LATEST NEWS
ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋ*ಟ; ಇಬ್ಬರು ಚೀನಾ ಪ್ರಜೆಗಳು ಸಾ*ವು
ಮಂಗಳೂರು/ಕರಾಚಿ : ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾನುವಾರ ರಾತ್ರಿ(ಅ.7) ಭಾರಿ ಸ್ಫೋ*ಟ ಸಂಭವಿಸಿದ್ದು, ಇಬ್ಬರು ಚೀನಾ ಪ್ರಜೆಗಳು ಸಾ*ವನ್ನಪ್ಪಿದ್ದಾರೆ. ಕನಿಷ್ಠ ಎಂಟು ಮಂದಿ ಗಾ*ಯಗೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.
ಸಿಂಧ್ ಪ್ರಾಂತ್ಯದಲ್ಲಿ ಪವರ್ ಪ್ರಾಜೆಕ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಚೀನಾದ ಇಂಜಿನಿಯರ್ಗಳ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋ*ಟ ನಡೆಸಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಪ್ರತ್ಯೇಕತಾವಾದಿ ಬಲೂಚಿಸ್ತಾನ್ ರಾಷ್ಟ್ರೀಯ ಸೇನೆ ದಾಳಿಯ ಹೊಣೆ ಹೊತ್ತುಕೊಂಡಿದೆ.
ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಫೋ*ಟಕ್ಕೆ ಸುಧಾರಿತ ಸ್ಫೋ*ಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದ ಹಲವು ಪ್ರದೇಶಗಳಲ್ಲಿ ಸ್ಫೋ*ಟದ ಸದ್ದು ಕೇಳಿಬಂದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಇದು ಚೀನಾದ ಪ್ರಜೆಗಳ ಮೇಲೆ ನಡೆದ ದಾ*ಳಿಯಾಗಿದ್ದು, ಸಾವಿರಾರು ಚೀನೀ ಕಾರ್ಮಿಕರು ಪಾಕಿಸ್ತಾನದಲ್ಲಿದ್ದಾರೆ. ಅವರಲ್ಲಿ ಹೆಚ್ಚಿನವರು ಬೀಜಿಂಗ್ನ ಬಹು-ಶತಕೋಟಿ-ಡಾಲರ್ ವೆಚ್ಚದ ಬೆಲ್ಟ್ ಮತ್ತು ರೋಡ್ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ದಕ್ಷಿಣ ಮತ್ತು ಮಧ್ಯ ಏಷ್ಯಾವನ್ನು ಚೀನಾದ ರಾಜಧಾನಿಯೊಂದಿಗೆ ಸಂಪರ್ಕಿಸುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : VIRAL VIDEO: ಶಾಲೆಗೆ ಹೋಗದೆ ಗಲ್ಲಿ ಮೂಲೆಯಲ್ಲಿ ನಿಂತು ಹೈಸ್ಕೂಲ್ ವಿದ್ಯಾರ್ಥಿಗಳ ರೊಮ್ಯಾನ್ಸ್
ಈ ವರ್ಷದ ಮಾರ್ಚ್ ನಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆತ್ಮಹ*ತ್ಯಾ ಬಾಂ*ಬ್ ಸ್ಫೋ*ಟದಲ್ಲಿ ಐವರು ಚೀನೀ ಪ್ರಜೆಗಳು, ಸ್ಥಳೀಯರೊಬ್ಬರು ಸಾ*ವನ್ನಪ್ಪಿದ್ದರು.
BIG BOSS
BBK 11: ಜಗದೀಶ್ ಅಲ್ವಂತೆ! ಬಿಗ್ ಬಾಸ್ ಮನೆಯಲ್ಲಿ ಈ ವ್ಯಕ್ತಿ ತುಂಬಾ ಡೇಂಜರಸ್ ಎಂದ ನಟಿ ಯಮುನಾ!
ಬಿಗ್ ಬಾಸ್ ಕನ್ನಡ ಸೀಸನ್ 11 ಮೊದಲ ವಾರ ಪೂರ್ತಿಗೊಂಡು ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಯಮುನಾ ಮನೆಯಿಂದ ಹೊರಬಂದಿದ್ದಾರೆ. ಹೊರ ಬಂದ ಬಳಿಕ ಬಿಗ್ಬಾಸ್ ಕುರಿತು ಮಾತನಾಡಿದ್ದಾರೆ. ಹಲವು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ತುಂಬಾ ಡೇಂಜರಸ್ ವ್ಯಕ್ತಿಯ ಬಗ್ಗೆಯೂ ನಟಿ ಯಮುನಾ ಹೇಳಿದ್ದಾರೆ. ಲಾಯರ್ ಜಗದೀಶ್ಗಿಂತ ಉಗ್ರಂ ಮಂಜು ತುಂಬಾ ಡೇಂಜರಸ್ ಎಂದು ಹೇಳಿದ್ದಾರೆ. ಸಿಕ್ಕಪಟ್ಟೆ ಮ್ಯಾನಿಪುಲೇಟ್, ಎಲ್ಲರನ್ನು ತಮ್ಮತ್ತ ಸೆಳೆಯುವವರು. ಏನು ಹೇಳದೆ ಏನು ಮಾಡದೆ ಟ್ರಿಕ್ ಮಾಡುವವರು ಎಂದು ಹೇಳಿದ್ದಾರೆ.
