LATEST NEWS
ಹೆಬ್ರಿ : ಜೆಸಿಬಿಗೆ ಬೈಕ್ ಡಿ*ಕ್ಕಿ; ಸವಾರ ಸಾ*ವು
ಹೆಬ್ರಿ : ಜೆಸಿಬಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃ*ತಪಟ್ಟ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ(ಜು.5) ಸಂಭವಿಸಿದೆ. ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21) ಮೃ*ತ ಬೈಕ್ ಸವಾರ.
ಪ್ರತ್ಯಕ್ಷ್ ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭ ಪೆರ್ಡೂರು ಗ್ರಾಮದ ನಾಯರ್ಕೋಡ್ನಲ್ಲಿ ಜೆಸಿಬಿಗೆ ಪ್ರತ್ಯಕ್ಷ್ ಚಲಾಯಿಸುತ್ತಿದ್ದ ಬೈಕ್ ಡಿ*ಕ್ಕಿಯಾಗಿದೆ. ಪರಿಣಾಮವಾಗಿ ತೀವ್ರವಾಗಿ ಗಾ*ಯಗೊಂಡಿದ್ದ ಪ್ರತ್ಯಕ್ಷ್ ಇಹಲೋಕ ತ್ಯಜಿಸಿದ್ದಾರೆ.
ಇದನ್ನೂ ಓದಿ : ಹೋಂ ವರ್ಕ್ ಮಾಡುತ್ತಿದ್ದಾಗ ತಲೆಗೆ ಪೆನ್ ಚುಚ್ಚಿ ಯುಕೆಜಿ ಮಗು ಸಾ*ವು!
ಬೈಕಿನಲ್ಲಿದ್ದ ಪ್ರತ್ಯಕ್ಷ್ ಅವರ ಸಹೋದರ ಪ್ರಿತೇಶ್ ಕೂಡ ಗಾ*ಯಗೊಂಡಿದ್ದಾರೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃ*ತ ಪ್ರತ್ಯಕ್ಷ್ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರು.
LATEST NEWS
ಪಿಜಿ ಬಗ್ಗೆ ಕೆಟ್ಟ ಕಮೆಂಟ್ ಮಾಡಿದ್ದಕ್ಕೆ ಯುವತಿಗೆ ಲೈಂಗಿಕ ಕಿರುಕುಳ; ಮಾಲೀಕನ ಬಂಧನ
ಬೆಂಗಳೂರು/ಮಂಗಳೂರು: ಪಿಜಿ ವಿರುದ್ಧ ಯವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ವಿಮರ್ಶೆ ಮಾಡಿದ್ದಕ್ಕಾಗಿ ಯುವತಿಯ ವೈಯಕ್ತಿಕ ಡೇಟಾವನ್ನು ಪಿಜಿ ಮಾಲೀಕ ಡೇಟಿಂಗ್ ಆ್ಯಪ್ನಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದ ಘಟನೆ ನಡೆದಿದೆ. ಕಿರುಕುಳ ನೀಡಿದ ಆರೋಪದಡಿ ಪಿಜಿ ಮಾಲೀಕನನ್ನು ಪೂರ್ವ ವಿಭಾಗದ ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಿಜಿ ಮಾಲೀಕ ಶೇಷಾದ್ರಿಪುರ ಆನಂದ್ ಶರ್ಮಾ(32 ವ) ಬಂಧಿತ ಆರೋಪಿ. ಪೊಲೀಸರು ಆರೋಪಿಯ ಮೊಬೈಲ್ ಮತ್ತು ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 24 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆನಂದ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಚಿಕ್ಕಪ್ಪನ ಮೇಲೆ ಪ್ರೀತಿ..! ಅಪ್ರಾಪ್ತೆಯಿಂದ 2 ತಿಂಗಳ ಮಗುವಿನ ಹ*ತ್ಯೆ..!
ಡೇಟಿಂಗ್ ಆ್ಯಪ್ನಲ್ಲಿ ಯುವತಿಯ ಮಾಹಿತಿ
ಆರೋಪಿ ಆನಂದ್ ಶರ್ಮಾ ರಾಜಸ್ಥಾನ ಮೂಲದವನಾಗಿದ್ದು ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು ಶೇಷಾದ್ರಿಪುರದಲ್ಲಿ ವಿ-ಸ್ಟೇಜ್ ಹೆಸರಿನ ಪಿಜಿ ನಡೆಸುತ್ತಿದ್ದಾನೆ. ಕೆಲ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸಂತ್ರಸ್ತೆ ಆತನ ಪಿಜಿ ಯಲ್ಲಿ ಸ್ಟೇ ಮಾಡಿದ್ದಳು. ಆದರೆ ಪಿಜಿಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಪಿಜಿ ತೊರೆದಿದ್ದಳು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪಿಜಿ ವಿರುದ್ಧ ನೆಗೆಟಿವ್ ಆಗಿ ಬರೆದು ಹಾಕಿದ್ದಾಳೆ. ಇದರಿಂದ ಆಕ್ರೋಶಗೊಂಡ ಪಿಜಿ ಮಾಲಕ ಯುವತಿಯ ನಂಬರ್ಅನ್ನು ಲೋಕ್ಯಾಂಟೊ ಆ್ಯಪ್ ನಲ್ಲಿ ಅಪ್ಡೇಟ್ ಮಾಡಿದ್ದಾನೆ. ಅಲ್ಲದೇ ಕಾಲ್ ಗರ್ಲ್ ಮಾದರಿಯಲ್ಲಿ ಆಕೆಯನ್ನು ಬಿಂಬಿಸಿದ್ದಾನೆ. ಆಕೆಗೆ ಯುವಕರಿಂದ ಅನೇಕ ಕರೆಗಳು ಬರಲು ಆರಂಭಗೊಂಡಿದೆ. ಇದರಿಂದ ಭಯಭೀತಳಾದ ಯುವತಿ ಸೆಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರ ತನಿಖೆ ವೇಳೆ ಪಿಜಿ ಮಾಲೀಕನ ಈ ಕೃತ್ಯದ ಬಗ್ಗೆ ಬಾಯ್ಪಿಟ್ಟಿದ್ದಾನೆ.
LATEST NEWS
ಬಸ್ ಪ*ಲ್ಟಿ: 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾ*ಯ
ಚಂಡೀಗಢ: ಹರಿಯಾಣದ ಪಂಚಕುಲದಲ್ಲಿ ಭೀಕರ ರಸ್ತೆ ಅಪ*ಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾ*ಯಗೊಂಡಿದ್ದಾರೆ.
ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ ವೇಸ್ ಬಸ್ ಪಲ್ಟಿ*ಯಾಗಿದೆ. ಅಪ*ಘಾತದಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾ*ಯಗೊಂಡಿದ್ದಾರೆ. ಘಟನೆಯಲ್ಲಿ ಗಾ*ಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸದ್ಯ ಅಪ*ಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದೆ.
LATEST NEWS
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ
ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನ ಸವಾರರು ಪರದಾಡಿದರು.
ನದಿಗಳು ತುಂಬಿ ಹರಿಯುತ್ತಿದ್ದು ನೆರೆ ಸ್ಥಿತಿ ಏರ್ಪಟ್ಟಿದೆ. ಉಡುಪಿ ಜಿಲ್ಲಾಡಳಿತ ಶಾಲಾ-ಕಾಲೇಜಿಗೆ ರಜೆ ಘೋಷಿಸಿಲ್ಲ. ಆದರೆ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಹಲವು ಶಾಲಾ-ಕಾಲೇಜು ರಜೆ ಘೋಷಿಸಿದೆ.
- FILM5 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA6 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- LATEST NEWS3 days ago
ಉಡುಪಿ : ಪ್ರೇಯಸಿಯೊಂದಿಗೆ ಜಗಳ; ಅರ್ಧ ದಾರಿಯಲ್ಲೇ ಬಸ್ ನಿಲ್ಲಿಸಿ ಹೋದ ಡ್ರೈವರ್!
- DAKSHINA KANNADA7 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?