Connect with us

DAKSHINA KANNADA

ಗಣೇಶ ಚೌತಿ: ಕೋಮುಗಲಭೆಯ ನಾಡಿನಲ್ಲಿ ಸಾಮರಸ್ಯದ ದೀಪ ಬೆಳಗಿಸಿದ ಮಂಗಳೂರಿನ ಹರ್ಬಟ್ ಡಿಸೋಜಾ..!

Published

on

ವಿಶೇಷ ವರದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕೋಮುಧ್ರುವೀಕರಣದ ಕೊಲೆ, ಗಲಭೆಗಳಿಗೆ ಬಹಳಷ್ಟು ಸುದ್ದಿಯಾಗುತ್ತಿದೆ. ಆದರೆ ಪರಶುರಾಮನ ಸೃಷ್ಟಿಯ ತುಳುನಾಡಿನ ಹಲವು ಧಾರ್ಮಿಕ ಆಚರಣೆಗಳಲ್ಲಿ ಭಾವಕ್ಯತೆ ಇನ್ನೂ ಇದೆ. ಅದು ಸುದ್ದಿಯಾಗುವುದು ವಿರಳ. ಅಂತಹ ಸುದ್ದಿ ಇಲ್ಲಿದೆ ನೋಡಿ.


ಮಂಗಳೂರು ನಗರದ ಜಪ್ಪಿನಮೊಗರುವಿನ ಹರ್ಬಟ್‌ ಡಿ’ಸೋಜ ಯಾವುದೇ ಫಲಾಪೇಕ್ಷೆ ಇಲ್ಲದೆ ವಿಘ್ನ ನಿವಾರಕ ಗಣೇಶನ ಹಬ್ಬ ಹಾಗೂ ಕೆಲವೇ ದಿನಗಳಲ್ಲಿ ಕರಾವಳಿ ಕ್ರೈಸ್ತರು ಆಚರಿಸುವ ಮೊಂತಿ ಹಬ್ಬಕ್ಕೆ ತೆನೆ ಹಂಚುತ್ತಾರೆ.

ಈ ಎರಡೂ ಹಬ್ಬಗಳಿಗೆ ತನ್ನ 20 ಸೆಂಟ್ಸ್‌ ಗದ್ದೆಯನ್ನು ಮೀಸಲಿಟ್ಟಿದ್ದಾರೆ. ಕಳೆದ 15 ವರ್ಷಗಳಿಂದ ಇಂತಹ ಸೇವೆ ಮಾಡುತ್ತಿರುವ ಸ್ಥಳೀಯರ ಪ್ರೀತಿಯ ಅಬ್ಬೆರ್‌ ಸೋಜೆರ್‌ಗೆ 60 ರ ಇಳಿವಯಸ್ಸು.

                         ಹರ್ಬಟ್‌ ಡಿ’ಸೋಜ

 

ಮಂಗಳೂರಿನ ಮಂಗಳಾದೇವಿ, ಮಾರಿಯಮ್ಮ, ವೈದ್ಯನಾಥ, ಆದಿಮಾಯೆ ಸೇರಿ ಸರಿಸುಮಾರು 25 ದೇವಸ್ಥಾನಗಳಿಗೆ ತೆನೆಯನ್ನು ಹಂಚುತ್ತಾರೆ. ಜೊತೆಗೆ ಹಲವು ಮನೆಗಳ ಚೌತಿಗೂ ಇವರ ತೆನೆಯನ್ನು ಬಳಸುತ್ತಾರೆ.

ವಿಶೇಷ ಎಂದರೆ ಇವರು ಬೆಳೆಸಿದ ತೆನೆ ಹೊರದೇಶಕ್ಕೂ ರವಾನೆಯಾಗುತ್ತದೆ. ಇದರ ಜೊತೆಗೆ ಕರಾವಳಿ ಕ್ರೈಸ್ತರ ಮೊಂತಿ ಫೆಸ್ತ್‌ಗೂ ತೆನೆಯನ್ನು ಬೆಳೆದು ಸ್ಥಳೀಯ ಬಜಾಲ್‌ ಚರ್ಚ್‌ ಸೇರಿ ಹಲವು ಚರ್ಚ್‌ಗಳಿಗೆ ನೀಡುತ್ತಾರೆ. ಇವರ ಬಳಿ ತೆನೆ ಕೇಳಿ ಯಾರೂ ಬಂದರೂ ಇಲ್ಲ ಅಂತ ಹೇಳಲ್ಲ.

