Connect with us

    LATEST NEWS

    ಹೆಲಿಕಾಪ್ಟರ್‌ ಪತನ; ಪೈಲಟ್ ಸಹಿತ ಮೂವರ ದುರ್ಮರಣ

    Published

    on

    ಪುಣೆ: ಪುಣೆ ಸಮೀಪದ ಬವ್ಧಾನ್‌ನ ಗುಡ್ಡೆಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಇಂದು (ಅ.2) ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


    ಬೆಳಗ್ಗೆ 6.45ರ ಸುಮಾರಿಗೆ ಗುಡ್ಡೆಗಾಡು ಪ್ರದೇಶದಲ್ಲಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್ ಮತ್ತು ಇಂಜಿನಿಯರ್ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


    ಇನ್ಸ್ಪೆಕ್ಟರ್ ಕನ್ಹಯ್ಯಾ ಥೋರಟ್ ಪ್ರಕರಣ ಕುರಿತು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಹೆಲಿಕಾಪ್ಟರ್ ಯಾರಿಗೆ ಸೇರಿದ್ದು ಎಂದು ಇನ್ನೂ ಖಚಿತವಾಗಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾ ನಡೆಯುತ್ತಿದೆ ಎಂದು ಹೇಳಿದ್ದಾರೆ.
    ದಟ್ಟವಾದ ಮಂಜಿನಿಂದಾಗಿ ಹೆಲಿಕಾಪ್ಟರ್ ಪತನವಾಗಿದೆ ಎಂಬ ವರದಿ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸಿಎಂ ರಾಜಿನಾಮೆ ನೀಡಬೇಕು; ಕ್ಯಾಪ್ಟನ್‌ ಬ್ರಿಜೇಶ್ ಚೌಟ ಒತ್ತಾಯ

    Published

    on

    ಮಂಗಳೂರು: ಸಿದ್ದರಾಮಯ್ಯ 14 ಸೈಟ್ ವಾಪಾಸ್‌ ಕೊಟ್ಟಿರುವುದು ಅವರಿಗೆ ಅವರ ತಪ್ಪಿನ ಅರಿವಾದಂತೆ ಇದೆ. ಅವರು ಬದುಕುಳಿಯುವ ಕೊನೆಯ ಯತ್ನವಾಗಿ ಕಾಣುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.


    ಸಂವಿಧಾನದ ಆಶಯಗಳಿಗೆ ಗೌರವ ನೀಡಬೇಕು ಕೇವಲ ಕುರ್ಚಿಗೆ ಅಂಟಿಕೊಂಡಿರುವುದಲ್ಲ . ಸಿದ್ದರಾಮಯ್ಯ ಕೇವಲ ಕುರ್ಚಿಗಾಗಿಯೇ ಇರುವಂತೆ ಮಾಡುತ್ತಾರೆ ಎಂದು ಹೇಳಿದರು.
    ಆಮಿಷಗಳಿಗೆ ಜನರನ್ನು ಒಳಪಡಿಸುತ್ತಾ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಕಿಂಚಿತ್ತೂ ಆಭಿವೃದ್ಧಿ ಕಾಣುತ್ತಿಲ್ಲ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಿದ್ದಾರೆ. ದಲಿತರ ಜಾಗವನ್ನು ಕಬಳಿಸಿ, ಪತ್ನಿ ಹೆಸರಿಗೆ ಸೈಟ್ ಮಾಡಿಕೊಂಡಿದ್ದಾರೆ ಎಂದರು.

