LATEST NEWS
ಹತ್ರಾಸ್ ಕಾಲ್ತುಳಿತ: ‘ಭೋಲೆ ಬಾಬಾ’ಗಾಗಿ ಪೊಲೀಸರ ಹುಡುಕಾಟ
ಹತ್ರಾಸ್: 123 ಜನರ ಸಾವಿಗೆ ಕಾರಣವಾದ ಹತ್ರಾಸ್ನಲ್ಲಿ ಸತ್ಸಂಗ ನಡೆಸಿದ ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ ಗಾಗಿ ಉತ್ತರ ಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಗುರುವಾರ ಮೈನ್ ಪುರಿಯಲ್ಲಿರುವ ರಾಮ್ ಕುಟೀರ್ ಚಾರಿಟೇಬಲ್ ಟ್ರಸ್ಟ್ ನಲ್ಲಿ ಶೋಧ ನಡೆಸಿದರು.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ‘ಭೋಲೆ ಬಾಬಾ’ ಹೆಸರನ್ನು ಎಫ್ ಐಆರ್ ನಲ್ಲಿ ಇನ್ನೂ ಉಲ್ಲೇಖಿಸಿಲ್ಲ. ಮೈನ್ ಪುರಿಯ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ) ಸುನೀಲ್ ಕುಮಾರ್ ಅವರು “ಆಶ್ರಮದೊಳಗೆ ಬಾಬಾ ಪತ್ತೆಯಾಗಿಲ್ಲ” ಎಂದು ಹೇಳಿದ್ದಾರೆ.
“ಆಶ್ರಮದೊಳಗೆ 40-50 ಸೇವಕರಿದ್ದಾರೆ, ಅವರು(‘ಭೋಲೆ ಬಾಬಾ’) ಆಶ್ರಮದ ಒಳಗೆ ಇಲ್ಲ. ಅವರು ನಿನ್ನೆಯೂ ಬಂದಿಲ್ಲ ಮತ್ತು ಇಂದು ಕೂಡ ಬಂದಿಲ್ಲ…” ಎಂದು ಮೈನಪುರಿ ಡಿಎಸ್ಪಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
LATEST NEWS
ಇರಾನ್ ಅಧ್ಯಕ್ಷೀಯ ಚುನಾವಣೆ..! ಹಿಜಾಬ್ ವಿರೋಧಿ ನಾಯಕನಿಗೆ ಗೆಲುವು..!
ಮಂಗಳೂರು ( ಇರಾನ್ ) : ಇರಾನ್ನ ಉದಾರವಾದಿ ನಾಯಕ ಮಸೌದ್ ಪೆಜೆಶ್ಕಿಯಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಮೂಲಭೂತವಾದಿ ನಾಯಕ ಸಯೀದ್ ಜಲಿಲಿ ಅವರನ್ನು 30 ಲಕ್ಷ ಮತಗಳಿಂದ ಸೋಲಿಸಿದ್ದಾರೆ. ಇಬ್ರಾಹಿಂ ರೈಸಿ ಅವರ ನಿಧನದಿಂದ ಇರಾನ್ನಲ್ಲಿ ಅಧ್ಯಕ್ಷೀಯ ಚುನಾವಣೆ ನಡೆದಿತ್ತು.
ಪಜಾಶ್ಕಿಯಾನ್ 1.64 ಕೋಟಿ ಮತಗಳನ್ನು ಪಡೆದರೆ, ಜಲಿಲಿಗೆ 1.36 ಕೋಟಿ ಮತಗಳು ಬಂದಿವೆ. ಈ ವರ್ಷದ ಫೆಬ್ರವರಿಯಲ್ಲಿ ಇರಾನ್ನಲ್ಲಿ ಚುನಾವಣೆ ನಡೆದು ಇಬ್ರಾಹಿಂ ರೈಸಿ ದೇಶದ ಅಧ್ಯಕ್ಷಾಗಿದ್ದರು. ಮೇ 19 ರಂದು ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ರೈಸಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಚುನಾವಣೆ ನಡೆಸಲಾಗಿದೆ. ಈ ಚುನಾವಣೆಯಲ್ಲಿ ಮಸೌದ್ ಪೆಜೆಶ್ಕಿಯಾನ್ ಇರಾನ್ ದೇಶದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯ ವಿಷಯವಾಗಿದ್ದ ಹಿಜಾಬ್..! ಕೈ ಹಿಡಿದ ಮತದಾರರು..!
