ಮಂಗಳೂರು : ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ಜನವರಿ 9, 2022 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಈ ಸಂದರ್ಭ ಜಿಲ್ಲೆಯಲ್ಲಿ ವಿವಿಧ ಮಹತ್ವದ ಯೋಜನೆಗಳಿಗೆ ಶಿಲನ್ಯಾಸ ಮಾಡಲಿದ್ದಾರೆ, ರಾಷ್ಟ್ರೀಯ ಹೆದ್ದಾರಿ NH-169 ಚತುಷ್ಪಥ ಬಿಕರ್ನಕಟ್ಟೆ-ಸಾಣೂರು ರಾಷ್ಟ್ರೀಯ ಹೆದ್ದಾರಿ ಹಾಗೂ NH-75 ರ ಷಟ್ಪಥ ಕಲ್ಲಡ್ಕ ಪ್ಲೈ ಓವರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜೊತೆಗೆ ಅಂದೇ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಆಡ್ಡಹೊಳೆಯಿಂದ-ಪೆರಿಯಶಾಂತಿ ಹಾಗೂ ಪೆರಿಯಶಾಂತಿ- ಬಂಟ್ವಾಳ ಕ್ರಾಸ್ ನಡುವಿನ ಎರಡು ಪ್ಯಾಕೇಜ್ ನ ಕಾಮಗಾರಿಗಳಿಗೂ ಮಾನ್ಯ ಸಚಿವರು ಪುನರ್ ಚಾಲನೆ ನೀಡುವ ಮೂಲಕ ಮಹತ್ವದ ಕಾಮಗಾರಿಗಳಿಗೆ ವೇಗ ನೀಡಲಿದ್ದಾರೆ ಎಂದು ಸಂಸದರು ಹಾಗೂ ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಈ ಬಗ್ಗೆ ಮಾಹಿತಿ ನೀಡಿದ್ದಾರೆ.