ನೇಪಾಳದಲ್ಲಿ ವರುಣನ ಆರ್ಭಟ : ಭೂಕುಸಿತಕ್ಕೆ9 ಮಂದಿ ಸಾವು- 22 ಕಣ್ಮರೆ..!
ಕಾಠ್ಮಂಡು : ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಭಾನುವಾರ ಮುಂಜಾನೆ ಭೂ ಕುಸಿತ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.
ನೇಪಾಳದ ನಾಗಪುಜೆ, ಬ್ರಿಖಾರ್ಕ, ನೆವಾರ ಗ್ರಾಮಗಳಲ್ಲಿ ಭಾನುವಾರ ಬೆಳಿಗ್ಗೆ 2.30 ರ ಸುಮಾರಿಗೆ ಭೂ ಕುಸಿತ ಸಂಭವಿಸಿದೆ.
ಇದರಲ್ಲಿ 9 ಜನರು ಸಾವನ್ನಪ್ಪಿದ್ದು, 22 ಮಂದಿ ನಾಪತ್ತೆಯಾಗಿದ್ದಾರೆ.
‘ಘಟನಾ ಸ್ಥಳದಿಂದ ಏಳು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಗುಂಥಗ ಪ್ರಾಂತ್ಯದಲ್ಲಿ 22 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಸಿಂಧುಪಾಲ್ಚೌಕ್ ಜಿಲ್ಲಾ ಪೊಲೀಸ್ ಕಚೇರಿಯ ಮುಖ್ಯಸ್ಥ ರಾಜನ್ ಅಧಿಕಾರಿ ಅವರು ತಿಳಿಸಿದ್ದಾರೆ.
ನೇಪಾಳ ಸೇನೆ, ಪೊಲೀಸ್,ಸಶಸ್ತ್ರ ಪೊಲೀಸ್ ಪಡೆಯು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ.