LATEST NEWS
ಕರಾವಳಿಯಲ್ಲಿ ರಣಭೀಕರ ಮಳೆಗೆ ಹೈರಾಣಾದ ಜನತೆ-ಅಪಾರ ಹಾನಿ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಕೂಡಾ ಆಗಿದೆ.
ನಗರದ ರಾಷ್ಟ್ರೀಯ ಹೆದ್ದಾರಿ 73ನೇ ಪಡೀಲು ಹೈವೇ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಓವರ್ ಬ್ರಿಡ್ಜ್ ಒಳಗಡೆ ಕೂಡಾ ಸಂಪೂರ್ಣವಾಗಿ ನೀರು ನಿಂತಿದ್ದು ವಾಹನಗಳು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಓವರ್ ಬ್ರಿಡ್ಜ್ನ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈ ಹಿಂದೆಯೂ ಹಲವು ಬಾರಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸ್ಥಳೀಯರು ಅಧಿಕಾರಿಗಳಿಗೆ ಛೀಮಾರಿ ಹಾಕುತ್ತಿದ್ದಾರೆ.
ಇನ್ನು ಸುಳ್ಯ ಪುತ್ತೂರು ಕಡೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯಯವಾಗಿದೆ. ಅಷ್ಟೇ ಅಲ್ಲದೆ ಗಾಳಿ ಮಳೆಯ ಪರಿಣಾಮ ಮರಗಳು ರಸ್ತೆ ಅಡ್ಡಕ್ಕೆ ಧರಾಶಾಹಿಯಾಗಿ ಉರುಳಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.
ಪೆರ್ಮಂಕಿ-ಮಂಗಳೂರು ರಸ್ತೆಯಲ್ಲಿ ಕೂಡಾ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ನಗರದ ಪಂಪ್ವೆಲ್ , ತೊಕ್ಕೊಟ್ಟು, ಕೊಟ್ಟಾರ ಚೌಕಿ ಮತ್ತಿತರ ಕೆಲವು ಜಂಕ್ಷನ್ಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲಾಗದೆ ನಿಂತಿವೆ.
ಕೊಟ್ಟಾರ ಚೌಕಿಯಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲಾಗಿರುವ ಕಾರಣ ಇಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಜನತೆ ಕಂಗೆಟ್ಟಿದೆ.
ಘಟನಾ ಸ್ಥಳಕ್ಕೆ ಮಂಗಳೂರು ನಗರ ಪಾಲಿಕೆ ಆಯುಕ್ತರು , ಸ್ಥಳೀಯ ಕಾರ್ಪೋರೇಟರ್ ಕಿರಣ್ ಕುಮಾರ್ ಸಹಿತ ಇತರ ಅಧಿಕಾರಿಗಳು ಆಗಮಿಸಿ ಇಲ್ಲಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.
ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೃತಕ ನೆರೆನೀರಿನಿಂದ ಜನ ಕಂಗೆಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಟ್ಟಾರ ಚೌಕಿಯಲ್ಲಿ ಜನರೇ ಮುಂದೆ ನಿಂತು ವಾಹನಗಳ ಸರಾಗ ಸಂಚಾರಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಿದರು.
ಪಂಪ್ವೆಲ್ನಲ್ಲಿ ಪೈಪ್ ಒಡೆದು ಹೋಗಿರುವ ಕಾರಣ ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ವಾಹನಗಳಿಗೆ ಸರಾಗವಾಗಿ ಹೋಗಲಾಗದೇ ಸಂಚಾರ ಆಮೆಗತಿಯಲ್ಲಿ ಸಾಗಿದವು.
ರಾ.ಹೆ. 75ರ ಅಡ್ಯಾರ್ ಸಮೀಪದ ಕಣ್ಣೂರು ಮತ್ತು ತೊಕ್ಕೊಟ್ಟು-ಮೆಲ್ಕಾರ್ ರಸ್ತೆಯನ್ನು ಸಂಪರ್ಕಿಸುವ ಹಲವು ಕಡೆಗಳಲ್ಲೂ ಕೂಡ ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ನೀರು ತುಂಬಿಕೊಂಡಿದ್ದು, ಪಾದಚಾರಿಗಳಿಗೆ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಮಂಗಳೂರಿನ ನೀರುಮಾರ್ಗ ಸಮೀಪದ ಬದನಡಿ ಕ್ಷೇತ್ರ ಆವರಣಕ್ಕೆ ಭಾರೀ ನೀರು ನುಗ್ಗಿದ್ದು, ಮಳೆ ನೀರಿನಿಂದ ಜಲಾವೃತ್ತಗೊಂಡಿದೆ.
ಮಂಗಳೂರಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವು ತೋಟಗಳಿಗೆ ಅಪಾರವಾಗಿ ನೀರು ನುಗ್ಗಿದೆ. ಇನ್ನೂ ಕೆಲವೆಡೆ ಅಡಿಕೆ ಹಾಗೂ ತೆಂಗಿನ ಮರ ಕೂಡಾ ಉರುಳಿಬಿದ್ದಿದ್ದು ಕೃಷಿಕರಿಗೆ ಅಪಾರ ಮಟ್ಟದ ನಷ್ಟ ಸಂಭವಿಸಿದೆ.
ಧಾರಾಕಾರ ಮಳೆ ಪರಿಣಾಮ ಭೂಕುಸಿತ ಸಂಭವಿಸಿದ್ದರಿಂದ ರೈಲು ಸಂಚಾರಕ್ಕೆ ತೊಂದರೆಯಾಗುವುದರಿಂದ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ರೈಲು ಸಂಚಾರ ನಿರ್ಬಂಧ ಮಾಡಲಾಗಿದೆ.
ಮಂಗಳೂರು -ಪಡೀಲ್ ಹಾಗೂ ಸುಬ್ರಹ್ಮಣ್ಯ-ಮಂಗಳೂರು ಕಡೆಗೆ ಸಂಚರಿಸುವ ರೈಲು ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಇನ್ನು ಮರವೂರು ಸೇತುವೆ ಬಳಿ ಕೂಡಾ ರಸ್ತೆ ಬಿರುಕುಬಿಟ್ಟಿದೆ.
DAKSHINA KANNADA
ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!
ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.
ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
- bangalore7 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