಪೈ ಗೋಕುಲ್ ದಾಸ್ ಎಂಬವರ ಮೃತದೇಹ ಇಂದು ಹುಟ್ಟೂರು ಕಡಬಕ್ಕೆ ತಲುಪಿದೆ.
ಮೃತದೇಹವನ್ನು ಭಾರತಕ್ಕೆ ಕರೆತರಲು ಜನ ಪ್ರತಿನಿಧಿಗಳು ಹಾಗೂ ಸಂಘಸಂಸ್ಥೆಗಳನ್ನು ಸಂಪರ್ಕಿಸಿಯೂ ಯಾವುದೇ ಧನಾತ್ಮಕ ಪ್ರತಿಕ್ರಿಯೆ ಕಾಣದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಂಡಿಯನ್ ಸೋಶಿಯಲ್ ಫೋರಂ ಕಾರ್ಯಕರ್ತರನ್ನು ಸಂಪರ್ಕಿಸಿದರು.
ಇವರಿಗೆ ತಕ್ಷಣ ಸ್ಪಂದಿಸಿ ಕಾರ್ಯಪ್ರವೃತ್ತರಾದ ನೌಶಾದ್ ಕಡಬ, ನಿಝಾಮ್ ಬಜ್ಪೆ, ಅಶ್ಫಾಕ್ ಉಚ್ಚಿಲ ಹಾಗೂ ಇಜಾಝ್ ಫರಂಗಿಪೇಟೆ ನೇತೃತ್ವದ ತಂಡವು ಕೊನೆಗೂ ಸೌದಿ ಅರೇಬಿಯಾದ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪಾರ್ಥಿವ ಶರೀರವನ್ನು ಊರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.
ಮೃತರ ಸಂಬಂಧಿಕರು ಯಾರೂ ಸ್ಥಳೀಯವಾಗಿ ಲಭ್ಯರಿಲ್ಲದ ಕಾರಣ ಸ್ವತಃ ಇಂಡಿಯನ್ ಸೋಶಿಯಲ್ ಫೋರಂನ ಸದಸ್ಯರಾದ ನೌಶಾದ್ ಕಡಬರವರ ಹೆಸರಿನಲ್ಲಿ ಅಧಿಕಾರ ಪತ್ರವನ್ನು (ಪವರ್ ಆಫ್ ಅಟಾರ್ನಿ) ಪಡೆಯಲಾಯಿತು.
ನಿಝಾಮ್ ಬಜ್ಪೆ ನೇತೃತ್ವದ ತಂಡವು ಹಲವಾರು ಬಾರಿ ಆಸ್ಪತ್ರೆ, ಶವಾಗಾರ ಮತ್ತು ಪೊಲೀಸ್ ಠಾಣೆಯನ್ನು ಭೇಟಿ ಮಾಡಿ ಭಾರತೀಯ ರಾಯಭಾರಿ ಕಚೇರಿಯ ಸಹಕಾರದಿಂದ ಅಂತಿಮವಾಗಿ ಎಲ್ಲ ದಾಖಲೆ ಪತ್ರ ಪಡೆದು ಕಾರ್ಗೋ ಮೂಲಕ ಹರೀಶ್ ಪೈ ಗೋಕುಲ್ ದಾಸ್ ರ ಮೃತ ದೇಹವನ್ನು ಇಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಮೃತರು ಕೆಲಸ ಮಾಡುತ್ತಿದ್ದ ಸಂಸ್ಥೆಯು ನೀಡಬೇಕಾಗಿದ್ದ ಒಟ್ಟು ಮೊತ್ತವನ್ನು ಫೋರಂನ ಸದಸ್ಯರು ಕಂಪೆನಿಯ ಉನ್ನತ ಅಧಿಕಾರಿಗಳೊಂದಿಗೆ ನಿರಂತರ ಮಾತುಕತೆ ನಡೆಸಿದ ಪರಿಣಾಮ ರಾಯಭಾರಿ ಕಚೇರಿ ಮೂಲಕ ವರ್ಗಾಯಿಸಲಾಯಿತು.
ಅದೇ ರೀತಿ ಮೃತದೇಹವನ್ನು ವಿಮಾನದ ಮೂಲಕ ಸ್ವಗ್ರಾಮಕ್ಕೆ ಕಳುಹಿಸಲು ತಗುಲಿದ ವೆಚ್ಚವನ್ನು ಕಂಪೆನಿ ಮೂಲಕವೇ ಭರಿಸಲಾಗಿದೆ
DAKSHINA KANNADA
ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ
ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
DAKSHINA KANNADA
ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ!
ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಆಗಿ ಜಯಣ್ಣ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.
ಇದಕ್ಕೂ ಮೊದಲು ಸೋಮವಾರ ಪೇಟೆ ತಾಲೂಕ ಪಂಚಾಯತ್ ನಲ್ಲಿ ಅವರು ಇಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿರುವಾಗಲೇ ಇವರ ವಿರುದ್ಧ ಅಕ್ರಮ ಆಸ್ತಿಗಳಿಕೆಯ ದೂರು ದಾಖಲಾಗಿದ್ದು, ಆ ವಿಚಾರದ ತನಿಖೆಗೆ ಇಂದು ಕಡಬದಲ್ಲಿ ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆಯ ಮನೆ, ಕಡಬದ ಕಚೇರಿ ಹಾಗೂ ಕಡಬದಲ್ಲೇ ಇರುವ ಜಯಣ್ಣ ಅವರ ಬಾಡಿಗೆ ಮನೆ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಜಯಣ್ಣ ಅವರ ವಿಚಾರಣೆ ನಡೆಸುತ್ತಿದ್ದಾರೆ.
DAKSHINA KANNADA
KADABA : ಆ್ಯಸಿಡ್ ದಾಳಿ ಪ್ರಕರಣ; ಸಹಕರಿಸಿದ ಇಬ್ಬರು ವಶಕ್ಕೆ
ಕಡಬ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಕಡಬಕ್ಕೆ ಕರೆತಂದಿದ್ದಾರೆ.
ಮಾರ್ಚ್ 5 ರಂದು ಕಡಬದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಅಬೀನ್ ಎಂಬ ಎಂಬಿಎ ವಿದ್ಯಾರ್ಥಿ ಆಸಿಡ್ ಎರಚಿ ಬಂಧಿತನಾಗಿದ್ದ. ಆರೋಪಿಗೆ ಅಸಿಡ್ ಎಲ್ಲಿಂದ ಸಿಕ್ಕಿತು ಅನ್ನೋ ವಿಚಾರವಾಗಿ ತನಿಖೆ ನಡೆಸಿದ ಪೊಲೀಸರು ಕೇರಳದ ಎರ್ನಾಕುಲಂ ಹಾಗೂ ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ವಶಕ್ಕೆ ಪಡೆದಿರುವವರಲ್ಲಿ ಒಬ್ಬಾತ ಆ್ಯಸಿಡ್ ಪೂರೈಕೆ ಮಾಡಿದ್ದರೆ, ಮತ್ತೋರ್ವ ವ್ಯಕ್ತಿ ಆರೋಪಿಗೆ ಸಮವಸ್ತ್ರ ಹೊಲಿದು ಕೊಟ್ಟಿದ್ದಾನೆ ಎನ್ನಲಾಗಿದೆ. ಇಬ್ಬರನ್ನೂ ಕಡಬಕ್ಕೆ ಕರೆ ತರಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.