kerala
ಕೇರಳದಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ..! ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ಕೇರಳ/ಮಂಗಳೂರು: ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು(ಆ.13) ಕೇರಳದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳಲ್ಲಿ ಬುಧವಾರ ಹಾಗೂ ಗುರುವಾರ ಇಡುಕ್ಕಿಯಲ್ಲಿ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಐಎಂಡಿ ವರದಿ ನೀಡಿದೆ.
ಇಂದು(ಆ.13) ತಿರುವನಂತಪುರಂ ಕೊಲ್ಲಂ ಮತ್ತು ಪತ್ತನತಿಟ್ಟಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 40 ಕಿ.ಮೀ ನಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗು ಕರಾವಳಿ ಪ್ರದೇಶಗಳಲ್ಲಿನ ಜನರು ಜಾಗರೂಕರಾಗಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
FILM
ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ದ ಎಫ್ಐಆರ್..!
ಈಗಾಗಲೇ ಕನ್ನಡ ಚಿತ್ರರಂಗದ ಮಾದರಿಯಲ್ಲೇ ಮಲಯಾಳಂ ಚಿತ್ರರಂಗದಲ್ಲೂ ಮೀಟೂ ಭಾರೀ ಸದ್ದು ಮಾಡುತ್ತಿದ್ದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ.
ಮಲಯಾಳಂ ಚಿತ್ರರಂಗದಲ್ಲಿ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿದ್ದು ಸೋಮವಾರ ಕೇರಳ ಪೊಲೀಸರು ಚಲನಚಿತ್ರ ನಿರ್ಮಾಪಕ ರಂಜಿತ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಅವರು ಕೊಚ್ಚಿ ನಗರ ಪೊಲೀಸ್ ಕಮಿಷನರ್ಗೆ ಚಲನಚಿತ್ರ ನಿರ್ಮಾಪಕರ ವಿರುದ್ಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. 2009ರಲ್ಲಿ ‘ಪಾಲೇರಿ ಮಾಣಿಕ್ಯಂ’ ಸಿನಿಮಾದಲ್ಲಿ ನಟಿಸುವಂತೆ ನಟಿಯನ್ನು ಆಹ್ವಾನಿಸಿದ ನಂತರ ರಂಜಿತ್ ಅವರು ಲೈಂಗಿಕ ಉದ್ದೇಶದಿಂದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಕೊಚ್ಚಿ ಪೊಲೀಸ್ ಕಮಿಷನರ್ ಎಸ್ ಶ್ಯಾಮಸುಂದರ್ ಪ್ರಕಾರ, ಐಪಿಸಿ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಘನತೆಗೆ ಹಾನಿಗೊಳಿಸುವ ಉದ್ದೇಶದಿಂದ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ ..!!
ನಿರ್ದೇಶಕ ರಂಜಿತ್ ವಿರುದ್ಧ ಆರೋಪ
ರಂಜಿತ್ ಅವರು ವರ್ಷಗಳ ಹಿಂದೆ ಸ್ಕ್ರಿಪ್ಟ್ ಕುರಿತು ಚರ್ಚಿಸುವಾಗ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ಮಿತ್ರ ಆರೋಪಿಸಿದ್ದಾರೆ. “ರಂಜಿತ್ ಮಲಯಾಳಂ ಚಿತ್ರರಂಗದಲ್ಲಿ ಖ್ಯಾತನಾಮರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ. ಮುಂಬರುವ ಚಲನಚಿತ್ರ ಯೋಜನೆ ಕುರಿತು ಚರ್ಚಿಸಲು ನಾನು ಅವರ ಮನೆಗೆ ಹೋಗಿದ್ದೆ. ಅಲ್ಲಿ ಅವರ ನಡವಳಿಕೆ ನನಗೆ ಇಷ್ಟವಾಗಲಿಲ್ಲ. ನಾವು ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿರುವಾಗ ಅವರು ಅನುಚಿತವಾಗಿ ವರ್ತಿಸಿದರು” ಎಂದು ಶ್ರೀಲೇಖಾ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ಘಟನೆ ನಂತರ “ನಾನು ಆ ಪ್ರಾಜೆಕ್ಟ್ ನಲ್ಲಿ ಭಾಗಿಯಾಗಲು ನಿರಾಕರಿಸಿ ಕೋಲ್ಕತ್ತಾಗೆ ಮರಳಿದೆ” ಎಂದು ನಟಿ ಹೇಳಿದ್ದಾರೆ.