ಸದ್ಯ ಮೊದಲ ವಾರವೇ ನಟಿ ಹೊರಬಂದಿದ್ದು, ಬಿಗ್ ಮನೆಯ ಆಟಗಾರರ ಬಗ್ಗೆ ಮನಬಿಚ್ಚಿ ಹೇಳಿದ್ದಾರೆ. ಅದರಲ್ಲೂ ಆಟವನ್ನು ಇನ್ನೂ ಪ್ರಾರಂಭಿಸದವರು ಮತ್ತು ಪ್ರಾರಂಭಿಸಿದವರ ಬಗ್ಗೆಯೂ ಹೇಳಿದ್ದಾರೆ. ಲಾಯರ್ ಜಗದೀಶ್ ಮೊದಲ ದಿನದಿಂದಲೇ ಆಟ ಶುರು ಮಾಡಿದ್ದಾರೆಂದು ಹೇಳಿದ್ದಾರೆ. ಒಟ್ಟಿನಲ್ಲಿ ಕಿಚ್ಚ ನಿರೂಪಣೆಗೆ ಬಿಗ್ ಬಾಸ್ ಮನೆಯಲ್ಲಿ ಒಂದು ವಾರ ಕಳೆದ ಅನುಭವವನ್ನು ನಟಿ ಯಮುನಾ ಬಿಚ್ಚಿಟ್ಟಿದ್ದಾರೆ.
BIG BOSS
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು ಒಂದು ವಾರ ಕಳೆದಿದೆ. ಪ್ರತಿ ಸೀಸನ್ನಂತೆ ಈ ಬಾರಿಯೂ ಕೂಡ ಬಿಗ್ಬಾಸ್ ಮನೆಯಿಂದ ಓರ್ವ ಸ್ಪರ್ಧಿ ಆಚೆ ಬಂದಿದ್ದಾರೆ. ಕನ್ನಡದ ಬಿಗ್ಬಾಸ್ ಸೀಸನ್ 11 ಶುರುವಾಗಿ ಒಂದೇ ವಾರಕ್ಕೆ ಕನ್ನಡದ ನಟಿ ಯಮುನಾ ಶ್ರೀನಿಧಿ ಆಚೆ ಬಂದಿದ್ದಾರೆ.
ಈ ವಾರದಲ್ಲಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 9 ಮಂದಿ ನಾಮಿನೇಟ್ ಆಗಿದ್ದರು. ಲಾಯರ್ ಜಗದೀಶ್, ಗೌತಮಿ ಜಾಧವ್, ಹಂಸ, ಭವ್ಯಾ ಗೌಡ, ಯಮುನಾ, ಶಿಶಿರ್, ಮಾನಸಾ, ಮೋಕ್ಷಿತಾ ಪೈ ಹಾಗೂ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಶನಿವಾರದ ಎಪಿಸೋಡ್ನಲ್ಲಿ ಭವ್ಯಾ ಗೌಡ, ಗೌತಮಿ ಜಾಧವ್ ಹಾಗೂ ಮಾನಸ ಅವರನ್ನು ಸೇಫ್ ಮಾಡಲಾಗಿತ್ತು. ಇನ್ನೂ ಉಳಿದಂತೆ ಉಗ್ರಂ ಮಂಜು, ಐಶ್ವರ್ಯ, ಧರ್ಮ ಕೀರ್ತಿರಾಜ್, ಧನರಾಜ್, ಅನುಷಾ ರೈ, ರಂಜಿತ್, ಗೋಲ್ಡ್ ಸುರೇಶ್, ತ್ರೀವಿಕ್ರಂ ಸೇಫ್ ಆಗಿದ್ದರು.
