LATEST NEWS
ಇಲ್ಲಿ ಹೆಂಡತಿ ಬಾಡಿಗೆಗೆ ಸಿಗ್ತಾಳೆ..! ಹೀಗೊಂದು ಪದ್ಧತಿ ಇರೋದು ಎಲ್ಲಿ ಗೊತ್ತಾ?
ಮಧ್ಯ ಪ್ರದೇಶ/ ಮಂಗಳೂರು: ಹೆಂಡತಿಯನ್ನು ಬಾಡಿಗೆಗೆ ಕೊಡುವಂತ ಪದ್ಧತಿಯೊಂದು ಭಾರತದಲ್ಲಿ ಇದೆ ಅಂದ್ರೆ ನೀವು ನಂಬುತ್ತೀರಾ? ನಂಬಲೇಬೇಕು… ನಮ್ಮ ಸಂಸ್ಕೃತಿಯಲ್ಲಿ ಹೆಣ್ಣನ್ನು ಮಾತೆಗೆ ಹೋಲಿಕೆ ಮಾಡ್ತಾರೆ. ಆದರೆ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮಾತ್ರ ಇನ್ನೂ ಹೆಚ್ಚಾಗುತ್ತಲೇ ಇದೆ. ಅಲ್ಲೊಂದು ಪ್ರದೇಶದಲ್ಲಿ ಹೆಣ್ಣು ಮಕ್ಕಳನ್ನು ಬಾಡಿಗೆಗೆ ಪಡೆದು ತಮ್ಮ ತೃಷೆ ತೀರಿಸಿಕೊಳ್ತಾರೆ. ಮಧ್ಯಪ್ರದೇಶದ ಶಿವಪುರಿ ಎಂಬಲ್ಲಿ ಅಂತಹದೊಂದು ಪದ್ಧತಿ ಈಗಲೂ ರೂಢಿಯಲ್ಲಿದೆ. ಇಲ್ಲಿ ತುಸು ಶ್ರೀಮಂತರ, ಸ್ವಲ್ಪ ಬಡವರ ಮನೆಯ ಹೆಣ್ಣುಮಕ್ಕಳನ್ನು ಬಾಡಿಗೆಗೆ ಪಡೆಯುತ್ತಾರೆ. ತಂದೆ ತನ್ನ ಹೆಣ್ಣುಮಕ್ಕಳನ್ನು, ಗಂಡ ತನ್ನ ಹೆಂಡತಿಯನ್ನು ಬಾಡಿಗೆಗೆ ಕೊಡುತ್ತಾರೆ.
ನಾವು ವಸ್ತುಗಳನ್ನು, ಮನೆಯನ್ನೆಲ್ಲಾ ಬಾಡಿಗೆ ಕೊಡೋದನ್ನ ಕೇಳಿದ್ದೇವೆ. ಇಲ್ಲಿ ಹೆತ್ತ ಮಗಳು, ಕಟ್ಕೊಂಡ ಹೆಂಡತಿಯನ್ನು ಇನ್ನೊಬ್ಬರಿಗೆ ಬಾಡಿಗೆ ಕೊಡುವವರು ಇದ್ದಾರೆ ಅಂದ್ರೆ ನಂಬೋಕೆ ಸಾಧ್ಯ ಇಲ್ಲಾ ಅಲ್ವಾ? ಇಂತಹದೊಂದು ಕೀಳು ಪದ್ಧತಿ ಈಗಲೂ ಮಧ್ಯ ಪ್ರದೇಶದಲ್ಲಿ ನಡೆಯುತ್ತಿದೆ.
