DAKSHINA KANNADA
ಕಾಲಲ್ಲಿ ಪರೀಕ್ಷೆ ಬರೆದು ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಆಳ್ವಾಸ್ ಕೌಶಿಕ್
ಮೂಡುಬಿದಿರೆ: ಕಾಲಿನಲ್ಲಿ ಪಿಯುಸಿ ಪರೀಕ್ಷೆ ಬರೆದು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಡಿಸ್ಟಿಂಕ್ಷನ್ ಸಾಧನೆಯೊಂದಿಗೆ ಉತೀರ್ಣರಾಗಿ ಗಮನ ಸೆಳೆದಿದ್ದಾನೆ.
ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೌಶಿಕ್ 600ರಲ್ಲಿ 524 ಅಂಕ ಪಡೆಯುವ ಮೂಲಕ ಅಂಗವೈಕಲ್ಯವನ್ನೇ ಮೆಟ್ಟಿ ನಿಂತಿದ್ದಾರೆ. ಈ ಹಿಂದೆ ಎಸ್ಎಸ್ಎಲ್ಸಿ 424 ಅಂಕ ಗಳಿಸಿ ಶಿಕ್ಷಣ ಸಚಿವ ಮನಗೆದ್ದಿದ್ದ.
ಬಂಟ್ವಾಳ ಕಂಚಿಗಾರ ಪೇಟೆ ಮನೆ ನಿವಾಸಿ ರಾಜೇಶ್ ಆಚಾರ್ಯ ಜಲಜಾಕ್ಷಿ ದಂಪತಿಯ ಮೂವರು ಮಕ್ಕಳ ಪೈಕಿ ಎರಡನೆಯವರಾದ ಕೌಶಿಕ್ ಹುಟ್ಟಿನಲ್ಲೇ ಅಂಗವೈಕಲ್ಯಕ್ಕೆ ತುತ್ತಾದರು.
ಜನಿಸುವಾಗಲೇ ಕೌಶಿಕ್ಗೆ ಕೈಗಳು ಇರಲಿಲ್ಲ. ಬಲಭಾಗದಲ್ಲಿ ಹೆಗಲಿನಿಂದ ಈಚೆ ಕೈಯ ಲಕ್ಷಣವೇ ಇಲ್ಲ, ಎಡಭಾಗದಲ್ಲಿ ಮೊಣಕೈ ವರೆಗೆ ಕೈಯನ್ನು ಹೋಲುವ ರೀತಿಯ ಮಾಂಸ ಜೋತಾಡುತ್ತಿದೆ.
ಬೀಡಿ ಕಾರ್ಮಿಕೆ, ಅಮ್ಮ ಜಲಜಾಕ್ಷಿ ಕಾಲುಬೆರಗಳುಗಳ ನಡುವೆ ಬಳಪದ ಕಡ್ಡಿ ಸಿಕ್ಕಿಸಿ ಅಕ್ಷರ ಬರೆಯಲು ಕಲಿಸಿದ್ದರು. ಅದೇ ಅವರ ಮೊದಲ ಪಾಠವಾಗಿತ್ತು.
ನಂತರ ಬಂಟ್ವಾಳದ ಎಸ್.ವಿ.ಎಸ್. ಶಾಲೆಯಲ್ಲಿ ಕಲಿಕೆಗೆ ಅವಕಾಶ ದೊರೆತು ಎಸ್ಎಸ್ಎಲ್ಸಿಯಲ್ಲಿ ಕಾಲಲ್ಲೇ ಬರೆದು ಕೌಶಿಕ್ ಪ್ರಥಮ ದರ್ಜೆಯಲ್ಲಿ ಉತೀರ್ಣರಾಗಿ ರಾಜ್ಯದ ಗಮನ ಸೆಳೆದಿದ್ದರು.