ಇವರ ಪೈಕಿ ಮೊದಲ ವಾರವೇ ಬಿಗ್ಬಾಸ್ ಮನೆಯಿಂದ ಯಮುನ ಶ್ರೀ ನಿಧಿ ಔಟ್ ಆಗಿದ್ದಾರೆ. ಇವರು ಸರಿಯಾಗಿ ಟಾಸ್ಕ್ ಗಳನ್ನು ಆಡದ ಕಾರಣ ಹಾಗೂ ಇವರ ಅಭಿಮಾನಿಗಳು ಸರಿಯಾಗಿ ಓಟ್ ಹಾಕದ ಕಾರಣ ಬಿಗ್ಬಾಸ್ ಮನೆಯಿಂದ ಔಟ್ ಆಗಿದ್ದಾರೆ ಎನ್ನುವ ಸಂಶಯ ಅಭಿಮಾನಿಗಳಲ್ಲಿ ಮೂಡಿದೆ. ಒಟ್ಟು 17 ಸ್ಪರ್ಧಿಗಳಿದ್ದ ದೊಡ್ಮನೆಯಲ್ಲಿ ಈಗ ಓರ್ವ ಸ್ಪರ್ಧಿಯನ್ನು ಆಚೆ ಕಳುಹಿಸಲಾಗಿದೆ. ಹೀಗೆ ಪ್ರತಿ ವಾರವು ಬಿಗ್ಬಾಸ್ ಮನೆಯಿಂದ ಒಬ್ಬರಾದ ಮೇಲೆ ಒಬ್ಬರು ಸ್ಪರ್ಧಿಗಳು ಬಿಗ್ಬಾಸ್ ಮನೆಯಿಂದ ಆಚೆ ಬರಲಿದ್ದಾರೆ.
LATEST NEWS
27ನೇ ಮಹಡಿಯಿಂದ ಬಿದ್ದ 3 ವರ್ಷದ ಮಗು; ಬದುಕಿದ್ದೇ ಪವಾಡ!
ಮಂಗಳೂರು/ನೋಯ್ಡಾ : ಅಪಾರ್ಟ್ಮೆಂಟ್ ಒಂದರ 27ನೇ ಮಹಡಿಯಿಂದ ಬಿದ್ದ ಮೂರು ವರ್ಷದ ಮಗು ಪವಾಡ ಸದೃಶ ರೀತಿಯಲ್ಲಿ ಜೀ*ವ ಉಳಿಸಿಕೊಂಡಿದೆ. ಈ ಘಟನೆ ಉತ್ತರ ಪ್ರದೇಶದ ನೋಯ್ಡಾದ ಗೌರ ಸಿಟಿ -14 ರಲ್ಲಿ ನಡೆದಿದ್ದು, ಸದ್ಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಶುಕ್ರವಾರ ಈ ಘಟನೆ ನಡೆದಿದ್ದು, ನೋಯ್ಡಾದ ಗೌರ್ ಸಿಟಿ-14 ರ 27ನೇ ಮಹಡಿಯಿಂದ ಮೂರು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದಿದೆ. ಮಧ್ಯಾಹ್ನ 12.30 ರ ಸುಮಾರಿಗೆ ಮಗುವಿನ ತಾಯಿ ಅಡುಗೆ ಮನೆಯಲ್ಲಿ ಇದ್ದಾಗ ಈ ಘಟನೆ ನಡೆದಿದೆ.
ಕಾಲು ಜಾರಿ ಬಿದ್ದ ಮಗು :
ಬಾಲ್ಕನಿಯಲ್ಲಿ ಆಟ ಆಡುತ್ತಿದ್ದ ಮಗು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದೆ. 27ನೇ ಮಹಡಿಯಿಂದ ಬಿದ್ದ ಮಗು 12ನೇ ಮಹಡಿಯ ಬಾಲ್ಕನಿಯಲ್ಲಿ ಸಿಲುಕಿಕೊಂಡಿದೆ.
ಇದನ್ನೂ ಓದಿ : ಮನೆಕೆಲಸ ಮಾಡಿ ಪತ್ರ ಬರೆದಿಟ್ಟ ವಿಚಿತ್ರ ಕಳ್ಳ – ನೋಡಿದ್ರೆ ನೀವೆ ಶಾಕ್ ಆಗ್ತೀರ !!
ಪವಾಡ ಎಂಬಂತೆ ಹದಿನೈದು ಮಹಡಿಯಷ್ಟು ಕೆಳಗೆ ಬಿದ್ದ ಮಗು ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾ*ಣ ಉಳಿಸಿಕೊಂಡಿದೆ. ಮಗು ಬೀಳುವುದನ್ನು ಗಮನಿಸಿ ಅಪಾರ್ಟ್ಮೆಂಟ್ ನಿವಾಸಿಗಳು ತಕ್ಷಣ ಓಡಿ ಬಂದು ನೋಡಿದ್ದಾರೆ. ಈ ವೇಳೆ ಮಗು 12ನೇ ಮಹಡಿಯ ಬಾಲ್ಕನಿಯಲ್ಲಿ ಸಿಲುಕಿಕೊಂಡಿದ್ದು ಕಂಡು ಬಂದಿದೆ. ತಕ್ಷಣ ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಪ್ರಾ*ಣಾಪಾಯದಿಂದ ಪಾರಾಗಿದ್ದಾಗಿ ವೈದ್ಯರು ಹೇಳಿದ್ದಾರೆ.