ಇದೊಂದು ಒಪ್ಪಂದವಂತೆ. ಇದೊಂದು ಪದ್ಧತಿಯಾಗಿದ್ದು ಇದನ್ನು ‘ದಧೀಚ’ ಎಂದು ಕರೆಯುತ್ತಾರೆ. ‘ದಧೀಚ’ ಅಂದ ಕೂಡಲೇ ಪುರಾಣದಲ್ಲಿ ಬರುವ ಮುನಿಯಲ್ಲ. ಇವರಿಗೂ ಈ ಪದ್ಧತಿಗೂ ಯಾವುದೇ ಸಂಬಂಧವಿಲ್ಲ. ಇದು ನೂರು ವರ್ಷದಿಂದ ಆಚರಣೆಗೆ ಬಂದ ಪದ್ಧತಿಯಂತೆ. ಶ್ರೀಮಂತರು ಬಡವರ ಹೆಣ್ಣು ಮಕ್ಕಳನ್ನು ಬಾಡಿಗೆಗೆ ತೆಗೆದುಕೊಳ್ತಾರೆ. ಇನ್ನು ಹುಡುಗಿ ಬಾಡಿಗೆಗೆ ಪಡೆದವನ ಇಚ್ಛೆಗೆ ತಕ್ಕ ಹಾಗೆ ನಡೆದುಕೊಳ್ಳಬೇಕು. ಹೆಚ್ಚಾಗಿ ದೈಹಿಕ ಸುಖಕ್ಕಾಗಿಯೆ ಇದು ನಡೆಯುತ್ತದೆ. ರಾತ್ರಿ ವೇಳೆ ಅವನಿಗೆ ಸುಖ ನೀಡುವಲ್ಲಿ ಸಹಕರಿಸಬೇಕು. ಇನ್ನು ಹಗಲಿನಲ್ಲಿ ಉಳಿದ ಮನೆ ಕೆಲಸ, ಗದ್ದೆ ಕೆಲಸಗಳನ್ನು ಮಾಡಿಕೊಂಡು ಅವನ ಆಳಾಗಿರಬೇಕು. ಇನ್ನು ಒಂದು ವರ್ಷದ ಬಳಿಕ ಮತ್ತೆ ಅವಳೇ ಬೇಕು ಎಂದಾದಲ್ಲಿ ಅಗ್ರಿಮೆಂಟ್ ರಿನಿವಲ್ ಮಾಡಬೇಕು.
ಇಲ್ಲಿ ಸಂಬಂಧಗಳಿಗೆ ಬೆಲೆನೇ ಇಲ್ಲ..!
ತಂದೆ ತನ್ನ ಮಗಳನ್ನು ಎಂಟು ಒಂಭತ್ತು ವರ್ಷಗಳಲ್ಲಿ ಹಣಕ್ಕಾಗಿ ಬಾಡಿಗೆಗೆ ಕೊಡಲು ಆರಂಭಿಸುತ್ತಾನೆ. ಅವಳು ಋತುಮತಿಯಾಗಬೇಕೆಂದಿಲ್ಲ. ಇನ್ನು ಮದುವೆಯಾದ ಗಂಡ ಮೊದಲ ರಾತ್ರಿಯನ್ನು ಅವಳ ಜೊತೆ ಕಳೆದು, ಎರಡನೇ ದಿನ ಸಿರಿವಂತನಿಗೆ ಹಣಕ್ಕಾಗಿ ಬಾಡಿಗೆಗೆ ಕೊಡುತ್ತಾನೆ. ಇದು ಒಂದು ರೀತಿಯ ಸೆ*ಕ್ಸ್ ದಂಧೆಯೇ ಆಗಿದೆ. ಇನ್ನು ಬಾಡಿಗೆಗೆ ತೆಗೆದುಕೊಳ್ಳುವವನು ಮುಖ್ಯವಾಗಿ ತನ್ನ ಚಪಲ ತೀರಿಸಿಕೊಳ್ಳುವ ಉದ್ದೇಶ. ಜೊತೆಗೆ ಅವಳ ಬಳಿ ಮನೆ ಕೆಲಸ, ಇತರ ಕೆಲಸಗಳಿಗೆ ಬಳಸಿಕೊಳ್ಳುತ್ತಾನೆ. ಅಲ್ಲದೇ ಗಂಡನ ಅಣ್ಣ, ಮಾವ, ತಮ್ಮ ಹೀಗೆ ಯಾರೂ ಬೇಕಾದರು ಅವಳನ್ನು ಹಣ ಕೊಟ್ಟು ಕೊಂಡುಕೊಳ್ಳಬಹುದು.ಇಲ್ಲಿ ಸಂಬಂಧಗಳಿಗೆ ಬೆಲೆ ಇಲ್ಲ.
ಇದು ಹೆಣ್ಣಿನ ಕರಾಳ ಬದುಕಿನ ಕಥೆ..! ಬಲಿಯಾಗಿದ್ದಾರೆ 30 ಲಕ್ಷ ಮಹಿಳೆಯರು..!