    Continue Reading

    LATEST NEWS

    ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬೇಗನೆ ಖಾಲಿ ಆಗುತ್ತಾ? ಹೀಗೆ ಮಾಡಿ

    Published

    on

    ಮಂಗಳೂರು: ಗ್ಯಾಸ್ ಸಿಲಿಂಡರ್ ಅನ್ನು ಇಂದಿನ ದಿನಗಳಲ್ಲಿ ಎಲ್ಲರೂ ಬಳಸುತ್ತಾರೆ. ಪ್ರತಿಯೊಬ್ಬರ ಬಳಿಯೂ ಅಡುಗೆ ಅನಿಲ ಸಿಲಿಂಡರ್ ಇದ್ದೇ ಇರುತ್ತದೆ. ಕೇಂದ್ರ ಸರ್ಕಾರ ಉಜ್ವಲ ಯೋಜನೆ ಜಾರಿಗೆ ತಂದ ನಂತರ ಸೌದೆ ಒಲೆಯಲ್ಲಿ ಅಡುಗೆ ಕಾಲ ಮರೆಯಾಗಿದ್ದು, ಗ್ಯಾಸ್ ಅನ್ನೇ ಬಳಸುತ್ತಿದ್ದಾರೆ. ಆದರೆ ಗ್ಯಾಸ್ ಸಿಲಿಂಡರ್ ಬೇಗನೇ ಖಾಲಿಯಾಗುವ ಸಮಸ್ಯೆ ಹೆಚ್ಚಿನವರು ಎದುರಿಸುತ್ತಿದ್ದಾರೆ. ನಿಮಗು ಕೂಡ ಇದೇ ಸಮಸ್ಯೆ ಆಗುತ್ತಿದ್ದರೆ ಕೆಲವು ತಂತ್ರಗಳನ್ನು ಅನುಸರಿಸಿ ಅನಿಲವನ್ನು ಹೆಚ್ಚು ಕಾಲ ಉಳಿಯುವಂತೆ ಮಾಡಬಹುದು. ಅದು ಹೇಗೆ?, ನೋಡೋಣ.

    1. ಬರ್ನರ್: ಅಡುಗೆ ಮಾಡುವಾಗ ಹಲವರಿಗೆ ಬರ್ನರ್ ಅನ್ನು ಮೇಲಕ್ಕೆ ತಿರುಗಿಸುವ ಅಭ್ಯಾಸವಿರುತ್ತದೆ. ಇದರಿಂದಾಗಿ ನಿಮ್ಮ ಗ್ಯಾಸ್ ಬೇಗನೆ ಖಾಲಿಯಾಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ನೀವು ಏನನ್ನಾದರೂ ಬಿಸಿಮಾಡಲು ಅಥವಾ ಬೇಯಿಸಲು ಬಯಸಿದರೆ, ಕೆಳಭಾಗವು ಸುಡುವಂತೆ ಬರ್ನರ್ ಅನ್ನು ತಿರುಗಿಸಿ. ಇದರಿಂದ ಎಲ್ ಪಿಜಿ ಸಿಲಿಂಡರ್ ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ.

    2. ಸ್ಟವ್ ಬರ್ನರ್ ಅನ್ನು ಸ್ವಚ್ಛವಾಗಿಟ್ಟುಕೊಳ್ಳುವುದು: ನಿಮ್ಮ ಸ್ಟವ್ ಬರ್ನರ್ ಅನ್ನು ಸ್ವಚ್ಛವಾಗಿರಿಸಿಕೊಳ್ಳುವುದು ಸಹ ಮುಖ್ಯವಾಗಿದೆ. ಕಾಲಕಾಲಕ್ಕೆ ಬರ್ನರ್ ಅನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಗ್ಯಾಸ್ ಹೆಚ್ಚು ಕಾಲ ಉಳಿಯುವಂತೆ ಮಾಡಬಹುದು. ಇದಕ್ಕಾಗಿ ನಿಮ್ಮ ಅನಿಲದ ಬೆಂಕಿಯ ಬಣ್ಣವನ್ನು ಗಮನಿಸುವುದರ ಮೂಲಕ ತಿಳಿಯಬಹುದು. ಅನಿಲ ಜ್ವಾಲೆಯು ನೀಲಿ ಬಣ್ಣಕ್ಕೆ ತಿರುಗಿದರೆ ನಿಮ್ಮ ಬರ್ನರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲದಿದ್ದರೆ ಕೆಂಪು/ಹಳದಿ/ಕಿತ್ತಳೆ ಬಣ್ಣ ಬಂದರೆ ನಿಮ್ಮ ಬರ್ನರ್ ಸ್ವಚ್ಛವಾಗಿಲ್ಲ ಎಂದರ್ಥ.