ಅವರು ಚಿತ್ರರಂಗದ ಇತರ ನಟಿಯರೊಂದಿಗೆ ಅದೇ ರೀತಿ ನಡೆಸಿಕೊಂಡಿದ್ದಾರೆಯೇ ಎಂದು ನನಗೆ ಗೊತ್ತಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ಅದನ್ನು ಬಹಿರಂಗಪಡಿಸುವುದು ಅವರಿಗೆ ಬಿಟ್ಟದ್ದು. ಬಹುಶಃ ನಿರ್ದೇಶಕರ ಶಕ್ತಿ ಮತ್ತು ಪ್ರಭಾವವು ಇತರರು ಮಾತನಾಡದಿರುವಂತೆ ತಡೆಯುತ್ತಿದೆ ಎಂದು ಶ್ರೀಲೇಖಾ ಹೇಳಿದ್ದಾರೆ. ಆದಾಗ್ಯೂ, ನಟಿಯ ಆರೋಪಗಳನ್ನು ತಿರಸ್ಕರಿಸಿದ ರಂಜಿತ್, ಪ್ರಕರಣದಲ್ಲಿ ನಾನೇ “ನಿಜವಾದ ಸಂತ್ರಸ್ತ” ಎಂದು ಹೇಳಿದ್ದಾರೆ.
kerala
ಮಂಜೇಶ್ವರ: ಗುಡ್ಡ ಕುಸಿಯುವ ಭೀತಿಯಲ್ಲಿ ವರ್ಕಾಡಿ ಗ್ರಾಮ ನಿವಾಸಿಗಳು.!!
ಮಂಜೇಶ್ವರ: ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಈಗಾಗಲೇ ಹಲವಾರು ಕಡೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ವರ್ಕಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಬಾಕ್ರಬೈಲು ಎಂಬಲ್ಲಿನ ಕಜೆ ಪ್ರದೇಶದಲ್ಲಿ ಈ ಬಿರುಕು ಕಂಡು ಬಂದಿದೆ.
ಬಿರುಕು ಬಿಟ್ಟಿರುವ ಈ ಗುಡ್ಡದ ಕೆಳ ಭಾಗದಲ್ಲಿ ಕೆಲವು ಮನೆಗಳಿದ್ದು, ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಸ್ಥಳೀಯರು ಭೂಮಿ ಬಿರುಕು ಬಿಟ್ಟು ಒಂದು ಭಾಗ ಜಾರಿರುವ ಬಗ್ಗೆ ಸ್ಥಳೀಯ ಪಂಚಾಯತ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳ ಪರಿಶೀಲನೆ ನಡೆಸಿರುವ ಪಂಚಾಯತ್ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳಿಂದ ಮಳೆ ಕೊಂಚ ವಿರಾಮ ನೀಡಿದ್ದು, ಮತ್ತೆ ಮಳೆ ಆರಂಭವಾದಲ್ಲಿ ಈ ಭಾಗದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
kerala
ಸಿಬಿಐ ಸೋಗಿನಲ್ಲಿ ಕರೆ ಮಾಡಿ ಹಣ ವಸೂಲಿಗೆ ಸಂಚು..! ಬಚಾವ್ ಆದ ಉದ್ಯಮಿ..!!