ಇನ್ನು ಇಲ್ಲಿ ಹುಡುಗಿಯರನ್ನು ಹೇಗೆ ಆರಿಸ್ತಾರೆ ಅಂದ್ರೆ ಅವರ ಅಂದ ಚಂದವನ್ನು ನೋಡಿ. ಹಡುಗಿಯ ಮೈಮಾಟ, ವಯಸ್ಸು, ಬಣ್ಣ ಇದೆಲ್ಲವನ್ನು ಒಳಗಂಡ ಕನ್ಯೆಗೆ ಭಾರೀ ಮೊತ್ತ ಕೊಟ್ಟು ಬಾಡಿಗೆ ಪಡೆಯುತ್ತಾರಂತೆ. ಈ ಹೆಣ್ಣಿಗೆ ಲಕ್ಷಗಟ್ಟಲೆ ಹಣ ಕೊಟ್ಟು ಖರೀದಿ ಮಾಡ್ತಾರೆ. ಕನ್ಯೆಯರಲ್ಲದ ಹುಡುಗಿಯರಿಗೆ 10,000 ದಿಂದ 15000 ಸಾವಿರದವೆರೆಗೆ ಕೊಟ್ಟು ಪಡೆದುಕೊಳ್ಳುತ್ತಾರೆ. ಹುಡುಗಿಯ ಚರ್ಮದ ಟೋನ್, ಒಪ್ಪಂದದ ಮದುವೆಗಳ ಅಂಶಗಳನ್ನೆಲ್ಲಾ ಗಣನೆಗೆ ತೆಗೆದುಕೊಳ್ಳುತ್ತಾರೆ.
ಪೊಲೀಸರು ಏನು ಮಾಡ್ತಿದ್ದಾರೆ..?
ಅಯ್ಯೋ!! ಹಾಗಿದ್ರೆ ಪೊಲೀಸರಿಗೆ ಇದು ಗೊತ್ತಿಲ್ವಾ? ಬೇಲಿನೇ ಎದ್ದು ಹೊಲ ಮೇದಂತಾಗಿದೆ ಇಲ್ಲಿನ ಪರಿಸ್ಥಿತಿ. ಪೊಲೀಸರು ಕೂಡಾ ಇದರಲ್ಲಿ ಪಾಲುದಾರರು. ದುರಾದೃಷ್ಟ ಅಂದ್ರೆ ಇಲ್ಲಿನ ಹೆಣ್ಮಕ್ಕಳಿಗೆ ಅವರ ಮೇಲೆ ಆಗ್ತಾ ಇರೋದು ಅತ್ಯಾಚಾರ ಅನ್ನೋದೆ ತಿಳಿದಿಲ್ಲ. ಈ ಹಳ್ಳಿಗೆ ಕೆಲವು ಎನ್ಜಿಒ ಗಳು ಭೇಟಿ ನೀಡಿ ಇವರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ಪದ್ಧತಿ ಶುರು ಆಗಲು ಕಾರಣ:
ಅಷ್ಟಕ್ಕೂ ಈ ಪದ್ದತಿ ಶುರುವಾಗಲು ಕಾರಣವಾದ್ರೂ ಏನು? ಈ ಹಿಂದೆ ಊರಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಬಹಳ ವಿರಳವಾಗಿತ್ತು. ಹಾಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಹಂಚಿಕೊಳ್ಳಲು ಆರಂಭ ಮಾಡ್ತಾರೆ. ಇನ್ನೂ ಕೆಲವು ಶ್ರೀಮಂತರು ವಧುದಕ್ಷಿಣೆ ಕೊಟ್ಟು ಕನ್ಯೆಯರನ್ನು ಕೊಂಡುಕೊಳ್ಳುತ್ತಿದ್ದರು. ಆದರೆ ಬಡವರು ಅಷ್ಟೆಲ್ಲಾ ಹಣ ಕೊಟ್ಟು ಕೊಂಡುಕೊಳ್ಳಲು ಸಾಧ್ಯವಿಲ್ಲದಿದ್ದಾಗ ಹುಡುಗಿಯನ್ನು ಬಾಡಿಗೆಗೆ ಪಡೆದುಕೊಳ್ಳುತ್ತಿದ್ದರು. ಅಂದು ಈ ನೀಚ ಬಾಡಿಗೆ ಪದ್ಧತಿ ಹುಟ್ಟಿಕೊಂಡಿತು. ಪುರುಷ ಪ್ರಧಾನ ಸಮಾಜ ಸ್ತ್ರೀಯನ್ನು ಈ ರೀತಿಯಲ್ಲಿ ಶೋಷಣೆ ಒಳಪಡಿಸಲು ಆರಂಭಗೊಂಡಿತು.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