1979 ರ ಇಸ್ಲಾಮಿಕ್ ಕ್ರಾಂತಿಯ ನಂತರ ಇರಾನ್ ದೇಶದಲ್ಲಿ ಹಿಜಾಬ್ ಕಾನೂನು ಜಾರಿ ಮಾಡಲಾಗಿತ್ತು. ಹಿಜಾಬ್ ವಿಚಾರವಾಗಿ ಇರಾನ್ ಮಹಿಳೆಯರು ಸಾಕಷ್ಟು ಪ್ರತಿಭಟನೆ ನಡೆಸಿದ್ದು 22 ವರ್ಷದ ಮಹ್ಸಾ ಅಮಿನಿಯ ಸಾವಿನ ಬಳಿಕ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಇರಾನ್ ದೇಶದ ಆರೋಗ್ಯ ಸಚಿವರಾಗಿದ್ದ ಮಸೌದ್ ಪಜಾಶ್ಕಿಯಾನ್ ವೈದ್ಯರಾಗಿದ್ದು, ಶಸ್ತ್ರಚಿಕಿತ್ಸಕರಾಗಿದ್ದಾರೆ. ಚುನಾವಣೆಯ ರಾಜಕೀಯ ಭಾಷಣದಲ್ಲಿ ಹಿಜಾಬ್ ವಿಚಾರವನ್ನು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಹಿಜಾಬ್ ವಿರೋಧಿಯಾದ ಅವರು ನೈತಿಕ ಪೊಲೀಸ್ ಗಿರಿಯ ವಿರುದ್ಧ ಕ್ರಮ ಜರುಗಿಸುವುದಾಗಿ ಭಾಷಣದಲ್ಲಿ ಹೇಳಿದ್ದರು. ಇದೇ ಕಾರಣದಿಂದ ಉದಾರವಾದಿ ನಾಯಕ ಮಸೌದ್ ಪೆಜಶ್ಕಿಯಾನ್ ಇರಾನ್ ದೇಶದ ಅಧ್ಯಕ್ಷಗಾದಿ ಏರಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
LATEST NEWS
ಗುಜರಾತ್ನಲ್ಲಿ ಆರು ಅಂತಸ್ಥಿನ ಕಟ್ಟಡ ಕುಸಿತ..!
ಗುಜರಾತ್ : ಗುಜಾರತ್ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಗುಜಾರತ್ನ ಸೂರತ್ನ ಸಚಿನ್ ಪಾಲಿ ಎಂಬ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 15 ಜನ ಗಾಯಗೊಂಡ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅಗ್ನಿಶಾಮಕ ಮತ್ತು ಪೊಲೀಸ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಬಿದ್ದ ಕಟ್ಟಡದ ಅಡಿಯಲ್ಲಿ ಜನರು ಸಿಲುಕಿರುವ ಶಂಕೆ ಇದ್ದು ಅವಶೇಷಗಳನ್ನು ತೆಗೆಯುವ ಕಾರ್ಯ ನಡೆಯುತ್ತಿದೆ. ಕಟ್ಟಡ ಹಳೆಯದಾಗಿದ್ದು, ಶಿಥಿಲಾವಸ್ಥೆ ತಲುಪಿತ್ತು ಎನ್ನಲಾಗಿದೆ. ಶಿಥಿಲಗೊಂಡಿದ್ದ ಈ ಕಟ್ಟಡದಲ್ಲಿ ಹಲವರು ಬಾಡಿಗೆದಾರರಾಗಿ ವಾಸ ಮಾಡುತ್ತಿದ್ದು, ಅವಶೇಷದ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
LATEST NEWS
ಜುಲೈ 22 ಬಜೆಟ್ ಅಧಿವೇಶನ ಆರಂಭ..! 23 ಕ್ಕೆ ಬಜೆಟ್ ಮಂಡನೆ.
ನವದೆಹಲಿ : ಸಂಸತ್ತಿನಲ್ಲಿ ಬಜೆಟ್ ಅಧಿವೇಶ ಕರೆಯಲು ರಾಷ್ಟ್ರಪತಿಗಳ ಅನುಮೋದನೆ ನೀಡಿದ್ದು, ಬಜೆಟ್ ಅಧಿವೇಶನ ಜುಲೈ 22 ರಂದು ಆರಂಭವಾಗಲಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ಹಂಚಿಕೊಂಡಿದ್ದಾರೆ. ಆಗಸ್ಟ್ 12ರ ವರೆಗೆ ಅಧಿವೇಶನ ನಡೆಯಲಿದ್ದು, ಜುಲೈ 23 ಲೋಕಸಭೆಯಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
Hon’ble President of India, on the recommendation of Government of India, has approved the proposal for summoning of both the Houses of Parliament for the Budget Session, 2024 from 22nd July, 2024 to 12 August, 2024 (Subject to exigencies of Parliamentary Business). Union Budget,…
— Kiren Rijiju (@KirenRijiju) July 6, 2024
ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇದೀಗ ತಮ್ಮ 7ನೇ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಏಳು ಬಾರಿ ಬಜೆಟ್ ಮಂಡಿಸಿದ ಮೊದಲ ವಿತ್ತ ಸಚಿವರಾಗಿ ನಿರ್ಮಲಾ ಸೀತಾರಾಮನ್ ಇತಿಹಾಸದ ದಾಖಲೆ ನಿರ್ಮಿಸಿದ್ದಾರೆ. ಮೋದಿ 3.O ಸರ್ಕಾರದಲ್ಲಿ ಅಭಿವೃದ್ದಿ ಹೊಂದಿದ ಭಾರತವನ್ನು ಕೇಂದ್ರೀಕರಿಸಿ ನಿರ್ಮಲಾ ಸೀತಾರಾಮನ್ 2025 ರ ಹಣಕಾಸು ವರ್ಷಕ್ಕೆ ಬಜೆಟ್ ಮಂಡಿಸಲಿದ್ದಾರೆ.
- FILM3 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA4 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA5 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
- LATEST NEWS5 days ago
WATCH VIDEO : ಕಣ್ಣಿಗೆ ಬಿತ್ತು ಹಲಸಿನ ಮರ…ಗಜರಾಜ ಹಲಸಿನ ಹಣ್ಣನ್ನು ಹೇಗೆ ಕೊಯ್ದ ಗೊತ್ತಾ!?