BANTWAL
ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ರುದ್ರ ನರ್ತನ : ಹಲವು ಕಡೆ ಜಲಾವೃತ- ಅಪಾರ ಹಾನಿ..!
ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ರುದ್ರ ನರ್ತನ : ಹಲವು ಕಡೆ ಜಲಾವೃತ- ಅಪಾರ ಹಾನಿ..!
ಮಂಗಳೂರು : ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಯಲ್ಲಿ ನೇತ್ರಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉಪ್ಪಿನಂಗಡಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ 30 ಮೀಟರ್ ಗಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ.
ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು ಮೊದಲಾದ ಪ್ರದೇಶಗಳ ಕೃಷಿಭೂಮಿಗೂ ಪ್ರವಾಹದ ನೀರು ಹರಿಯಲಾರಂಭಿಸಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ತನ್ನ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.
ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆಮಂಗಳೂರು, ಗೂಡಿನ ಬಳಿ ಮೊದಲಾದ ಕಡೆಗಳಲ್ಲಿ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ.
ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ.
ಸುಬ್ರಹ್ಮಣ್ಯ ಪರಿಸರದಲ್ಲಿ ಇದೀಗ ಮಳೆ ಪ್ರಮಾಣ ಕೊಂಚ ಕಡಿಮೆಯಾದ ಹಿನ್ನಲೆಯಲ್ಲಿ ನದಿ ನೀರಿನ ಮಟ್ಟ ಕ್ಷೀಣಿಸಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆ ರಭಸದಿಂದ ಹರಿಯಲಾರಂಭಿಸಿದೆ.
ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15 ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ.
ಕಳೆದ ಬಾರಿ ರೌದ್ರ ನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಈ ಬಾರಿಯೂ ಪ್ರವಾಹದ ರೀತಿಯಲ್ಲಿ ಹರಿಯುತ್ತಿದೆ.
ಹೊಳೆಯ ತೀರದಲ್ಲಿ ನೂತನವಾಗಿ ಕಟ್ಟಿದ್ದ ತಡೆಗೋಡೆಯನ್ನೂ ಪ್ರವಾಹದ ನೀರು ಕೊಚ್ಚಿಕೊಂಡು ಹೋಗಿವೆ.
ಪುತ್ತೂರಿನ ಮುಂಡೂರಿನಲ್ಲಿ ಭಾರಿ ಗಾಳಿ, ಮಳೆಗೆ ಮನೆಯ ಮಾಡು ಕುಸಿದ ಘಟನೆ ನಡೆದಿದೆ.
ಮುಂಡೂರು ಗ್ರಾಮದ ಗುತ್ತಿನಪಾಲು ಹೊನ್ನಪ್ಪ ಗೌಡ ಎಂಬವರ ಮನೆಯ ಮಾಡಿನ ಎರಡು ಬದಿಯ ಹಲವಾರು ಹಂಚುಗಳು ಮಳೆ, ಗಾಳಿಯ ರಭಸಕ್ಕೆ ಮುರಿದು ಬಿದ್ದಿದ್ದು ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಎಂ ಆರ್ ಪಿ ಎಲ್ ಗೆ ನೀರು ಸರಬರಾಜು ಮಾಡುವ ಬಂಟ್ವಾಳ ಶಂಭೂರಿನ ಡ್ಯಾಂ ಗೆ ಒಳ ಹರಿವು ಹೆಚ್ಚಾಗಿರುವುದರಿಂದ ಅಣೆಕಟ್ಟಿನಿಂದ ಗೇಟುಗಳನ್ನು ಓಪನ್ ಮಾಡಿ ನೀರನ್ನು ಹೊರಬಿಡಲಾಗಿದೆ.
ಈ ಹಿನ್ನೆಲೆಯಲ್ಲಿ ಬಂಟ್ವಾಳದ ಹಾಲಡ್ಕ, ಗೂಡಿನಬಳಿ, ಪಾಣೆಮಂಗಳೂರು, ನಂದಾವರ ಬಳಿ ಮನೆಗಳಿಗೆ ನುಗ್ಗಿದೆ. ಹಾಲಡ್ಕದಲ್ಲಿ 5 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ.
BANTWAL
ಬಂಟ್ವಾಳ: ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ
ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ.
ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮ್ಯಾಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳಲು ಸೂಚಿಸಿದೆ.
ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮ್ಯಾಪ್ ಈ ರಸ್ತೆಯನ್ನು ಸೂಚಿಸುತ್ತಿದೆ.ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ.ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ.ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು,ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಸರಪಾಡಿ ಬಿ.ಸಿ ರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು.
BANTWAL
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.
ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ ಹಾಗೂ ಪಿ ಕೆ ವಿಕಾಸ್ ಯೋಗ ಮಾರ್ಗದರ್ಶಕರಾಗಿ ಆಗಮಿಸಿ, ಹಲವಾರು ಯೋಗದ ಆಸನಗಳನ್ನು ಪ್ರದರ್ಶಿಸಿ ಅದರ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ,ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಹ ಶಿಕ್ಷಕಿಯರಾದ ಶೋಭಾ ಎಂ ಶೆಟ್ಟಿ ಹಾಗೂ ಜಯಶೀಲ ಕಾರ್ಯಕ್ರಮ ನಿರ್ವಹಿಸಿದರು.
BANTWAL
ಬಂಟ್ವಾಳ: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂ*ಗಿಕ ಕಿರು*ಕುಳ; ಆರೋಪಿ ಅರೆಸ್ಟ್
ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂ*ಗಿಕ ಕಿರು*ಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಲ್ಲಡ್ಕ ಸಮೀಪದ ಬೊಂಡಾಲ ಎಂಬಲ್ಲಿನ ಸಂತ್ರಸ್ತ ಮಹಿಳೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆಯ ಸ್ವಂತ ಊರು ಹಾಸನ ತಾಲೂಕಿನ ಬೇಲೂರು ಆಗಿದ್ದು, ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿದೆ. ಒಂದೆರೆಡು ಬಾರಿ ತಾಯಿ ಮನೆಗೆ ಈತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ನಂಬರ್ ಅನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ.
ಮೊಬೈಲ್ ಮೂಲಕ ಈತನ ಸಂಪರ್ಕ ಅತಿಯಾಗಿ ಕಳೆದ ಕೆಲ ಸಮಯದ ಹಿಂದೆ ಗಂಡನ ಮನೆ ಕಲ್ಲಡ್ಕಕ್ಕೆ ಬಂದಿದ್ದ. ಮನೆಗೆ ಬಂದ ಈತ ಮಹಿಳೆಗೆ ಕಿರು*ಕುಳ ನೀಡಿದ್ದಲ್ಲದೇ, ಮನೆಯೊಳಗೆ ಇದ್ದ ಅನೇಕ ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದ. ಈ ವೇಳೆ ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು ಎಂದು ಹೇಳಲಾಗಿದೆ.
ಇದೀಗ ಮತ್ತೆ ಹಾಸನದಿಂದ ಬಂಟ್ವಾಳಕ್ಕೆ ಬಂದಿಳಿದ ಆರೋಪಿ ಪ್ರಮೋದ್ ಮತ್ತೆ ಗಂಡನಿಲ್ಲದ ಸಮಯ ನೋಡಿಕೊಂಡು ಮಹಿಳೆಯ ಮನೆಗೆ ನುಗ್ಗಿದ್ದಾನೆ. ಈ ವೇಳೆ ಮಹಿಳೆಗೆ ಲೈಂ*ಗಿಕ ಕಿರು*ಕುಳ ನೀಡಲು ಪ್ರಯತ್ನಿಸಿದ್ದಾನೆ.
ಮಹಿಳೆ ಜೋರಾಗಿ ಬೊಬ್ಬೆ ಹೊಡೆದಾಗ ಮನೆಯ ಸಮೀಪದ ದೇವಾಲದೊಳಗೆ ಇದ್ದ ಗಂಡ ಬಂದು ರಕ್ಷಣೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭ ಮಹಿಳೆಗೆ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ, ಗಂಡ ಮಗುವಿನ ಜೊತೆ ಸೇರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದೀಗ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾಣಾ ಪೋಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- LATEST NEWS6 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA7 days ago
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
- DAKSHINA KANNADA3 days ago
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು
- FILM6 days ago
ಬೆಂಗಳೂರಿನಲ್ಲಿ ದರ್ಶನ್ ಅಭಿಮಾನಿಯ ಬಂಧನ