LATEST NEWS
ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ – ಜನ ತತ್ತರ
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲ್ಲಂದೂರು ಭಾಗದಲ್ಲಿ ಒಂದೇ ಗಂಟೆಗೆ ಸುಮಾರು 4 ಇಂಚು ಮಳೆ ಸುರಿದಿದ್ದು ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದು ಜನ ಸಂಚಾರಕ್ಕೆ ಸಮಸ್ಯೆ ತಂದೊಡ್ಡಿದೆ.
ಮಲ್ಲಂದೂರು-ಮುತ್ತೋಡಿ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು ಗುಡ್ಡದ ಮೇಲಿಂದ ಬಂಡೆ ಕಲ್ಲುಗಳು ಕೂಡ ರಸ್ತೆಗೆ ಉರುಳಿವೆ. ರಸ್ತೆಯ ಒಂದು ಬದಿಯ ಮಣ್ಣು ಸಂಪೂರ್ಣ ಕೊಚ್ಚಿ ಹೋಗಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ. ಗ್ರಾಮದಲ್ಲಿ ಸಂಚರಿಸೋ ಜನರಿಗೆ ದಿನಕ್ಕೆ ಒಂದೆರಡು ಬಸ್ ಓಡಾಡುತ್ತಿತ್ತು.
ಧಾರಾಕಾರ ಮಳೆಯಿಂದಾಗಿ ಬಸ್ ಸಂಚಾರಕ್ಕೂ ತಡೆಯೊಡ್ಡಿದೆ. ಮುಂಗಾರು ಮಳೆ ಕಳೆದು ಇದೀಗ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು ಮಲೆನಾಡಿನ ಜನರು ಕಂಗಾಲಾಗಿದ್ದಾರೆ.
DAKSHINA KANNADA
ಸುರತ್ಕಲ್ : ಸಮುದ್ರಪಾಲಾಗಿದ್ದ ಯುವಕನ ಶ*ವ ಪತ್ತೆ
ಸುರತ್ಕಲ್ : ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಶವ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ, 21 ವರ್ಷದ ಪ್ರಜ್ವಲ್ ಮೃ*ತ ಯುವಕ.
ನಿನ್ನೆ ಸುರತ್ಕಲ್ ಸಮೀಪದ ಮುಕ್ಕ ರೆಡ್ ರಾಕ್ ಬಳಿಯ ಕಡಲ ಕಿನಾರೆಗೆ 8 ಜನ ಸ್ನೇಹಿತರು ವಿಹಾರಕ್ಕೆ ಬಂದಿದ್ದರು. ಸಮುದ್ರ ಕಿನಾರೆಯಲ್ಲಿ ಅಲೆಗಳ ಜೊತೆ ಆಟವಾಡುತ್ತಿದ್ದ ವೇಳೆ ಜೋರಾಗಿ ಅಪ್ಪಳಿಸಿದ ಅಲೆಯಲ್ಲಿ ಪ್ರಜ್ವಲ್ ಕೊಚ್ಚಿಕೊಂಡು ಹೋಗಿದ್ದ. ಅಲೆಗಳ ಹೊಡೆತದಿಂದ ತಪ್ಪಿಸಿಕೊಂಡ ಇತರ ಯುವಕರು ತಮ್ಮ ಜೀ*ವ ಉಳಿಸಿಕೊಂಡಿದ್ದರು.
ಇದನ್ನೂ ಓದಿ : ಬಿಗ್ ಬಾಸ್ ಮನೆಯ ರಾಜಕೀಯ ವಿಚಾರಿಸಲು ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
ಈ ಬಗ್ಗೆ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಾಪತ್ತೆಯಾದ ಯುವಕನಿಗಾಗಿ ಶೋಧಕಾರ್ಯ ನಡೆಸಲಾಗಿತ್ತು. ಇಂದು ಯುವಕನ ಶ*ವ ಪತ್ತೆಯಾಗಿದೆ.
LATEST NEWS
ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ.
ಇಂದು ಇಂಡಿಗೊ, ಏರ್ ಇಂಡಿಯಾ, ವಿಸ್ತಾರಾ ಮತ್ತು ಅಕಾಸಾ ಏರ್ ಸೇರಿದಂತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಕೆಲ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿಮಾನಗಳನ್ನು ಬಾಂಬ್ ನಿಷ್ಕ್ರೀಯ ದಳದವರು ತಪಾಸಣೆಗೆ ಒಳಪಡಿಸುತ್ತಿದ್ದಾರೆ.