    3. ಪಾತ್ರೆ ಒದ್ದೆಯಾಗಿರಬಾರದು: ಅಡುಗೆ ಮಾಡಲು ಪಾತ್ರೆಯನ್ನು ಬರ್ನರ್‌ನಲ್ಲಿ ಇರಿಸುವಾಗ ಒಣಗಿರಬೇಕು. ಅದರಲ್ಲಿ ನೀರಿನ ಅಂಶ ಇದ್ದರೆ ಆವಿಯಾಗಲು ಸಮಯ ತೆಗೆದುಕೊಳ್ಳಬಹುದು. ಇದು ಅನಿಲವನ್ನು ವ್ಯರ್ಥ ಮಾಡುತ್ತದೆ. ಸಂದರ್ಭಕ್ಕೆ ತಕ್ಕಂತೆ ನೀವು ಬೆಂಕಿಯನ್ನು ಕಡಿಮೆ ಮಾಡಬಹುದು. ಹೆಚ್ಚಿನ ಬೆಂಕಿ ಹೆಚ್ಚು ಅನಿಲವನ್ನು ಬಳಸುತ್ತದೆ.

    4. ಪ್ರೆಶರ್ ಕುಕ್ಕರ್: ಪ್ರೆಶರ್ ಕುಕ್ಕರ್ ಬಳಸುವುದರಿಂದ ಗ್ಯಾಸ್ ಉಳಿತಾಯ ಮಾಡಬಹುದು. ಓಪನ್-ಪಾಸ್ ಅಡುಗೆಗೆ ಹೋಲಿಸಿದರೆ ಒತ್ತಡದ ಸ್ಟೀಮ್ ಆಹಾರವು ವೇಗವಾಗಿ ಬೇಯಿತ್ತದೆ. ಇದರಿಂದ ಗ್ಯಾಸ್ ಉಳಿತಾಯವೂ ಆಗುತ್ತದೆ.

    5. ಗ್ಯಾಸ್ ಲೀಕ್: ಸಾಮಾನ್ಯವಾಗಿ ಕೆಲವು ಸಿಲಿಂಡರ್ನಲ್ಲಿ ಸಣ್ಣ ಪ್ರಮಾಣದ ಗ್ಯಾಸ್ ಲೀಕ್ ಆಗಿರುತ್ತದೆ. ಗ್ಯಾಸ್ ರೆಗ್ಯುಲೇಟರ್, ಪೈಪ್, ಬರ್ನರ್ ಪರಿಶೀಲಿಸಬೇಕು. ಹಾನಿಗೊಳಗಾದ ಗ್ಯಾಸ್ ಲೈನ್ ನೀವು ಅಡುಗೆ ಮಾಡದಿದ್ದರೂ ಸಹ ಅನಿಲವನ್ನು ವ್ಯರ್ಥ ಮಾಡಬಹುದು. ಇದು ಅಪಘಾತಗಳಿಗೂ ಕಾರಣವಾಗಬಹುದು.

    6. ನೆನೆಸುವುದು: ಅಕ್ಕಿ ಮತ್ತು ಬೇಳೆಕಾಳುಗಳನ್ನು ಬೇಯಿಸುವ ಮೊದಲು ನೆನೆಸಿಡಬೇಕು. ಹಾಗೆ ನೆನೆಸಿಟ್ಟು ಬೇಯಿಸಿದರೆ ಬೇಗ ಬೇಯುತ್ತದೆ. ಇದು ಸಿಲಿಂಡರ್ ಅನ್ನು ಉಳಿಸುತ್ತದೆ.