ಕಾಸರಗೋಡು: ಮಂಜೇಶ್ವರದ ಉದ್ಯಮಿಯೊಬ್ಬರಿಗೆ ದೂರವಾಣಿ ಕರೆಬಂದಿದ್ದು ತಾನು ಸಿಬಿಐ ಅಧಿಕಾರಿ ಎಂದು ಹೇಳಿ ಅವರಿಂದ 15 ಲಕ್ಷ ರೂಪಾಯಿ ವಸೂಲಿ ಮಾಡುವ ಪ್ರಯತ್ನ ನಡೆದಿದೆ.
ಉದ್ಯಮಿಗೆ ಕರೆ ಮಾಡಿದ ಆತ ಸಿಬಿಐ ಅಧಿಕಾರಿ ಸೋಗಿನಲ್ಲಿ ಮಾತನಾಡಿ ಉದ್ಯಮಿಯ ಪುತ್ರಿ ಮಾದಕವಸ್ತು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದು ಅವರನ್ನು ಬಂಧಿಸಲಾಗಿದೆ. ಅವರನ್ನು ದೆಹಲಿಗೆ ಕರೆದೊಯ್ಯುತ್ತಿದ್ದೇವೆ. ಈ ಪ್ರಕರಣದಿಂದ ಅವಳನ್ನು ಬಚಾವ್ ಮಾಡಬೇಕೆಂದಿದ್ದರೆ 15 ಲಕ್ಷ ರೂಪಾಯಿ ನೀಡಬೇಕು ಎಂದು ಹೇಳಿದ್ದಾರೆ. ಅಲ್ಲದೇ ಪುತ್ರಿ ಧ್ವನಿಯಲ್ಲೇ ಮಾತೃಭಾಷೆಯಲ್ಲಿ ತನ್ನ ತಂದೆಯ ಜೊತೆ ಮಾತನಾಡಿದ ಧ್ವನಿಯನ್ನು ಆಲಿಸಲಾಗಿತ್ತು. ವಂಚಕರು ಹಿಂದಿ ಭಾಷೆಯಲ್ಲಿ ಉದ್ಯಮಿ ಜೊತೆ ಮಾತನಾಡಿದ್ದಾರೆ. ಅಲ್ಲದೇ ಹಣ ಕಳುಹಿಸಲು ಗೂಗಲ್ ಪೇ ನಂಬರನ್ನು ಕೂಡಾ ರವಾನಿಸಿದ್ದಾರೆ.
ಪೊಲೀಸ್ ಮನೆಯಲ್ಲೇ ಕಳ್ಳತನ ಎಸಗಿದ ಕಳ್ಳರು.! ನಿಂಬೆ ಹಣ್ಣು ಇಟ್ಟು ಮನೆ ಬೀಗ ಮುರಿದ ಖದೀಮರು
ಇದರಿಂದ ಗಾಬರಿಗೊಂಡ ಉದ್ಯಮಿ ಕೂಡಲೇ ಪುತ್ರಿ ಕಲಿಯುತ್ತಿದ್ದ ಕಾಲೇಜಿಗೆ ಕರೆ ಮಾಡಿದ್ದಾರೆ. ಅಲ್ಲಿ ವಿದ್ಯಾರ್ಥಿನಿ ತರಗತಿಯಲ್ಲಿ ಇರುವುದಾಗಿ ಹೇಳಿದ್ದು, ಬಳಿಕ ಉದ್ಯಮಿ ನಿರಾತಂಕರಾಗಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಹಲವು ಕಾಲೇಜಿನ ವಿದ್ಯಾರ್ಥಿಗಳಿಗೆ ಇದೇ ರೀತಿ ಕರೆಗಳು ಬಂದಿದೆ ಎಂದು ಮಾಹಿತಿ ಲಭಿಸಿದೆ ಎನ್ನಲಾಗಿದೆ.
- FILM6 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- LATEST NEWS5 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
- FILM6 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!
- FILM5 days ago
ಶಾಂಕಿಂಗ್ ನ್ಯೂಸ್ : ಕಟ್ಟಡದಿಂದ ಹಾರಿ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