LATEST NEWS
ಹೆಣ್ಣು ಹೆತ್ತಿದಕ್ಕೆ ಅವಮಾನ; 3 ಹೆಣ್ಣು ಮಕ್ಕಳ ತ*ಬ್ಬಲಿಯಾಗಿಸಿ ಹೊರಟ ತಾಯಿ
ಮಂಗಳೂರು/ಕೊಪ್ಪಳ: ಮೂರು ಹೆಣ್ಣು ಹೆತ್ತಳು ಎನ್ನುವ ಕಾರಣಕ್ಕೆ ಪತಿ ಸೇರಿದಂತೆ ಪತಿಯ ಕುಟುಂಬಸ್ಥರು ನಿಂದಿಸಿದರು ಎನ್ನುವ ಕಾರಣಕ್ಕೆ ಮನನೊಂದು ಹನುಮವ್ವ ಆ*ತ್ಮಹತ್ಯೆ ಮಾಡಿಕೊಂಡು ಇ*ಹಲೋಕ ತ್ಯಜಿಸಿದ್ದಾರೆ.
ತಾಯಿ ಎದೆಗವಚಿಕೊಂಡು ಹಾಲು ಉಣ್ಣಬೇಕಾದ ನಾಲ್ಕು ತಿಂಗಳು ಹೆಣ್ಣು ಕೂಸು ಈಗ ಅ*ನಾಥ. ಅಷ್ಟೇ ಅಲ್ಲ, ನಾಲ್ಕು, ಮೂರು ವರ್ಷದ ಇನ್ನೆರಡು ಹೆಣ್ಣು ಮಕ್ಕಳೂ ಸಹ ಅ*ನಾಥವಾಗಿವೆ.
ಮುಖ್ಯ ಯುವತಿಯ ಪತಿ ಗಣೇಶ ಮಾಡಿದ ತಪ್ಪಿಗೆ ಜೈಲು ಸೇರಿದ್ದಾನೆ.
ಈಗ ಮಕ್ಕಳು ತಂದೆ, ತಾಯಿ ಇಲ್ಲದೆ ಅ*ನಾಥವಾಗಿವೆ. ಇತರ ಐವರು ಆರೋಪಿಗಳು ನಾಪತ್ತೆಯಾಗಿದ್ದರು. ಬಳಿಕ ತೀವ್ರವಾದ ಕಾರ್ಯಾಚರಣೆಯ ವೇಳೆ ಒಬ್ಬೊಬ್ಬರೆ ಪತ್ತೆಯಾಗುತ್ತಿದ್ದಾರೆ.
ಕೊ*ಲೆಯಾಗಿರುವ ಶಂಕೆ :
ಮಗಳು ಆ*ತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವೇ ಇಲ್ಲ ಎಂದು ತಂದೆ ತಾಯಿ ಪೊಲೀಸರ ಹೇಳಿದ್ದು, ಕೊ*ಲೆಯಾಗಿರಬಹುದು ಏಂದು ಶಂಕಿಸಲಾಗಿದೆ. ಹೆಣ್ಣು ಮಕ್ಕಳನ್ನೇ ಹೆತ್ತಿರುವ ಕಾರಣಕ್ಕೆ ಗಂಡನ ಮನೆಯವರು ಹಿಂಸೆ ನೀಡುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.
ಆ ಮೂವರು ಮಕ್ಕಳು ಗಣೇಶನ ಸಹೋದರನ ಮನೆಯಲ್ಲಿದ್ದಾರೆ ಎಂದು ಕೊಪ್ಪಳ ಗ್ರಾಮೀಣ ಠಾಣೆ ಸಿಪಿಐ ಡಿ. ಸುರೇಶ ತಿಳಿಸಿದ್ದಾರೆ.
ಸಮಗ್ರ ತನಿಖೆಯಾಗಬೇಕು. ಆಕೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಹೆಣ್ಣು ಹೆರುವುದೇ ತಪ್ಪಾ, ಇಂಥವರಿಗೆ ದೇವರು ಶಿಕ್ಷೆ ನೀಡಲಿ ಎಂದು ಮೃತಳ ತಂದೆ ಬಸಪ್ಪ ಕೋರಿ ಹೇಳಿದ್ದಾರೆ. ಸದ್ಯ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- FILM3 days ago
ಇರಲು ಮನೆ ಇರಲಿಲ್ಲ; ಮೆಜೆಸ್ಟಿಕ್ನಲ್ಲೇ ಸುತ್ತಾಡಿದ್ದ ಸಿಹಿ ಕುಟುಂಬ; ಕಷ್ಟಗಳ ನೆನೆದು ಪುಟಾಣಿ ಕಣ್ಣೀರು
- BIG BOSS6 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- LATEST NEWS3 days ago
ನಿಜವಾದ ಸಾಧನೆ: ಎಂ.ಬಿ.ಬಿ.ಎಸ್ ಸೀಟ್ ಪಡೆದು ಭವಿಷ್ಯದ ವೈದ್ಯರಾಗಲು ಹೊರಟ 4 ಸಹೋದರಿಯರು
- BIG BOSS5 days ago
ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