    7. ಫ್ರಿಡ್ಜ್ ನಲ್ಲಿರುವ ಸಾಮಾಗ್ರಿಗಳು: ನಮ್ಮಲ್ಲಿರುವ ದೊಡ್ಡ ಅಭ್ಯಾಸವೆಂದರೆ ಎಲ್ಲವನ್ನೂ ಫ್ರಿಜ್ ನಲ್ಲಿಡುವುದು. ಉದಾಹರಣೆಗೆ ಹಾಲು. ಅದನ್ನು ಫ್ರಿಡ್ಜ್ನಿಂದ ತೆಗೆದು ನೇರವಾಗಿ ಕುದಿಸಲು ಇಡಬೇಡಿ. ಆಗ ಅದು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಅಡುಗೆಗೆ ಬೇಕಾದ ಸಾಮಾಗ್ರಿಗಳು ಫ್ರಿಡ್ಜ್ ನಲ್ಲಿದ್ದರೆ ಮೊದಲು ಹೊರ ತೆಗೆಯಬೇಕು. ಕೂಲಿಂಗ್ ಕಡಿಮೆಯಾಗುವವರೆಗೆ ಸಮಯ ತೆಗೆದುಕೊಂಡು ನಂತರ ಬೆಚ್ಚಗಾಗಲು ಇಟ್ಟರೆ ಬೇಗನೆ ಕುದಿಯುತ್ತದೆ.

    Continue Reading

    LATEST NEWS

    ದಸರಾ ಪ್ರಯುಕ್ತ ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

    Published

    on

    ಮಂಗಳೂರು: ದಸರಾ ಹಬ್ಬದ ಸಂದರ್ಭದ ಪ್ರಯಕ್ತ ಬೆಂಗಳೂರಿನಿಂದ ಕರಾವಳಿಗೆ ಬರಲು ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ.

    ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಉಪಯೋಗವಾಗುವಂತೆ ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅ. 10 ಹಾಗೂ ಅ. 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪಕಟಿಸಿದೆ.

    ಈ ಮನವಿಯನ್ನು ಸಂಸದರ ಗಮನಕ್ಕೆ ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್ ಪುತ್ರನ್ ಅವರು ಬಸ್ ಮತ್ತು ಈಗಿರುವ ರೈಲುಗಳ ಟಿಕೆಟ್ ಸಂಪೂರ್ಣ ಖಾಲಿಯಾದ ಬಗ್ಗೆ ತಿಳಿಸಿದ್ದರು. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು. ಮೈಸೂರಿನಿಂದ ಮೆಜೆಸ್ಟಿಕ್ ಮಾರ್ಗವಾಗಿ ಒಂದು ರೈಲು ಮತ್ತೂಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ್ದಾರೆ.

    ರೈಲಿನ ವೇಳಾಪಟ್ಟಿ ಹೀಗಿದೆ:

    ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್‌ ಬೈಪಾಸ್‌ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ.

    ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

    06585 ರೈಲು:

    ಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585) ಮೆಜೆಸ್ಟಿಕ್‌ನಿಂದ ರಾತ್ರಿ 12.20 ಹಾಗೂ 12.40ಕ್ಕೆ ಯಶವಂತಪುರದಿಂದ ಹೊರಟು ಪಡೀಲ್‌ ಬೈಪಾಸ್‌ ಮೂಲಕ ರವಿವಾರ ಬೆ. 11.30ಕ್ಕೆ ಉಡುಪಿ ತಲುಪಿ 4ಕ್ಕೆ ಕಾರವಾರ ತಲುಪಲಿದೆ.

    ಅ.13ರ ರವಿವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು (06586) ಉಡುಪಿಗೆ ಮಧ್ಯರಾತ್ರಿ 2.40 ತಲುಪಿ ಅ. 14ರ ಸೋಮವಾರ ಮಧ್ಯಾಹ್ನ ಯಶವಂತಪುರ 1ಕ್ಕೆ ಮತ್ತು ಸಂಜೆ 4.40ಕ್ಕೆ ಮೈಸೂರು ಸಂಜೆ 4.40 ಕ್ಕೆ ತಲುಪಲಿದೆ.

    Continue Reading

    LATEST NEWS

    Trending