ಗಣೇಶೋತ್ಸವಕ್ಕೆ ತೆನೆ ಕತ್ತರಿಸುತ್ತಿರುವ ಸ್ಥಳೀಯರು

“ಜಪ್ಪಿನಮೊಗರು ಗಣೇಶನ ಜಲಸ್ತಂಭನಕ್ಕೆ ಇವರದ್ದೇ ದೋಣಿ”
ಮಂಗಳೂರಿನ ಜಪ್ಪಿನಮೊಗರು ಗಣೇಶೋತ್ಸವ ಹಲವು ವಿಶೇಷತೆ ಹೊಂದಿದೆ. ಇಲ್ಲಿನ ಗಣೇಶೋತ್ಸವ ಸಮಿತಿಯಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ ಬಂಧುಗಳಿದ್ದಾರೆ. ಹರ್ಬಟ್‌ ಡಿ’ಸೋಜ ಅವರೂ ಸಹ ಗಣೇಶ ವಿಗ್ರಹ ಜಲಸ್ತಂಭದ ಸಮಿತಿಯ ಪ್ರಧಾನ ಸಂಚಾಲಕರಾಗಿದ್ದಾರೆ.

                                   ದೇವರಾಜ್‌

ಕಳೆದ 14 ವರ್ಷಗಳಿಂದ ವಿಗ್ರಹ ಜಲಸ್ತಂಭನಕ್ಕೆ ತಮ್ಮದೇ ದೋಣಿಯನ್ನು ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ದೋಣಿಯನ್ನು ಇಟ್ಟುಕೊಂಡಿದ್ದಾರೆ ಎನ್ನುತ್ತಾರೆ ಗಣೇಶೋತ್ಸವ ಸಮಿತಿ ಸದಸ್ಯ ದೇವರಾಜ್‌.

bangalore

ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್‌ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!

Published

on

ಬೆಂಗಳೂರು:  ತುಳುನಾಡಿನ ದೈವರಾಧನೆಯನ್ನು ಇದೀಗ  ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತಿದ್ದು, ತುಳುನಾಡ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂತಕೋಲ ಎಂಬ ಪೋಸ್ಟರ್ ರೆಡಿ ಮಾಡಿ ಅದನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡಿದ್ದಾರೆ. ಟ್ರಾವೆಲ್ ಸಂಸ್ಥೆಯೊಂದು 2024ರ ಫೆ. 10 ಹಾಗೂ 11ರಂದು ಎರಡು ದಿನದ ಟೂರ್ ಪ್ಯಾಕೇಜ್ ಅನ್ನು ಹಮ್ಮಿಕೊಂಡಿದೆ. ಅದರಲ್ಲಿ ನದಿ ಬೋಟಿಂಗ್, ಉಪ್ಪಿನಂಗಡಿ ಕಂಬಳ, ಬೊಳ್ಳಾಡಿ ಫಾರ್ಮ್ ಪಾರ್ಟಿ, ಬೊಳ್ಳಾಡಿ ಮನೆಯಲ್ಲಲಿ ಭೂತಕೋಲ, ಬೀರಮಲೆ ಬೆಟ್ಟ ಟ್ರಕ್ಕಿಂಗ್ ಇರಲಿದೆ ಎಂದು ಬರೆದುಕೊಂಡಿದ್ದಾರೆ. ಟೂರ್ ಪ್ಯಾಕೇಜ್ ನ ಮೊತ್ತ ಒಬ್ಬನಿಗೆ 2899 ರೂ. ಆಗಿರುತ್ತದೆ. ಅಲ್ಲದೆ ಆ ಪೋಸ್ಟರ್ ನಲ್ಲಿ ಬುಕ್ ಶೋ ನಲ್ಲಿ ಬುಕ್ ಮಾಡಿ ಎಂದು ಹಾಕಲಾಗಿದೆ. ಈಗಾಗಲೇ ಹಲವರು ಬುಕ್ ಮಾಡಿದರೆನ್ನಲಾಗಿದೆ. ಈ ಪೋಸ್ಟರ್ ನೋಡಿದ ಹಲವು ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ತುಳುನಾಡಿನ ಭೂತರಾಧನೆ ಟೂರ್ ಪ್ಯಾಕೇಜ್ ಆಗಬಾರದು, ದೈವದ ಮೇಲೆ ಇರುವ ನಂಬಿಕೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.

 

Continue Reading

BANTWAL

Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ

Published

on

ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.

ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ  ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್,  ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.

124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

LATEST NEWS

Trending