ಆಗ ಪೊಳಲಿಗೆ ಭೇಟಿ ನೀಡಿದ್ದ ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಪ್ರತಿಭೆಯನ್ನು ಶ್ಲಾಘಿಸಿದ್ದು, ಸ್ಥಳದಲ್ಲಿದ್ದ ಶಾಸಕ ರಾಜೇಶ್ ನಾಯ್ಕ್ ಜತೆಗಿದ್ದ ಡಾ. ಎಂ. ಮೋಹನ ಆಳ್ವರಲ್ಲಿ ಹುಡುಗನ ಬಗ್ಗೆ ಪ್ರಸ್ತಾಪಿಸಿದಾಗ
ಈ ಪ್ರತಿಭೆಯನ್ನು ಆ ಕ್ಷಣವೇ ಆಳ್ವರು ದತ್ತು ಸ್ವೀಕರಿಸಿ ತಮ್ಮ ಕಾಲೇಜಿನಲ್ಲಿ ಉಚಿತ ಶಿಕ್ಷಣ ಯೋಜನೆಯಲ್ಲಿ ಪುಸ್ತಕ, ಕಲಿಕಾ ಸಾಮಗ್ರಿ ಮತ್ತು ಸಮವಸ್ತ್ರ ಒದಗಿಸಿದರು. ಇದೀಗ ಆಸರೆ ನೀಡಿದ ಸಂಸ್ಥೆಗೆ ಕೌಶಿಕ್ ಗೌರವ ತಂದುಕೊಟ್ಟಿದ್ದಾರೆ.
ಮುಂದೆ ಬಿ.ಕಾಂ ಓದಿ ಬ್ಯಾಂಕಿಂಗ್ ಉದ್ಯೋಗಿಯಾಗಬೇಕು ಎನ್ನುವ ಕೌಶಿಕ್ ಆಸೆಗೆ ಆಳ್ವಾಸ್ ಮತ್ತೆ ನೀರೆರೆಯುತ್ತಿದೆ.
ಡಾ. ಎಂ. ಮೋಹನ ಆಳ್ವ ಮತ್ತು ಸಂಸ್ಥೆಯ ಉಪನ್ಯಾಸಕರು ಮತ್ತಿತರ ಎಲ್ಲ ಮಂದಿಯ ಸಹಕಾರ, ಸಹೋದರರ ಪೋತ್ಸಾಹ ವಿಶೇಷವಾಗಿ ತಾಯಿಯ ಮಮತೆ ಈ ಮಟ್ಟಕ್ಕೆ ನನ್ನನ್ನು ಬೆಳೆಸಿದೆ ಎನ್ನುವ ಕೌಶಿಕ್ ಈಜು,
ಡ್ಯಾನ್ಸ್, ಕಲೆ, ಕ್ರಾಫ್ಟ್, ಕ್ರಿಕೆಟ್, ಶಟಲ್ ಹೀಗೆ ಕ್ರೀಡೆಯಲ್ಲೂ ಮುಂದಿದ್ದಾರೆ. ಕಾಲನ್ನೇ ಬಳಸಿಕೊಂಡರೂ ಎಲ್ಲರಂತೆ ಸಹಜ ವೇಗದಿಂದ ಬರೆಯಬಲ್ಲ ಸಾಮರ್ಥ್ಯ ಕೌಶಿಕ್ನ ವಿಶೇಷತೆ.
ಸಂಭ್ರಮಿಸಲು ತಂದೆ ಇದ್ದಿದ್ದರೆ
ಕೌಶಿಕ್ ತಂದೆ ರಾಜೇಶ್ ಬಡಗಿ ಕೆಲಸ ಮಾಡುತ್ತಿದ್ದರು. ಕೌಶಿಕ್ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗಲೇ ಅವರು ಅನಾರೋಗ್ಯದಿಂದ ತೀರಿಕೊಂಡಿದ್ದರು.
‘ತಂದೆಗೆ ನನ್ನ ಮೇಲೆ ತುಂಬ ಪ್ರೀತಿ ಇತ್ತು. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದಾಗ ಸಂಭ್ರಮಿಸಿದ್ದರು. ಪಿಯುಸಿ ಸಾಧನೆಗೆ ಸಾಕ್ಷಿಯಾಗಲು ಅವರಿಲ್ಲ. ಅವರು ಈಗ ಇದ್ದಿದ್ದರೆ….’ ಎಂದು ಹೇಳಿ ಕೌಶಿಕ್ ಗದ್ಗದಿತರಾದರು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!