Connect with us

LATEST NEWS

Hasana: ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯನ್ನೆ ಕೊಂದ ಪಾಪಿ ಮಗ..!

Published

on

ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವ ಪಲಾವ್ ಗೆ ವಿಷ ಬೆರೆಸಿ ತನ್ನ ತಂದೆ- ತಾಯಿಯನ್ನೆ ಕೊಂದಿರುವ ಘಟನೆ ಹಾಸನದ ಅರಕಲಗೋಡಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. 

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವ ಪಲಾವ್ ಗೆ ವಿಷ ಬೆರೆಸಿ ತನ್ನ ತಂದೆ- ತಾಯಿಯನ್ನೆ ಕೊಂದಿರುವ ಘಟನೆ ಹಾಸನದ ಅರಕಲಗೋಡಿನ ಬಿಸಿಲಹಳ್ಳಿಯಲ್ಲಿ ನಡೆದಿದೆ.

ತಾಯಿ ಉಮಾ (48) ತಂದೆ ನಂಜುಂಡಪ್ಪ (55) ಮೃತ ದುರ್ದೈವಿ.

ಮಂಜುನಾಥ್ (27) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಅರೋಪಿ ಮಂಜುನಾಥ್ ವಿಧವೆಯೋರ್ವರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಈತನ ಪೋಷಕರು ಬುದ್ಧಿವಾದ ಹೇಳಿದ್ದರು.

ಈತನ ತಾಯಿ ಉಮಾ ಅವರು ಸಹಕಾರ ಸಂಘಗಳಲ್ಲಿ ಮಾಡಿದ್ದ ಸಾಲದ ಹಣವನ್ನು ಮಂಜುನಾಥ್ ದುರುಪಯೋಗ ಪಡಿಸಿಕೊಂಡಿದ್ದ.

ಹಾಗಾಗಿ ತಂದೆ- ತಾಯಿ ಈ ಹಣವನ್ನು ವಾಪಸು ಕೇಳಿದಕ್ಕೆ ಆತ ಅವರ ಮೇಲೆ ಮೇಲೆ ಸಿಟ್ಟಾಗಿದ್ದ.

ಇದರಿಂದ ಕೊಲೆಗೆ ಸ್ಕೆಚ್ ಹಾಕುವ ಪ್ಲಾನ್ ಮಾಡಿ ಪಲಾವ್‍ನಲ್ಲಿ ವಿಷ ಬೆರೆಸಿದ್ದಾನೆ.

ಆರೋಪಿ ತಾಯಿಗಿಂತ ಮೊದಲೇ ಪಲಾವ್ ತಿಂದು ನಂತರ ಪಲಾವ್‍ಗೆ ಕಳೆನಾಶಕ ಬೆರೆಸಿದ್ದ.

ತಂದೆ ತಾಯಿ-ತಿಂಡಿ ತಿಂದ ಬಳಿಕ ಆರೋಪಿ ಔಷಧಿ ವಾಸನೆ ಬರುತ್ತಿದೆ ಎಂದು ವಾಂತಿ ಮಾಡಿ ನಾಟಕವಾಡಿ ಬಳಿಕ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಕರೆತಂದಿದ್ದ.

ಬಳಿಕ ತಂದೆ ಹಾಗೂ ತಾಯಿ ಹಠಾತ್ ಆಗಿ ಸಾವಿಗೀಡಾಗಿದ್ದರು.

ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ದಂಪತಿಯ ಕಿರಿಯ ಪುತ್ರ ಕೊಣನೂರು ಪೊಲೀಸರಿಗೆ ಮಾಹಿತಿ ನೀಡಿದ್ದ.

ಪೊಲೀಸರು ಅಂತ್ಯಕ್ರಿಯೆ ತಡೆದು ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಿದ್ದರು.

ನಂತರ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಂಜುನಾಥ್‍ನನ್ನು ತನಿಖೆಗೆ ಒಳಪಡಿಸಿದ್ದರು.

Click to comment

Leave a Reply

Your email address will not be published. Required fields are marked *

LATEST NEWS

ಮಾಜಿ ಸಿಎಂ ಎಸ್.ಎಂ. ಕೃಷ್ಣರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ!

Published

on

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ(91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡಿದ್ದ ಅವರು ಡಿಸ್ಚಾರ್ಜ್ ಆಗಿದ್ದರು.
ಮತ್ತೆ ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನು ಓದಿ:ಪ್ರತಿ ಮಹಿಳೆಗೆ ಸಿಗುತ್ತೆ 3 ಲಕ್ಷ ರೂಪಾಯಿ..! ಈ ಹಣ ಸಿಗಲು ಹೀಗೆ ಮಾಡಿ ಸಾಕು!

ಆಸ್ಪತ್ರೆ ಪ್ರಕಟಣೆ :

ಎಸ್ ಎಂ ಕೃಷ್ಣ ಅವರು ಐಸಿಯುನಲ್ಲಿದ್ದಾರೆ . ವಿಶೇಷ ನಿಗಾ ವಹಿಸಲಾಗುತ್ತಿದೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Continue Reading

BANTWAL

ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

Published

on

ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 

ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

Published

on

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

LATEST NEWS

Trending